ETV Bharat / state

ಹಳೇ ದೋಸ್ತಿ, ಹೊಸ ಕುಸ್ತಿ.. ರಂಗೇರಿದ ಕಲಘಟಗಿ ಅಖಾಡ

author img

By

Published : Apr 13, 2023, 10:59 AM IST

ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗಿದ್ದು ಕಲಘಟಗಿ ವಿಧಾನಸಭಾ ಕ್ಷೇತ್ರದಿಂದ ನಾಗರಾಜ ಛಬ್ಬಿಗೆ ಕಣಕ್ಕಿಳಿಸಿದೆ.

ನಾಗರಾಜ ಛಬ್ಬಿ, ಸಂತೋಷ ಲಾಡ್
ನಾಗರಾಜ ಛಬ್ಬಿ, ಸಂತೋಷ ಲಾಡ್

ಹುಬ್ಬಳ್ಳಿ: ಕಾಂಗ್ರೆಸ್ ತೊರೆದು ಕಮಲ ಬಾವುಟ ಹಿಡಿದಿದ್ದ ಮಾಜಿ ಎಂ.ಎಲ್.ಸಿ ನಾಗರಾಜ ಛಬ್ಬಿಗೆ ಬಿಜೆಪಿ ಎರಡನೇ ಪಟ್ಟಿಯಲ್ಲಿ ಟಿಕೆಟ್ ಘೋಷಣೆ ಮಾಡುವ ಮೂಲಕ ವಲಸಿಗ ಅಭ್ಯರ್ಥಿಗೆ ಮಣೆ ಹಾಕಿದೆ. ಕಾಂಗ್ರೆಸ್ ಟಿಕೆಟ್ ವಂಚಿತ ನಾಗರಾಜ ಛಬ್ಬಿ ಕೆಲ ದಿನಗಳ ಹಿಂದೆ ಕೈ ಬಿಟ್ಟು ಬಿಜೆಪಿ ಪಾಳಯ ಸೇರ್ಪಡೆಯಾಗಿದ್ದರು. ಇದೀಗ ಪಕ್ಷ ಛಬ್ಬಿಗೆ ಮಣೆ ಹಾಕಿದ್ದು, ಕಲಘಟಗಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆಳಿಸಲು ಪಕ್ಷ ಅವಕಾಶ ಕಲ್ಪಿಸಿದೆ. ಈಗಾಗಲೇ ಹಾಲಿ ಶಾಸಕ ಸಿ.ಎಂ. ನಿಂಬಣ್ಣವರ ಅವರಿಗೆ ಟಿಕೆಟ್ ತಪ್ಪಿಸಿ ನಾಗರಾಜ ಛಬ್ಬಿಗೆ ಟಿಕೆಟ್ ನೀಡಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಸಿ.ಎಂ. ನಿಂಬಣ್ಣವರ ಯಾರಿಗಾದರೂ ಟಿಕೆಟ್ ನೀಡಿದರೇ ತಕ್ಕ ಪಾಠ ಕಲಿಸುವ ಎಚ್ಚರಿಕೆ ಸಹ ನೀಡಿದ್ದರು. ಇದರ ನಡುವೇ ಟಿಕೆಟ್ ತಪ್ಪಿದ್ದು ನಿಂಬಣ್ಣನರ್ ಸಿಡಿದೆಳುವ ಸಾಧ್ಯತೆ ಹೆಚ್ಚಿದೆ. ಇನ್ನು ನಾಗರಾಜ್ ಛಬ್ಬಿ ಹಾಗೂ ಸಂತೋಷ ಲಾಡ್ ನಡುವೇ ನೇರ ಪೈಪೋಟಿ ಏರ್ಪಟ್ಟಿದೆ. ಕೋವಿಡ್ ಸಮಯದಲ್ಲಿ ಇಬ್ಬರು ನಾಯಕರು ಕ್ಷೇತ್ರದಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಛಬ್ಬಿ ಗ್ರಾಮ ವಾಸ್ತವ್ಯ ಮಾಡುವುದರ ಜೊತೆಗೆ ಜನರ ಸಂಪರ್ಕ ಬೆಳೆಸಿಕೊಂಡಿದ್ದಾರೆ.

ಮತ್ತೊಂದೆಡೆ ಸಂತೋಷ್​​ ಲಾಡ್ ಕೂಡ ಕೋವಿಡ್​ ಸಮಯದಲ್ಲಿ ಜನರಿಗೆ ಪಡಿತರ ವಿತರಣೆ ಮಾಡುವ ಮೂಲಕ ನೆರವಿಗೆ ನಿಂತಿದ್ದರು. ಇಬ್ಬರು ನಾಯಕರು ಹೊರಗಿನವರಾಗಿದ್ದಾರೆ. ಆದ್ರೆ ಸ್ಥಳೀಯ ಹಾಗೂ ತಾಲೂಕಿನವರಾದ ನಿಂಬಣ್ಣನವರ್ ಟಿಕೆಟ್​ ಕೈತಪ್ಪಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದು, ನಾನು ಸ್ಥಳೀಯ ನನ್ನ ಜನ ಕೈ ಬಿಡುವುದಿಲ್ಲ ಎಂದು ಪ್ರಚಾರ ಕೈಗೊಂಡಿದ್ದು, ಕ್ಷೇತ್ರದ ಜನ ಯಾರತ್ತ ಒಲವು ತೋರುತ್ತಾರೆ ಎಂಬುದು ಇನ್ನಷ್ಟೇ ತಿಳಿಯಲಿದೆ.

ಒಟ್ಟಾರೆ ನೋಡುವುದಾದರೇ ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದಿಂದ ಡಾ. ಕ್ರಾಂತಿಕಿರಣಗೆ ಟಿಕೆಟ್​ ನೀಡಿದ್ದರೆ, ಕುಂದಗೋಳ ವಿಧಾನಸಭಾ ಕ್ಷೇತ್ರಕ್ಕೆ ಎಂ.ಆರ್. ಪಾಟೀಲ್​, ಧಾರವಾಡದಿಂದ ಶಾಸಕ ಅಮೃತ್​ ದೇಸಾಯಿ, ನವಲಗುಂದ ಕ್ಷೇತ್ರದಿಂದ ಸಚಿವ ಶಂಕರಪಾಟೀಲ ಮುನೇನಕೊಪ್ಪ, ಪಶ್ಚಿಮ ಕ್ಷೇತ್ರದಿಂದ ಶಾಸಕ ಅರವಿಂದ ಬೆಲ್ಲದ್​, ಕಲಘಟಗಿ ವಿಧಾನಸಭಾ ಕ್ಷೇತ್ರದಿಂದ ನಾಗರಾಜ ಛಬ್ಬಿಗೆ ಟಿಕೆಟ್​ ಘೋಷಣೆಯಾಗಿದೆ.

ಇದನ್ನೂ ಓದಿ: ಶೆಟ್ಟರ್ ಭವಿಷ್ಯ, ಈಶ್ವರಪ್ಪ ಉತ್ತರಾಧಿಕಾರಿ ಆಯ್ಕೆ ಕಗ್ಗಂಟು: 12 ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸದ ಬಿಜೆಪಿ..!

ಮತ್ತೊಂದೆಡೆ ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ಅವರು ಟಿಕೆಟ್​ ವಿಚಾರವಾಗಿ ಹೈಕಮಾಂಡ್​ ಮೇಲೆ ಒತ್ತಡ ಹಾಕಿದ್ದು, ಈ ಸಂಬಂಧ ಕೇಂದ್ರ ನಾಯಕರು ಸೇರಿದಂತೆ ಪಕ್ಷದ ಮುಖಂಡರ ಜೊತೆಗೂ ಮಾತುಕತೆ ನಡೆಸಿದ್ದಾರೆ. ಬುಧವಾರ ಬಿಜೆಪಿ 23 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು, ಅದರಲ್ಲೂ ಧಾರವಾಡ ಸೆಂಟ್ರಲ್​ಗೆ ಟಿಕೆಟ್​ ಘೋಷಣೆ ಮಾಡದೆ ಬಾಕಿ ಉಳಿಸಿಕೊಂಡಿದೆ. ಹಾಗಾಗಿ ಯಾರಿಗೆ ಮಣೆ ಹಾಕಲಿದೆ ಎಂಬುದು ಕುತೂಹಲ ಮೂಡಿಸಿದೆ.​

ಇದನ್ನೂ ಓದಿ: ದಾವಣಗೆರೆಯ 7 ಕ್ಷೇತ್ರಗಳಲ್ಲಿ ಬಿಜೆಪಿ ಟಿಕೆಟ್ ಘೋಷಣೆ​.. ಮಾಡಾಳ್​ ಸೇರಿ ಮೂವರು ಹಾಲಿಗಳಿಗೆ ಕೊಕ್​!

ಹುಬ್ಬಳ್ಳಿ: ಕಾಂಗ್ರೆಸ್ ತೊರೆದು ಕಮಲ ಬಾವುಟ ಹಿಡಿದಿದ್ದ ಮಾಜಿ ಎಂ.ಎಲ್.ಸಿ ನಾಗರಾಜ ಛಬ್ಬಿಗೆ ಬಿಜೆಪಿ ಎರಡನೇ ಪಟ್ಟಿಯಲ್ಲಿ ಟಿಕೆಟ್ ಘೋಷಣೆ ಮಾಡುವ ಮೂಲಕ ವಲಸಿಗ ಅಭ್ಯರ್ಥಿಗೆ ಮಣೆ ಹಾಕಿದೆ. ಕಾಂಗ್ರೆಸ್ ಟಿಕೆಟ್ ವಂಚಿತ ನಾಗರಾಜ ಛಬ್ಬಿ ಕೆಲ ದಿನಗಳ ಹಿಂದೆ ಕೈ ಬಿಟ್ಟು ಬಿಜೆಪಿ ಪಾಳಯ ಸೇರ್ಪಡೆಯಾಗಿದ್ದರು. ಇದೀಗ ಪಕ್ಷ ಛಬ್ಬಿಗೆ ಮಣೆ ಹಾಕಿದ್ದು, ಕಲಘಟಗಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆಳಿಸಲು ಪಕ್ಷ ಅವಕಾಶ ಕಲ್ಪಿಸಿದೆ. ಈಗಾಗಲೇ ಹಾಲಿ ಶಾಸಕ ಸಿ.ಎಂ. ನಿಂಬಣ್ಣವರ ಅವರಿಗೆ ಟಿಕೆಟ್ ತಪ್ಪಿಸಿ ನಾಗರಾಜ ಛಬ್ಬಿಗೆ ಟಿಕೆಟ್ ನೀಡಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಸಿ.ಎಂ. ನಿಂಬಣ್ಣವರ ಯಾರಿಗಾದರೂ ಟಿಕೆಟ್ ನೀಡಿದರೇ ತಕ್ಕ ಪಾಠ ಕಲಿಸುವ ಎಚ್ಚರಿಕೆ ಸಹ ನೀಡಿದ್ದರು. ಇದರ ನಡುವೇ ಟಿಕೆಟ್ ತಪ್ಪಿದ್ದು ನಿಂಬಣ್ಣನರ್ ಸಿಡಿದೆಳುವ ಸಾಧ್ಯತೆ ಹೆಚ್ಚಿದೆ. ಇನ್ನು ನಾಗರಾಜ್ ಛಬ್ಬಿ ಹಾಗೂ ಸಂತೋಷ ಲಾಡ್ ನಡುವೇ ನೇರ ಪೈಪೋಟಿ ಏರ್ಪಟ್ಟಿದೆ. ಕೋವಿಡ್ ಸಮಯದಲ್ಲಿ ಇಬ್ಬರು ನಾಯಕರು ಕ್ಷೇತ್ರದಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಛಬ್ಬಿ ಗ್ರಾಮ ವಾಸ್ತವ್ಯ ಮಾಡುವುದರ ಜೊತೆಗೆ ಜನರ ಸಂಪರ್ಕ ಬೆಳೆಸಿಕೊಂಡಿದ್ದಾರೆ.

ಮತ್ತೊಂದೆಡೆ ಸಂತೋಷ್​​ ಲಾಡ್ ಕೂಡ ಕೋವಿಡ್​ ಸಮಯದಲ್ಲಿ ಜನರಿಗೆ ಪಡಿತರ ವಿತರಣೆ ಮಾಡುವ ಮೂಲಕ ನೆರವಿಗೆ ನಿಂತಿದ್ದರು. ಇಬ್ಬರು ನಾಯಕರು ಹೊರಗಿನವರಾಗಿದ್ದಾರೆ. ಆದ್ರೆ ಸ್ಥಳೀಯ ಹಾಗೂ ತಾಲೂಕಿನವರಾದ ನಿಂಬಣ್ಣನವರ್ ಟಿಕೆಟ್​ ಕೈತಪ್ಪಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದು, ನಾನು ಸ್ಥಳೀಯ ನನ್ನ ಜನ ಕೈ ಬಿಡುವುದಿಲ್ಲ ಎಂದು ಪ್ರಚಾರ ಕೈಗೊಂಡಿದ್ದು, ಕ್ಷೇತ್ರದ ಜನ ಯಾರತ್ತ ಒಲವು ತೋರುತ್ತಾರೆ ಎಂಬುದು ಇನ್ನಷ್ಟೇ ತಿಳಿಯಲಿದೆ.

ಒಟ್ಟಾರೆ ನೋಡುವುದಾದರೇ ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದಿಂದ ಡಾ. ಕ್ರಾಂತಿಕಿರಣಗೆ ಟಿಕೆಟ್​ ನೀಡಿದ್ದರೆ, ಕುಂದಗೋಳ ವಿಧಾನಸಭಾ ಕ್ಷೇತ್ರಕ್ಕೆ ಎಂ.ಆರ್. ಪಾಟೀಲ್​, ಧಾರವಾಡದಿಂದ ಶಾಸಕ ಅಮೃತ್​ ದೇಸಾಯಿ, ನವಲಗುಂದ ಕ್ಷೇತ್ರದಿಂದ ಸಚಿವ ಶಂಕರಪಾಟೀಲ ಮುನೇನಕೊಪ್ಪ, ಪಶ್ಚಿಮ ಕ್ಷೇತ್ರದಿಂದ ಶಾಸಕ ಅರವಿಂದ ಬೆಲ್ಲದ್​, ಕಲಘಟಗಿ ವಿಧಾನಸಭಾ ಕ್ಷೇತ್ರದಿಂದ ನಾಗರಾಜ ಛಬ್ಬಿಗೆ ಟಿಕೆಟ್​ ಘೋಷಣೆಯಾಗಿದೆ.

ಇದನ್ನೂ ಓದಿ: ಶೆಟ್ಟರ್ ಭವಿಷ್ಯ, ಈಶ್ವರಪ್ಪ ಉತ್ತರಾಧಿಕಾರಿ ಆಯ್ಕೆ ಕಗ್ಗಂಟು: 12 ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸದ ಬಿಜೆಪಿ..!

ಮತ್ತೊಂದೆಡೆ ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ಅವರು ಟಿಕೆಟ್​ ವಿಚಾರವಾಗಿ ಹೈಕಮಾಂಡ್​ ಮೇಲೆ ಒತ್ತಡ ಹಾಕಿದ್ದು, ಈ ಸಂಬಂಧ ಕೇಂದ್ರ ನಾಯಕರು ಸೇರಿದಂತೆ ಪಕ್ಷದ ಮುಖಂಡರ ಜೊತೆಗೂ ಮಾತುಕತೆ ನಡೆಸಿದ್ದಾರೆ. ಬುಧವಾರ ಬಿಜೆಪಿ 23 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು, ಅದರಲ್ಲೂ ಧಾರವಾಡ ಸೆಂಟ್ರಲ್​ಗೆ ಟಿಕೆಟ್​ ಘೋಷಣೆ ಮಾಡದೆ ಬಾಕಿ ಉಳಿಸಿಕೊಂಡಿದೆ. ಹಾಗಾಗಿ ಯಾರಿಗೆ ಮಣೆ ಹಾಕಲಿದೆ ಎಂಬುದು ಕುತೂಹಲ ಮೂಡಿಸಿದೆ.​

ಇದನ್ನೂ ಓದಿ: ದಾವಣಗೆರೆಯ 7 ಕ್ಷೇತ್ರಗಳಲ್ಲಿ ಬಿಜೆಪಿ ಟಿಕೆಟ್ ಘೋಷಣೆ​.. ಮಾಡಾಳ್​ ಸೇರಿ ಮೂವರು ಹಾಲಿಗಳಿಗೆ ಕೊಕ್​!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.