ETV Bharat / state

ಜ.14 ರಂದು ರಾಷ್ಟ್ರೀಯ ಬಸವ ಕೃಷಿ ಪ್ರಶಸ್ತಿ ಪ್ರದಾನ - ಪಂಚಮಸಾಲಿ ಮಠದ ಪೀಠಾಧ್ಯಕ್ಷ ಜಯಮೃತ್ಯುಂಜಯ ಸ್ವಾಮೀಜಿ

ಕೂಡಲ ಸಂಗಮದ ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠದ ವತಿಯಿಂದ ಜ.14 ರಂದು ಬೆಳಗ್ಗೆ 11 ಕ್ಕೆ ಬಾಗಲಕೋಟೆ ಜಿಲ್ಲೆಯ ಕೂಡಲ ಸಂಗಮದಲ್ಲಿ ರಾಷ್ಟ್ರೀಯ ಬಸವ ಕೃಷಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕೂಡಲ ಸಂಗಮ ಪಂಚಮಸಾಲಿ ಮಠದ ಪೀಠಾಧ್ಯಕ್ಷ ಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.

National Basava Agriculture Award
ರಾಷ್ಟ್ರೀಯ ಬಸವ ಕೃಷಿ ಪ್ರಶಸ್ತಿ ಪ್ರಧಾನ
author img

By

Published : Jan 12, 2020, 9:04 AM IST

ಹುಬ್ಬಳ್ಳಿ: ರಾಷ್ಟ್ರೀಯ ಬಸವ ಕೃಷಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಜ.14 ರಂದು ಬೆಳಗ್ಗೆ 11 ಕ್ಕೆ ಬಾಗಲಕೋಟೆ ಜಿಲ್ಲೆಯ ಕೂಡಲ ಸಂಗಮದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕೂಡಲ ಸಂಗಮ ಪಂಚಮಸಾಲಿ ಮಠದ ಪೀಠಾಧ್ಯಕ್ಷ ಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.

ಕೂಡಲ ಸಂಗಮದ ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠ, ಅಖಿಲ ಭಾರತ ಪಂಚಮಸಾಲಿ ಸಮಾಜ ಟ್ರಸ್ಟ್ ವತಿಯಿಂದ ಕೃಷಿಯಲ್ಲಿ ಸಾಧನೆ ಗೈದವರಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ರೈತ ಬಾಂಧವರನ್ನು ಪ್ರೋತ್ಸಾಹಿಸುವುದು, ಸಾರ್ವಭೌಮ ಗೌರವ ಸಿಗಬೇಕು ಎಂಬ ಉದ್ದೇಶದಿಂದ ಅಂದಿನ ರಾಷ್ಟ್ರಪತಿಯಾಗಿದ್ದ ಅಬ್ದುಲ್ ಕಲಾಂ ಅವರ ಸಲಹೆ ಮೇರೆಗೆ 2012 ರಿಂದ ಧಾರ್ಮಿಕ ಮಠ ಪೀಠಗಳ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಕೃಷಿಕರ ಹೆಸರಿನಲ್ಲಿ ರಾಷ್ಟ್ರ ಪ್ರಶಸ್ತಿಯನ್ನು ಕೊಡಲಾಗುತ್ತಿದೆ ಎಂದರು.

ರಾಷ್ಟ್ರೀಯ ಬಸವ ಕೃಷಿ ಪ್ರಶಸ್ತಿ ಪ್ರಧಾನ

ಕಳೆದ ವರ್ಷ ಕೃಷಿಕರ ಧ್ವನಿಯಾಗಿ ಕೆಲಸ ಮಾಡಿದ ಎಮ್.ಎಸ್.ಸ್ವಾಮಿನಾಥನ್ ಅವರಿಗೆ ಪ್ರಶಸ್ತಿ ಕೊಡಲಾಗಿದ್ದು, ಈ ವರ್ಷದ ಪ್ರಶಸ್ತಿಯನ್ನು ಏತ ನೀರಾವರಿ ನೀರಾವರಿ ಯೋಜನೆಯ ಹರಿಕಾರ ಹಾಗೂ ರೈತ ಹಕ್ಕುಗಳ ಹೋರಾಟಗಾರ ತೆಲಂಗಾಣ ರಾಜ್ಯ ಸರ್ಕಾರದ ಜಲ ಸಂಪನ್ಮೂಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಪ್ರಕಾಶರಾವ್ ವೀರಗಲ್ಲ ಅವರಿಗೆ ಕೊಡಲಾಗುತ್ತಿದೆ ಎಂದರು.

ಇನ್ನೂ ಅಂದು ಕೃಷಿ ಹಾಗೂ ಉತ್ತರ ಕರ್ನಾಟಕದ ಸಮಗ್ರ ನೀರಾವರಿಗೆ ಒತ್ತಾಯಿಸಿ ಬೃಹತ್ ರೈತ ಸಂವಾದ ಹಾಗೂ ‌10 ನೇ ಕೃಷಿ ಸಂಕ್ರಾಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ವೇಳೆ ಪ್ರಶಸ್ತಿ ಸ್ವೀಕಾರ ಮಾಡಲಿರುವ ಪ್ರಕಾಶರಾವ ವೀರಗಲ್ಲ ರೈತರೊಂದಿಗೆ ಸಂವಾದ ನಡೆಸುವ ಜೊತೆಗೆ ನೀರಾವರಿ ಕುರಿತು ಜಾಗೃತಿ ಮೂಡಿಸಲಿದ್ದಾರೆ ಎಂದರು.

ಲಿಂಗಾಯತ ಮೀಸಲಾತಿಗೆ ಬೆಂಬಲ:

ಲಿಂಗಾಯತ ಮೀಸಲಾತಿಯಲ್ಲಿ ನಮ್ಮದು ಸಂಪೂರ್ಣ ಬೆಂಬಲವಿದ್ದು, ಮಹಾರಾಷ್ಟ್ರದಲ್ಲಿ ಹೇಗೆ ಮರಾಠರಿಗೆ ಮೀಸಲಾತಿ ಕಲ್ಪಿಸಲಾಗಿದೆ. ಅದೇ ರೀತಿ ಕರ್ನಾಟಕದಲ್ಲಿ ಲಿಂಗಾಯತರಿಗೆ ಮೀಸಲಾತಿ ಕೊಡಬೇಕು ಎಂದರು.

ಹುಬ್ಬಳ್ಳಿ: ರಾಷ್ಟ್ರೀಯ ಬಸವ ಕೃಷಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಜ.14 ರಂದು ಬೆಳಗ್ಗೆ 11 ಕ್ಕೆ ಬಾಗಲಕೋಟೆ ಜಿಲ್ಲೆಯ ಕೂಡಲ ಸಂಗಮದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕೂಡಲ ಸಂಗಮ ಪಂಚಮಸಾಲಿ ಮಠದ ಪೀಠಾಧ್ಯಕ್ಷ ಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.

ಕೂಡಲ ಸಂಗಮದ ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠ, ಅಖಿಲ ಭಾರತ ಪಂಚಮಸಾಲಿ ಸಮಾಜ ಟ್ರಸ್ಟ್ ವತಿಯಿಂದ ಕೃಷಿಯಲ್ಲಿ ಸಾಧನೆ ಗೈದವರಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ರೈತ ಬಾಂಧವರನ್ನು ಪ್ರೋತ್ಸಾಹಿಸುವುದು, ಸಾರ್ವಭೌಮ ಗೌರವ ಸಿಗಬೇಕು ಎಂಬ ಉದ್ದೇಶದಿಂದ ಅಂದಿನ ರಾಷ್ಟ್ರಪತಿಯಾಗಿದ್ದ ಅಬ್ದುಲ್ ಕಲಾಂ ಅವರ ಸಲಹೆ ಮೇರೆಗೆ 2012 ರಿಂದ ಧಾರ್ಮಿಕ ಮಠ ಪೀಠಗಳ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಕೃಷಿಕರ ಹೆಸರಿನಲ್ಲಿ ರಾಷ್ಟ್ರ ಪ್ರಶಸ್ತಿಯನ್ನು ಕೊಡಲಾಗುತ್ತಿದೆ ಎಂದರು.

ರಾಷ್ಟ್ರೀಯ ಬಸವ ಕೃಷಿ ಪ್ರಶಸ್ತಿ ಪ್ರಧಾನ

ಕಳೆದ ವರ್ಷ ಕೃಷಿಕರ ಧ್ವನಿಯಾಗಿ ಕೆಲಸ ಮಾಡಿದ ಎಮ್.ಎಸ್.ಸ್ವಾಮಿನಾಥನ್ ಅವರಿಗೆ ಪ್ರಶಸ್ತಿ ಕೊಡಲಾಗಿದ್ದು, ಈ ವರ್ಷದ ಪ್ರಶಸ್ತಿಯನ್ನು ಏತ ನೀರಾವರಿ ನೀರಾವರಿ ಯೋಜನೆಯ ಹರಿಕಾರ ಹಾಗೂ ರೈತ ಹಕ್ಕುಗಳ ಹೋರಾಟಗಾರ ತೆಲಂಗಾಣ ರಾಜ್ಯ ಸರ್ಕಾರದ ಜಲ ಸಂಪನ್ಮೂಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಪ್ರಕಾಶರಾವ್ ವೀರಗಲ್ಲ ಅವರಿಗೆ ಕೊಡಲಾಗುತ್ತಿದೆ ಎಂದರು.

ಇನ್ನೂ ಅಂದು ಕೃಷಿ ಹಾಗೂ ಉತ್ತರ ಕರ್ನಾಟಕದ ಸಮಗ್ರ ನೀರಾವರಿಗೆ ಒತ್ತಾಯಿಸಿ ಬೃಹತ್ ರೈತ ಸಂವಾದ ಹಾಗೂ ‌10 ನೇ ಕೃಷಿ ಸಂಕ್ರಾಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ವೇಳೆ ಪ್ರಶಸ್ತಿ ಸ್ವೀಕಾರ ಮಾಡಲಿರುವ ಪ್ರಕಾಶರಾವ ವೀರಗಲ್ಲ ರೈತರೊಂದಿಗೆ ಸಂವಾದ ನಡೆಸುವ ಜೊತೆಗೆ ನೀರಾವರಿ ಕುರಿತು ಜಾಗೃತಿ ಮೂಡಿಸಲಿದ್ದಾರೆ ಎಂದರು.

ಲಿಂಗಾಯತ ಮೀಸಲಾತಿಗೆ ಬೆಂಬಲ:

ಲಿಂಗಾಯತ ಮೀಸಲಾತಿಯಲ್ಲಿ ನಮ್ಮದು ಸಂಪೂರ್ಣ ಬೆಂಬಲವಿದ್ದು, ಮಹಾರಾಷ್ಟ್ರದಲ್ಲಿ ಹೇಗೆ ಮರಾಠರಿಗೆ ಮೀಸಲಾತಿ ಕಲ್ಪಿಸಲಾಗಿದೆ. ಅದೇ ರೀತಿ ಕರ್ನಾಟಕದಲ್ಲಿ ಲಿಂಗಾಯತರಿಗೆ ಮೀಸಲಾತಿ ಕೊಡಬೇಕು ಎಂದರು.

Intro:HubliBody:ಹುಬ್ಬಳ್ಳಿ:- ಕೂಡಲ ಸಂಗಮದ ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠ, ಅಖಿಲ ಭಾರತ ಪಂಚಮಸಾಲಿ ಸಮಾಜ ಟ್ರಸ್ಟ್ ವತಿಯಿಂದ ಕೃಷಿಯಲ್ಲಿ ಸಾಧನೆಯ ಗೈದವರಿಗೆ ಕೊಡ ಮಾಡುವ ರಾಷ್ಟ್ರೀಯ ಬಸವ ಕೃಷಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವನ್ನು ಜ.14 ರಂದು ಬೆಳಿಗ್ಗೆ 11 ಕ್ಕೆ ಬಾಗಲಕೋಟೆ ಜಿಲ್ಲೆಯ ಕೂಡಲ ಸಂಗಮದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕೂಡಲ ಸಂಗಮ ಪಂಚಮಸಾಲಿ ಮಠದ ಪೀಠಾಧ್ಯಕ್ಷ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತ ಬಾಂಧವರನ್ನು ಪ್ರೋತ್ಸಾಹಿಸುವುದು, ಸಾರ್ವಭೌಮ ಗೌರವ ಸಿಗಬೇಕು ಎಂಬ ಉದ್ದೇಶದಿಂದ ಅಂದಿನ ರಾಷ್ಟ್ರಪತಿಯಾಗಿದ್ದ ಅಬ್ದುಲ್ ಕಲಾಂ ಅವರ ಸಲಹೆ ಮೇರೆಗೆ 2012 ರಿಂದ ಧಾರ್ಮಿಕ ಮಠ ಪೀಠಗಳ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಕೃಷಿಕರ ಹೆಸರಿನಲ್ಲಿ ರಾಷ್ಟ್ರ ಪ್ರಶಸ್ತಿಯನ್ನು ಕೊಡಲಾಗುತ್ತಿದ್ದು, ಕಳೆದ ವರ್ಷ ಕೃಷಿಕರ ಧ್ವನಿಯಾಗಿ ಕೆಲಸ ಮಾಡಿದ ಎಮ್.ಎಸ್.ಸ್ವಾಮಿನಾಥನ್ ಅವರಿಗೆ ಕೊಡಲಾಗಿದ್ದು, ಈ ವರ್ಷದ ಪ್ರಶಸ್ತಿಯನ್ನು ಏತನೀರಾವರಿ ನೀರಾವರಿ ಯೋಜನೆಯ ಹರಿಕಾರ ಹಾಗೂ ರೈತ ಹಕ್ಕುಗಳ ಹೋರಾಟಗಾರ ತೆಲಂಗಾಣ ರಾಜ್ಯ ಸರ್ಕಾರದ ಜಲ ಸಂಪನ್ಮೂಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಪ್ರಕಾಶರಾವ್ ವೀರಗಲ್ಲ ಅವರಿಗೆ ಕೊಡಲಾಗುತ್ತಿದೆ ಎಂದರು.
ಇನ್ನೂ ಅಂದು ಕೃಷಿ ಉತ್ತರ ಕರ್ನಾಟಕದ ಸಮಗ್ರ ನೀರಾವರಿಗೆ ಒತ್ತಾಯಿಸಿ ಬೃಹತ್ ರೈತ ಸಂವಾದ ಹಾಗೂ ‌10 ನೇ ಕೃಷಿ ಸಂಕ್ರಾಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ವೇಳೆ ಪ್ರಶಸ್ತಿ ಸ್ವೀಕಾರ ಮಾಡಲಿರುವ ಪ್ರಕಾಶರಾವ ವೀರಗಲ್ಲ ರೈತರೊಂದಿಗೆ ಸಂವಾದ ನಡೆಸುವ ಜೊತೆಗೆ ನೀರಾವರಿ ಕುರಿತು ಜಾಗೃತಿ ಮೂಡಿಸಲಿದ್ದಾರೆ ಎಂದರು.

(ಮಹದಾಯಿ ಬಗ್ಗೆ ಇಚ್ಛಾಶಕ್ತಿ ಬೇಕು) ರಾಜ್ಯದಲ್ಲಿ ಮತ್ತೆ ಮಹದಾಯಿ ವಿಚಾರ ಮುನ್ನೇಲೆಗೆ ಬಂದಿದ್ದು, ಮೊನ್ನೆ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು, ಅಂದು ಎಲ್ಲಾ ಪಕ್ಷದ ನಾಯಕರು ಸಭೆಗೆ ಹಾಜರಾಗಿದ್ದರು. ಇದು ಒಳ್ಳೆಯ ಬೆಳವಣಿಗೆ, ಅಲ್ಲದೇ ಸಭೆಯಲ್ಲಿ ನೀರಾವರಿ ತಜ್ಞರ ಅಭಿಪ್ರಾಯ ಕೇಳಿ ಮುಂದಿನ ಹೋರಾಟದ ರೂಪರೇಷೆಗಳನ್ನು ಮಾಡುವುದಾಗಿ ಹೇಳಿದ್ದಾರೆ ಅದೇ ರೀತಿಯಾಗಿ ಗೋವಾದ ಜನತೆ ಹಾಗೂ ರಾಜಕಾರಣೆಗಳಿರುವ ಸ್ವಾಭಿಮಾನ ನಮ್ಮಲ್ಲಿಯೂ ಇರಲಿ‌ ಅದ್ರೆ ಈ ಸಮಸ್ಯೆ ಇತ್ಯರ್ಥ ಆಗುವುದು.ಎಲ್ಲರೂ ಮಹದಾಯಿ ಬಗ್ಗೆ ಇಚ್ಛಾಶಕ್ತಿ ಪ್ರದರ್ಶನ ಮಾಡಿ ಆದಷ್ಟು ಬೇಗ ಸಮಸ್ಯೆ ಬಗೆಹರಿಸಬೇಕು ಎಂದರು.

*ಲಿಂಗಾಯತ ಮೀಸಲಾತಿಗೆ ಬೆಂಬಲ*

ಲಿಂಗಾಯತ ಮೀಸಲಾತಿದಲ್ಲಿ ನಮ್ಮದು ಸಂಪೂರ್ಣ ಬೆಂಬಲವಿದ್ದು, ಮಹಾರಾಷ್ಟ್ರದಲ್ಲಿ ಹೇಗೆ ಮರಾಠರಿಗೆ ಮೀಸಲಾತಿ ಕಲ್ಪಿಸಲಾಗಿದೆ ಅದೇ ರೀತಿ ಕರ್ನಾಟಕದಲ್ಲಿ ಲಿಂಗಾಯತರಿಗೆ ಮೀಸಲಾತಿ ಕೊಡಬೇಕು ಎಂದರು.

ಬೈಟ್:- ಜಯಮೃತ್ಯುಂಜಯ ಸ್ವಾಮೀಜಿ( ಲಿಂಗಾಯತ ಪಂಚಮಸಾಲಿ ಮಠದ ಪೀಠಾಧ್ಯಕ್ಷ)

,____________________________


Yallappa kundagol

HUBLIConclusion:Yallappa kundagol
ETV Bharat Logo

Copyright © 2025 Ushodaya Enterprises Pvt. Ltd., All Rights Reserved.