ETV Bharat / state

ಕರ್ತವ್ಯಕ್ಕೆ ಹಾಜರಾಗಿ, ಇಲ್ಲವೇ ಮನೆ ಖಾಲಿ ಮಾಡಿ: ಸಾರಿಗೆ ಇಲಾಖೆ ನೌಕರರ ವಸತಿ ಗೃಹಗಳಿಗೆ ನೋಟಿಸ್​​​​

ಸಾರಿಗೆ ನೌಕರರು ಮುಷ್ಕರದಿಂದ ಹಿಂದೆ ಸರಿಯದೇ ಇಂದೂ ಸಹ ಕರ್ತವ್ಯಕ್ಕೆ ಹಾಜರಾಗದೆ ಪ್ರತಿಭಟಿಸುತ್ತಿದ್ದಾರೆ. ಇದೀಗ ಕರ್ತವ್ಯಕ್ಕೆ ಗೈರಾಗಿರುವ ನೌಕರರ ವಸತಿ ಗೃಹಗಳಿಗೆ ಅಧಿಕಾರಿಗಳು ನೋಟಿಸ್ ಜಾರಿ ಮಾಡುತ್ತಿದ್ದು, ಕರ್ತವ್ಯಕ್ಕೆ ಹಾಜರಾಗಿ, ಇಲ್ಲವೇ ವಸತಿ ಗೃಹ ಖಾಲಿ ಮಾಡಿ ಎಂದು ತಾಕೀತು ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸುತ್ತಿದ್ದಾರೆ.

author img

By

Published : Apr 8, 2021, 3:30 PM IST

officers-who-pasted-a-notice-to-transport-workers-home-in-hubballi
ನೌಕರರ ಮನೆಗಳಿಗೆ ನೋಟಿಸ್​​​..!

ಹುಬ್ಬಳ್ಳಿ: ರಾಜ್ಯದಾದ್ಯಂತ 6ನೇ ವೇತನ ಆಯೋಗ ಜಾರಿಯಾಗಬೇಕು ಎಂದು ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದರೆ, ಇತ್ತ ಅವರ ಕುಟುಂಬಸ್ಥರು ಭೀತಿಯಲ್ಲಿ ಕಾಲ ಕಳೆಯುವಂತಾಗಿದೆ. ಕರ್ತವ್ಯಕ್ಕೆ ಗೈರಾಗಿ ಮುಷ್ಕರ ನಡೆಸುತ್ತಿರುವ ನೌಕರರ ಮನೆಗಳಿಗೆ ಅಧಿಕಾರಿಗಳು ನೋಟಿಸ್ ಅಂಟಿಸುತ್ತಿದ್ದು, ಮನೆ ಖಾಲಿ ಮಾಡಿ, ಇಲ್ಲವೇ ಕರ್ತವ್ಯಕ್ಕೆ ಹಾಜರಾಗಿ ಎಂದು ನೋಟಿಸ್​ನಲ್ಲಿ ತಿಳಿಸಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

officers-who-pasted-a-notice-to-transport-workers-home-in-hubballi
ನೌಕರರ ಮನೆಗೆ ಅಂಟಿಸಲಾದ ನೋಟಿಸ್​

ಹುಬ್ಬಳ್ಳಿ ಗೋಕುಲ ರಸ್ತೆಯಲ್ಲಿರುವ ಕೆಎಸ್​​​​ಆರ್​​ಟಿಸಿ ವಸತಿ ಗೃಹಗಳಿಗೆ ನೋಟಿಸ್ ನೀಡಿದ ಬೆನ್ನಲ್ಲೇ ಕುಟುಂಬಸ್ಥರು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಮನೆ ಮನೆಗೆ ಭೇಟಿ ನೀಡಿ ನೋಟಿಸ್ ನೀಡುತ್ತಿರುವ ಸಾರಿಗೆ ಇಲಾಖೆ ಹಿರಿಯ ಅಧಿಕಾರಿಗಳು, ಮನೆಯ ಬಾಗಿಲಿಗೆ ನೋಟಿಸ್ ಅಂಟಿಸುತ್ತಿದ್ದಾರೆ. ಕೆಲಸಕ್ಕೆ ಹಾಜರಾಗದಿದ್ದರೆ ವಸತಿ ಗೃಹ ಹಂಚಿಕೆ ರದ್ದು ಮಾಡಲಾಗುತ್ತೆ ಎಂದ ನೋಟಿಸ್​​​ನಲ್ಲಿ ಉಲ್ಲೇಖಿಸಲಾಗಿದೆ.

ಕರ್ತವ್ಯಕ್ಕೆ ಹಾಜರಾಗಿ, ಇಲ್ಲವೇ ಮನೆ ಖಾಲಿ ಮಾಡಿ... ನೌಕರರ ಮನೆಗಳಿಗೆ ನೋಟಿಸ್​​​

ಇದರಿಂದ ಆತಂಕಗೊಂಡಿರುವ ಕುಟುಂಬದ ಸದಸ್ಯರು, ನಮ್ಮ ಮನೆಯವರು ಕಳೆದ ಎರಡು ದಿನದಿಂದ ಮನೆಗೆ ಬಂದಿಲ್ಲ. ಈ ಸಂದರ್ಭದಲ್ಲಿ ನಮಗೆ ಒತ್ತಾಯಪೂರ್ವಕವಾಗಿ ನೋಟಿಸ್​​ಗೆ ಸಹಿ ಹಾಕಿಸಿಕೊಂಡು ಹೋಗಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಮುಷ್ಕರ ಬಿಟ್ಟು ಸೇವೆಗೆ ಹಾಜರಾಗುವ ಸಿಬ್ಬಂದಿಗೆ ರಕ್ಷಣೆ: ಬಸವರಾಜ್ ಬೊಮ್ಮಾಯಿ

ಹುಬ್ಬಳ್ಳಿ: ರಾಜ್ಯದಾದ್ಯಂತ 6ನೇ ವೇತನ ಆಯೋಗ ಜಾರಿಯಾಗಬೇಕು ಎಂದು ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದರೆ, ಇತ್ತ ಅವರ ಕುಟುಂಬಸ್ಥರು ಭೀತಿಯಲ್ಲಿ ಕಾಲ ಕಳೆಯುವಂತಾಗಿದೆ. ಕರ್ತವ್ಯಕ್ಕೆ ಗೈರಾಗಿ ಮುಷ್ಕರ ನಡೆಸುತ್ತಿರುವ ನೌಕರರ ಮನೆಗಳಿಗೆ ಅಧಿಕಾರಿಗಳು ನೋಟಿಸ್ ಅಂಟಿಸುತ್ತಿದ್ದು, ಮನೆ ಖಾಲಿ ಮಾಡಿ, ಇಲ್ಲವೇ ಕರ್ತವ್ಯಕ್ಕೆ ಹಾಜರಾಗಿ ಎಂದು ನೋಟಿಸ್​ನಲ್ಲಿ ತಿಳಿಸಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

officers-who-pasted-a-notice-to-transport-workers-home-in-hubballi
ನೌಕರರ ಮನೆಗೆ ಅಂಟಿಸಲಾದ ನೋಟಿಸ್​

ಹುಬ್ಬಳ್ಳಿ ಗೋಕುಲ ರಸ್ತೆಯಲ್ಲಿರುವ ಕೆಎಸ್​​​​ಆರ್​​ಟಿಸಿ ವಸತಿ ಗೃಹಗಳಿಗೆ ನೋಟಿಸ್ ನೀಡಿದ ಬೆನ್ನಲ್ಲೇ ಕುಟುಂಬಸ್ಥರು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಮನೆ ಮನೆಗೆ ಭೇಟಿ ನೀಡಿ ನೋಟಿಸ್ ನೀಡುತ್ತಿರುವ ಸಾರಿಗೆ ಇಲಾಖೆ ಹಿರಿಯ ಅಧಿಕಾರಿಗಳು, ಮನೆಯ ಬಾಗಿಲಿಗೆ ನೋಟಿಸ್ ಅಂಟಿಸುತ್ತಿದ್ದಾರೆ. ಕೆಲಸಕ್ಕೆ ಹಾಜರಾಗದಿದ್ದರೆ ವಸತಿ ಗೃಹ ಹಂಚಿಕೆ ರದ್ದು ಮಾಡಲಾಗುತ್ತೆ ಎಂದ ನೋಟಿಸ್​​​ನಲ್ಲಿ ಉಲ್ಲೇಖಿಸಲಾಗಿದೆ.

ಕರ್ತವ್ಯಕ್ಕೆ ಹಾಜರಾಗಿ, ಇಲ್ಲವೇ ಮನೆ ಖಾಲಿ ಮಾಡಿ... ನೌಕರರ ಮನೆಗಳಿಗೆ ನೋಟಿಸ್​​​

ಇದರಿಂದ ಆತಂಕಗೊಂಡಿರುವ ಕುಟುಂಬದ ಸದಸ್ಯರು, ನಮ್ಮ ಮನೆಯವರು ಕಳೆದ ಎರಡು ದಿನದಿಂದ ಮನೆಗೆ ಬಂದಿಲ್ಲ. ಈ ಸಂದರ್ಭದಲ್ಲಿ ನಮಗೆ ಒತ್ತಾಯಪೂರ್ವಕವಾಗಿ ನೋಟಿಸ್​​ಗೆ ಸಹಿ ಹಾಕಿಸಿಕೊಂಡು ಹೋಗಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಮುಷ್ಕರ ಬಿಟ್ಟು ಸೇವೆಗೆ ಹಾಜರಾಗುವ ಸಿಬ್ಬಂದಿಗೆ ರಕ್ಷಣೆ: ಬಸವರಾಜ್ ಬೊಮ್ಮಾಯಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.