ETV Bharat / state

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ಸಿಂಗಲ್ ವಿಂಡೋ ಸಿಸ್ಟಮ್ ತರುವ ಪ್ಲಾನ್: ಸಚಿವ ನಿರಾಣಿ

author img

By

Published : Mar 12, 2021, 6:09 PM IST

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ಕೆಲ ಬದಲಾವಣೆ ತರಲು ಬಯಸಿದ್ದೇವೆ. ಸಿಂಗಲ್ ವಿಂಡೋ ಸಿಸ್ಟಮ್ ತರುವ ಪ್ಲಾನ್ ಇದೆ. ಗಣಿ ಇಲಾಖೆ ಜೊತೆಯಲ್ಲಿ ಅರಣ್ಯ ಹಾಗೂ ಪೊಲೀಸ್ ಇಲಾಖೆ ಕೂಡ ಬರುತ್ತಿವೆ. ಗಣಿ‌ ಲೈಸನ್ಸ್​ಗೆ ಆಫ್ ಲೈನ್ ಹಾಗೂ ಆನ್​​ಲೈನ್ ಎರಡು ರೀತಿಯಲ್ಲಿ ಅನುಮತಿ ಪಡೆಯಬಹುದು. ಇನ್ನು 30 ದಿನದಲ್ಲಿ ಈ ನಿಯಮ ಜಾರಿಗೆ ತರುತ್ತೇವೆ. ಡ್ರಾಫ್ಟ್​ ಕೂಡ ತಯಾರಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರಗೇಶ ನಿರಾಣಿ ಹೇಳಿದರು.

ಸಚಿವ ನಿರಾಣಿ
ಸಚಿವ ನಿರಾಣಿ

ಧಾರವಾಡ: ರಾಜ್ಯದಲ್ಲಿ ಪರಿಸರ ಮತ್ತು ಉದ್ಯಮ ಸ್ನೇಹಿಯಾದ ನೂತನ ಗಣಿ ನೀತಿಯನ್ನು ರಾಜ್ಯ ಸರ್ಕಾರದಿಂದ ರೂಪಿಸುತ್ತಿದ್ದು, ನೀತಿಯ ಕರಡು ಪ್ರಗತಿ ಪರಿಶೀಲನಾ ಹಂತದಲ್ಲಿದೆ. ಅಂತಿಮಗೊಳಿಸಿ ಶೀಘ್ರದಲ್ಲಿ ಜಾರಿಗೊಳಿಸಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರಗೇಶ ನಿರಾಣಿ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಹಾಗೂ ಸ್ಟೋನ್‍ ಕ್ರಷರ್ ಮತ್ತು ಕಲ್ಲು ಗಣಿಗಾರಿಕೆ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಹೊಸ ಮೈನಿಂಗ್ ನೀತಿಯಲ್ಲಿ ಲೈಸನ್ಸ್ ಸರಳೀಕರಣಕ್ಕೆ ಆದ್ಯತೆ ನೀಡಲಾಗಿದೆ ಮತ್ತು ಕ್ರಷರ್ ಮಾಲೀಕರ ಬೇಡಿಕೆಗಳಿಗೆ ಸ್ಪಂದಿಸಲಾಗಿದೆ. ಪಟ್ಟಾ ಭೂಮಿ ಹಾಗೂ ಸರ್ಕಾರಿ ಭೂಮಿಗಳಲ್ಲಿ ನಡೆಯುವ ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದ ರಾಜಧನ (ರಾಯಲ್ಟಿ) ಮೊತ್ತವನ್ನು ಬೇರೆ ಬೇರೆಯಾಗಿ ನಿಗದಿಗೊಳಿಸಲಾಗುವುದು ಎಂದು ಹೇಳಿದರು.

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ‘ಏಕಗವಾಕ್ಷಿ ಯೋಜನೆ’ ಜಾರಿ ಮೂಲಕ ಉದ್ಯಮಿಗಳಿಗೆ ತ್ವರಿತವಾಗಿ ಸ್ಪಂದಿಸಲು ಕ್ರಮ ವಹಿಸಲಾಗುತ್ತಿದೆ. ಸದ್ಯದಲ್ಲಿ ರಾಜ್ಯದ ಎಲ್ಲಾ ಕಂದಾಯ ವಿಭಾಗ ಮತ್ತು ಎಲ್ಲಾ ಜಿಲ್ಲೆಗಳಲ್ಲಿ ಮೈನಿಂಗ್ ಅದಾಲತ್ ಆಯೋಜಿಸಲಾಗುತ್ತಿದೆ. ಅದಾಲತ್ ನಡೆಯುವ ಸ್ಥಳದಲ್ಲಿಯೇ ಗಣಿ ಸಂಬಂಧಿತ ಸಮಸ್ಯೆಗಳಿಗೆ ಪರಿಹಾರ ನೀಡಲಾಗುವುದು ಎಂದು ಹೇಳಿದರು.

ಸ್ಟೋನ್‍ ಕ್ರಷರ್ ಮತ್ತು ಕಲ್ಲು ಗಣಿಗಾರಿಕೆ ಸಂಘದ ಪದಾಧಿಕಾರಿಗಳ ಸಭೆ

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಹಾಗೂ ಸ್ಟೋನ್‍ ಕ್ರಷರ್, ಕಲ್ಲು ಗಣಿಗಾರಿಕೆ ನಡೆಸುವ ಉದ್ಯಮಗಳಿಗೆ ಸೂಕ್ತ ತರಬೇತಿ ನೀಡಲು ಸ್ಕೂಲ್ ಆಫ್ ಮೈನಿಂಗ್ ಆರಂಭಿಸಲು ಸರ್ಕಾರ ಸಿದ್ಧತೆ ನಡೆಸಿದೆ ಎಂದು ಸಚಿವ ಮುರಗೇಶ ನಿರಾಣಿ ಹೇಳಿದರು.

ಗಣಿ‌ ಲೈಸನ್ಸ್​ಗೆ ಆಫ್ ಲೈನ್ ಹಾಗೂ ಆನ್​​ಲೈನ್ ಅನುಮತಿ

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ಕೆಲ ಬದಲಾವಣೆ ತರಲು ಬಯಸಿದ್ದೇವೆ. ಸಿಂಗಲ್ ವಿಂಡೋ ಸಿಸ್ಟಮ್ ತರುವ ಪ್ಲಾನ್ ಇದೆ. ಗಣಿ ಇಲಾಖೆ ಜೊತೆಯಲ್ಲಿ ಅರಣ್ಯ ಹಾಗೂ ಪೊಲೀಸ್ ಇಲಾಖೆ ಕೂಡ ಬರುತ್ತಿವೆ. ಗಣಿ‌ ಲೈಸನ್ಸ್​ಗೆ ಆಫ್ ಲೈನ್ ಹಾಗೂ ಆನ್​ಲೈನ್ ಎರಡು ರೀತಿಯಲ್ಲಿ ಅನುಮತಿ ಪಡೆಯಬಹುದು. ಇನ್ನು 30 ದಿನದಲ್ಲಿ ಈ ನಿಯಮ ಜಾರಿಗೆ ತರುತ್ತೇವೆ. ಡ್ರಾಫ್ಟ್​ ಕೂಡ ತಯಾರಿದೆ ಎಂದು ತಿಳಿಸಿದರು.

ಗಣಿ ಮಾಲೀಕರು ಬಳ್ಳಾರಿ, ತುಮಕೂರು ಹಾಗೂ ಚಿತ್ರದುರ್ಗದಲ್ಲಿ 12 ಸಾವಿರ ಕೋಟಿ ರೂ. ರಾಯಲ್ಟಿ ಕಟ್ಟಿದ್ದಾರೆ. ಅದರ ಬಡ್ಡಿ ಸೇರಿ ಅದು 18 ಸಾವಿರ ಕೋಟಿ ರೂ. ಆಗಿದೆ. ಮೂರು ತಿಂಗಳಲ್ಲಿ ಆ ಹಣ ನಮ್ಮ ಕೈ ಸೇರುವ ನಿರೀಕ್ಷೆ ಇದೆ. ಇದರಿಂದ ಕ್ರಿಯಾ ಯೋಜನಾ ಕೆಲಸಗಳನ್ನು ಮಾಡಲಿದ್ದೇವೆ ಎಂದರು.

ಇದನ್ನೂ ಓದಿ.. ಭೂ ವ್ಯಾಜ್ಯ ಪ್ರಕರಣಗಳು... ಭೂಮಿ‌ ಕಳೆದುಕೊಳ್ಳುವ ಮಾಲೀಕರು ಏನು ಮಾಡಬೇಕು?

ಧಾರವಾಡ: ರಾಜ್ಯದಲ್ಲಿ ಪರಿಸರ ಮತ್ತು ಉದ್ಯಮ ಸ್ನೇಹಿಯಾದ ನೂತನ ಗಣಿ ನೀತಿಯನ್ನು ರಾಜ್ಯ ಸರ್ಕಾರದಿಂದ ರೂಪಿಸುತ್ತಿದ್ದು, ನೀತಿಯ ಕರಡು ಪ್ರಗತಿ ಪರಿಶೀಲನಾ ಹಂತದಲ್ಲಿದೆ. ಅಂತಿಮಗೊಳಿಸಿ ಶೀಘ್ರದಲ್ಲಿ ಜಾರಿಗೊಳಿಸಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರಗೇಶ ನಿರಾಣಿ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಹಾಗೂ ಸ್ಟೋನ್‍ ಕ್ರಷರ್ ಮತ್ತು ಕಲ್ಲು ಗಣಿಗಾರಿಕೆ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಹೊಸ ಮೈನಿಂಗ್ ನೀತಿಯಲ್ಲಿ ಲೈಸನ್ಸ್ ಸರಳೀಕರಣಕ್ಕೆ ಆದ್ಯತೆ ನೀಡಲಾಗಿದೆ ಮತ್ತು ಕ್ರಷರ್ ಮಾಲೀಕರ ಬೇಡಿಕೆಗಳಿಗೆ ಸ್ಪಂದಿಸಲಾಗಿದೆ. ಪಟ್ಟಾ ಭೂಮಿ ಹಾಗೂ ಸರ್ಕಾರಿ ಭೂಮಿಗಳಲ್ಲಿ ನಡೆಯುವ ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದ ರಾಜಧನ (ರಾಯಲ್ಟಿ) ಮೊತ್ತವನ್ನು ಬೇರೆ ಬೇರೆಯಾಗಿ ನಿಗದಿಗೊಳಿಸಲಾಗುವುದು ಎಂದು ಹೇಳಿದರು.

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ‘ಏಕಗವಾಕ್ಷಿ ಯೋಜನೆ’ ಜಾರಿ ಮೂಲಕ ಉದ್ಯಮಿಗಳಿಗೆ ತ್ವರಿತವಾಗಿ ಸ್ಪಂದಿಸಲು ಕ್ರಮ ವಹಿಸಲಾಗುತ್ತಿದೆ. ಸದ್ಯದಲ್ಲಿ ರಾಜ್ಯದ ಎಲ್ಲಾ ಕಂದಾಯ ವಿಭಾಗ ಮತ್ತು ಎಲ್ಲಾ ಜಿಲ್ಲೆಗಳಲ್ಲಿ ಮೈನಿಂಗ್ ಅದಾಲತ್ ಆಯೋಜಿಸಲಾಗುತ್ತಿದೆ. ಅದಾಲತ್ ನಡೆಯುವ ಸ್ಥಳದಲ್ಲಿಯೇ ಗಣಿ ಸಂಬಂಧಿತ ಸಮಸ್ಯೆಗಳಿಗೆ ಪರಿಹಾರ ನೀಡಲಾಗುವುದು ಎಂದು ಹೇಳಿದರು.

ಸ್ಟೋನ್‍ ಕ್ರಷರ್ ಮತ್ತು ಕಲ್ಲು ಗಣಿಗಾರಿಕೆ ಸಂಘದ ಪದಾಧಿಕಾರಿಗಳ ಸಭೆ

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಹಾಗೂ ಸ್ಟೋನ್‍ ಕ್ರಷರ್, ಕಲ್ಲು ಗಣಿಗಾರಿಕೆ ನಡೆಸುವ ಉದ್ಯಮಗಳಿಗೆ ಸೂಕ್ತ ತರಬೇತಿ ನೀಡಲು ಸ್ಕೂಲ್ ಆಫ್ ಮೈನಿಂಗ್ ಆರಂಭಿಸಲು ಸರ್ಕಾರ ಸಿದ್ಧತೆ ನಡೆಸಿದೆ ಎಂದು ಸಚಿವ ಮುರಗೇಶ ನಿರಾಣಿ ಹೇಳಿದರು.

ಗಣಿ‌ ಲೈಸನ್ಸ್​ಗೆ ಆಫ್ ಲೈನ್ ಹಾಗೂ ಆನ್​​ಲೈನ್ ಅನುಮತಿ

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ಕೆಲ ಬದಲಾವಣೆ ತರಲು ಬಯಸಿದ್ದೇವೆ. ಸಿಂಗಲ್ ವಿಂಡೋ ಸಿಸ್ಟಮ್ ತರುವ ಪ್ಲಾನ್ ಇದೆ. ಗಣಿ ಇಲಾಖೆ ಜೊತೆಯಲ್ಲಿ ಅರಣ್ಯ ಹಾಗೂ ಪೊಲೀಸ್ ಇಲಾಖೆ ಕೂಡ ಬರುತ್ತಿವೆ. ಗಣಿ‌ ಲೈಸನ್ಸ್​ಗೆ ಆಫ್ ಲೈನ್ ಹಾಗೂ ಆನ್​ಲೈನ್ ಎರಡು ರೀತಿಯಲ್ಲಿ ಅನುಮತಿ ಪಡೆಯಬಹುದು. ಇನ್ನು 30 ದಿನದಲ್ಲಿ ಈ ನಿಯಮ ಜಾರಿಗೆ ತರುತ್ತೇವೆ. ಡ್ರಾಫ್ಟ್​ ಕೂಡ ತಯಾರಿದೆ ಎಂದು ತಿಳಿಸಿದರು.

ಗಣಿ ಮಾಲೀಕರು ಬಳ್ಳಾರಿ, ತುಮಕೂರು ಹಾಗೂ ಚಿತ್ರದುರ್ಗದಲ್ಲಿ 12 ಸಾವಿರ ಕೋಟಿ ರೂ. ರಾಯಲ್ಟಿ ಕಟ್ಟಿದ್ದಾರೆ. ಅದರ ಬಡ್ಡಿ ಸೇರಿ ಅದು 18 ಸಾವಿರ ಕೋಟಿ ರೂ. ಆಗಿದೆ. ಮೂರು ತಿಂಗಳಲ್ಲಿ ಆ ಹಣ ನಮ್ಮ ಕೈ ಸೇರುವ ನಿರೀಕ್ಷೆ ಇದೆ. ಇದರಿಂದ ಕ್ರಿಯಾ ಯೋಜನಾ ಕೆಲಸಗಳನ್ನು ಮಾಡಲಿದ್ದೇವೆ ಎಂದರು.

ಇದನ್ನೂ ಓದಿ.. ಭೂ ವ್ಯಾಜ್ಯ ಪ್ರಕರಣಗಳು... ಭೂಮಿ‌ ಕಳೆದುಕೊಳ್ಳುವ ಮಾಲೀಕರು ಏನು ಮಾಡಬೇಕು?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.