ETV Bharat / state

ಹುಬ್ಬಳ್ಳಿ ಟ್ರ್ಯಾಕ್ಟರ್ ಕಳವು ಪ್ರಕರಣ: ಮೂವರು ಆರೋಪಿಗಳ ಬಂಧನ

author img

By

Published : Nov 2, 2022, 11:17 AM IST

ಟ್ರ್ಯಾಕ್ಟರ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಹುಬ್ಬಳ್ಳಿಯ ಗ್ರಾಮೀಣ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

Three accused arrested in tractor theft case
ಟ್ರ್ಯಾಕ್ಟರ್ ಕಳವು ಪ್ರಕರಣ ಮೂವರು ಆರೋಪಿಗಳ ಬಂಧನ

ಹುಬ್ಬಳ್ಳಿ: ಟ್ರ್ಯಾಕ್ಟರ್ ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ.‌ ಧಾರವಾಡದ ಅಕ್ಷರಭಾಷಾ ಕಂಬಾರಗಣವಿ, ಇಮಾಮಸಾಬ ತಹಶೀಲ್ದಾರ, ಸಯ್ಯದಸಾಬ್ ದೇವಗಿರಿ ಬಂಧಿತರು.

ಇ-ಮೇಲ್ ಮುಖಾಂತರ ದೂರು: ಹುಬ್ಬಳ್ಳಿ ತಾಲೂಕು ಅಂಚಟಗೇರಿಯ ಸಂತೋಷಕುಮಾರ ಸಾದರ ಎಂಬುವರಿಗೆ ಸೇರಿದ್ದ ಟ್ರ್ಯಾಕ್ಟರ್ ಅನ್ನು ಆರೋಪಿಗಳು ಟೇಲರ್ ಸಮೇತ ಕಳವು ಮಾಡಿದ್ದರು. ಟ್ರ್ಯಾಕ್ಟರ್ ಕಳ್ಳತನ ಆಗಿದ್ದ ಬಗ್ಗೆ ಇ-ಮೇಲ್ ಮುಖಾಂತರ ಮಾಲೀಕ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಈ ದೂರಿನನ್ವಯ ಕಾರ್ಯಾಚರಣೆ ನಡೆಸಿದ ಪೊಲೀಸರು, ಆರೋಪಿಗಳನ್ನು ಬಂಧಿಸಿ ಟ್ರಾಕ್ಟರ್ ಸಹಿತ ಟೇಲರನ್ನು ವಶಕ್ಕೆ ಪಡೆದಿದ್ದಾರೆ. ಇತ್ತೀಚೆಗೆ ಧಾರವಾಡ ಉಪನಗರ, ಧಾರವಾಡ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿಯೂ ಕೂಡ ಬಂಧಿತರು ಟ್ರ್ಯಾಕ್ಟರ್‌ ಟೇಲರ್ ಕಳ್ಳತನದ ಪ್ರಕರಣಗಳಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ವಿನಾಯಕ ಬಾಳಿಗಾ ಕೊಲೆ ಪ್ರಕರಣ: ವಿಶೇಷ ಅಭಿಯೋಜಕರಾಗಿ ವಕೀಲ ಬಾಲಕೃಷ್ಣನ್ ನೇಮಕ

ಹುಬ್ಬಳ್ಳಿ: ಟ್ರ್ಯಾಕ್ಟರ್ ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ.‌ ಧಾರವಾಡದ ಅಕ್ಷರಭಾಷಾ ಕಂಬಾರಗಣವಿ, ಇಮಾಮಸಾಬ ತಹಶೀಲ್ದಾರ, ಸಯ್ಯದಸಾಬ್ ದೇವಗಿರಿ ಬಂಧಿತರು.

ಇ-ಮೇಲ್ ಮುಖಾಂತರ ದೂರು: ಹುಬ್ಬಳ್ಳಿ ತಾಲೂಕು ಅಂಚಟಗೇರಿಯ ಸಂತೋಷಕುಮಾರ ಸಾದರ ಎಂಬುವರಿಗೆ ಸೇರಿದ್ದ ಟ್ರ್ಯಾಕ್ಟರ್ ಅನ್ನು ಆರೋಪಿಗಳು ಟೇಲರ್ ಸಮೇತ ಕಳವು ಮಾಡಿದ್ದರು. ಟ್ರ್ಯಾಕ್ಟರ್ ಕಳ್ಳತನ ಆಗಿದ್ದ ಬಗ್ಗೆ ಇ-ಮೇಲ್ ಮುಖಾಂತರ ಮಾಲೀಕ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಈ ದೂರಿನನ್ವಯ ಕಾರ್ಯಾಚರಣೆ ನಡೆಸಿದ ಪೊಲೀಸರು, ಆರೋಪಿಗಳನ್ನು ಬಂಧಿಸಿ ಟ್ರಾಕ್ಟರ್ ಸಹಿತ ಟೇಲರನ್ನು ವಶಕ್ಕೆ ಪಡೆದಿದ್ದಾರೆ. ಇತ್ತೀಚೆಗೆ ಧಾರವಾಡ ಉಪನಗರ, ಧಾರವಾಡ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿಯೂ ಕೂಡ ಬಂಧಿತರು ಟ್ರ್ಯಾಕ್ಟರ್‌ ಟೇಲರ್ ಕಳ್ಳತನದ ಪ್ರಕರಣಗಳಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ವಿನಾಯಕ ಬಾಳಿಗಾ ಕೊಲೆ ಪ್ರಕರಣ: ವಿಶೇಷ ಅಭಿಯೋಜಕರಾಗಿ ವಕೀಲ ಬಾಲಕೃಷ್ಣನ್ ನೇಮಕ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.