ETV Bharat / state

ಪ್ರಹ್ಲಾದ್ ಜೋಶಿ ಕೂಡ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ: ಹೊಸ ಬಾಂಬ್ ಸಿಡಿಸಿದ ಕಾಂಗ್ರೆಸ್​ ಅಭ್ಯರ್ಥಿ

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಶೀಘ್ರದಲ್ಲೇ ಕಾಂಗ್ರೆಸ್ ಪಕ್ಷ ಸೇರ್ಪಡೆ ಆಗಲಿದ್ದಾರೆ ಎಂದು ದೀಪಕ್ ಚಿಂಚೂರೆ ಹೊಸ ಬಾಂಬ್ ಸಿಡಿಸಿದ್ದಾರೆ.

author img

By

Published : Apr 19, 2023, 11:48 AM IST

deepak chinchure
ದೀಪಕ್ ಚಿಂಚೂರೆ
ಸುದ್ದಿಗಾರರ ಜೊತೆ ಮಾತನಾಡಿದ ದೀಪಕ್ ಚಿಂಚೂರೆ

ಹುಬ್ಬಳ್ಳಿ : ವಿಧಾನಸಭಾ ಚುನಾವಣೆಗೆ ಟಿಕೆಟ್‌ ಸಿಗದೆ ನಿರಾಶರಾದ ಮುಖಂಡರು ಪಕ್ಷಾಂತರ ನಡೆಸುತ್ತಿದ್ದಾರೆ. ಈ ಬೆನ್ನಲ್ಲೇ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕೂಡ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಲಿದ್ದಾರೆ ಎಂದು ಹೇಳುವ ಮೂಲಕ ಹುಬ್ಬಳ್ಳಿ ಧಾರವಾಡ ಪಶ್ಚಿಮ‌ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಕರ್ನಾಟಕ ಕಾಂಗ್ರೆಸ್ ಮುಖಂಡ ದೀಪಕ್ ಚಿಂಚೂರೆ ಹೊಸ ಬಾಂಬ್ ಸಿಡಿಸಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನ ನಗರದ ಶ್ರೀ ಸಿದ್ಧಾರೂಢ ಮಠದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, "ಈಗಾಗಲೇ ಕಾಂಗ್ರೆಸ್​ಗೆ ಸಾಕಷ್ಟು ನಾಯಕರು ಬಂದಿದ್ದು, ಇನ್ನೂ ಕೆಲವರು ಬರುತ್ತಾರೆ. ಇದರಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕೂಡ ಪ್ರಮುಖರು‌. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಈಗಾಗಲೇ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಪ್ರಹ್ಲಾದ್ ಜೋಶಿ ಹಾಗೂ ಜಗದೀಶ್ ಶೆಟ್ಟರ್ ಒಂದೇ ನಾಣ್ಯದ ಎರಡು ಮುಖಗಳು. ಇಬ್ಬರೂ ಜೊತೆ ಜೊತೆಗೆ ರಾಜಕಾರಣ ಮಾಡಿದವರು. ಒಬ್ಬರನ್ನು ಬಿಟ್ಟು ಮತ್ತೊಬ್ಬರು ಇರುವುದಿಲ್ಲ ಎಂದು ಅಭಿಪ್ರಾಯಪಟ್ಟರು.

ಜಗದೀಶ್ ಶೆಟ್ಟರ್ ನಡೆಯನ್ನೇ ಜೋಶಿ ಕೂಡ ಅನುಸರಿಸ್ತಾರೆ. ಅದಕ್ಕೆಂದೇ ಹುಬ್ಬಳ್ಳಿ - ಧಾರವಾಡ ಪಶ್ಚಿಮ ಕ್ಷೇತ್ರದ ಟಿಕೆಟ್ ಘೋಷಣೆ ವಿಳಂಬವಾಯಿತು. ಪರಿಣಾಮ ಈಗ ನನಗೆ ಟಿಕೆಟ್ ಕೊಡಲಾಗಿದೆ. ಮುಂದಿನ ದಿನಗಳಲ್ಲಿ ಪ್ರಹ್ಲಾದ್ ಜೋಶಿ ಕಾಂಗ್ರೆಸ್​ಗೆ ಬರ್ತಾರೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗ್ತಾರೆ. ಕ್ಷೇತ್ರದಲ್ಲಿ 11 ಜನ ಆಕಾಂಕ್ಷಿಗಳಿದ್ದರು. ಈ ಪೈಕಿ ನನಗೆ ಟಿಕೆಟ್ ಸಿಕ್ಕಿದ್ದು, ಉಳಿದವರು ನನ್ನನ್ನು ಬೆಂಬಲಿಸಲಿದ್ದಾರೆ ಎಂದರು. ನಾಮಪತ್ರ ಸಲ್ಲಿಕೆಗೂ ಮುನ್ನ ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿ ಉಭಯ ಶ್ರೀಗಳ ಗದ್ದುಗೆ ದರ್ಶನ ಪಡೆದುಕೊಂಡರು.

ಇದನ್ನೂ ಓದಿ : ಕಾಂಗ್ರೆಸ್ ಕಚೇರಿಯಲ್ಲಿ ಶೆಟ್ಟರ್.. ಇನ್ನೂ 67 ಜನ ಬಿಜೆಪಿ ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದ ಡಿಕೆಶಿ ​

ಈ ಹಿಂದೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದ ವೇಳೆ ಮಾತನಾಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​ ಹೊಸ ಬಾಂಬ್​ ಸಿಡಿಸಿದ್ದರು. " 67 ಮಂದಿ ಬಿಜೆಪಿ ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ. ಮಾಜಿ ಡಿಸಿಎಂ ಲಕ್ಷ್ಮಣ​ ಸವದಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸೇರಿದಂತೆ ಲಿಂಗಾಯತ ಸಮುದಾಯದ ನಾಯಕರು ಕಾಂಗ್ರೆಸ್​ ಪಕ್ಷಕ್ಕೆ ಬೆಂಬಲ ನೀಡುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ಇನ್ನಷ್ಟು ನಾಯಕರು ನಮ್ಮ ಪಕ್ಷಕ್ಕೆ ಸೇರ್ಪಡೆ ಆಗಲಿದ್ದಾರೆ. ಲಿಂಗಾಯತ ಸಮುದಾಯವನ್ನು ಬಿಜೆಪಿ ನಿರ್ಲಕ್ಷಿಸುತ್ತಿದೆ. ಈಗಾಗಲೇ ಬಿ ಎಸ್ ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಅಂತಹ ನಾಯಕರನ್ನು ದೂರ ಇರಿಸಿದೆ. ಸಾಕಷ್ಟು ಬಿಜೆಪಿ ನಾಯಕರು ಲಿಂಗಾಯತ ಸಮುದಾಯದ ಮುಖಂಡರ ನಿರ್ಲಕ್ಷವನ್ನ ಗಮನಿಸುತ್ತಿದ್ದಾರೆ " ಎಂದು ಹೇಳಿದ್ದರು.

ಇದನ್ನೂ ಓದಿ : ರಾಯಚೂರಿನ ಗ್ರಾಮೀಣ ಮತ್ತು ಮಾನ್ವಿ ಮೀಸಲು ಕ್ಷೇತ್ರದ ಅಭ್ಯರ್ಥಿಗಳ ನಾಮಪ್ರತ ಸಲ್ಲಿಕೆ

ಸುದ್ದಿಗಾರರ ಜೊತೆ ಮಾತನಾಡಿದ ದೀಪಕ್ ಚಿಂಚೂರೆ

ಹುಬ್ಬಳ್ಳಿ : ವಿಧಾನಸಭಾ ಚುನಾವಣೆಗೆ ಟಿಕೆಟ್‌ ಸಿಗದೆ ನಿರಾಶರಾದ ಮುಖಂಡರು ಪಕ್ಷಾಂತರ ನಡೆಸುತ್ತಿದ್ದಾರೆ. ಈ ಬೆನ್ನಲ್ಲೇ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕೂಡ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಲಿದ್ದಾರೆ ಎಂದು ಹೇಳುವ ಮೂಲಕ ಹುಬ್ಬಳ್ಳಿ ಧಾರವಾಡ ಪಶ್ಚಿಮ‌ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಕರ್ನಾಟಕ ಕಾಂಗ್ರೆಸ್ ಮುಖಂಡ ದೀಪಕ್ ಚಿಂಚೂರೆ ಹೊಸ ಬಾಂಬ್ ಸಿಡಿಸಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನ ನಗರದ ಶ್ರೀ ಸಿದ್ಧಾರೂಢ ಮಠದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, "ಈಗಾಗಲೇ ಕಾಂಗ್ರೆಸ್​ಗೆ ಸಾಕಷ್ಟು ನಾಯಕರು ಬಂದಿದ್ದು, ಇನ್ನೂ ಕೆಲವರು ಬರುತ್ತಾರೆ. ಇದರಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕೂಡ ಪ್ರಮುಖರು‌. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಈಗಾಗಲೇ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಪ್ರಹ್ಲಾದ್ ಜೋಶಿ ಹಾಗೂ ಜಗದೀಶ್ ಶೆಟ್ಟರ್ ಒಂದೇ ನಾಣ್ಯದ ಎರಡು ಮುಖಗಳು. ಇಬ್ಬರೂ ಜೊತೆ ಜೊತೆಗೆ ರಾಜಕಾರಣ ಮಾಡಿದವರು. ಒಬ್ಬರನ್ನು ಬಿಟ್ಟು ಮತ್ತೊಬ್ಬರು ಇರುವುದಿಲ್ಲ ಎಂದು ಅಭಿಪ್ರಾಯಪಟ್ಟರು.

ಜಗದೀಶ್ ಶೆಟ್ಟರ್ ನಡೆಯನ್ನೇ ಜೋಶಿ ಕೂಡ ಅನುಸರಿಸ್ತಾರೆ. ಅದಕ್ಕೆಂದೇ ಹುಬ್ಬಳ್ಳಿ - ಧಾರವಾಡ ಪಶ್ಚಿಮ ಕ್ಷೇತ್ರದ ಟಿಕೆಟ್ ಘೋಷಣೆ ವಿಳಂಬವಾಯಿತು. ಪರಿಣಾಮ ಈಗ ನನಗೆ ಟಿಕೆಟ್ ಕೊಡಲಾಗಿದೆ. ಮುಂದಿನ ದಿನಗಳಲ್ಲಿ ಪ್ರಹ್ಲಾದ್ ಜೋಶಿ ಕಾಂಗ್ರೆಸ್​ಗೆ ಬರ್ತಾರೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗ್ತಾರೆ. ಕ್ಷೇತ್ರದಲ್ಲಿ 11 ಜನ ಆಕಾಂಕ್ಷಿಗಳಿದ್ದರು. ಈ ಪೈಕಿ ನನಗೆ ಟಿಕೆಟ್ ಸಿಕ್ಕಿದ್ದು, ಉಳಿದವರು ನನ್ನನ್ನು ಬೆಂಬಲಿಸಲಿದ್ದಾರೆ ಎಂದರು. ನಾಮಪತ್ರ ಸಲ್ಲಿಕೆಗೂ ಮುನ್ನ ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿ ಉಭಯ ಶ್ರೀಗಳ ಗದ್ದುಗೆ ದರ್ಶನ ಪಡೆದುಕೊಂಡರು.

ಇದನ್ನೂ ಓದಿ : ಕಾಂಗ್ರೆಸ್ ಕಚೇರಿಯಲ್ಲಿ ಶೆಟ್ಟರ್.. ಇನ್ನೂ 67 ಜನ ಬಿಜೆಪಿ ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದ ಡಿಕೆಶಿ ​

ಈ ಹಿಂದೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದ ವೇಳೆ ಮಾತನಾಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​ ಹೊಸ ಬಾಂಬ್​ ಸಿಡಿಸಿದ್ದರು. " 67 ಮಂದಿ ಬಿಜೆಪಿ ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ. ಮಾಜಿ ಡಿಸಿಎಂ ಲಕ್ಷ್ಮಣ​ ಸವದಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸೇರಿದಂತೆ ಲಿಂಗಾಯತ ಸಮುದಾಯದ ನಾಯಕರು ಕಾಂಗ್ರೆಸ್​ ಪಕ್ಷಕ್ಕೆ ಬೆಂಬಲ ನೀಡುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ಇನ್ನಷ್ಟು ನಾಯಕರು ನಮ್ಮ ಪಕ್ಷಕ್ಕೆ ಸೇರ್ಪಡೆ ಆಗಲಿದ್ದಾರೆ. ಲಿಂಗಾಯತ ಸಮುದಾಯವನ್ನು ಬಿಜೆಪಿ ನಿರ್ಲಕ್ಷಿಸುತ್ತಿದೆ. ಈಗಾಗಲೇ ಬಿ ಎಸ್ ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಅಂತಹ ನಾಯಕರನ್ನು ದೂರ ಇರಿಸಿದೆ. ಸಾಕಷ್ಟು ಬಿಜೆಪಿ ನಾಯಕರು ಲಿಂಗಾಯತ ಸಮುದಾಯದ ಮುಖಂಡರ ನಿರ್ಲಕ್ಷವನ್ನ ಗಮನಿಸುತ್ತಿದ್ದಾರೆ " ಎಂದು ಹೇಳಿದ್ದರು.

ಇದನ್ನೂ ಓದಿ : ರಾಯಚೂರಿನ ಗ್ರಾಮೀಣ ಮತ್ತು ಮಾನ್ವಿ ಮೀಸಲು ಕ್ಷೇತ್ರದ ಅಭ್ಯರ್ಥಿಗಳ ನಾಮಪ್ರತ ಸಲ್ಲಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.