ETV Bharat / state

ಧಾರವಾಡದಲ್ಲಿ ಖಾಸಗಿ‌ ಬಸ್ ಲಾರಿ ಡಿಕ್ಕಿ.. ಓರ್ವ ಸಾವು, ಹಲವರಿಗೆ ಗಾಯ

author img

By

Published : Aug 25, 2022, 12:44 PM IST

ಧಾರವಾಡ ಹೊರವಲಯದ ಹಳಿಯಾಳ ಬೈಪಾಸ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ‌ ಬಸ್ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಒಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

ಖಾಸಗಿ‌ ಬಸ್ ಲಾರಿ ಡಿಕ್ಕಿ
private bus and lorry collision

ಧಾರವಾಡ: ಖಾಸಗಿ‌ ಬಸ್ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಬಸ್ ಕ್ಲೀನರ್ ಮೃತಪಟ್ಟ ದಾರುಣ ಘಟನೆ ಧಾರವಾಡ ಹೊರವಲಯದ ಹಳಿಯಾಳ ಬೈಪಾಸ್ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.

ಧಾರವಾಡದಲ್ಲಿ ಖಾಸಗಿ‌ ಬಸ್ ಲಾರಿ ಡಿಕ್ಕಿ

ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಚಾಲಕ ಲಾರಿಯಲ್ಲಿಯೇ ಸಿಲುಕಿದ್ದಾರೆ. ಚಾಲಕನನ್ನು ಹೊರ ತೆಗೆಯಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಬಸ್​ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸ್ಥಳೀಯ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.

ಅಪಘಾತ ಸಂಭವಿಸಿದ ಪರಿಣಾಮ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇದನ್ನೂ ಓದಿ: ತುಮಕೂರು ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ 2 ಲಕ್ಷ ರೂ ಪರಿಹಾರ.. ಪ್ರಧಾನಿ ಮೋದಿ ಘೋಷಣೆ

ಧಾರವಾಡ: ಖಾಸಗಿ‌ ಬಸ್ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಬಸ್ ಕ್ಲೀನರ್ ಮೃತಪಟ್ಟ ದಾರುಣ ಘಟನೆ ಧಾರವಾಡ ಹೊರವಲಯದ ಹಳಿಯಾಳ ಬೈಪಾಸ್ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.

ಧಾರವಾಡದಲ್ಲಿ ಖಾಸಗಿ‌ ಬಸ್ ಲಾರಿ ಡಿಕ್ಕಿ

ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಚಾಲಕ ಲಾರಿಯಲ್ಲಿಯೇ ಸಿಲುಕಿದ್ದಾರೆ. ಚಾಲಕನನ್ನು ಹೊರ ತೆಗೆಯಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಬಸ್​ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸ್ಥಳೀಯ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.

ಅಪಘಾತ ಸಂಭವಿಸಿದ ಪರಿಣಾಮ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇದನ್ನೂ ಓದಿ: ತುಮಕೂರು ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ 2 ಲಕ್ಷ ರೂ ಪರಿಹಾರ.. ಪ್ರಧಾನಿ ಮೋದಿ ಘೋಷಣೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.