ETV Bharat / state

ಧಾರವಾಡದ 8 ಶಿಕ್ಷಕರಿಗೆ ಸೋಂಕು ತಗುಲಲು ನರ್ಸ್​ ಕಾರಣ: ಡಿಸಿ ದೀಪಾ ಚೋಳನ್​ ಸ್ಪಷ್ಟನೆ

author img

By

Published : Jun 15, 2020, 3:37 PM IST

ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳಕ್ಕೆ‌ ಜನರು ಭಯ ಪಡುವುದು ಬೇಡ. ಜಿಲ್ಲಾಡಳಿತ ಸೋಂಕು ಹತೋಟಿಗೆ ಸಿದ್ದತೆ ಮಾಡಿಕೊಳ್ಳುತ್ತಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್​ ಅಭಯ ನೀಡಿದ್ದಾರೆ.

Deputy Commissioner Deepa Cholan
ಜಿಲ್ಲಾಧಿಕಾರಿ ದೀಪಾ ಚೋಳನ್

ಧಾರವಾಡ: ನಗರದ 8 ಜನ ಶಿಕ್ಷಕರಿಗೆ ಕೊರೊನಾ ಹರಡಿರುವುದು ಒಬ್ಬ ನರ್ಸ್​ನಿಂದ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್​ ಸ್ಪಷ್ಟನೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ನೂತನ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುವ ನರ್ಸ್ (ವೈದ್ಯಕೀಯ ಸಹಾಯಕ) ನಿಂದ ಅವರ ಪತ್ನಿಗೆ ಸೋಂಕು ತಗುಲಿದೆ. ಈ ನರ್ಸ್ ಪತ್ನಿ ಖಾಸಗಿ ಶಾಲೆಯ ಶಿಕ್ಷಕಿಯಾಗಿದ್ದು, ಅವರು ಶಾಲೆಯಲ್ಲಿ ನಡೆದ ಸಭೆಯಲ್ಲಿ ಭಾಗಿಯಾಗಿದ್ದರಿಂದ ಉಳಿದ ಶಿಕ್ಷಕರಿಗೆ ಸೋಂಕು ಹರಡಿದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ದೀಪಾ ಚೋಳನ್​ ಸ್ಪಷ್ಟನೆ.
ನಂತರ ಮಾತನಾಡಿದ ಅವರು, ಲಾಕ್‌ಡೌನ್ ಸಡಿಲಿಕೆ ಬಳಿಕ ಸಾರ್ವಜನಿಕರು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ಶಾಲೆಯಲ್ಲಿ ಸಭೆ ಮಾಡುವ ಸಂದರ್ಭದಲ್ಲಿ ಶಿಕ್ಷಕರೇ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕಿತ್ತು. ಈ ಶಾಲೆಯನ್ನು‌ ಎಸ್.ಎಸ್.ಎಲ್.ಸಿ ಸೆಂಟರ್ ಮಾಡಿಲ್ಲ, ಅಲ್ಲದೇ ಸಭೆಯಲ್ಲಿ ಭಾಗಿಯಾದವರ ಗಂಟಲು ದ್ರವ ಮಾದರಿ ಟೆಸ್ಟ್ ಗೆ ಕಳಿಸಲಾಗಿದೆ ಎಂದರು.

ಸೋಂಕಿತರಿಗೆ ಹುಬ್ಬಳ್ಳಿ ಕಿಮ್ಸ್ ನಲ್ಲಿ ಚಿಕಿತ್ಸೆ‌ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳಕ್ಕೆ‌ ಜನರು ಭಯ ಪಡುವುದು ಬೇಡ. ಜಿಲ್ಲಾಡಳಿತ ಸೋಂಕು ಹತೋಟಿಗೆ ಸಿದ್ದತೆ ಮಾಡಿಕೊಳ್ಳುತ್ತಿದೆ. ಕಿಮ್ಸ್ ಆಸ್ಪತ್ರೆಯಲ್ಲಿ ಹಗಲಿರುಳು ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಸೋಂಕಿತ ವ್ಯಕ್ತಿಗಳಿಗೆ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ ಎಂದ ಅವರು, ಕಿಮ್ಸ್ ವೈದ್ಯಕೀಯ ಸಿಬ್ಬಂದಿಗೆ ಅಭಿನಂದನೆ ಸಲ್ಲಿಸಿದರು.

ಧಾರವಾಡ: ನಗರದ 8 ಜನ ಶಿಕ್ಷಕರಿಗೆ ಕೊರೊನಾ ಹರಡಿರುವುದು ಒಬ್ಬ ನರ್ಸ್​ನಿಂದ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್​ ಸ್ಪಷ್ಟನೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ನೂತನ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುವ ನರ್ಸ್ (ವೈದ್ಯಕೀಯ ಸಹಾಯಕ) ನಿಂದ ಅವರ ಪತ್ನಿಗೆ ಸೋಂಕು ತಗುಲಿದೆ. ಈ ನರ್ಸ್ ಪತ್ನಿ ಖಾಸಗಿ ಶಾಲೆಯ ಶಿಕ್ಷಕಿಯಾಗಿದ್ದು, ಅವರು ಶಾಲೆಯಲ್ಲಿ ನಡೆದ ಸಭೆಯಲ್ಲಿ ಭಾಗಿಯಾಗಿದ್ದರಿಂದ ಉಳಿದ ಶಿಕ್ಷಕರಿಗೆ ಸೋಂಕು ಹರಡಿದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ದೀಪಾ ಚೋಳನ್​ ಸ್ಪಷ್ಟನೆ.
ನಂತರ ಮಾತನಾಡಿದ ಅವರು, ಲಾಕ್‌ಡೌನ್ ಸಡಿಲಿಕೆ ಬಳಿಕ ಸಾರ್ವಜನಿಕರು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ಶಾಲೆಯಲ್ಲಿ ಸಭೆ ಮಾಡುವ ಸಂದರ್ಭದಲ್ಲಿ ಶಿಕ್ಷಕರೇ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕಿತ್ತು. ಈ ಶಾಲೆಯನ್ನು‌ ಎಸ್.ಎಸ್.ಎಲ್.ಸಿ ಸೆಂಟರ್ ಮಾಡಿಲ್ಲ, ಅಲ್ಲದೇ ಸಭೆಯಲ್ಲಿ ಭಾಗಿಯಾದವರ ಗಂಟಲು ದ್ರವ ಮಾದರಿ ಟೆಸ್ಟ್ ಗೆ ಕಳಿಸಲಾಗಿದೆ ಎಂದರು.

ಸೋಂಕಿತರಿಗೆ ಹುಬ್ಬಳ್ಳಿ ಕಿಮ್ಸ್ ನಲ್ಲಿ ಚಿಕಿತ್ಸೆ‌ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳಕ್ಕೆ‌ ಜನರು ಭಯ ಪಡುವುದು ಬೇಡ. ಜಿಲ್ಲಾಡಳಿತ ಸೋಂಕು ಹತೋಟಿಗೆ ಸಿದ್ದತೆ ಮಾಡಿಕೊಳ್ಳುತ್ತಿದೆ. ಕಿಮ್ಸ್ ಆಸ್ಪತ್ರೆಯಲ್ಲಿ ಹಗಲಿರುಳು ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಸೋಂಕಿತ ವ್ಯಕ್ತಿಗಳಿಗೆ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ ಎಂದ ಅವರು, ಕಿಮ್ಸ್ ವೈದ್ಯಕೀಯ ಸಿಬ್ಬಂದಿಗೆ ಅಭಿನಂದನೆ ಸಲ್ಲಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.