ಹುಬ್ಬಳ್ಳಿ: ಆಶ್ರಯ ಮನೆ ಫಲಾನುಭವಿಗಳ ಮನವಿ ಸ್ವೀಕರಿಸಲಿಲ್ಲ ಎಂದು ಆರೋಪಿಸಿ ಫಲಾನುಭವಿಗಳು ಇಂದು ಸಿಎಂ ಬೆಂಗಾವಲು ವಾಹನ ತಡೆದು ಪ್ರತಿಭಟನೆ ನಡೆಸಿದ ಘಟನೆ ಹುಬ್ಬಳ್ಳಿಯ ಸಿಎಂ ಅವರ ಆದರ್ಶ ನಗರದ ನಿವಾಸದ ಎದುರು ನಡೆದಿದೆ.
ಜಗದೀಶ್ ನಗರ ಆಶ್ರಯ ಯೋಜನೆಯ 209 ಮನೆಗಳ ಹಂಚಿಕೆ ಹಾಗು ಹಕ್ಕು ಪತ್ರ ವಿತರಣೆ ಮಾಡುವಂತೆ ಫಲಾನುಭವಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲು ಆಗಮಿಸಿದ್ದರು. ಆದ್ರೆ ಸಿಎಂ ಅವರು ಸಮಯದ ಅಭಾವದಿಂದ ಅವರ ಮನವಿ ಸ್ವೀಕರಿಸದೇ ಮುಂದೆ ಸಾಗಿದರು. ಇದರಿಂದ ಆಕ್ರೋಶಗೊಂಡ ಜನರು ಬೆಂಗಾವಲು ವಾಹನ ತಡೆದು ಪ್ರತಿಭಟನೆ ನಡೆಸಿದರು.
![protest in hubli](https://etvbharatimages.akamaized.net/etvbharat/prod-images/17240467_news.jpg)