ETV Bharat / state

ಧಾರವಾಡದಲ್ಲಿ ಎನ್​ಪಿಎಸ್​ ಮರು ಜಾರಿಗೆ ಒತ್ತಾಯ.. ಪ್ರತಿಭಟನೆಗೆ ಹೊರಟ್ಟಿ ಸಾಥ್​​

author img

By

Published : Nov 7, 2022, 12:44 PM IST

ಧಾರವಾಡದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಎನ್​ಪಿಎಸ್ ನೌಕರರ ಸಂಘದ ವತಿಯಿಂದ ಹಳೆ ಪಿಂಚಣಿ ಯೋಜನೆ ಮರು ಜಾರಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು.

old pension scheme
: ಹಳೆ ಪಿಂಚಣಿ ಯೋಜನೆ ಮರು ಜಾರಿಗೆ ಒತ್ತಾಯಿಸಿ ಪ್ರತಿಭಟನೆ

ಧಾರವಾಡ : ಹೊಸ ಪಿಂಚಣಿ ಯೋಜನೆ ರದ್ದುಪಡಿಸಿ ಹಳೆ ಪಿಂಚಣಿ ಯೋಜನೆ ಮರು ಜಾರಿಗೆ ತರಬೇಕೆಂದು ಆಗ್ರಹಿಸಿ ಧಾರವಾಡದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಎನ್​ಪಿಎಸ್ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಧಾರವಾಡ ಕಲಾಭವನದಿಂದ ಪ್ರಾರಂಭವಾದ ಪ್ರತಿಭಟನಾ ಮೆರವಣಿಗೆಗೆ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಸಾಥ್ ನೀಡಿದರು. ಬಳಿಕ ಮಾತನಾಡಿದ ಅವರು, ಈ ಹಿಂದೆ ಪ್ರತಿಭಟನೆ ಮಾಡಿದ್ದಾಗ ಡಿ ಕೆ ಶಿವಕುಮಾರ್ ಅವರು ಹಳೆಯ ಪಿಂಚಣಿ ಪದ್ಧತಿ ಜಾರಿಗೆ ತರುವ ಬಗ್ಗೆ ಮಾತನಾಡಿದ್ದರು. ಆದ್ರೆ, ಈ ಕುರಿತು ಯಾವುದೇ ಕ್ರಮ ಕೈಗೊಂಡಿಲ್ಲ. ನಾವು ವಿಧಾನ ಪರಿಷತ್ ಸದಸ್ಯರೆಲ್ಲರೂ ಸೇರಿ ಶಿಕ್ಷಣ ಸಚಿವರ ಹಾಗೂ ಹಣಕಾಸು ಇಲಾಖೆ ಕಾರ್ಯದರ್ಶಿಯನ್ನು ಭೇಟಿ ಮಾಡಿದ್ದೇವೆ. ಜೊತೆಗೆ ಈ ಕುರಿತು ಸಿಎಂಗೆ ಕೂಡ ಹೇಳಿದ್ದೇನೆ ಎಂದರು.

: ಹಳೆ ಪಿಂಚಣಿ ಯೋಜನೆ ಮರು ಜಾರಿಗೆ ಒತ್ತಾಯಿಸಿ ಪ್ರತಿಭಟನೆ

ಇದನ್ನೂ ಓದಿ: ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ತನ್ನಿ: ಎನ್​​ಪಿಎಸ್​ಗೆ ಪರಿಷತ್​ನಲ್ಲಿ ಪಕ್ಷಾತೀತ ವಿರೋಧ!

ಸರ್ಕಾರಿ ನೌಕರರ ಈ ಹೋರಾಟ ನ್ಯಾಯವಾಗಿದೆ ಮತ್ತು ಪ್ರತಿಭಟನಾಕಾರರ ಬೇಡಿಕೆ ಯೋಗ್ಯವಾಗಿದೆ. ಹೀಗಾಗಿ, ಹಳೆ ಪಿಂಚಣಿ ಯೋಜನೆ ಮರು ಜಾರಿಗೆ ತರಬೇಕೆಂದು ಒತ್ತಾಯ ಮಾಡುತ್ತೇನೆ. ಯಾರಿಗಾದರೂ ಅನ್ಯಾಯ ಆದರೆ ಅವರ‌‌ ಪರ ನ್ಯಾಯಕ್ಕಾಗಿ ನಾನು ಇರುತ್ತೇನೆ ಎಂದರು.

ಧಾರವಾಡ : ಹೊಸ ಪಿಂಚಣಿ ಯೋಜನೆ ರದ್ದುಪಡಿಸಿ ಹಳೆ ಪಿಂಚಣಿ ಯೋಜನೆ ಮರು ಜಾರಿಗೆ ತರಬೇಕೆಂದು ಆಗ್ರಹಿಸಿ ಧಾರವಾಡದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಎನ್​ಪಿಎಸ್ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಧಾರವಾಡ ಕಲಾಭವನದಿಂದ ಪ್ರಾರಂಭವಾದ ಪ್ರತಿಭಟನಾ ಮೆರವಣಿಗೆಗೆ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಸಾಥ್ ನೀಡಿದರು. ಬಳಿಕ ಮಾತನಾಡಿದ ಅವರು, ಈ ಹಿಂದೆ ಪ್ರತಿಭಟನೆ ಮಾಡಿದ್ದಾಗ ಡಿ ಕೆ ಶಿವಕುಮಾರ್ ಅವರು ಹಳೆಯ ಪಿಂಚಣಿ ಪದ್ಧತಿ ಜಾರಿಗೆ ತರುವ ಬಗ್ಗೆ ಮಾತನಾಡಿದ್ದರು. ಆದ್ರೆ, ಈ ಕುರಿತು ಯಾವುದೇ ಕ್ರಮ ಕೈಗೊಂಡಿಲ್ಲ. ನಾವು ವಿಧಾನ ಪರಿಷತ್ ಸದಸ್ಯರೆಲ್ಲರೂ ಸೇರಿ ಶಿಕ್ಷಣ ಸಚಿವರ ಹಾಗೂ ಹಣಕಾಸು ಇಲಾಖೆ ಕಾರ್ಯದರ್ಶಿಯನ್ನು ಭೇಟಿ ಮಾಡಿದ್ದೇವೆ. ಜೊತೆಗೆ ಈ ಕುರಿತು ಸಿಎಂಗೆ ಕೂಡ ಹೇಳಿದ್ದೇನೆ ಎಂದರು.

: ಹಳೆ ಪಿಂಚಣಿ ಯೋಜನೆ ಮರು ಜಾರಿಗೆ ಒತ್ತಾಯಿಸಿ ಪ್ರತಿಭಟನೆ

ಇದನ್ನೂ ಓದಿ: ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ತನ್ನಿ: ಎನ್​​ಪಿಎಸ್​ಗೆ ಪರಿಷತ್​ನಲ್ಲಿ ಪಕ್ಷಾತೀತ ವಿರೋಧ!

ಸರ್ಕಾರಿ ನೌಕರರ ಈ ಹೋರಾಟ ನ್ಯಾಯವಾಗಿದೆ ಮತ್ತು ಪ್ರತಿಭಟನಾಕಾರರ ಬೇಡಿಕೆ ಯೋಗ್ಯವಾಗಿದೆ. ಹೀಗಾಗಿ, ಹಳೆ ಪಿಂಚಣಿ ಯೋಜನೆ ಮರು ಜಾರಿಗೆ ತರಬೇಕೆಂದು ಒತ್ತಾಯ ಮಾಡುತ್ತೇನೆ. ಯಾರಿಗಾದರೂ ಅನ್ಯಾಯ ಆದರೆ ಅವರ‌‌ ಪರ ನ್ಯಾಯಕ್ಕಾಗಿ ನಾನು ಇರುತ್ತೇನೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.