ETV Bharat / state

ರಾಯಣ್ಣನ ಪ್ರತಿಮೆ ಮರುಸ್ಥಾಪನೆಗೆ ಆಗ್ರಹಿಸಿ ಪ್ರತಿಭಟನೆ

author img

By

Published : Aug 19, 2020, 4:41 PM IST

ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಮರುಸ್ಥಾಪಿಸಬೇಕು ಎಂದು ಜಿಲ್ಲಾಧಿಕಾರಿ ಮೂಲಕ ಪ್ರತಿಭಟನಾಕಾರರು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.

ಧಾರವಾಡದಲ್ಲಿ ಪ್ರತಿಭಟನೆ
ಧಾರವಾಡದಲ್ಲಿ ಪ್ರತಿಭಟನೆ

ಧಾರವಾಡ: ಸಂಗೊಳ್ಳಿ ರಾಯಣ್ಣ ಪ್ರತಿಮೆ ಮರುಸ್ಥಾಪನೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ಪ್ರದೇಶ ಕುರುಬರ ಸಂಘದ ವತಿಯಿಂದ ಡೊಳ್ಳು ಬಾರಿಸುವ ಮೂಲಕ ವಿಭಿನ್ನವಾಗಿ ಪ್ರತಿಭಟನೆ ನಡೆಸಲಾಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು ಡೊಳ್ಳು ಬಾರಿಸುವ ಮೂಲಕ ಸಂಗೊಳ್ಳಿ ರಾಯಣ್ಣನಿಗೆ ಜಯ ಘೋಷಣೆ ಕೂಗಿ, ಪ್ರತಿಮೆ ಮರುಸ್ಥಾಪನೆಗೆ ಅನುಮತಿ ನೀಡದ ಬೆಳಗಾವಿ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ಹೊರ ಹಾಕಿದರು.

ಬೆಳಗಾವಿ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಮರುಸ್ಥಾಪಿಸಬೇಕು ಎಂದು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.

ಧಾರವಾಡ: ಸಂಗೊಳ್ಳಿ ರಾಯಣ್ಣ ಪ್ರತಿಮೆ ಮರುಸ್ಥಾಪನೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ಪ್ರದೇಶ ಕುರುಬರ ಸಂಘದ ವತಿಯಿಂದ ಡೊಳ್ಳು ಬಾರಿಸುವ ಮೂಲಕ ವಿಭಿನ್ನವಾಗಿ ಪ್ರತಿಭಟನೆ ನಡೆಸಲಾಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು ಡೊಳ್ಳು ಬಾರಿಸುವ ಮೂಲಕ ಸಂಗೊಳ್ಳಿ ರಾಯಣ್ಣನಿಗೆ ಜಯ ಘೋಷಣೆ ಕೂಗಿ, ಪ್ರತಿಮೆ ಮರುಸ್ಥಾಪನೆಗೆ ಅನುಮತಿ ನೀಡದ ಬೆಳಗಾವಿ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ಹೊರ ಹಾಕಿದರು.

ಬೆಳಗಾವಿ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಮರುಸ್ಥಾಪಿಸಬೇಕು ಎಂದು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.