ETV Bharat / state

ಹಣ ಪಡೆದ ನಂತರ ರೋಗಿ ಸಾವನ್ನಪ್ಪಿರುವ ವಿಚಾರ ಬಹಿರಂಗ ಪಡಿಸಿದ ಆಸ್ಪತ್ರೆ: ಸಂಬಂಧಿಕರ ಆಕ್ರೋಶ

author img

By

Published : Jan 30, 2021, 2:07 PM IST

Updated : Jan 30, 2021, 2:26 PM IST

30 ಸಾವಿರ ಹಣವನ್ನ ಕೊಡುವಂತೆ ಕೇಳಿದ್ದರಿಂದ ಹಣ ಪಾವತಿ ಮಾಡಿದ್ದೇವೆ. ಆದರೆ, ಮೂವತ್ತು ಸಾವಿರ ರೂಪಾಯಿ ಕೊಡುವ ಮುನ್ನವೇ ನಮ್ಮ ಅಕ್ಕ ಸಾವನ್ನಪ್ಪಿದ್ದಾಳೆ ಎಂದು ಮೃತ ಮಹಿಳೆಯ ಸಹೋದರಿ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ ಮಾಡಿದ್ದಾಳೆ.

Public outrage against private hospital in Hubli
ಖಾಸಗಿ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ

ಹುಬ್ಬಳ್ಳಿ: ಹೃದಯಾಘಾತದಿಂದ ಬಳಲುತ್ತಿದ್ದ ಮಹಿಳೆ ಸಾವನಪ್ಪಿದ್ದರು ಹಣ ಪಡೆದ ಮೇಲೆಯೇ ಖಾಸಗಿ ಆಸ್ಪತ್ರೆಯವರು, ರೋಗಿ ಸಾವನಪ್ಪಿರುವ ವಿಚಾರ ಹೇಳಿದ್ದಾರೆ ಎಂದು ರೋಗಿಯ ಸಂಬಂಧಿಕರು ಆರೋಪ ಮಾಡಿರುವ ಘಟನೆ ದೇಶಪಾಂಡೆ ನಗರದಲ್ಲಿ ತಡರಾತ್ರಿ ನಡೆದಿದೆ.

ಖಾಸಗಿ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಘಟಪ್ರಭಾ ಪಟ್ಟಣದ ಸುವರ್ಣ ಕಕ್ಕಯ್ಯಗೋಳ, ಎಂಬ ಮಹಿಳೆ ಕೆಲವು ದಿನಗಳ ಹಿಂದೆ ದೇಶಪಾಂಡೆ ನಗರದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಹೃದಯ ಸಂಬಂಧಿ ಖಾಯಿಲೆಗಾಗಿ ಸರ್ಕಾರದ ಯೋಜನೆಯಡಿ ಚಿಕಿತ್ಸೆ ನೀಡುವುದಾಗಿ ಹೇಳಿದ್ದರು. ಆದರೆ, ನಂತರ 30 ಸಾವಿರ ಹಣವನ್ನ ಕೊಡುವಂತೆ ಕೇಳಿದ್ದರಿಂದ ಹಣ ಪಾವತಿ ಮಾಡಿದ್ದೇವೆ. ಆದರೆ, ಮೂವತ್ತು ಸಾವಿರ ರೂಪಾಯಿ ಕೊಡುವ ಮುನ್ನವೇ ನಮ್ಮ ಅಕ್ಕ ಸಾವನ್ನಪ್ಪಿದ್ದಾಳೆ ಎಂದು ಮೃತ ಮಹಿಳೆಯ ಸಹೋದರಿ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ ಮಾಡಿದ್ದಾಳೆ. ಸುವರ್ಣ ಸಾವಿನಿಂದ ಮನೆಯವರು ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಉಪನಗರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ.

ಓದಿ : ಮಂಡ್ಯ: ಕೆರೆಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ನೀರುಪಾಲು

ಹುಬ್ಬಳ್ಳಿ: ಹೃದಯಾಘಾತದಿಂದ ಬಳಲುತ್ತಿದ್ದ ಮಹಿಳೆ ಸಾವನಪ್ಪಿದ್ದರು ಹಣ ಪಡೆದ ಮೇಲೆಯೇ ಖಾಸಗಿ ಆಸ್ಪತ್ರೆಯವರು, ರೋಗಿ ಸಾವನಪ್ಪಿರುವ ವಿಚಾರ ಹೇಳಿದ್ದಾರೆ ಎಂದು ರೋಗಿಯ ಸಂಬಂಧಿಕರು ಆರೋಪ ಮಾಡಿರುವ ಘಟನೆ ದೇಶಪಾಂಡೆ ನಗರದಲ್ಲಿ ತಡರಾತ್ರಿ ನಡೆದಿದೆ.

ಖಾಸಗಿ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಘಟಪ್ರಭಾ ಪಟ್ಟಣದ ಸುವರ್ಣ ಕಕ್ಕಯ್ಯಗೋಳ, ಎಂಬ ಮಹಿಳೆ ಕೆಲವು ದಿನಗಳ ಹಿಂದೆ ದೇಶಪಾಂಡೆ ನಗರದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಹೃದಯ ಸಂಬಂಧಿ ಖಾಯಿಲೆಗಾಗಿ ಸರ್ಕಾರದ ಯೋಜನೆಯಡಿ ಚಿಕಿತ್ಸೆ ನೀಡುವುದಾಗಿ ಹೇಳಿದ್ದರು. ಆದರೆ, ನಂತರ 30 ಸಾವಿರ ಹಣವನ್ನ ಕೊಡುವಂತೆ ಕೇಳಿದ್ದರಿಂದ ಹಣ ಪಾವತಿ ಮಾಡಿದ್ದೇವೆ. ಆದರೆ, ಮೂವತ್ತು ಸಾವಿರ ರೂಪಾಯಿ ಕೊಡುವ ಮುನ್ನವೇ ನಮ್ಮ ಅಕ್ಕ ಸಾವನ್ನಪ್ಪಿದ್ದಾಳೆ ಎಂದು ಮೃತ ಮಹಿಳೆಯ ಸಹೋದರಿ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ ಮಾಡಿದ್ದಾಳೆ. ಸುವರ್ಣ ಸಾವಿನಿಂದ ಮನೆಯವರು ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಉಪನಗರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ.

ಓದಿ : ಮಂಡ್ಯ: ಕೆರೆಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ನೀರುಪಾಲು

Last Updated : Jan 30, 2021, 2:26 PM IST

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.