ETV Bharat / state

ಮಳೆ ಎಫೆಕ್ಟ್​: ಜನಪ್ರತಿನಿಧಿ, ಅಧಿಕಾರಿಗಳ ವಿರುದ್ಧ ಹರಿಹಾಯ್ದ ಮಹಿಳೆಯರು

author img

By

Published : Aug 13, 2019, 1:52 PM IST

ಉತ್ತರ ಕರ್ನಾಟಕದಲ್ಲಿ ಮಳೆಯ ನಂತರ, ಆಗಿರುವ ನಷ್ಟ ಮತ್ತು ಸಂತ್ರಸ್ತರ ಕಷ್ಟಗಳನ್ನು ಕೇಳಲು ಯಾವುದೇ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಸ್ಥಳಕ್ಕೆ ಬಂದು ಸ್ಪಂದಿಸುತ್ತಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

representatives-who-are-not-responsive-for-refugees

ಹುಬ್ಬಳ್ಳಿ: ಒಂದು ವಾರ ನಿರಂತರವಾಗಿ ಸುರಿದ ಭಾರಿ ಮಳೆಗೆ ನಗರದ ಜನರು ತತ್ತರಿಸಿದ್ದಾರೆ. ಹಲವು ಮನೆಗಳು ನೆಲಕಚ್ಚಿವೆ. ಆದ್ರೆ ಇಲ್ಲಿನ ಅಧಿಕಾರಿಗಳು ಮಾತ್ರ ಯಾವುದೇ ರೀತಿಯಲ್ಲಿ ಸ್ಪಂದಿಸುತ್ತಿಲ್ಲವೆಂದು ಆರೋಪಿಸಿ ದೋಬಿಘಾಟ್​ನ ನಿವಾಸಿಗಳು ಕಿಡಕಾರಿದ್ದಾರೆ.

ದೋಬಿಘಾಟ್​ನ ನಿವಾಸಿಗಳಿಂದ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ

ಮನೆ ಮತ್ತು ಮನೆಗಳಲ್ಲಿನ ವಸ್ತುಗಳನ್ನು ಕಳೆದುಕೊಂಡು ಕಂಗಾಲಾಗಿರುವ ಜನರ ನಿತ್ಯದ ಬದುಕು ದುಸ್ತರವಾಗಿದೆ. ಇಷ್ಟೆಲ್ಲಾ ಸಮಸ್ಯೆಗಳನ್ನು ಎದುರಿಸುತ್ತಿದ್ದರೂ ಈವರೆಗೆ ಸಂಬಂಧಪಟ್ಟ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಸ್ಥಳಕ್ಕೆ ಬಂದು ಸ್ಪಂದಿಸುವ ಕೆಲಸ ಮಾಡಿಲ್ಲ ಎಂಬ ಆರೋಪ ಕೇಳಿಬಂದಿದೆ. ವೋಟು ಬೇಕಾದಾಗ ಓಡೋಡಿ ಬರುವ ಜನಪ್ರತಿನಿಧಿಗಳು ಜನರ ಸಂಕಷ್ಟಗಳನ್ನು ಕೇಳಲು ಹಿಂದೇಟು ಹಾಕುತ್ತಾರೆ ಎಂದು ಸಂತ್ರಸ್ತರು ಸಿಡಿಮಿಡಿಗೊಂಡಿದ್ದಾರೆ.

ಅಧಿಕಾರಿಗಳಿಗೆ ಸಮಸ್ಯೆ ತಿಳಿಸಿದ್ರೆ ಕೇವಲ ಭರವಸೆ ನೀಡುತ್ತಾರೆಯೇ ಹೊರತು ಕೆಲಸ ಮಾಡುತ್ತಿಲ್ಲ. ಇನ್ನಾದರೂ ಪೊಳ್ಳು ಭರವಸೆಗಳನ್ನು ನೀಡದೇ ಜನರ ಸಂಕಷ್ಟಗಳಿಗೆ ಸ್ಪಂದಿಸಿ ಸಮಸ್ಯೆ ಬಗೆಹರಿಸಬೇಕೆಂದು ಮಹಿಳೆಯರು ಆಗ್ರಹಿಸಿದ್ದಾರೆ.

ಹುಬ್ಬಳ್ಳಿ: ಒಂದು ವಾರ ನಿರಂತರವಾಗಿ ಸುರಿದ ಭಾರಿ ಮಳೆಗೆ ನಗರದ ಜನರು ತತ್ತರಿಸಿದ್ದಾರೆ. ಹಲವು ಮನೆಗಳು ನೆಲಕಚ್ಚಿವೆ. ಆದ್ರೆ ಇಲ್ಲಿನ ಅಧಿಕಾರಿಗಳು ಮಾತ್ರ ಯಾವುದೇ ರೀತಿಯಲ್ಲಿ ಸ್ಪಂದಿಸುತ್ತಿಲ್ಲವೆಂದು ಆರೋಪಿಸಿ ದೋಬಿಘಾಟ್​ನ ನಿವಾಸಿಗಳು ಕಿಡಕಾರಿದ್ದಾರೆ.

ದೋಬಿಘಾಟ್​ನ ನಿವಾಸಿಗಳಿಂದ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ

ಮನೆ ಮತ್ತು ಮನೆಗಳಲ್ಲಿನ ವಸ್ತುಗಳನ್ನು ಕಳೆದುಕೊಂಡು ಕಂಗಾಲಾಗಿರುವ ಜನರ ನಿತ್ಯದ ಬದುಕು ದುಸ್ತರವಾಗಿದೆ. ಇಷ್ಟೆಲ್ಲಾ ಸಮಸ್ಯೆಗಳನ್ನು ಎದುರಿಸುತ್ತಿದ್ದರೂ ಈವರೆಗೆ ಸಂಬಂಧಪಟ್ಟ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಸ್ಥಳಕ್ಕೆ ಬಂದು ಸ್ಪಂದಿಸುವ ಕೆಲಸ ಮಾಡಿಲ್ಲ ಎಂಬ ಆರೋಪ ಕೇಳಿಬಂದಿದೆ. ವೋಟು ಬೇಕಾದಾಗ ಓಡೋಡಿ ಬರುವ ಜನಪ್ರತಿನಿಧಿಗಳು ಜನರ ಸಂಕಷ್ಟಗಳನ್ನು ಕೇಳಲು ಹಿಂದೇಟು ಹಾಕುತ್ತಾರೆ ಎಂದು ಸಂತ್ರಸ್ತರು ಸಿಡಿಮಿಡಿಗೊಂಡಿದ್ದಾರೆ.

ಅಧಿಕಾರಿಗಳಿಗೆ ಸಮಸ್ಯೆ ತಿಳಿಸಿದ್ರೆ ಕೇವಲ ಭರವಸೆ ನೀಡುತ್ತಾರೆಯೇ ಹೊರತು ಕೆಲಸ ಮಾಡುತ್ತಿಲ್ಲ. ಇನ್ನಾದರೂ ಪೊಳ್ಳು ಭರವಸೆಗಳನ್ನು ನೀಡದೇ ಜನರ ಸಂಕಷ್ಟಗಳಿಗೆ ಸ್ಪಂದಿಸಿ ಸಮಸ್ಯೆ ಬಗೆಹರಿಸಬೇಕೆಂದು ಮಹಿಳೆಯರು ಆಗ್ರಹಿಸಿದ್ದಾರೆ.

Intro:ಹುಬ್ಬಳಿBody:ಜನಪ್ರತಿನಿಧಿ, ಅಧಿಕಾರಿಗಳ ವಿರುದ್ಧ ಹರಿಹಾಯ್ದ ನಿವಾಸಿಗಳು

ಹುಬ್ಬಳ್ಳಿ ‌:- ಕಳೆದ ವಾರದಿಂದ ಸುರಿದ ಬಾರಿ ಮಳೆಗೆ ನಗರದ ಜನರು ತತ್ತರಿಸಿ ಹೋಗಿದ್ದು, ಹಲವಾರು ಮನೆಗಳು ನೆಲಕಚ್ಚಿದೆ ಆದರೆ ಅಧಿಕಾರಿಗಳು ಮಾತ್ರ ಸ್ಪಂದಿಸಿಲ್ಲ ಎಂದು ಆರೋಪಿಸಿ ಇಲ್ಲಿನ ದೋಬಿಘಾಟ್ ನ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಟ್ಟು ಬಿಡದೇ ಸುರಿದ ಮಳೆಗೆ ಮನೆಯಲ್ಲಿದ್ದ ವಸ್ತುಗಳು ಅಷ್ಟೇ ಅಲ್ಲದೇ ಹಲವಾರು ಮನೆಗಳು ನೆಲಕ್ಕೆ ಉರುಳಿದ್ದು, ಅಲ್ಲದೇ ಜನರ ನಿತ್ಯದ ಜೀವನ ಕಷ್ಟವಾಗಿದೆ. ಇಷ್ಟೇಲ್ಲಾ ಸಮಸ್ಯೆಗಳನ್ನು ಎದುರಿಸುತ್ತಿದ್ದರೂ ಈ ವರೆಗೆ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಸ್ಥಳಕ್ಕೆ ಬಂದು ಸ್ಪಂದಿಸುವ ಕೆಲಸ ಮಾಡಿಲ್ಲ. ಓಟು ಬೇಕಾದಾಗ ಓಡೋಡಿ ಬರುವ ಜನಪ್ರತಿನಿಧಿಗಳು ಜನರ ಸಂಕಷ್ಟಗಳನ್ನು ಕೇಳಲು ಹಿಂದೆಟ್ಟು ಹಾಕುತ್ತಾರೆ. ಅಧಿಕಾರಿಗಳಿಗೆ ಸಮಸ್ಯೆ ತಿಳಿಸಿದರೆ ಕೇವಲ ಭರವಸೆ ನೀಡುತ್ತಾರೆ ಹೊರತು ಕೆಲಸ ಮಾಡುತ್ತಿಲ್ಲ. ಇನ್ನಾದರೂ ಪೋಳು ಭರವಸೆಗಳನ್ನು ನೀಡದೇ ಜನರ ಸಂಕಷ್ಟಗಳಿಗೆ ಸ್ಪಂದಿಸಿ ಸಮಸ್ಯೆ ಬಗೆಹರಿಸಬೇಕೆಂದು ಆಗ್ರಹಿಸಿದರು.

_________________________ ಹುಬ್ಬಳ್ಳಿ: ಸ್ಟ್ರಿಂಜರ್

ಯಲ್ಲಪ್ಪ‌ ಕುಂದಗೋಳConclusion:ಯಲ್ಲಪ್ಪ ಕುಂದಗೊಳ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.