ETV Bharat / state

ಪ್ರಹ್ಲಾದ ಜೋಶಿ ಮನೆಗೆ ವೃಕ್ಷ ಮಾತೆ ಭೇಟಿ: ವಿಶೇಷ ರೈಲು ಸಂಚಾರಕ್ಕೆ ಮನವಿ

ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಇಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರನ್ನು ಭೇಟಿ ಮಾಡಿ ಶಬರಿಮಲೆಗೆ ವಿಶೇಷ ರೈಲು ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿದರು.

author img

By

Published : Aug 29, 2022, 7:39 PM IST

Kn_hbl_05_saalumarad_timakka_av_7208099
ಪ್ರಹ್ಲಾದ ಜೋಶಿ ಮನೆಗೆ ತಿಮ್ಮಕ್ಕ ಭೇಟಿ

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರ ಮನೆಗೆ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರು ಭೇಟಿ ನೀಡಿ ಸಚಿವರ ಜೊತೆಗೆ ಆಪ್ತ ಸಮಾಲೋಚನೆ ನಡೆಸಿದರು.

ಇಂದು ತಮ್ಮ ಸ್ವಗೃಹಕ್ಕೆ ಆಗಮಿಸಿದ ವೃಕ್ಷಮಾತೆ ತಿಮ್ಮಕ್ಕ ಅವರಿಗೆ ಸಚಿವರು ಅದ್ದೂರಿಯಾಗಿ ಸ್ವಾಗತಿಸಿದ್ದು, ಮಾತ್ರವಲ್ಲದೆ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು. ಇದೇ ವೇಳೆ ಶಬರಿಮಲೆ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯಿಂದ ಮನವಿ ನೀಡಿದ ಸಾಲುಮರದ ತಿಮ್ಮಕ್ಕನವರು, ಪ್ರತಿನಿತ್ಯ ಅಯ್ಯಪ್ಪನ ದರ್ಶನಕ್ಕೆ ತೆರಳುವ ಭಕ್ತರಿಗಾಗಿ ವಿಶೇಷ ರೈಲು ಸೇವೆ ಕಲ್ಪಿಸುವ ಕುರಿತು ಹಾಗೂ ವಿವಿಧ ಬೇಡಿಕೆ ಈಡೇರಿಸುವಂತೆ ಮನವಿ ಮಾಡಿದರು.

ಪ್ರಹ್ಲಾದ ಜೋಶಿ ಮನೆಗೆ ತಿಮ್ಮಕ್ಕ ಭೇಟಿ

ಮನವಿ ಸ್ವೀಕರಿಸಿದ ಸಚಿವರು ಈ ಬಗ್ಗೆ ಸೂಕ್ತ ಸಮಾಲೋಚನೆ ನಡೆಸಿ ಬೇಡಿಕೆಯನ್ನು ಈಡೇರಿಸುವುದಾಗಿ ಭರವಸೆ ನೀಡಿದರು.

ಇದನ್ನೂ ಓದಿ: ಸದನ ಸಮಿತಿ ವರದಿ ಬಂದ ಬಳಿಕ ಮುಂದಿನ ನಿರ್ಧಾರ: ಸಚಿವ ಜೋಶಿ

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರ ಮನೆಗೆ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರು ಭೇಟಿ ನೀಡಿ ಸಚಿವರ ಜೊತೆಗೆ ಆಪ್ತ ಸಮಾಲೋಚನೆ ನಡೆಸಿದರು.

ಇಂದು ತಮ್ಮ ಸ್ವಗೃಹಕ್ಕೆ ಆಗಮಿಸಿದ ವೃಕ್ಷಮಾತೆ ತಿಮ್ಮಕ್ಕ ಅವರಿಗೆ ಸಚಿವರು ಅದ್ದೂರಿಯಾಗಿ ಸ್ವಾಗತಿಸಿದ್ದು, ಮಾತ್ರವಲ್ಲದೆ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು. ಇದೇ ವೇಳೆ ಶಬರಿಮಲೆ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯಿಂದ ಮನವಿ ನೀಡಿದ ಸಾಲುಮರದ ತಿಮ್ಮಕ್ಕನವರು, ಪ್ರತಿನಿತ್ಯ ಅಯ್ಯಪ್ಪನ ದರ್ಶನಕ್ಕೆ ತೆರಳುವ ಭಕ್ತರಿಗಾಗಿ ವಿಶೇಷ ರೈಲು ಸೇವೆ ಕಲ್ಪಿಸುವ ಕುರಿತು ಹಾಗೂ ವಿವಿಧ ಬೇಡಿಕೆ ಈಡೇರಿಸುವಂತೆ ಮನವಿ ಮಾಡಿದರು.

ಪ್ರಹ್ಲಾದ ಜೋಶಿ ಮನೆಗೆ ತಿಮ್ಮಕ್ಕ ಭೇಟಿ

ಮನವಿ ಸ್ವೀಕರಿಸಿದ ಸಚಿವರು ಈ ಬಗ್ಗೆ ಸೂಕ್ತ ಸಮಾಲೋಚನೆ ನಡೆಸಿ ಬೇಡಿಕೆಯನ್ನು ಈಡೇರಿಸುವುದಾಗಿ ಭರವಸೆ ನೀಡಿದರು.

ಇದನ್ನೂ ಓದಿ: ಸದನ ಸಮಿತಿ ವರದಿ ಬಂದ ಬಳಿಕ ಮುಂದಿನ ನಿರ್ಧಾರ: ಸಚಿವ ಜೋಶಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.