ಧಾರವಾಡ: ಕೊರೊನಾ ವೈರಸ್ ಸೋಂಕಿತ ವ್ಯಕ್ತಿಯ ಮನೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸ್ಯಾನಿಟೈಸರ್ ಸಿಂಪಡಣೆ ಕಾರ್ಯ ಇಂದೂ ಕೂಡಾ ಮುಂದುವರೆದಿದೆ. ಅಗ್ನಿ ಶಾಮಕ ದಳ ಸಿಬ್ಬಂದಿ ಸ್ಯಾನಿಟೈಸರ್ ಸಿಂಪಡಿಸುವ ಕಾರ್ಯ ಮಾಡುತ್ತಿದ್ದಾರೆ.
ಧಾರವಾಡದ ಹೊಸ ಯಲ್ಲಾಪೂರ ಕೋಳಿಕೇರಿ ವ್ಯಕ್ತಿಗೆ ಕೊರೊನಾ ವರದಿ ಪಾಸಿಟಿವ್ ಬಂದಿದೆ. ಈ ಹಿನ್ನಲೆ ಆ ಪ್ರದೇಶಗಳಲ್ಲಿ ಅಗ್ನಿ ಶಾಮಕ ದಳ ಸಿಬ್ಬಂದಿ ಬೆಳಗ್ಗೆಯಿಂದ ಸ್ಯಾನಿಟೈಸರ್ ಸಿಂಪಡಣೆ ಕೆಲಸ ಮಾಡುತ್ತಿದ್ದಾರೆ.
ಕೊರೊನಾ ಸೋಂಕು ದೃಢಪಟ್ಟ ದಿನದಿಂದಲೂ ಸ್ಯಾನಿಟೈಸರ್ ಸಿಂಪಡಣೆ ಕಾರ್ಯ ನಡೆಯುತ್ತಿದ್ದು, ಧಾರವಾಡದ ಪ್ರಮುಖ ರಸ್ತೆಗಳು, ಪ್ರದೇಶಗಳು, ಸರ್ಕಾರಿ ಕಚೇರಿಗಳಿಗೂ ಕೂಡಾ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಗಿದೆ.