ಧಾರವಾಡ: ಕೊರೊನಾ ಸೋಂಕು ಹರಡದಂತೆ ಮುಂಜಾಗ್ರತಾಕ್ರಮವಾಗಿ ಜಿಲ್ಲೆಯಲ್ಲಿ ಮಾ. 21ರಿಂದ 31ರವರೆಗೆ ವಿಧಿಸಿರುವ ನಿಷೇಧಾಜ್ಞೆಯನ್ನು ಇನ್ನಷ್ಟು ಬಿಗಿಗೊಳಿಸಲಾಗಿದೆ.
ಹೀಗಾಗಿ ಜಿಲ್ಲೆಯಾದ್ಯಂತ ಮೆರವಣಿಗೆ, ಸಭೆ, ಸಮಾರಂಭ, ಸಂತೆ, ಜಾತ್ರೆ, ಧಾರ್ಮಿಕ ಕಾರ್ಯಕ್ರಮ, ಕ್ರೀಡಾಕೂಟ, ಕೋಚಿಂಗ್ ಕ್ಲಾಸ್ ಹಾಗೂ ಸ್ಟಡಿ ಸೆಂಟರ್ಗಳು ಸೇರಿದಂತೆ ಎಲ್ಲವನ್ನೂ ನಿಷೇಧಿಸಲಾಗಿದೆ.
![ಧಾರವಾಡದಲ್ಲಿ ನಿಷೇಧಾಜ್ಞೆ ಮುಂದುವರಿಕೆ](https://etvbharatimages.akamaized.net/etvbharat/prod-images/6506674_thumb.jpg)
ಈ ಬಗ್ಗೆ ಪರಿಷ್ಕೃತ ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿ ದೀಪಾ ಚೋಳನ್, ದಿನ ಬಳಕೆ ವಸ್ತುಗಳು, ಪರೀಕ್ಷಾ ಕೇಂದ್ರಗಳು ಮತ್ತು ಶವ ಸಂಸ್ಕಾರಕ್ಕೆ ಈ ಆದೇಶ ಅನ್ವಯಿಸುವುದಿಲ್ಲ. ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.