ಹುಬ್ಬಳ್ಳಿ: ವೇಗವಾಗಿ ಬೆಳೆಯುತ್ತಿರುವ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ಗೆ ಡಿಸಿಪಿಗಳಿಲ್ಲದೆ ಸೊರಗಿ ಹೋಗಿತ್ತು. ಆದ್ರೆ ಇದೀಗ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ತಾತ್ಕಾಲಿಕವಾಗಿ ಕಾನೂನು ಸುವ್ಯವಸ್ಥೆ ಡಿಸಿಪಿಯಾಗಿ ಶ್ರೀನಾಥ್ ಜೋಶಿಯವರನ್ನು ನೇಮಿಸಿ ಆದೇಶ ಹೊರಡಿಸಿದೆ.
![Shrinath Joshi](https://etvbharatimages.akamaized.net/etvbharat/prod-images/kn-hbl-09-new-dcp-impact-av-7208089_13022020220708_1302f_1581611828_437.jpg)
ಕಾನೂನು ಸುವ್ಯವಸ್ಥೆ ವಿಭಾಗ ಹಾಗೂ ಅಪರಾಧ ಮತ್ತು ಸಂಚಾರ ವಿಭಾಗ ಡಿಸಿಪಿ ಹುದ್ದೆಗಳಿಗೆ ಅಧಿಕಾರಿಗಳಿಲ್ಲದೇ ಅವಳಿ ನಗರದ ಕಾನೂನು ಸುವ್ಯವಸ್ಥೆ ಹದಗೆಡುವ ಸ್ಥಿತಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಶ್ರೀನಾಥ್ ಜೋಶಿಯವರನ್ನು ಪ್ರಭಾರಿಯಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.
ಈ ಹಿಂದೆ "ಡಿಸಿಪಿಗಳಿಲ್ಲದೇ ಸೊರಗಿದ ಹು-ಧಾ ಪೊಲೀಸ್ ಕಮಿಷನರೇಟ್" ಎಂಬ ಶೀರ್ಷಿಕೆಯಲ್ಲಿ ಈಟಿವಿ ಭಾರತ ವರದಿಯೊಂದನ್ನು ಪ್ರಕಟಿಸಿತ್ತು. ಕೊನೆಗೂ ಎಚ್ಚೆತ್ತ ರಾಜ್ಯ ಸರ್ಕಾರ ಕಾನೂನು ಸುವ್ಯವಸ್ಥೆ ಡಿಸಿಪಿ ನೇಮಕ ಮಾಡಿದ್ದು, ಸಾರ್ವಜನಿಕರ ಸಂತಸಕ್ಕೆ ಕಾರಣವಾಗಿದೆ.