ETV Bharat / state

ಹುಬ್ಬಳ್ಳಿ-ಧಾರವಾಡದ ಮಾರುಕಟ್ಟೆ ಪ್ರದೇಶಗಳಲ್ಲಿ ಏಕಕಾಲಕ್ಕೆ ಹಠಾತ್ ದಾಳಿ: 44 ಮಕ್ಕಳ ರಕ್ಷಣೆ...

author img

By

Published : Nov 26, 2020, 8:26 PM IST

ಅವಳಿ ನಗರದಲ್ಲಿ ನಡೆದ ಹಠಾತ್ ದಾಳಿಗಳಲ್ಲಿ ಸುಮಾರು 44 ಮಕ್ಕಳನ್ನು ಕೆಲಸದಿಂದ ಮುಕ್ತಿಗೊಳಿಸಲಾಗಿದೆ. 4 ಜನ ಕಿಶೋರ ಕಾರ್ಮಿಕರನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಲಾಗಿದೆ ಎಂದು ಕಾರ್ಮಿಕ ಅಧಿಕಾರಿಗಳು ತಿಳಿಸಿದ್ದಾರೆ.

hubli
44 ಮಕ್ಕಳ ರಕ್ಷಣೆ

ಹುಬ್ಬಳ್ಳಿ: ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆಗೊಳಿಸುವ ಉದ್ದೇಶದಿಂದ ಧಾರವಾಡ ಜಿಲ್ಲಾಡಳಿತ ದಿಟ್ಟ ಹೆಜ್ಜೆ ಇಟ್ಟಿದೆ. ಹುಬ್ಬಳ್ಳಿ ಮತ್ತು ಧಾರವಾಡ ನಗರದ ಮಾರುಕಟ್ಟೆ ಪ್ರದೇಶಗಳಲ್ಲಿ ಏಕಕಾಲದಲ್ಲಿ ಹಠಾತ್ ದಾಳಿ ನಡೆಸಿ 44 ಅಪ್ರಾಪ್ತ ಮಕ್ಕಳನ್ನು ರಕ್ಷಣೆ ಮಾಡಿದೆ.

ದುರ್ಗದ ಬೈಲ್, ಶಾ ಬಜಾರ್, ಮೂರು ಸಾವಿರ ಮಠದ ಪ್ರದೇಶ ಹಾಗೂ ಧಾರವಾಡದ ನೆಹರೂ ಮಾರ್ಕೇಟ್, ಸಿಬಿಟಿ, ಸೂಪರ್​ ಮಾರ್ಕೇಟ್ ಸೇರಿದಂತೆ ವಿವಿಧ ಕಡೆ ನಡೆದ ದಾಳಿಯಲ್ಲಿ ಹೂವು, ಹಣ್ಣು, ತರಕಾರಿ ಮಾರಾಟ ಸೇರಿದಂತೆ ಸ್ವಂತ ಉದ್ಯೋಗ ಹಾಗೂ ಪಾಲಕರಿಗೆ ಸಹಾಯ ಮಾಡುತ್ತಿದ್ದ ಮಕ್ಕಳನ್ನು ರಕ್ಷಿಸಿ ಪಾಲಕರಿಗೆ ಕಾನೂನಾತ್ಮಕ ತಿಳುವಳಿಕೆ ಮೂಡಿಸಿ ಮಕ್ಕಳನ್ನು ಕೆಲಸದಿಂದ ಬಿಡುಗಡೆಗೊಳಿಸಲಾಯಿತು.

ಅವಳಿ ನಗರದಲ್ಲಿ ನಡೆದ ಹಠಾತ್ ದಾಳಿಗಳಲ್ಲಿ ಸುಮಾರು 44 ಮಕ್ಕಳನ್ನು ಕೆಲಸದಿಂದ ಮುಕ್ತಿಗೊಳಿಸಲಾಗಿದೆ. 4 ಜನ ಕಿಶೋರ ಕಾರ್ಮಿಕರನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಲಾಗಿದೆ ಎಂದು ಕಾರ್ಮಿಕ ಅಧಿಕಾರಿಗಳು ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ 20 ಹಾಗೂ ಧಾರವಾಡದಲ್ಲಿ 24 ಮಕ್ಕಳನ್ನು ಕೆಲಸದಿಂದ‌ ಮುಕ್ತಿಗೊಳಿಸಲಾಯಿತು. ಧಾರವಾಡ ರಾಷ್ಟ್ರೀಯ ಬಾಲ ಯೋಜನಾ ಸಂಘ, ಕಾರ್ಮಿಕ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಮತ್ತು ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು.

ಹುಬ್ಬಳ್ಳಿ: ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆಗೊಳಿಸುವ ಉದ್ದೇಶದಿಂದ ಧಾರವಾಡ ಜಿಲ್ಲಾಡಳಿತ ದಿಟ್ಟ ಹೆಜ್ಜೆ ಇಟ್ಟಿದೆ. ಹುಬ್ಬಳ್ಳಿ ಮತ್ತು ಧಾರವಾಡ ನಗರದ ಮಾರುಕಟ್ಟೆ ಪ್ರದೇಶಗಳಲ್ಲಿ ಏಕಕಾಲದಲ್ಲಿ ಹಠಾತ್ ದಾಳಿ ನಡೆಸಿ 44 ಅಪ್ರಾಪ್ತ ಮಕ್ಕಳನ್ನು ರಕ್ಷಣೆ ಮಾಡಿದೆ.

ದುರ್ಗದ ಬೈಲ್, ಶಾ ಬಜಾರ್, ಮೂರು ಸಾವಿರ ಮಠದ ಪ್ರದೇಶ ಹಾಗೂ ಧಾರವಾಡದ ನೆಹರೂ ಮಾರ್ಕೇಟ್, ಸಿಬಿಟಿ, ಸೂಪರ್​ ಮಾರ್ಕೇಟ್ ಸೇರಿದಂತೆ ವಿವಿಧ ಕಡೆ ನಡೆದ ದಾಳಿಯಲ್ಲಿ ಹೂವು, ಹಣ್ಣು, ತರಕಾರಿ ಮಾರಾಟ ಸೇರಿದಂತೆ ಸ್ವಂತ ಉದ್ಯೋಗ ಹಾಗೂ ಪಾಲಕರಿಗೆ ಸಹಾಯ ಮಾಡುತ್ತಿದ್ದ ಮಕ್ಕಳನ್ನು ರಕ್ಷಿಸಿ ಪಾಲಕರಿಗೆ ಕಾನೂನಾತ್ಮಕ ತಿಳುವಳಿಕೆ ಮೂಡಿಸಿ ಮಕ್ಕಳನ್ನು ಕೆಲಸದಿಂದ ಬಿಡುಗಡೆಗೊಳಿಸಲಾಯಿತು.

ಅವಳಿ ನಗರದಲ್ಲಿ ನಡೆದ ಹಠಾತ್ ದಾಳಿಗಳಲ್ಲಿ ಸುಮಾರು 44 ಮಕ್ಕಳನ್ನು ಕೆಲಸದಿಂದ ಮುಕ್ತಿಗೊಳಿಸಲಾಗಿದೆ. 4 ಜನ ಕಿಶೋರ ಕಾರ್ಮಿಕರನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಲಾಗಿದೆ ಎಂದು ಕಾರ್ಮಿಕ ಅಧಿಕಾರಿಗಳು ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ 20 ಹಾಗೂ ಧಾರವಾಡದಲ್ಲಿ 24 ಮಕ್ಕಳನ್ನು ಕೆಲಸದಿಂದ‌ ಮುಕ್ತಿಗೊಳಿಸಲಾಯಿತು. ಧಾರವಾಡ ರಾಷ್ಟ್ರೀಯ ಬಾಲ ಯೋಜನಾ ಸಂಘ, ಕಾರ್ಮಿಕ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಮತ್ತು ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.