ETV Bharat / state

ಹುಬ್ಬಳ್ಳಿ: ಸ್ಮಾರ್ಟ್ ಸಿಟಿ ಕಾಮಗಾರಿಯ ಹೊಂಡಕ್ಕೆ ಬಿದ್ದು ಬಾಲಕಿ ಸಾವು!

author img

By

Published : Sep 29, 2020, 1:27 PM IST

ಸ್ಮಾರ್ಟ್ ಸಿಟಿ ಯೋಜನೆಯಡಿಯ ಕಾಮಗಾರಿಯ ಹೊಂಡದ ಪಕ್ಕದಲ್ಲೇ ಮೂವರು ಬಾಲಕರು ಹಾಗೂ ಓರ್ವ ಬಾಲಕಿ ಆಟವಾಡುತ್ತಿದ್ದರು. ಈ ವೇಳೆ ಹೊಂಡಕ್ಕೆ ಬಿದ್ದ ಪರಿಣಾಮ ಬಾಲಕಿ ಅದರಲ್ಲೇ ಮುಳುಗಿ ಸಾವನ್ನಪ್ಪಿದ್ದಾಳೆ. ಉಳಿದ ಬಾಲಕರನ್ನು ಯುವಕ ಸುರೇಶ ಹೊರಕೇರಿ ರಕ್ಷಿಸಿದ್ದಾರೆ.

small girl died in hubli
ಹುಬ್ಬಳ್ಳಿ: ಸ್ಮಾರ್ಟ್ ಸಿಟಿ ಕಾಮಗಾರಿಯ ಹೊಂಡಕ್ಕೆ ಬಿದ್ದು ಬಾಲಕಿ ಸಾವು!

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ವಾಣಿಜ್ಯ ನಗರಿಯಲ್ಲೀಗ ಸ್ಮಾರ್ಟ್ ಸಿಟಿ ಯೋಜನೆಯಡಿ ಕಾಮಗಾರಿಗಳು ನಡೆಯುತ್ತಿವೆ. ಆದ್ರೆ ಈ ಕಾಮಗಾರಿಗಳು ಸಾರ್ವಜನಿಕರ ಪ್ರಾಣಕ್ಕೆ ಕಂಟಕವಾಗಿ ಪರಿಣಮಿಸುತ್ತಿದ್ದು, ಇಂದು ಬಾಲಕಿವೋರ್ವಳು ಸಾವನ್ನಪ್ಪಿದ್ದಾಳೆ.

ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ನಡೆಯುತ್ತಿದ್ದ ಕಾಮಗಾರಿಯ ಹೊಂಡದಲ್ಲಿ ಬಿದ್ದು ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ. ನಗರದ ಇಂದಿರಾ ಗಾಜಿನ ಮನೆಯ ಆವರಣದ ಬಳಿ ನಡೆಯುತ್ತಿದ್ದ ಸ್ಮಾರ್ಟ್ ಸಿಟಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಯ ಹೊಂಡದ ಪಕ್ಕದಲ್ಲೇ ಮೂವರು ಬಾಲಕರು ಹಾಗೂ ಓರ್ವ ಬಾಲಕಿ ಆಟವಾಡುತ್ತಿದ್ದರು. ಈ ವೇಳೆ ಹೊಂಡಕ್ಕೆ ಬಿದ್ದ ಪರಿಣಾಮ ಬಾಲಕಿ ಮುಳುಗಿ ಸಾವನ್ನಪ್ಪಿದ್ದಾಳೆ.

trisha
ಮೃತ ಬಾಲಕಿ ತ್ರಿಶಾ

ಗಿರಣಿಚಾಳದ ತ್ರಿಶಾ ಎಂಬ ಬಾಲಕಿ ಮೃತಪಟ್ಟವಳು. ಈಕೆ ಜೊತೆಗೆ ಹೊಂಡಕ್ಕೆ ಬಿದ್ದಿದ್ದ ಮೂವರು ಬಾಲಕರನ್ನು ಸ್ಥಳೀಯ ವಿಕಲಚೇತನ ಯುವಕ ಸುರೇಶ ಹೊರಕೇರಿ ರಕ್ಷಿಸಿದ್ದಾರೆ. ಈ ಮೂವರು ಬಾಲಕರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಮಾರ್ಟ್ ಸಿಟಿ ಯೋಜನೆಯಡಿ ಕಾಮಗಾರಿಗಾಗಿ 15 ಅಡಿ ಹೊಂಡ ತೆಗೆದು ಹಾಗೆಯೇ ಬಿಟ್ಟ ಪರಿಣಾಮ ಹೊಂಡದಲ್ಲಿ ಸಂಪೂರ್ಣವಾಗಿ ನೀರು ತುಂಬಿದೆ. ಆಟವಾಡುವ ವೇಳೆ ಮಕ್ಕಳು ಹೊಂಡದಲ್ಲಿ ಬಿದ್ದಿದ್ದಾರೆ. ಅದೃಷ್ಟವಶಾತ್, ಸುರೇಶ ಹೊರಕೇರಿ ಗಮನಿಸಿದ್ದರಿಂದ ಮೂವರು ಬಾಲಕರು ಬದುಕುಳಿದಿದ್ದಾರೆ. ಬಾಲಕಿಯನ್ನು ಬಚಾವ್ ಮಾಡವಷ್ಟರೊಳಗಾಗಿ ಆಕೆ ಮೃತಪಟ್ಟಿದ್ದಾಳೆ. ಸದ್ಯ ಈ ಸಂಬಂಧ ಉಪನಗರ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ವಾಣಿಜ್ಯ ನಗರಿಯಲ್ಲೀಗ ಸ್ಮಾರ್ಟ್ ಸಿಟಿ ಯೋಜನೆಯಡಿ ಕಾಮಗಾರಿಗಳು ನಡೆಯುತ್ತಿವೆ. ಆದ್ರೆ ಈ ಕಾಮಗಾರಿಗಳು ಸಾರ್ವಜನಿಕರ ಪ್ರಾಣಕ್ಕೆ ಕಂಟಕವಾಗಿ ಪರಿಣಮಿಸುತ್ತಿದ್ದು, ಇಂದು ಬಾಲಕಿವೋರ್ವಳು ಸಾವನ್ನಪ್ಪಿದ್ದಾಳೆ.

ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ನಡೆಯುತ್ತಿದ್ದ ಕಾಮಗಾರಿಯ ಹೊಂಡದಲ್ಲಿ ಬಿದ್ದು ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ. ನಗರದ ಇಂದಿರಾ ಗಾಜಿನ ಮನೆಯ ಆವರಣದ ಬಳಿ ನಡೆಯುತ್ತಿದ್ದ ಸ್ಮಾರ್ಟ್ ಸಿಟಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಯ ಹೊಂಡದ ಪಕ್ಕದಲ್ಲೇ ಮೂವರು ಬಾಲಕರು ಹಾಗೂ ಓರ್ವ ಬಾಲಕಿ ಆಟವಾಡುತ್ತಿದ್ದರು. ಈ ವೇಳೆ ಹೊಂಡಕ್ಕೆ ಬಿದ್ದ ಪರಿಣಾಮ ಬಾಲಕಿ ಮುಳುಗಿ ಸಾವನ್ನಪ್ಪಿದ್ದಾಳೆ.

trisha
ಮೃತ ಬಾಲಕಿ ತ್ರಿಶಾ

ಗಿರಣಿಚಾಳದ ತ್ರಿಶಾ ಎಂಬ ಬಾಲಕಿ ಮೃತಪಟ್ಟವಳು. ಈಕೆ ಜೊತೆಗೆ ಹೊಂಡಕ್ಕೆ ಬಿದ್ದಿದ್ದ ಮೂವರು ಬಾಲಕರನ್ನು ಸ್ಥಳೀಯ ವಿಕಲಚೇತನ ಯುವಕ ಸುರೇಶ ಹೊರಕೇರಿ ರಕ್ಷಿಸಿದ್ದಾರೆ. ಈ ಮೂವರು ಬಾಲಕರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಮಾರ್ಟ್ ಸಿಟಿ ಯೋಜನೆಯಡಿ ಕಾಮಗಾರಿಗಾಗಿ 15 ಅಡಿ ಹೊಂಡ ತೆಗೆದು ಹಾಗೆಯೇ ಬಿಟ್ಟ ಪರಿಣಾಮ ಹೊಂಡದಲ್ಲಿ ಸಂಪೂರ್ಣವಾಗಿ ನೀರು ತುಂಬಿದೆ. ಆಟವಾಡುವ ವೇಳೆ ಮಕ್ಕಳು ಹೊಂಡದಲ್ಲಿ ಬಿದ್ದಿದ್ದಾರೆ. ಅದೃಷ್ಟವಶಾತ್, ಸುರೇಶ ಹೊರಕೇರಿ ಗಮನಿಸಿದ್ದರಿಂದ ಮೂವರು ಬಾಲಕರು ಬದುಕುಳಿದಿದ್ದಾರೆ. ಬಾಲಕಿಯನ್ನು ಬಚಾವ್ ಮಾಡವಷ್ಟರೊಳಗಾಗಿ ಆಕೆ ಮೃತಪಟ್ಟಿದ್ದಾಳೆ. ಸದ್ಯ ಈ ಸಂಬಂಧ ಉಪನಗರ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.