ETV Bharat / state

ಸನಾತನ ಧರ್ಮದ ಬಗ್ಗೆ ಉದಯನಿಧಿ ಸ್ಟಾಲಿನ್​ ಹೇಳಿಕೆ: ಹೈಕೋರ್ಟ್‌ನಲ್ಲಿ ದಾವೆ ಹೂಡುತ್ತೇವೆ ಎಂದ ಮುತಾಲಿಕ್

author img

By ETV Bharat Karnataka Team

Published : Sep 4, 2023, 1:09 PM IST

Updated : Sep 4, 2023, 2:48 PM IST

Sanatana Dharma statement: ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್​ ಸನಾತನ ಧರ್ಮದ ಹೇಳಿಕೆಯನ್ನು ಖಂಡಿಸಿ ಹೈಕೋರ್ಟ್‌ನಲ್ಲಿ ದಾವೆ ಹೂಡುತ್ತೇವೆ ಎಂದ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್​ ಮುತಾಲಿಕ್ ತಿಳಿಸಿದ್ದಾರೆ.

Sri Ram Sena chief Pramod Muthalik
ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್​ ಮುತಾಲಿಕ್

ಮಾಧ್ಯಮದವರೊಂದಿಗೆ ಮಾತನಾಡಿದ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್​ ಮುತಾಲಿಕ್

ಧಾರವಾಡ : ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್​ ಅವರ ಪುತ್ರ ಹಾಗೂ ಸಚಿವ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ಬಗ್ಗೆ ನೀಡಿದ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನಲ್ಲಿ ದಾವೆ ಹೂಡುತ್ತೇವೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್​ ಮುತಾಲಿಕ್​ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಬೆಂಗಳೂರು, ಧಾರವಾಡ, ಕಲಬುರಗಿ ಹೈಕೋರ್ಟ್‌ನಲ್ಲಿ ಕೇಸ್ ದಾಖಲು ಮಾಡುತ್ತೇವೆ. ಉದಯನಿಧಿ ಸಂವಿಧಾನಿಕ ಜವಾಬ್ದಾರಿಯ ಸ್ಥಾನದಲ್ಲಿದ್ದಾರೆ. ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ. ಈ ರೋಗಗಳಂತೆ ಸನಾತನ ಧರ್ಮಗಳನ್ನು ನಾಶ ಮಾಡಬೇಕು ಎಂದಿದ್ದಾರೆ. ಇವರ ಹೇಳಿಕೆಯನ್ನು ಶ್ರೀರಾಮ ಸೇನೆ ಖಂಡಿಸುತ್ತದೆ" ಎಂದು ವಾಗ್ದಾಳಿ ನಡೆಸಿದರು.

ಉದಯನಿಧಿ ಎನ್ನುವ ಒಬ್ಬ ಸಣ್ಣ ವ್ಯಕ್ತಿ ಇನ್ನೂ ಸರಿಯಾಗಿ ಕಣ್ಣು ತೆರೆದಿರಲಿಲ್ಲ. ಆದರೆ, ನಮ್ಮ ಸನಾತನ ಧರ್ಮ ಸಾವಿರಾರು ವರ್ಷದಿಂದ ಇದೆ.‌ ದೇಶಕ್ಕೆ ಶಾಂತಿಯ ಸಂದೇಶ ಕೊಡುತ್ತಾ ಬಂದಿದೆ. ಇದು ಡೆಂಗ್ಯೂ, ಮಲೇರಿಯಾ ತರ ಹರಡುವ ಸೊಳ್ಳೆ‌ಯಲ್ಲ, ಗಂಧದ ಮರ ಇದ್ದಂತೆ. ಶ್ರೇಷ್ಠವಾದ ಸುಗಂಧ ಹರಡುವ ಮರವನ್ನು ನೀವು ನಾಶ ಮಾಡಲು ಪ್ರಯತ್ನಿಸಿದಷ್ಟು ಹೆಚ್ಚು ಸುಗಂಧ ಬೀರುತ್ತದೆ ಎಂದರು.

ಸಚಿವ ಉದಯನಿಧಿ ಸ್ಟಾಲಿನ್ ಕೀಳುಮಟ್ಟದ ರಾಜಕಾರಣ ಮಾಡುತ್ತಿದ್ದಾರೆ. ಉದಯನಿಧಿಯದ್ದು ರಾಜಕೀಯ ಪ್ರೇರಿತ ಹೇಳಿಕೆ, ಇದರಿಂದ ನಿಮ್ಮ ರಾಜಕೀಯ ವ್ಯವಸ್ಥೆ ನಾಶ ಆಗುತ್ತದೆ. ಕೂಡಲೇ ಕ್ಷಮೆ ಕೇಳಿ ಹೇಳಿಕೆ ವಾಪಸ್ ಪಡೆಯಬೇಕು. ಇಲ್ಲದೇ ಹೋದಲ್ಲಿ ಉದಯನಿಧಿ ವಿರುದ್ಧ ಕೇಸ್ ದಾಖಲು ಮಾಡುತ್ತೇವೆ ಎಂದು ಮುತಾಲಿಕ್​ ಎಚ್ಚರಿಕೆ ರವಾನಿಸಿದರು.

ಇನ್ನು ಉದಯನಿಧಿ ಸ್ಟಾಲಿನ್ ಹೇಳಿಕೆಯನ್ನು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಕೂಡ ತೀವ್ರವಾಗಿ ಖಂಡಿಸಿದ್ದಾರೆ. "ಒಂದು ರಾಜ್ಯದ ಮಂತ್ರಿಯಾಗಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಉದಯನಿಧಿ ಸ್ಟಾಲಿನ್ ಅವರು ಸಮಾಜದಲ್ಲಿ ಇಂತಹ ವಿಷ ಬೀಜ ಬಿತ್ತುವುದು ಸರಿಯಲ್ಲ. ಸನಾತನ ಅಂದರೆ ಸದಾಕಾಲವೂ ಇರುವಂತಹದ್ದು ಎಂದರ್ಥ. ಎಲ್ಲರೂ ಸುಖವಾಗಿ ಬದುಕಲು ಅಳವಡಿಸಿಕೊಳ್ಳುವ ಸೂತ್ರವೇ ಧರ್ಮ. ಅಂತಹ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎನ್ನುವ ಮನೋಪ್ರವೃತ್ತಿ ಸರಿಯಲ್ಲ, ಅದನ್ನು ಖಂಡಿಸುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಸನಾತನ ಧರ್ಮ ಕುರಿತು ಉದಯನಿಧಿ ಸ್ಟಾಲಿನ್ ವಿವಾದಾತ್ಮಕ ಹೇಳಿಕೆ.. ದೇಶದ ಜನತೆಯ ಕ್ಷಮೆಯಾಚಿಸುವಂತೆ ಅಶ್ವತ್ಥ್​ ನಾರಾಯಣ್ ಆಗ್ರಹ

ಉದಯನಿಧಿ ಸ್ಟಾಲಿನ್ ಹೇಳಿಕೆ : ತಮಿಳುನಾಡು ಪ್ರಗತಿಪರ ಲೇಖಕರು ಮತ್ತು ಕಲಾವಿದರ ಸಂಘದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ್ದ ಸಚಿವ ಉದಯನಿಧಿ ಸ್ಟಾಲಿನ್‌ ಅವರು, "ಸನಾತನಂ ಎಂದರೇನು?, ಈ ಪದ ಸಂಸ್ಕೃತದ್ದು. ಸಮಾನತೆ, ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾದದ್ದು. ಇದು ಕೊರೊನಾ, ಡೆಂಗ್ಯೂ, ಮಲೇರಿಯಾಕ್ಕೆ ಸಮಾನವಾದದ್ದು. ಆದ್ದರಿಂದ ಇಂಥದ್ದನ್ನು ಬೇರು ಸಮೇತ ಕಿತ್ತು ಹಾಕಬೇಕು ಎಂದು ಹೇಳಿಕೆ" ನೀಡಿದ್ದರು.

ಇದನ್ನೂ ಓದಿ : Sanatana Dharma: ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಧರ್ಮ ಹೇಳಿಕೆಗೆ ಪೇಜಾವರ ಶ್ರೀ ಖಂಡನೆ

ಮಾಧ್ಯಮದವರೊಂದಿಗೆ ಮಾತನಾಡಿದ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್​ ಮುತಾಲಿಕ್

ಧಾರವಾಡ : ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್​ ಅವರ ಪುತ್ರ ಹಾಗೂ ಸಚಿವ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ಬಗ್ಗೆ ನೀಡಿದ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನಲ್ಲಿ ದಾವೆ ಹೂಡುತ್ತೇವೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್​ ಮುತಾಲಿಕ್​ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಬೆಂಗಳೂರು, ಧಾರವಾಡ, ಕಲಬುರಗಿ ಹೈಕೋರ್ಟ್‌ನಲ್ಲಿ ಕೇಸ್ ದಾಖಲು ಮಾಡುತ್ತೇವೆ. ಉದಯನಿಧಿ ಸಂವಿಧಾನಿಕ ಜವಾಬ್ದಾರಿಯ ಸ್ಥಾನದಲ್ಲಿದ್ದಾರೆ. ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ. ಈ ರೋಗಗಳಂತೆ ಸನಾತನ ಧರ್ಮಗಳನ್ನು ನಾಶ ಮಾಡಬೇಕು ಎಂದಿದ್ದಾರೆ. ಇವರ ಹೇಳಿಕೆಯನ್ನು ಶ್ರೀರಾಮ ಸೇನೆ ಖಂಡಿಸುತ್ತದೆ" ಎಂದು ವಾಗ್ದಾಳಿ ನಡೆಸಿದರು.

ಉದಯನಿಧಿ ಎನ್ನುವ ಒಬ್ಬ ಸಣ್ಣ ವ್ಯಕ್ತಿ ಇನ್ನೂ ಸರಿಯಾಗಿ ಕಣ್ಣು ತೆರೆದಿರಲಿಲ್ಲ. ಆದರೆ, ನಮ್ಮ ಸನಾತನ ಧರ್ಮ ಸಾವಿರಾರು ವರ್ಷದಿಂದ ಇದೆ.‌ ದೇಶಕ್ಕೆ ಶಾಂತಿಯ ಸಂದೇಶ ಕೊಡುತ್ತಾ ಬಂದಿದೆ. ಇದು ಡೆಂಗ್ಯೂ, ಮಲೇರಿಯಾ ತರ ಹರಡುವ ಸೊಳ್ಳೆ‌ಯಲ್ಲ, ಗಂಧದ ಮರ ಇದ್ದಂತೆ. ಶ್ರೇಷ್ಠವಾದ ಸುಗಂಧ ಹರಡುವ ಮರವನ್ನು ನೀವು ನಾಶ ಮಾಡಲು ಪ್ರಯತ್ನಿಸಿದಷ್ಟು ಹೆಚ್ಚು ಸುಗಂಧ ಬೀರುತ್ತದೆ ಎಂದರು.

ಸಚಿವ ಉದಯನಿಧಿ ಸ್ಟಾಲಿನ್ ಕೀಳುಮಟ್ಟದ ರಾಜಕಾರಣ ಮಾಡುತ್ತಿದ್ದಾರೆ. ಉದಯನಿಧಿಯದ್ದು ರಾಜಕೀಯ ಪ್ರೇರಿತ ಹೇಳಿಕೆ, ಇದರಿಂದ ನಿಮ್ಮ ರಾಜಕೀಯ ವ್ಯವಸ್ಥೆ ನಾಶ ಆಗುತ್ತದೆ. ಕೂಡಲೇ ಕ್ಷಮೆ ಕೇಳಿ ಹೇಳಿಕೆ ವಾಪಸ್ ಪಡೆಯಬೇಕು. ಇಲ್ಲದೇ ಹೋದಲ್ಲಿ ಉದಯನಿಧಿ ವಿರುದ್ಧ ಕೇಸ್ ದಾಖಲು ಮಾಡುತ್ತೇವೆ ಎಂದು ಮುತಾಲಿಕ್​ ಎಚ್ಚರಿಕೆ ರವಾನಿಸಿದರು.

ಇನ್ನು ಉದಯನಿಧಿ ಸ್ಟಾಲಿನ್ ಹೇಳಿಕೆಯನ್ನು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಕೂಡ ತೀವ್ರವಾಗಿ ಖಂಡಿಸಿದ್ದಾರೆ. "ಒಂದು ರಾಜ್ಯದ ಮಂತ್ರಿಯಾಗಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಉದಯನಿಧಿ ಸ್ಟಾಲಿನ್ ಅವರು ಸಮಾಜದಲ್ಲಿ ಇಂತಹ ವಿಷ ಬೀಜ ಬಿತ್ತುವುದು ಸರಿಯಲ್ಲ. ಸನಾತನ ಅಂದರೆ ಸದಾಕಾಲವೂ ಇರುವಂತಹದ್ದು ಎಂದರ್ಥ. ಎಲ್ಲರೂ ಸುಖವಾಗಿ ಬದುಕಲು ಅಳವಡಿಸಿಕೊಳ್ಳುವ ಸೂತ್ರವೇ ಧರ್ಮ. ಅಂತಹ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎನ್ನುವ ಮನೋಪ್ರವೃತ್ತಿ ಸರಿಯಲ್ಲ, ಅದನ್ನು ಖಂಡಿಸುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಸನಾತನ ಧರ್ಮ ಕುರಿತು ಉದಯನಿಧಿ ಸ್ಟಾಲಿನ್ ವಿವಾದಾತ್ಮಕ ಹೇಳಿಕೆ.. ದೇಶದ ಜನತೆಯ ಕ್ಷಮೆಯಾಚಿಸುವಂತೆ ಅಶ್ವತ್ಥ್​ ನಾರಾಯಣ್ ಆಗ್ರಹ

ಉದಯನಿಧಿ ಸ್ಟಾಲಿನ್ ಹೇಳಿಕೆ : ತಮಿಳುನಾಡು ಪ್ರಗತಿಪರ ಲೇಖಕರು ಮತ್ತು ಕಲಾವಿದರ ಸಂಘದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ್ದ ಸಚಿವ ಉದಯನಿಧಿ ಸ್ಟಾಲಿನ್‌ ಅವರು, "ಸನಾತನಂ ಎಂದರೇನು?, ಈ ಪದ ಸಂಸ್ಕೃತದ್ದು. ಸಮಾನತೆ, ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾದದ್ದು. ಇದು ಕೊರೊನಾ, ಡೆಂಗ್ಯೂ, ಮಲೇರಿಯಾಕ್ಕೆ ಸಮಾನವಾದದ್ದು. ಆದ್ದರಿಂದ ಇಂಥದ್ದನ್ನು ಬೇರು ಸಮೇತ ಕಿತ್ತು ಹಾಕಬೇಕು ಎಂದು ಹೇಳಿಕೆ" ನೀಡಿದ್ದರು.

ಇದನ್ನೂ ಓದಿ : Sanatana Dharma: ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಧರ್ಮ ಹೇಳಿಕೆಗೆ ಪೇಜಾವರ ಶ್ರೀ ಖಂಡನೆ

Last Updated : Sep 4, 2023, 2:48 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.