ETV Bharat / state

ಕಲಘಟಗಿಯಲ್ಲಿ ವಿದ್ಯಾರ್ಥಿಗೆ ಚಾಕು ಇರಿತ: ಪೊಲೀಸರಿಂದ ತೀವ್ರ ವಿಚಾರಣೆ - ಒಂಬತ್ತೆ ತರಗತಿ ವಿದ್ಯಾರ್ಥಿಗೆ ಚಾಕುವಿನಿಂದ ಇರಿತ

ಕಲಘಟಗಿ ಪಟ್ಟಣದಲ್ಲಿ ಒಂಬತ್ತನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಗೆ ಚಾಕುವಿನಿಂದ ಇರಿದಿರುವ ಘಟನೆ ನಡೆದಿದೆ. ಈ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕಲಘಟಗಿಯಲ್ಲಿ ವಿದ್ಯಾರ್ಥಿಗೆ ಚಾಕು ಇರಿತ
Student stabbing in Kalghatgi
author img

By

Published : Feb 6, 2021, 7:30 AM IST

ಕಲಘಟಗಿ(ಧಾರವಾಡ): ಪಟ್ಟಣದಲ್ಲಿ ಒಂಬತ್ತನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಗೆ ಚಾಕುವಿನಿಂದ ಇರಿಯಲಾಗಿದ್ದು, ಆತ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಪಟ್ಟಣದ ಮಾಚಾಪುರ ತಾಂಡದ ಮಂಜುನಾಥ ವೆಂಕಪ್ಪ ಲಮಾಣಿ ಎಂಬ ಎಂಬ ವಿದ್ಯಾರ್ಥಿಗೆ ಚಾಕುವಿನಿಂದ ಹೊಟ್ಟೆಗೆ ಇರಿಯಲಾಗಿದೆ. ಗಾಯಗೊಂಡ ವಿದ್ಯಾರ್ಥಿಯನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್​ಗೆ ದಾಖಲಿಸಲಾಗಿದೆ. ಸದ್ಯ ವಿದ್ಯಾರ್ಥಿ ಪ್ರಾಣಾಪಾಯದಿಂದ ಪಾರಾಗಿದ್ದು, ಘಟನೆ ಸಂಬಂಧ ಸ್ಥಳೀಯ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.

ಓದಿ: ಪಿಎಸ್​ಐಗೇ ಮಕ್ಮಲ್​ ಟೋಪಿ ಹಾಕಿದ ಚಾಲಾಕಿ: ಲಕ್ಷಾಂತರ ರೂ. ಕಳೆದುಕೊಂಡ ಕಲಬುರಗಿಯ ಪಿಎಸ್​ಐ!

ಆಕಾಶ ಕಟ್ಟಿಮನಿ, ಯಲ್ಲಪ್ಪ ಕಟ್ಟಿಮನಿ, ಸುರೇಶ್​​ ಕಟ್ಟಿಮನಿ, ಬಸವರಾಜ ಕಟ್ಟಿಮನಿ, ಕಾರ್ತಿಕ್​​ ಕಟ್ಟಿಮನಿ, ದರ್ಶನ ಹರಿಜನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತೀವ್ರ ವಿಚಾರಣೆ ನಡೆಸಿದ್ದಾರೆ. ಪಟ್ಟಣದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಸ್ಥಳೀಯ ಪೊಲೀಸ್ ಇನ್ಸ್​ಪೆಕ್ಟರ್ ಪ್ರಭು ಸೂರಿನ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಕಲಘಟಗಿ(ಧಾರವಾಡ): ಪಟ್ಟಣದಲ್ಲಿ ಒಂಬತ್ತನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಗೆ ಚಾಕುವಿನಿಂದ ಇರಿಯಲಾಗಿದ್ದು, ಆತ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಪಟ್ಟಣದ ಮಾಚಾಪುರ ತಾಂಡದ ಮಂಜುನಾಥ ವೆಂಕಪ್ಪ ಲಮಾಣಿ ಎಂಬ ಎಂಬ ವಿದ್ಯಾರ್ಥಿಗೆ ಚಾಕುವಿನಿಂದ ಹೊಟ್ಟೆಗೆ ಇರಿಯಲಾಗಿದೆ. ಗಾಯಗೊಂಡ ವಿದ್ಯಾರ್ಥಿಯನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್​ಗೆ ದಾಖಲಿಸಲಾಗಿದೆ. ಸದ್ಯ ವಿದ್ಯಾರ್ಥಿ ಪ್ರಾಣಾಪಾಯದಿಂದ ಪಾರಾಗಿದ್ದು, ಘಟನೆ ಸಂಬಂಧ ಸ್ಥಳೀಯ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.

ಓದಿ: ಪಿಎಸ್​ಐಗೇ ಮಕ್ಮಲ್​ ಟೋಪಿ ಹಾಕಿದ ಚಾಲಾಕಿ: ಲಕ್ಷಾಂತರ ರೂ. ಕಳೆದುಕೊಂಡ ಕಲಬುರಗಿಯ ಪಿಎಸ್​ಐ!

ಆಕಾಶ ಕಟ್ಟಿಮನಿ, ಯಲ್ಲಪ್ಪ ಕಟ್ಟಿಮನಿ, ಸುರೇಶ್​​ ಕಟ್ಟಿಮನಿ, ಬಸವರಾಜ ಕಟ್ಟಿಮನಿ, ಕಾರ್ತಿಕ್​​ ಕಟ್ಟಿಮನಿ, ದರ್ಶನ ಹರಿಜನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತೀವ್ರ ವಿಚಾರಣೆ ನಡೆಸಿದ್ದಾರೆ. ಪಟ್ಟಣದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಸ್ಥಳೀಯ ಪೊಲೀಸ್ ಇನ್ಸ್​ಪೆಕ್ಟರ್ ಪ್ರಭು ಸೂರಿನ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.