ಹುಬ್ಬಳ್ಳಿ: ಲಾಕ್ ಡೌನ್ ನಿಂದ ದೇವಾಲಯಗಳ ಬಾಗಿಲು ಹಾಕಲಾಗಿತ್ತು. ಈಗ ದೇವಾಲಯ ಬಾಗಿಲು ತೆರೆಯುತ್ತಿದ್ದಂತೆ ಭಕ್ತರ ದಂಡು ದೇವಾಲಯಗಳಿಗೆ ಆಗಮಿಸುತ್ತಿದೆ.
ಉತ್ತರ ಕರ್ನಾಟಕದ ಪ್ರಸಿದ್ಧ ಮಠಗಳಲ್ಲಿ ಒಂದಾಗಿರುವ ಹುಬ್ಬಳ್ಳಿಯ ಸಿದ್ದಾರೂಢ ಮಠಕ್ಕೆ ಭಕ್ತರ ದಂಡೇ ಆಗಮಿಸುತ್ತಿದೆ. ಇಂದಿನಿಂದ ಮತ್ತೆ ದೇವಾಲಯಗಳನ್ನ ತೆರೆಯಲು ಅವಕಾಶ ನೀಡಿರುವ ಹಿನ್ನೆಲೆಯಲ್ಲಿ ಮಠಕ್ಕೆ ಆಗಮಿಸಿ ಭಕ್ತರು ಸರತಿ ಸಾಲಿನಲ್ಲಿ ನಿಂತು ಸಿದ್ದಾರೂಢರ ದರ್ಶನ ಪಡೆಯುತ್ತಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಮಠದಲ್ಲಿ ಪೊಲೀಸರನ್ನ ನಿಯೋಜನೆ ಮಾಡಲಾಗಿದೆ.