ಧಾರವಾಡ: ಕೊರೊನಾ ವೈರಾಣು ಸೋಂಕಿತರಲ್ಲದ ಸ್ವಲ್ಪಮಟ್ಟಿಗಿನ ಜ್ವರ ಹಾಗೂ ಇತರೆ ಅನಾರೋಗ್ಯ ತೊಂದರೆಗಳಿಂದ ಬಳಲುತ್ತಿರುವ ಜನರಿಗೆ ಆರೈಕೆ ನೀಡಲು ಕೋವಿಡ್ ಕೇರ್ ಸೆಂಟರ್ಗಳನ್ನು ಅವಳಿ ನಗರದಲ್ಲಿ ಆರಂಭಿಸಲಾಗುತ್ತಿದೆ.
ಜಿಲ್ಲಾಧಿಕಾರಿ ದೀಪಾ ಚೋಳನ್ ಹಿರಿಯ ಅಧಿಕಾರಿಗಳೊಂದಿಗೆ ಹುಬ್ಬಳ್ಳಿ ಮತ್ತು ಧಾರವಾಡದ ವಿವಿಧ ಆಸ್ಪತ್ರೆಗಳು ಮತ್ತು ಖಾಸಗಿ ಕಟ್ಟಡಗಳಿಗೆ ಭೇಟಿ ನೀಡಿ ಅಲ್ಲಿನ ಮೂಲಭೂತ ಸೌಲಭ್ಯಗಳನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಡಾ. ಬಿ.ಸಿ.ಸತೀಶ್, ಮಹಾನಗರ ಪಾಲಿಕೆ ಆಯುಕ್ತ ಡಾ. ಸುರೇಶ್ ಇಟ್ನಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಯಶವಂತ ಮದೀನಕರ ಸೇರಿದಂತೆ ಇತರ ಅಧಿಕಾರಿಗಳು ಇದ್ದರು.