ಧಾರವಾಡ: ಉಸಿರಾಟದ ತೊಂದರೆಯಿಂದ ಮೃತಪಟ್ಟ ಕೋತಿಯೊಂದನ್ನು ಗ್ರಾಮಸ್ಥರು ವಿಧಿ ವಿಧಾನದೊಂದಿಗೆ ಅಂತ್ಯಕ್ರಿಯೆ ಮಾಡಿ ಮಾನವೀಯತೆ ಮೆರೆದಿದ್ದಾರೆ.
ತಾಲೂಕಿನ ಹಾರೋಬೆಳವಡಿ ಗ್ರಾಮದಲ್ಲಿ ಶನಿವಾರ ಮಧ್ಯರಾತ್ರಿಯಿಂದ ಕೋತಿಯೊಂದು ಉಸಿರಾಟದ ತೊಂದರೆಯಿಂದಾಗಿ ಬಳಲಿ ಮೃತಪಟ್ಟಿದ್ದರ ಹಿನ್ನೆಲೆ ಇಲ್ಲಿನ ಗ್ರಾಮಸ್ಥರು ಮನುಷ್ಯರನ್ನು ಅಂತಿಮ ಸಂಸ್ಕಾರ ಮಾಡುವ ರೀತಿಯಲ್ಲಿಯೇ ಕೋತಿಗೂ ವಿಧಿ-ವಿಧಾನಗಳನ್ನು ನೆರವೇರಿಸಿದ್ದಾರೆ.
ಗ್ರಾಮದ ರೈತರೊಬ್ಬರ ಜಮೀನಿನಲ್ಲಿ ಜೈ ಶ್ರೀರಾಮ ಎಂದು ಘೋಷಣೆ ಕೂಗಿದ ಗ್ರಾಮಸ್ಥರು ನಂತರ ಕೋತಿಗೆ ಅಂತ್ಯಕ್ರಿಯೆ ಮಾಡಿದ್ದಾರೆ. ಒಟ್ಟಿನಲ್ಲಿ ಗ್ರಾಮೀಣ ಭಾಗದಲ್ಲಿ ಪ್ರಾಣಿಗಳಿಗೂ ಸಹ ಮನುಷ್ಯರಂತೆಯೇ ಅಂತ್ಯಕ್ರಿಯೆ ಮಾಡುವುದು ಮೊದಲಿನಿಂದಲೂ ರೂಢಿಯಲ್ಲಿದೆ. ಈ ಸಮಯದಲ್ಲಿ ಗ್ರಾಮದ ಈರಪ್ಪ ಉಡಕೇರಿ, ದೇವಪ್ಪ ಪಾರ್ವತಿ, ವಾಸು, ರಾಜು ಮರೆಮ್ಮನವರ, ರುದ್ರಪ್ಪ ಬ್ಯಾಹಟ್ಟಿ ಸೇರಿದಂತೆ ಹಲವರು ಭಾಗವಹಿಸಿದ್ದರು.