ETV Bharat / state

ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಗೆ ಒಂದು ನಾಮಪತ್ರ ಸಲ್ಲಿಕೆ

author img

By

Published : Oct 5, 2020, 8:18 PM IST

ಕರ್ನಾಟಕ ವಿಧಾನಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಅಕ್ಟೋಬರ್ 28 ರಂದು ಚುನಾವಣೆ ನಡೆಯಲಿದ್ದು, ಇಂದು ಓರ್ವ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದಾರೆ..

ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಒಂದು ನಾಮಪತ್ರ ಸಲ್ಲಿಕೆ
ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಒಂದು ನಾಮಪತ್ರ ಸಲ್ಲಿಕೆ

ಧಾರವಾಡ : ಗದಗ, ಹಾವೇರಿ, ಧಾರವಾಡ, ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿಗೆ ಒಳಗೊಂಡಿರುವ ಕರ್ನಾಟಕ ವಿಧಾನಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಅಕ್ಟೋಬರ್ 28 ರಂದು ನಡೆಯಲಿರುವ ಚುನಾವಣೆಗೆ ಇಂದು ಓರ್ವ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದಾರೆ.

ಅಭ್ಯರ್ಥಿ ರವಿ ಶಿವಪ್ಪ ಪಡಸಲಗಿ
ಅಭ್ಯರ್ಥಿ ರವಿ ಶಿವಪ್ಪ ಪಡಸಲಗಿ

ಬೆಂಗಳೂರಿನ ವರದರಾಜ ನಗರದ ನಿವಾಸಿಯಾಗಿರುವ ರವಿ ಶಿವಪ್ಪ ಪಡಸಲಗಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸಹಾಯಕ ಚುನಾವಣಾಧಿಕಾರಿಗಳಾಗಿರುವ ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಕೆ. ಪಾಟೀಲ ಅವರಿಗೆ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಸಲು ಅಕ್ಟೋಬರ್ 8 ಕೊನೆಯ ದಿನವಾಗಿದೆ. ಅಕ್ಟೋಬರ್ 9ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅ.12ರವರೆಗೆ ನಾಮಪತ್ರ ಹಿಂಪಡೆಯಲು ಅವಕಾಶವಿದೆ.

ಧಾರವಾಡ : ಗದಗ, ಹಾವೇರಿ, ಧಾರವಾಡ, ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿಗೆ ಒಳಗೊಂಡಿರುವ ಕರ್ನಾಟಕ ವಿಧಾನಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಅಕ್ಟೋಬರ್ 28 ರಂದು ನಡೆಯಲಿರುವ ಚುನಾವಣೆಗೆ ಇಂದು ಓರ್ವ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದಾರೆ.

ಅಭ್ಯರ್ಥಿ ರವಿ ಶಿವಪ್ಪ ಪಡಸಲಗಿ
ಅಭ್ಯರ್ಥಿ ರವಿ ಶಿವಪ್ಪ ಪಡಸಲಗಿ

ಬೆಂಗಳೂರಿನ ವರದರಾಜ ನಗರದ ನಿವಾಸಿಯಾಗಿರುವ ರವಿ ಶಿವಪ್ಪ ಪಡಸಲಗಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸಹಾಯಕ ಚುನಾವಣಾಧಿಕಾರಿಗಳಾಗಿರುವ ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಕೆ. ಪಾಟೀಲ ಅವರಿಗೆ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಸಲು ಅಕ್ಟೋಬರ್ 8 ಕೊನೆಯ ದಿನವಾಗಿದೆ. ಅಕ್ಟೋಬರ್ 9ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅ.12ರವರೆಗೆ ನಾಮಪತ್ರ ಹಿಂಪಡೆಯಲು ಅವಕಾಶವಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.