ಹುಬ್ಬಳ್ಳಿ: ಧಾರವಾಡ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕದಲ್ಲಿರುವ ಕಾರ್ಮಿಕರನ್ನು ಅವರ ರಾಜ್ಯಕ್ಕೆ ಕಳುಹಿಸಲು ಹುಬ್ಬಳ್ಳಿಯಿಂದ ಉತ್ತರ ಪ್ರದೇಶದ ಬಸ್ತಿಗೆ ಇಂದು ವಿಶೇಷ ರೈಲು ಪ್ರಯಾಣಿಸಿತು.
ಮಧ್ಯಾಹ್ನ 12 ಗಂಟೆಗೆ ಹುಬ್ಬಳ್ಳಿ ರೈಲ್ವೆ ನಿಲ್ದಾಣದಿಂದ ಹೊರಟ ರೈಲಿನಲ್ಲಿ 1,443 ಕಾರ್ಮಿಕರಿದ್ದರು. ಬೆಳ್ಳಗ್ಗೆ 6 ಗಂಟೆಯಿಂದಲೇ 15 ವಿಶೇಷ ಕೌಂಟರ್ಗಳಲ್ಲಿ ವಲಸಿಗರ ಆರೋಗ್ಯ ತಪಾಸಣೆ ನಡೆಸಲಾಯಿತು.
ಆರೋಗ್ಯ ತಪಾಸಣೆ ನಂತರ ಆರೋಗ್ಯ ಪ್ರಮಾಣ ಪತ್ರ ಹಾಗೂ ರೈಲ್ವೆ ಪ್ರಯಾಣದ ಟಿಕೆಟ್ ನೀಡಲಾಯಿತು. ನಂತರವೇ ರೈಲಿನಲ್ಲಿ ಪ್ರಯಾಣಿಸಲು ಅನುಮತಿ ಕಲ್ಪಿಸಲಾಯಿತು. ರೈಲ್ವೆ ನಿಲ್ದಾಣಕ್ಕೆ ಪ್ರಯಾಣಿಕರ ಸಂಬಂಧಿಕರು ಹಾಗೂ ಸ್ಥಳೀಯ ಮುಖಂಡರಿಗೆ ರೈಲ್ವೆ ಇಲಾಖೆ ಅಧಿಕಾರಿಗಳು ನಿಲ್ದಾಣದೊಳಗೆ ಪ್ರವೇಶ ನೀಡಲಿಲ್ಲ.