ETV Bharat / state

ಕೆರೆ ಖಾಲಿ ಖಾಲಿ; ಬರದ ಮಧ್ಯೆ ಕುಡಿಯುವ ‌ನೀರಿಗಾಗಿ ಪರಿತಪಿಸುತ್ತಿರುವ ಉಮಚಗಿ ಗ್ರಾಮಸ್ಥರು

ಹುಬ್ಬಳ್ಳಿ ತಾಲೂಕಿನ ಉಮಚಗಿ ಗ್ರಾಮಸ್ಥರು ನೀರಿಗಾಗಿ ಪರದಾಡುತ್ತಿದ್ದಾರೆ.

author img

By ETV Bharat Karnataka Team

Published : Dec 16, 2023, 6:47 AM IST

ಹುಬ್ಬಳ್ಳಿ
ಹುಬ್ಬಳ್ಳಿ
ಕೆರೆ ಖಾಲಿ ಖಾಲಿ; ಬರದ ಮಧ್ಯೆ ಕುಡಿಯುವ ‌ನೀರಿಗಾಗಿ ಪರಿತಪಿಸುತ್ತಿರುವ ಉಮಚಗಿ ಗ್ರಾಮಸ್ಥರು

ಹುಬ್ಬಳ್ಳಿ : ಅದೊಂದು ಪುಟ್ಟ ಗ್ರಾಮ, ಇಲ್ಲಿ ಈ ಹಿಂದೆ ಯಾವತ್ತೂ ಕುಡಿಯುವ ನೀರಿಗೆ ಬರ ಬಂದಿರಲಿಲ್ಲ. ಆದರೆ ಗ್ರಾಮದಲ್ಲಿ ನಡೆದ ಒಂದು ಘಟನೆ ಮತ್ತು ಅದರ ನಂತರ ಗ್ರಾಮಸ್ಥರು ತೆಗೆದುಕೊಂಡ ನಿರ್ಧಾರದಿಂದ ಇಂದು ಇಡೀ ಊರಿನ ಜನರು ನೀರಿಗಾಗಿ ಪರದಾಡುವಂತಾಗಿದೆ.

ಹೌದು, ಹುಬ್ಬಳ್ಳಿ ತಾಲೂಕಿನ ಉಮಚಗಿ ಗ್ರಾಮಸ್ಥರ ಒಂದು ತಪ್ಪು ನಿರ್ಧಾರ ಈಗ ವರ್ಷಪೂರ್ತಿ ಕೊರಗುವಂತೆ ಮಾಡಿದೆ. ಎರಡು ತಿಂಗಳ ಹಿಂದೆ ಲಕ್ಷಾಂತರ ರೂಪಾಯಿ ವ್ಯಯಿಸಿ ಕೆರೆ ಖಾಲಿ ಮಾಡಿಸಿದ್ದ ಅಧಿಕಾರಿಗಳಿಗೆ ಈಗ ಲಕ್ಷಾಂತರ ರೂಪಾಯಿ ವ್ಯಯಿಸಿ ಟ್ಯಾಂಕರ್ ಮೂಲಕ ನೀರು ಪೂರೈಸುವ ಅನಿವಾರ್ಯತೆ ಎದುರಾಗಿದೆ.

ಗ್ರಾಮದ ಕೆಲವರು ಮಾಡಿದ ಚಿಕ್ಕ ತಪ್ಪಿನಿಂದಾಗಿ ಇಡೀ ಗ್ರಾಮವೇ ಕಂಗಾಲಾಗಿದೆ. ಕೆರೆ ನೀರು ಖಾಲಿ ಮಾಡಿಸಿ ಪಶ್ಚಾತ್ತಾಪ ಪಡುವಂತಾಗಿದೆ. ಗ್ರಾಮದ ಕೆರೆಯಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟಿದ್ದರು. ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು. ಹೀಗಾಗಿ ಕೆರೆ ನೀರು ಖಾಲಿ ಮಾಡಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದರು. ನೀರು ಕಲುಷಿತಗೊಂಡಿಲ್ಲ ಅಂತ ಲ್ಯಾಬ್ ರಿಪೋರ್ಟ್ ಬಂದ್ರೂ ಗ್ರಾಮಸ್ಥರು ಪಟ್ಟು ಬಿಟ್ಟಿರಲಿಲ್ಲ. ಕೆರೆಯನ್ನು ಖಾಲಿ ಮಾಡಿಸಲಾಗಿತ್ತು. ಇದೀಗ ಕೆರೆ ನೀರು ಖಾಲಿಯಾದ ಪರಿಣಾಮ ಸಂಪೂರ್ಣ ಬತ್ತಿ ಹೋಗಿದೆ. ಮತ್ತೊಂದು ಕೆರೆಯಲ್ಲಿದ್ದ ನೀರು ತಳ ಮುಟ್ಟಿದೆ. ಹೀಗಾಗಿ ಕುಡಿಯುವ ನೀರಿಗಾಗಿ ಗ್ರಾಮಸ್ಥರಿಗೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ನೀರು ಪೂರೈಕೆ ಮಾಡುವಂತೆ ಜನರಿಂದ ಮನವಿ: ಈಗ ಯಾಕಾದ್ರೂ ಕೆರೆ ಖಾಲಿ ಮಾಡಿಸಿದೆವೋ ಅಂತ ಇಲ್ಲಿನ ಗ್ರಾಮಸ್ಥರು ಪರಿತಪಿಸುತ್ತಿದ್ದಾರೆ. ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಗ್ರಾಮಸ್ಥರಿಂದ ಒತ್ತಡ ಹೆಚ್ಚಾಗಿದೆ. ಎರಡು ಬೋರ್​ವೆಲ್ ಕೊರೆದಿದ್ದರೂ ಪ್ರಯೋಜನವಾಗಿಲ್ಲ. ಕೊಳವೆಬಾವಿಯಲ್ಲಿ ಉಪ್ಪು ನೀರು ಬರುತ್ತಿರುವುದರಿಂದ ಬಳಸಲು ಯೋಗ್ಯವಲ್ಲ ಅಂತ ವರದಿ ಬಂದಿದೆ. ಇದರಿಂದಾಗಿ ಟ್ಯಾಂಕರ್ ಮೂಲಕ ನೀರು ಪೂರೈಸಬೇಕಾದ ಅನಿವಾರ್ಯತೆ ನಿರ್ಮಾಣವಾಗಿದೆ. ಏನಾದ್ರೂ ಮಾಡಿ ನಮಗೆ ನೀರು ಪೂರೈಸಲಿ ಎಂದು ಜನ ಮನವಿ ಮಾಡಿಕೊಂಡಿದ್ದಾರೆ.

ಒಟ್ಟಿನಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಸರ್ಕಾರ ತೀರ್ಮಾನ ಮಾಡಿದೆ. ನಿತ್ಯ ಮೂರು ಟ್ಯಾಂಕರ್ ಮೂಲಕ ನೀರು ಪೂರೈಕೆ ತೀರ್ಮಾನಕ್ಕೆ ಮುಂದಾಗಿದ್ದು, ಇಷ್ಟಾದ್ರೂ ಗ್ರಾಮದ ಜನರ ದಾಹ ತೀರೋದು ಡೌಟ್ ಎನ್ನುವಂತಾಗಿದೆ. ಈ ಬಾರಿ ಭೀಕರ ಬರಗಾಲ ಸಹ ಇರುವುದರಿಂದ ಉಮಚಗಿ ಗ್ರಾಮದ ಜನತೆಗೆ ನೀರಿನ ಸಮಸ್ಯೆ ಮತ್ತಷ್ಟು ಉಲ್ಬಣಿಸಿದೆ.

ಇದನ್ನೂ ಓದಿ: ರಾಯಚೂರು: ಮೂರು ದಿನಕ್ಕೊಮ್ಮೆ ಕುಡಿಯುವ ನೀರು ಪೂರೈಕೆಗೆ ನಗರಸಭೆ ನಿರ್ಧಾರ

ಕೆರೆ ಖಾಲಿ ಖಾಲಿ; ಬರದ ಮಧ್ಯೆ ಕುಡಿಯುವ ‌ನೀರಿಗಾಗಿ ಪರಿತಪಿಸುತ್ತಿರುವ ಉಮಚಗಿ ಗ್ರಾಮಸ್ಥರು

ಹುಬ್ಬಳ್ಳಿ : ಅದೊಂದು ಪುಟ್ಟ ಗ್ರಾಮ, ಇಲ್ಲಿ ಈ ಹಿಂದೆ ಯಾವತ್ತೂ ಕುಡಿಯುವ ನೀರಿಗೆ ಬರ ಬಂದಿರಲಿಲ್ಲ. ಆದರೆ ಗ್ರಾಮದಲ್ಲಿ ನಡೆದ ಒಂದು ಘಟನೆ ಮತ್ತು ಅದರ ನಂತರ ಗ್ರಾಮಸ್ಥರು ತೆಗೆದುಕೊಂಡ ನಿರ್ಧಾರದಿಂದ ಇಂದು ಇಡೀ ಊರಿನ ಜನರು ನೀರಿಗಾಗಿ ಪರದಾಡುವಂತಾಗಿದೆ.

ಹೌದು, ಹುಬ್ಬಳ್ಳಿ ತಾಲೂಕಿನ ಉಮಚಗಿ ಗ್ರಾಮಸ್ಥರ ಒಂದು ತಪ್ಪು ನಿರ್ಧಾರ ಈಗ ವರ್ಷಪೂರ್ತಿ ಕೊರಗುವಂತೆ ಮಾಡಿದೆ. ಎರಡು ತಿಂಗಳ ಹಿಂದೆ ಲಕ್ಷಾಂತರ ರೂಪಾಯಿ ವ್ಯಯಿಸಿ ಕೆರೆ ಖಾಲಿ ಮಾಡಿಸಿದ್ದ ಅಧಿಕಾರಿಗಳಿಗೆ ಈಗ ಲಕ್ಷಾಂತರ ರೂಪಾಯಿ ವ್ಯಯಿಸಿ ಟ್ಯಾಂಕರ್ ಮೂಲಕ ನೀರು ಪೂರೈಸುವ ಅನಿವಾರ್ಯತೆ ಎದುರಾಗಿದೆ.

ಗ್ರಾಮದ ಕೆಲವರು ಮಾಡಿದ ಚಿಕ್ಕ ತಪ್ಪಿನಿಂದಾಗಿ ಇಡೀ ಗ್ರಾಮವೇ ಕಂಗಾಲಾಗಿದೆ. ಕೆರೆ ನೀರು ಖಾಲಿ ಮಾಡಿಸಿ ಪಶ್ಚಾತ್ತಾಪ ಪಡುವಂತಾಗಿದೆ. ಗ್ರಾಮದ ಕೆರೆಯಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟಿದ್ದರು. ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು. ಹೀಗಾಗಿ ಕೆರೆ ನೀರು ಖಾಲಿ ಮಾಡಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದರು. ನೀರು ಕಲುಷಿತಗೊಂಡಿಲ್ಲ ಅಂತ ಲ್ಯಾಬ್ ರಿಪೋರ್ಟ್ ಬಂದ್ರೂ ಗ್ರಾಮಸ್ಥರು ಪಟ್ಟು ಬಿಟ್ಟಿರಲಿಲ್ಲ. ಕೆರೆಯನ್ನು ಖಾಲಿ ಮಾಡಿಸಲಾಗಿತ್ತು. ಇದೀಗ ಕೆರೆ ನೀರು ಖಾಲಿಯಾದ ಪರಿಣಾಮ ಸಂಪೂರ್ಣ ಬತ್ತಿ ಹೋಗಿದೆ. ಮತ್ತೊಂದು ಕೆರೆಯಲ್ಲಿದ್ದ ನೀರು ತಳ ಮುಟ್ಟಿದೆ. ಹೀಗಾಗಿ ಕುಡಿಯುವ ನೀರಿಗಾಗಿ ಗ್ರಾಮಸ್ಥರಿಗೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ನೀರು ಪೂರೈಕೆ ಮಾಡುವಂತೆ ಜನರಿಂದ ಮನವಿ: ಈಗ ಯಾಕಾದ್ರೂ ಕೆರೆ ಖಾಲಿ ಮಾಡಿಸಿದೆವೋ ಅಂತ ಇಲ್ಲಿನ ಗ್ರಾಮಸ್ಥರು ಪರಿತಪಿಸುತ್ತಿದ್ದಾರೆ. ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಗ್ರಾಮಸ್ಥರಿಂದ ಒತ್ತಡ ಹೆಚ್ಚಾಗಿದೆ. ಎರಡು ಬೋರ್​ವೆಲ್ ಕೊರೆದಿದ್ದರೂ ಪ್ರಯೋಜನವಾಗಿಲ್ಲ. ಕೊಳವೆಬಾವಿಯಲ್ಲಿ ಉಪ್ಪು ನೀರು ಬರುತ್ತಿರುವುದರಿಂದ ಬಳಸಲು ಯೋಗ್ಯವಲ್ಲ ಅಂತ ವರದಿ ಬಂದಿದೆ. ಇದರಿಂದಾಗಿ ಟ್ಯಾಂಕರ್ ಮೂಲಕ ನೀರು ಪೂರೈಸಬೇಕಾದ ಅನಿವಾರ್ಯತೆ ನಿರ್ಮಾಣವಾಗಿದೆ. ಏನಾದ್ರೂ ಮಾಡಿ ನಮಗೆ ನೀರು ಪೂರೈಸಲಿ ಎಂದು ಜನ ಮನವಿ ಮಾಡಿಕೊಂಡಿದ್ದಾರೆ.

ಒಟ್ಟಿನಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಸರ್ಕಾರ ತೀರ್ಮಾನ ಮಾಡಿದೆ. ನಿತ್ಯ ಮೂರು ಟ್ಯಾಂಕರ್ ಮೂಲಕ ನೀರು ಪೂರೈಕೆ ತೀರ್ಮಾನಕ್ಕೆ ಮುಂದಾಗಿದ್ದು, ಇಷ್ಟಾದ್ರೂ ಗ್ರಾಮದ ಜನರ ದಾಹ ತೀರೋದು ಡೌಟ್ ಎನ್ನುವಂತಾಗಿದೆ. ಈ ಬಾರಿ ಭೀಕರ ಬರಗಾಲ ಸಹ ಇರುವುದರಿಂದ ಉಮಚಗಿ ಗ್ರಾಮದ ಜನತೆಗೆ ನೀರಿನ ಸಮಸ್ಯೆ ಮತ್ತಷ್ಟು ಉಲ್ಬಣಿಸಿದೆ.

ಇದನ್ನೂ ಓದಿ: ರಾಯಚೂರು: ಮೂರು ದಿನಕ್ಕೊಮ್ಮೆ ಕುಡಿಯುವ ನೀರು ಪೂರೈಕೆಗೆ ನಗರಸಭೆ ನಿರ್ಧಾರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.