ETV Bharat / state

ಸಚಿವರ ಆಗಮನ ಬ್ಯಾನರ್​ನಲ್ಲಿ ಬೆಲ್ಲದ್​​​ ಫೋಟೋ‌ ಮಾಯ: ಬ್ಯಾನರ್ ಹರಿದ ಕಿಡಿಗೇಡಿಗಳು

ಸಚಿವ ಶಂಕರ್ ಪಾಟೀಲ ಮುನೇನಕೊಪ್ಪ ಅವರ ಸ್ವಾಗತಕ್ಕೆ ಧಾರವಾಡದಲ್ಲಿ ಬ್ಯಾನರ್​ ಹಾಕಲಾಗಿತ್ತು. ಇದರಲ್ಲಿ ಜಿಲ್ಲಾಧ್ಯಕ್ಷ ಬೆಲ್ಲದ್ ಅವರ ಭಾವಚಿತ್ರ ಕಾಣೆಯಾಗಿತ್ತು. ಆದರೆ, ಬೆಲ್ಲದ್​ ಅವರ ಬೆಂಬಲಿಗರು ಬ್ಯಾನರ್​​ ಹರಿದು ಹಾಕಿರುವ ಶಂಕೆ ವ್ಯಕ್ತವಾಗಿದೆ.

author img

By

Published : Aug 7, 2021, 3:47 PM IST

Unkonwn persons tearing up a banner at Dharwad
ಬ್ಯಾನರ್ ಹರಿದ ಕಿಡಿಗೇಡಿಗಳು

ಧಾರವಾಡ: ಸಚಿವರಾಗಿ ಮೊದಲ ಬಾರಿಗೆ ಧಾರವಾಡಕ್ಕೆ ಆಗಮಿಸುವ ಸಚಿವ ಶಂಕರ್ ಪಾಟೀಲ ಮುನೇನಕೊಪ್ಪ ಅವರ ಸ್ವಾಗತಕ್ಕೆ ಹಾಕಿದ ಬ್ಯಾನರ್​​​​ನಲ್ಲಿ ಜಿಲ್ಲಾಧ್ಯಕ್ಷ ಅರವಿಂದ ಬೆಲ್ಲದ ಅವರ ಭಾವಚಿತ್ರ ಕಾಣೆಯಾಗಿತ್ತು.

ಧಾರವಾಡದಲ್ಲಿ ಬ್ಯಾನರ್​ ಹರಿದು ಹಾಕಿರುವ ಕಿಡಿಗೇಡಿಗಳು

ನೂತನ‌ ಜಿಲ್ಲಾ ಉಸ್ತುವಾರಿ ಸಚಿವ ಮುನೇನಕೊಪ್ಪ ಅವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಧಾರವಾಡದಲ್ಲಿ ಅಲ್ಲಲ್ಲಿ ಬ್ಯಾನರ್ ಹಾಕಲಾಗಿತ್ತು. ಬ್ಯಾನರ್​​ನಲ್ಲಿ ಶಾಸಕ ಬೆಲ್ಲದ ಭಾವಚಿತ್ರ ಹಾಕದ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಟೋಲ್ ನಾಕಾದಲ್ಲಿ ಹಾಕಿದ್ದ ಬ್ಯಾನರ್​ ಅನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ‌.

ಓದಿ; ಅಸಮಾಧಾನಿತ ಸಚಿವರನ್ನು ಕರೆದು ಮಾತನಾಡುತ್ತೇನೆ: ಸಿಎಂ ಬೊಮ್ಮಾಯಿ

ಇನ್ನೊಂದೆಡೆ ಮುಖ್ಯಮಂತ್ರಿ ರೇಸ್​​ನಲ್ಲಿದ್ದ ಶಾಸಕ ಅರವಿಂದ ಬೆಲ್ಲದ ಅವರು ಸಚಿವ ಸ್ಥಾನ ಸಿಗದಿರುವುದಕ್ಕೆ ಬೇಸರಗೊಂಡಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಆಗಮಿಸಿದರೂ ಜಿಲ್ಲಾಧ್ಯಕ್ಷ ಬೆಲ್ಲದ ಅವರು ಆಗಮಿಸದಿರುವುದು ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.

ಧಾರವಾಡ: ಸಚಿವರಾಗಿ ಮೊದಲ ಬಾರಿಗೆ ಧಾರವಾಡಕ್ಕೆ ಆಗಮಿಸುವ ಸಚಿವ ಶಂಕರ್ ಪಾಟೀಲ ಮುನೇನಕೊಪ್ಪ ಅವರ ಸ್ವಾಗತಕ್ಕೆ ಹಾಕಿದ ಬ್ಯಾನರ್​​​​ನಲ್ಲಿ ಜಿಲ್ಲಾಧ್ಯಕ್ಷ ಅರವಿಂದ ಬೆಲ್ಲದ ಅವರ ಭಾವಚಿತ್ರ ಕಾಣೆಯಾಗಿತ್ತು.

ಧಾರವಾಡದಲ್ಲಿ ಬ್ಯಾನರ್​ ಹರಿದು ಹಾಕಿರುವ ಕಿಡಿಗೇಡಿಗಳು

ನೂತನ‌ ಜಿಲ್ಲಾ ಉಸ್ತುವಾರಿ ಸಚಿವ ಮುನೇನಕೊಪ್ಪ ಅವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಧಾರವಾಡದಲ್ಲಿ ಅಲ್ಲಲ್ಲಿ ಬ್ಯಾನರ್ ಹಾಕಲಾಗಿತ್ತು. ಬ್ಯಾನರ್​​ನಲ್ಲಿ ಶಾಸಕ ಬೆಲ್ಲದ ಭಾವಚಿತ್ರ ಹಾಕದ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಟೋಲ್ ನಾಕಾದಲ್ಲಿ ಹಾಕಿದ್ದ ಬ್ಯಾನರ್​ ಅನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ‌.

ಓದಿ; ಅಸಮಾಧಾನಿತ ಸಚಿವರನ್ನು ಕರೆದು ಮಾತನಾಡುತ್ತೇನೆ: ಸಿಎಂ ಬೊಮ್ಮಾಯಿ

ಇನ್ನೊಂದೆಡೆ ಮುಖ್ಯಮಂತ್ರಿ ರೇಸ್​​ನಲ್ಲಿದ್ದ ಶಾಸಕ ಅರವಿಂದ ಬೆಲ್ಲದ ಅವರು ಸಚಿವ ಸ್ಥಾನ ಸಿಗದಿರುವುದಕ್ಕೆ ಬೇಸರಗೊಂಡಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಆಗಮಿಸಿದರೂ ಜಿಲ್ಲಾಧ್ಯಕ್ಷ ಬೆಲ್ಲದ ಅವರು ಆಗಮಿಸದಿರುವುದು ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.