ETV Bharat / state

ಹುಬ್ಬಳ್ಳಿಯಲ್ಲಿ ಬಂದ್​ಗೆ ವ್ಯಾಪಕ ಬೆಂಬಲ.. ಎಪಿಎಂಸಿಗೂ ತಟ್ಟಿದ ಬಿಸಿ! - Latest Hubli protest news

ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಸುಮಾರು 10 ಕ್ಕೂ ಹೆಚ್ಚು ಸಂಘಟನೆಗಳು ನಗರದಲ್ಲಿ ಬೃಹತ್ ಪ್ರತಿಭಟನೆ‌ ನಡೆಸಿದವು.

various-organizations-protest
ಹುಬಳ್ಳಿಯಲ್ಲಿ ಬಂದ್​ಗೆ ವ್ಯಾಪಕ ಬೆಂಬಲ
author img

By

Published : Jan 8, 2020, 12:57 PM IST

ಹುಬ್ಬಳ್ಳಿ: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಸುಮಾರು 10 ಕ್ಕೂ ಹೆಚ್ಚು ಸಂಘಟನೆಗಳು ನಗರದಲ್ಲಿ ಬೃಹತ್ ಪ್ರತಿಭಟನೆ‌ ನಡೆಸಿದವು.

ನಗರದ ‌ಅಂಬೇಡ್ಕರ್ ಸರ್ಕಲ್‌ನಿಂದ ತಹಶೀಲ್ದಾರ್‌ ಕಚೇರಿವರೆಗೂ ಪ್ರತಿಭಟನಾ ‌ಮೆರವಣಿಗೆ ನಡೆಸಿದರು. ಮೆರವಣಿಗೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಭಾರತ ಬಂದ್‌ಗೆ ರಾಜ್ಯದಲ್ಲಿ ಹೆಚ್ಚಿನ ಬೆಂಬಲ ಸಿಗದಿದ್ದರೂ ಏಷ್ಯಾದಲ್ಲೇ ಅತಿ ದೊಡ್ಡದಾದ ಹುಬ್ಬಳ್ಳಿಯ ಎಪಿಎಂಸಿಗೆ ಬಂದ್‌ನ ಬಿಸಿ ತಟ್ಟಿದೆ. ಕೂಲಿಕಾರ್ಮಿಕರು ಪ್ರತಿಭಟನೆಯಲ್ಲಿ ಭಾಗಿಯಾದ ಪರಿಣಾಮ ಎಂಪಿಎಂಸಿ ಸಂಪೂರ್ಣ ಸ್ಥಗಿತಗೊಂಡಿದೆ.

ಹುಬಳ್ಳಿಯಲ್ಲಿ ಬಂದ್​ಗೆ ವ್ಯಾಪಕ ಬೆಂಬಲ..

ಭಾರತ್​​ ಬಂದ್ ಹಿನ್ನೆಲೆ ರೈತರು ತಮ್ಮ ಕೃಷಿ ಉತ್ಪನ್ನಗಳನ್ನ ಮಾರುಕಟ್ಟೆಗೆ ತಂದಿಲ್ಲ. ಅಲ್ಲದೇ ಹಮಾಲರ ಸಂಘ ನಿನ್ನಯೇ ಬಂದ್​ಗೆ ಬೆಂಬಲ ಘೋಷಿಸಿದ ಪರಿಣಾಮ ವ್ಯಾಪಾರ ವಹಿವಾಟು ಸ್ಥಬ್ಧಗೊಂಡಿದೆ. ಎಂಪಿಎಂಸಿಯಲ್ಲಿನ ಎಲ್ಲಾ ಅಂಗಡಿ-ಮುಂಗಟ್ಟುಗಳು ಸ್ಥಗಿತವಾಗಿವೆ.

ಇದೇ ವೇಳೆ ಮಾತನಾಡಿದ ಕಾರ್ಮಿಕ ಸಂಘಟನೆ ಮುಖಂಡರಾದ ದೇವಾನಂದ ಜಗಾಪೂರಿ, ಕಾರ್ಮಿಕರ ಹಿತಾಸಕ್ತಿ ಕಾಪಾಡಬೇಕಿದ್ದ ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ನೀತಿ ಜಾರಿಗೊಳಿಸಿ ಅವರ ಬದುಕಿನ ಜೊತೆಗೆ ಆಟವಾಡುತ್ತಿದೆ. ಕಾರ್ಮಿಕರಿಗೆ ಕನಿಷ್ಟ ಕೂಲಿ ನಿಗದಿಪಡಿಸಬೇಕು. ಬ್ಯಾಂಕ್ ಖಾಸಗೀಕರಣ ಹಾಗೂ ವಿಲೀನಗೊಳಿಸುವುದನ್ನ ಕೈಬಿಡಬೇಕು. ಅಸಂಘಟಿತ ಕಾರ್ಮಿಕರಿಗೆ ಪ್ರತಿ ತಿಂಗಳು ₹21 ಸಾವಿರ ಸಂಬಳ ನಿಗದಿಪಡಿಸಬೇಕು ಎಂದು ಆಗ್ರಹಿಸಿದರು.

ಬ್ಯಾಂಕ್‌, ಎಲ್​ಐಸಿ ನೌಕರರ ಅಸೋಸಿಯೇಷನ್, ಸಿಐಟಿಯು, ಸಿಪಿಎಂ, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಮೆರವಣಿಗೆಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

ಹುಬ್ಬಳ್ಳಿ: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಸುಮಾರು 10 ಕ್ಕೂ ಹೆಚ್ಚು ಸಂಘಟನೆಗಳು ನಗರದಲ್ಲಿ ಬೃಹತ್ ಪ್ರತಿಭಟನೆ‌ ನಡೆಸಿದವು.

ನಗರದ ‌ಅಂಬೇಡ್ಕರ್ ಸರ್ಕಲ್‌ನಿಂದ ತಹಶೀಲ್ದಾರ್‌ ಕಚೇರಿವರೆಗೂ ಪ್ರತಿಭಟನಾ ‌ಮೆರವಣಿಗೆ ನಡೆಸಿದರು. ಮೆರವಣಿಗೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಭಾರತ ಬಂದ್‌ಗೆ ರಾಜ್ಯದಲ್ಲಿ ಹೆಚ್ಚಿನ ಬೆಂಬಲ ಸಿಗದಿದ್ದರೂ ಏಷ್ಯಾದಲ್ಲೇ ಅತಿ ದೊಡ್ಡದಾದ ಹುಬ್ಬಳ್ಳಿಯ ಎಪಿಎಂಸಿಗೆ ಬಂದ್‌ನ ಬಿಸಿ ತಟ್ಟಿದೆ. ಕೂಲಿಕಾರ್ಮಿಕರು ಪ್ರತಿಭಟನೆಯಲ್ಲಿ ಭಾಗಿಯಾದ ಪರಿಣಾಮ ಎಂಪಿಎಂಸಿ ಸಂಪೂರ್ಣ ಸ್ಥಗಿತಗೊಂಡಿದೆ.

ಹುಬಳ್ಳಿಯಲ್ಲಿ ಬಂದ್​ಗೆ ವ್ಯಾಪಕ ಬೆಂಬಲ..

ಭಾರತ್​​ ಬಂದ್ ಹಿನ್ನೆಲೆ ರೈತರು ತಮ್ಮ ಕೃಷಿ ಉತ್ಪನ್ನಗಳನ್ನ ಮಾರುಕಟ್ಟೆಗೆ ತಂದಿಲ್ಲ. ಅಲ್ಲದೇ ಹಮಾಲರ ಸಂಘ ನಿನ್ನಯೇ ಬಂದ್​ಗೆ ಬೆಂಬಲ ಘೋಷಿಸಿದ ಪರಿಣಾಮ ವ್ಯಾಪಾರ ವಹಿವಾಟು ಸ್ಥಬ್ಧಗೊಂಡಿದೆ. ಎಂಪಿಎಂಸಿಯಲ್ಲಿನ ಎಲ್ಲಾ ಅಂಗಡಿ-ಮುಂಗಟ್ಟುಗಳು ಸ್ಥಗಿತವಾಗಿವೆ.

ಇದೇ ವೇಳೆ ಮಾತನಾಡಿದ ಕಾರ್ಮಿಕ ಸಂಘಟನೆ ಮುಖಂಡರಾದ ದೇವಾನಂದ ಜಗಾಪೂರಿ, ಕಾರ್ಮಿಕರ ಹಿತಾಸಕ್ತಿ ಕಾಪಾಡಬೇಕಿದ್ದ ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ನೀತಿ ಜಾರಿಗೊಳಿಸಿ ಅವರ ಬದುಕಿನ ಜೊತೆಗೆ ಆಟವಾಡುತ್ತಿದೆ. ಕಾರ್ಮಿಕರಿಗೆ ಕನಿಷ್ಟ ಕೂಲಿ ನಿಗದಿಪಡಿಸಬೇಕು. ಬ್ಯಾಂಕ್ ಖಾಸಗೀಕರಣ ಹಾಗೂ ವಿಲೀನಗೊಳಿಸುವುದನ್ನ ಕೈಬಿಡಬೇಕು. ಅಸಂಘಟಿತ ಕಾರ್ಮಿಕರಿಗೆ ಪ್ರತಿ ತಿಂಗಳು ₹21 ಸಾವಿರ ಸಂಬಳ ನಿಗದಿಪಡಿಸಬೇಕು ಎಂದು ಆಗ್ರಹಿಸಿದರು.

ಬ್ಯಾಂಕ್‌, ಎಲ್​ಐಸಿ ನೌಕರರ ಅಸೋಸಿಯೇಷನ್, ಸಿಐಟಿಯು, ಸಿಪಿಎಂ, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಮೆರವಣಿಗೆಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

Intro:ಹುಬ್ಬಳ್ಳಿ- 05

ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಸುಮಾರು 10 ಕ್ಕೂ ಹೆಚ್ಚು ಸಂಘಟನೆಗಳು ನಗರದಲ್ಲಿಂದು ಬೃಹತ್ ಪ್ರತಿಭಟನೆ‌ ನಡೆಸಿದವು.

ನಗರದ ‌ಅಂಬೇಡ್ಕರ್ ಸರ್ಕಲ್ ನಿಂದ ತಹಶಿಲ್ದಾರರ ಕಚೇರಿವರೆಗೆ ನಡೆದ ಪ್ರತಿಭಟನಾ ‌ಮೆರವಣಿಗೆಯೂದ್ದಕ್ಕೂ ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

ಇದೇ ವೇಳೆ ಮಾತನಾಡಿದ ಕಾರ್ಮಿಕ ಸಂಘಟನೆ ಮುಖಂಡರಾದ ದೇವಾನಂದ ಜಗಾಪೂರಿ,ನೂರಜಾನ ಸಮುದ್ರಿ,ಕಾರ್ಮಿಕರ ಹಿತಾಸಕ್ತಿ ಕಾಪಾಡಬೇಕಿದ್ದ ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ನೀತಿಯನ್ನು ಜಾರಿಗೊಳಿಸಿ ಕಾರ್ಮಿಕ ಬದುಕಿನ ಜೊತೆಗೆ ಆಟವಾಡುತ್ತಿದೆ ಎಂದು ಆರೋಪಿಸಿದರು.
ಕಾರ್ಮಿಕರಿಗೆ ನಿರ್ದಿಷ್ಟ ಕೂಲಿ ನಿಗದಿಪಡಿಸಬೇಕು,ಬ್ಯಾಂಕ್ ಖಾಸಗಿಕರಣ ಹಾಗೂ ವೀಲಿನಕರಣ ಕೈಬಿಡಬೇಕು ಹಾಗೂ ಅಸಂಘಟಿತ ಕಾರ್ಮಿಕರಿಗೆ ಪ್ರತಿ ತಿಂಗಳು 21 ಸಾವಿರ ಸಂಬಳ ನಿಗದಿಪಡಿಸಬೇಕು ಎಂದು ಹೇಳಿದರು.
ಕಾರ್ಮಿಕರಿಗೆ ಆರೋಗ್ಯ ವಿಮೆ, ಸೇವಾ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನಾ ಮೆರವಣಿಗೆಯಲ್ಲಿ
ಬ್ಯಾಂಕ್ ನೌಕರರು, ಎಲ್ ಐಸಿ ನೌಕಕರ ಅಸೋಸಿಯೇಷನ್,ಸಿಐಟಿಯು,ಸಿಪಿಎಂ,ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು. ಮೆರವಣಿಗೆಯುದ್ದ
ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಬೈಟ್- ದೇವಾನಂದ ಜಗಾಪೂರಿ, ಕಾರ್ಮಿಕ ಸಂಘಟನೆ ಮುಖಂಡ

ಬೈಟ್ - ನೂರಜಾನ ಸಮುದ್ರಿ, ಅಂಗನವಾಡಿ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆBody:H B GaddadConclusion:Etv hubli
ETV Bharat Logo

Copyright © 2025 Ushodaya Enterprises Pvt. Ltd., All Rights Reserved.