ETV Bharat / state

"ಸಾಕ್ಷಿ ನಾಶ ಪ್ರಕರಣದ ವಿಚಾರಣೆ ನಡೆಯಬೇಕಿದೆ"; ವಿನಯ್​ ಕುಲಕರ್ಣಿ ಪರ ವಕೀಲ - Dharwad Lawyer Anandh Kolli

ಮಾಜಿ ಸಚಿವ ವಿನಯ್​ ಕುಲಕರ್ಣಿ ಕೊಲೆ ಪ್ರಕರಣದಲ್ಲಿ ಜಾಮೀನು ಸಿಕ್ಕಿದೆ. ಆದರೆ ಸಾಕ್ಷಿನಾಶ ಸಂಬಂಧ ಇರುವ ಕೇಸ್​ನ ವಿಚಾರಣೆ ನಡೆಯಬೇಕಿದೆ. ಇಷ್ಟರಲ್ಲೇ ಆ ಪ್ರಕರಣದ ಜಾಮೀನು ಅರ್ಜಿ ಸಲ್ಲಿಸಲಿದ್ದೇವೆ ಎಂದು ವಿನಯ್​ ಪರ ವಕೀಲ ಆನಂದ ಕೊಳ್ಳಿ ಹೇಳಿದ್ದಾರೆ.

Lawyer Anandh Kolli
ವಿನಯ್​ ಪರ ವಕೀಲ ಆನಂದ ಕೊಳ್ಳಿ
author img

By

Published : Aug 12, 2021, 2:27 PM IST

ಧಾರವಾಡ: ಜಿಲ್ಲಾ ಪಂಚಾಯತ್​ ಸದಸ್ಯ ಯೋಗೀಶ್​ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ ಮಾಜಿ ಸಚಿವ ವಿನಯ್​ ಕುಲಕರ್ಣಿಗೆ ಜಾಮೀನು ಲಭಿಸಿದೆ. ಆದರೆ ಸಾಕ್ಷಿನಾಶ ಸಂಬಂಧ ಇರುವ ಕೇಸ್​ನ ವಿಚಾರಣೆ ನಡೆಯಬೇಕಿದೆ ಎಂದು ವಿನಯ್​ ಪರ ವಕೀಲ ಆನಂದ ಕೊಳ್ಳಿ ಮಾಹಿತಿ ನೀಡಿದ್ದಾರೆ.

ಇಷ್ಟರಲ್ಲೇ ಆ ಪ್ರಕರಣದ ಜಾಮೀನು ಅರ್ಜಿ ಸಲ್ಲಿಸಲಿದ್ದೇವೆ. ಸುಪ್ರೀಂ ಆದೇಶ ಹಿನ್ನೆಲೆಯಾಗಿಟ್ಟುಕೊಂಡು ಈ ಅರ್ಜಿ ಸಲ್ಲಿಸುತ್ತೇವೆ. ವಿನಯ್​ ಕುಲಕರ್ಣಿ ಬೆಂಗಳೂರಿನಲ್ಲೇ ಇರುವಂತೆ ಸುಪ್ರೀಂ ಕೋರ್ಟ್​ ಸೂಚಿಸಿದೆ. ಬೆಂಗಳೂರು ಬಿಟ್ಟು ಎಲ್ಲಿಯೂ ಹೋಗುವಂತಿಲ್ಲ, ಧಾರವಾಡ ಜಿಲ್ಲೆ ಪ್ರವೇಶಕ್ಕೆ ಅವರಿಗೆ ನಿರ್ಬಂಧ ಇದೆ. ವಿಚಾರಣೆ ಮುಗಿಯುವವರೆಗೂ ಧಾರವಾಡಕ್ಕೆ ಬರುವಂತೆ ಇಲ್ಲ. ಧಾರವಾಡಕ್ಕೆ ಬರಬೇಕೆಂದರೆ ಸುಪ್ರೀಂ ಅನುಮತಿ ಪಡೆಯಬೇಕು. ಅವಶ್ಯಕ ಕಾರಣ ಒದಗಿಸಿ ಅನುಮತಿ ಪಡೆಯಬೇಕು‌ ಎಂದು ಸ್ಪಷ್ಟಪಡಿಸಿದರು.

ವಿನಯ್​ ಪರ ವಕೀಲ ಆನಂದ ಕೊಳ್ಳಿ

ಸುಪ್ರೀಂನಲ್ಲಿ ಜಾಮೀನು ಪಡೆದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಸುಪ್ರೀಂಗೆ ಜಾಮೀನು ಅರ್ಜಿ ಸಲ್ಲಿಸಿದ್ದೆವು. ಜಾಮೀನಿಗೆ ಸಿಬಿಐ ವಿರೋಧ ವ್ಯಕ್ತಪಡಿಸಿತ್ತು. ಕಾನೂನು ಪ್ರಕಾರ ಸಿಬಿಐ ನಡೆ ತಪ್ಪು ಎಂದು ನಾವು ವಾದಿಸಿದೆವು. ನಮ್ಮ ವಾದವನ್ನು ಸುಪ್ರೀಂ ಕೋರ್ಟ್ ಪುರಸ್ಕರಿಸಿತು. ಹೈಕೋರ್ಟ್‌ನಲ್ಲಿನ ವಿಚಾರಣೆಯನ್ನು ಎರಡು ತಿಂಗಳಲ್ಲಿ ಮುಗಿಸಲು ಸುಪ್ರೀಂ ಸೂಚಿಸಿದೆ ಎಂದರು.

ರಾಜ್ಯ ಸರ್ಕಾರದಿಂದ ಸಿಬಿಐ ತನಿಖೆ ಆದೇಶ ವಿಚಾರಕ್ಕೆ ಪ್ರತಿಕ್ರಿಯಿಸಿದ ಕೊಳ್ಳಿ, ರಾಜ್ಯ ಸರ್ಕಾರ ಮೂರು ಆಯಾಮಗಳಲ್ಲಿ ತನಿಖೆ ನಡೆಸುತ್ತಿದೆ. ಅದರಲ್ಲಿ ಒಂದು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಆಗ ಯೋಗೀಶ್​ ಗೌಡರ ಅಣ್ಣ ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್ ಅವರ ಅರ್ಜಿಯನ್ನೂ ತಿರಸ್ಕರಿಸಿತ್ತು. ಆದರೂ ಸರ್ಕಾರ ಮತ್ತೆ ಪ್ರಕರಣವನ್ನು ಸಿಬಿಐಗೆ ನೀಡಿತು. ಇದನ್ನೇ ನಾವು ಸುಪ್ರೀಂ ಕೋರ್ಟ್‌ನಲ್ಲಿ ಚಾಲೆಂಜ್ ಮಾಡಿದೆವು. ಸುಪ್ರೀಂ ಕೋರ್ಟ್ ಸಾಕ್ಷಿನಾಶದ ಪ್ರಕರಣವನ್ನು ಹೈಕೋರ್ಟ್ ನಿರ್ಧಾರಕ್ಕೆ ಬಿಟ್ಟಿದೆ ಎಂದು ತಿಳಿಸಿದರು.

ಧಾರವಾಡ: ಜಿಲ್ಲಾ ಪಂಚಾಯತ್​ ಸದಸ್ಯ ಯೋಗೀಶ್​ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ ಮಾಜಿ ಸಚಿವ ವಿನಯ್​ ಕುಲಕರ್ಣಿಗೆ ಜಾಮೀನು ಲಭಿಸಿದೆ. ಆದರೆ ಸಾಕ್ಷಿನಾಶ ಸಂಬಂಧ ಇರುವ ಕೇಸ್​ನ ವಿಚಾರಣೆ ನಡೆಯಬೇಕಿದೆ ಎಂದು ವಿನಯ್​ ಪರ ವಕೀಲ ಆನಂದ ಕೊಳ್ಳಿ ಮಾಹಿತಿ ನೀಡಿದ್ದಾರೆ.

ಇಷ್ಟರಲ್ಲೇ ಆ ಪ್ರಕರಣದ ಜಾಮೀನು ಅರ್ಜಿ ಸಲ್ಲಿಸಲಿದ್ದೇವೆ. ಸುಪ್ರೀಂ ಆದೇಶ ಹಿನ್ನೆಲೆಯಾಗಿಟ್ಟುಕೊಂಡು ಈ ಅರ್ಜಿ ಸಲ್ಲಿಸುತ್ತೇವೆ. ವಿನಯ್​ ಕುಲಕರ್ಣಿ ಬೆಂಗಳೂರಿನಲ್ಲೇ ಇರುವಂತೆ ಸುಪ್ರೀಂ ಕೋರ್ಟ್​ ಸೂಚಿಸಿದೆ. ಬೆಂಗಳೂರು ಬಿಟ್ಟು ಎಲ್ಲಿಯೂ ಹೋಗುವಂತಿಲ್ಲ, ಧಾರವಾಡ ಜಿಲ್ಲೆ ಪ್ರವೇಶಕ್ಕೆ ಅವರಿಗೆ ನಿರ್ಬಂಧ ಇದೆ. ವಿಚಾರಣೆ ಮುಗಿಯುವವರೆಗೂ ಧಾರವಾಡಕ್ಕೆ ಬರುವಂತೆ ಇಲ್ಲ. ಧಾರವಾಡಕ್ಕೆ ಬರಬೇಕೆಂದರೆ ಸುಪ್ರೀಂ ಅನುಮತಿ ಪಡೆಯಬೇಕು. ಅವಶ್ಯಕ ಕಾರಣ ಒದಗಿಸಿ ಅನುಮತಿ ಪಡೆಯಬೇಕು‌ ಎಂದು ಸ್ಪಷ್ಟಪಡಿಸಿದರು.

ವಿನಯ್​ ಪರ ವಕೀಲ ಆನಂದ ಕೊಳ್ಳಿ

ಸುಪ್ರೀಂನಲ್ಲಿ ಜಾಮೀನು ಪಡೆದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಸುಪ್ರೀಂಗೆ ಜಾಮೀನು ಅರ್ಜಿ ಸಲ್ಲಿಸಿದ್ದೆವು. ಜಾಮೀನಿಗೆ ಸಿಬಿಐ ವಿರೋಧ ವ್ಯಕ್ತಪಡಿಸಿತ್ತು. ಕಾನೂನು ಪ್ರಕಾರ ಸಿಬಿಐ ನಡೆ ತಪ್ಪು ಎಂದು ನಾವು ವಾದಿಸಿದೆವು. ನಮ್ಮ ವಾದವನ್ನು ಸುಪ್ರೀಂ ಕೋರ್ಟ್ ಪುರಸ್ಕರಿಸಿತು. ಹೈಕೋರ್ಟ್‌ನಲ್ಲಿನ ವಿಚಾರಣೆಯನ್ನು ಎರಡು ತಿಂಗಳಲ್ಲಿ ಮುಗಿಸಲು ಸುಪ್ರೀಂ ಸೂಚಿಸಿದೆ ಎಂದರು.

ರಾಜ್ಯ ಸರ್ಕಾರದಿಂದ ಸಿಬಿಐ ತನಿಖೆ ಆದೇಶ ವಿಚಾರಕ್ಕೆ ಪ್ರತಿಕ್ರಿಯಿಸಿದ ಕೊಳ್ಳಿ, ರಾಜ್ಯ ಸರ್ಕಾರ ಮೂರು ಆಯಾಮಗಳಲ್ಲಿ ತನಿಖೆ ನಡೆಸುತ್ತಿದೆ. ಅದರಲ್ಲಿ ಒಂದು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಆಗ ಯೋಗೀಶ್​ ಗೌಡರ ಅಣ್ಣ ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್ ಅವರ ಅರ್ಜಿಯನ್ನೂ ತಿರಸ್ಕರಿಸಿತ್ತು. ಆದರೂ ಸರ್ಕಾರ ಮತ್ತೆ ಪ್ರಕರಣವನ್ನು ಸಿಬಿಐಗೆ ನೀಡಿತು. ಇದನ್ನೇ ನಾವು ಸುಪ್ರೀಂ ಕೋರ್ಟ್‌ನಲ್ಲಿ ಚಾಲೆಂಜ್ ಮಾಡಿದೆವು. ಸುಪ್ರೀಂ ಕೋರ್ಟ್ ಸಾಕ್ಷಿನಾಶದ ಪ್ರಕರಣವನ್ನು ಹೈಕೋರ್ಟ್ ನಿರ್ಧಾರಕ್ಕೆ ಬಿಟ್ಟಿದೆ ಎಂದು ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.