ETV Bharat / state

ಗಣೇಶ ಹಬ್ಬದ Special: ಹುಬ್ಬಳ್ಳಿಯಿಂದ ಬೆಂಗಳೂರಿಗೆ ತಡೆರಹಿತ ವೋಲ್ವೊ ಬಸ್ ಸೇವೆ

author img

By

Published : Sep 6, 2021, 2:27 PM IST

ಸಾರ್ವಜನಿಕರ ಬೇಡಿಕೆ ಮೇರೆಗೆ ಸೋಮವಾರದಿಂದ ಹುಬ್ಬಳ್ಳಿ - ಬೆಂಗಳೂರಿಗೆ ಮಧ್ಯಾಹ್ನದ ಸಮಯದಲ್ಲಿ ತಡೆ ರಹಿತ ಐರಾವತ ವೋಲ್ವೊ ಹಾಗೂ ಹೈದರಾಬಾದ್​ಗೆ ಸಂಜೆ ಮತ್ತೊಂದು ನಾನ್ ಎಸಿ ಸ್ಲೀಪರ್ ಬಸ್ ಸಂಚಾರ ಆರಂಭಿಸಲಿದೆ.

Volvo bus
ವೋಲ್ವೊ ಬಸ್

ಹುಬ್ಬಳ್ಳಿ: ಹುಬ್ಬಳ್ಳಿಯಿಂದ ಮಧ್ಯಾಹ್ನ ಬೆಂಗಳೂರಿಗೆ ತಡೆರಹಿತ ಐರಾವತ ವೋಲ್ವೊ ಮತ್ತು ಹೈದರಾಬಾದ್​ಗೆ ಸಂಜೆ ಮತ್ತೊಂದು ನಾನ್ ಎಸಿ ಸ್ಲೀಪರ್ ಬಸ್ ಸಂಚಾರವನ್ನು ಆರಂಭಿಸಲಿದೆ ಎಂದು ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್.ರಾಮನಗೌಡರ ತಿಳಿಸಿದ್ದಾರೆ.

ಗಣೇಶ ಹಬ್ಬ ಹತ್ತಿರ ಬರುತ್ತಿರುವ ಹಿನ್ನೆಲೆಯಲ್ಲಿ ನಗರದಿಂದ ದೂರದ ಸ್ಥಳಗಳಿಗೆ ಜನರ ಓಡಾಟ ಹೆಚ್ಚಾಗುವ ನಿರೀಕ್ಷೆ ಇದೆ. ಸಾರ್ವಜನಿಕರ ಬೇಡಿಕೆ ಮೇರೆಗೆ ಸೋಮವಾರದಿಂದ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಮಧ್ಯಾಹ್ನದ ಸಮಯದಲ್ಲಿ ತಡೆ ರಹಿತ ಐರಾವತ ವೋಲ್ವೊ ಹಾಗೂ ಹೈದರಾಬಾದ್​ಗೆ ಸಂಜೆ ಮತ್ತೊಂದು ನಾನ್ ಎಸಿ ಸ್ಲೀಪರ್ ಬಸ್ ಸಂಚಾರ ಆರಂಭಿಸಲಿದೆ. ಈ ಬಸ್​ಗಳು ಹುಬ್ಬಳ್ಳಿ ಗೋಕುಲ ರಸ್ತೆ ಬಸ್ ನಿಲ್ದಾಣದಿಂದ ಹೊರಡುತ್ತವೆ ಎಂದು ಮಾಹಿತಿ ನೀಡಿದ್ದಾರೆ.

ಬೆಂಗಳೂರಿಗೆ ತೆರಳುವ ತಡೆರಹಿತ ಐರಾವತ ಬಸ್ ಹುಬ್ಬಳ್ಳಿಯಿಂದ ಮಧ್ಯಾಹ್ನ 1ಕ್ಕೆ ಹೊರಡುತ್ತದೆ. ಸಂಜೆ 7-30ಕ್ಕೆ ಬೆಂಗಳೂರು ತಲುಪುತ್ತದೆ. ಬೆಂಗಳೂರಿನಿಂದ ಮಧ್ಯಾಹ್ನ 3ಕ್ಕೆ ಬಿಟ್ಟು ರಾತ್ರಿ 9-30ಕ್ಕೆ ಹುಬ್ಬಳ್ಳಿಗೆ ಆಗಮಿಸುತ್ತದೆ. ಪ್ರೋತ್ಸಾಹಕ ಪ್ರಯಾಣ ದರ ರೂ.730 ನಿಗದಿಪಡಿಸಲಾಗಿದೆ.

ಬೆಂಗಳೂರಿಗೆ ತೆರಳುವ ವೋಲ್ವೊ ಬಸ್:

ಈ ಮೊದಲು ಹುಬ್ಬಳ್ಳಿಯಿಂದ ಮಧ್ಯಾಹ್ನ 3ಕ್ಕೆ ಬಸ್​ ಹೊರಟು, ರಾತ್ರಿ 9-30ಕ್ಕೆ ಬೆಂಗಳೂರು ತಲುಪಬೇಕಿತ್ತು. ಆದರೆ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಂದಾಗಿ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಬಹಳ ತಡವಾಗಿ ಅಂದರೆ 10 ಗಂಟೆಯ ನಂತರ ತಲುಪುತ್ತಿತ್ತು.

ಇದರಿಂದ ಬಸ್ ಇಳಿದ ನಂತರ ಪ್ರಯಾಣಿಕರಿಗೆ ಅದರಲ್ಲೂ ಮುಖ್ಯವಾಗಿ ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷಿತವಾಗಿ ಮನೆ ತಲುಪಲು ಅನಾನುಕೂಲವಾಗಿತ್ತು. ಆದ್ದರಿಂದ ಹುಬ್ಬಳ್ಳಿಯಲ್ಲಿ ಬಸ್​ ಹೊರಡುವ ಸಮಯ ಬದಲಾವಣೆಗೆ ಸಾರ್ವಜನಿಕರು ಮನವಿ ಮಾಡಿದ್ದರು. ಅದರಂತೆ ಕ್ರಮ ಕೈಗೊಳ್ಳಲಾಗಿದೆ.

ಹೈದರಾಬಾದ್​ಗೆ ತೆರಳುವ ನಾನ್ ಎಸಿ ಸ್ಲೀಪರ್ ಬಸ್ ಹುಬ್ಬಳ್ಳಿಯಿಂದ ಸಂಜೆ 7-35 ಕ್ಕೆ ಹೊರಡುತ್ತದೆ. ಮರುದಿನ ಬೆಳಗ್ಗೆ 6-35 ಕ್ಕೆ ಹೈದರಾಬಾದ್ ತಲುಪುತ್ತದೆ.

ಹೈದರಾಬಾದ್​ನಿಂದ ಸಂಜೆ 7-15 ಕ್ಕೆ ಬಿಟ್ಟು ಮರುದಿನ ಬೆಳಗ್ಗೆ 6-15ಕ್ಕೆ ಹುಬ್ಬಳ್ಳಿಗೆ ಆಗಮಿಸುತ್ತದೆ. ಪ್ರೋತ್ಸಾಹಕ ಪ್ರಯಾಣ ದರ ರೂ. 910 ನಿಗದಿಪಡಿಸಲಾಗಿದೆ. ಇದರೊಂದಿಗೆ ಈಗಾಗಲೇ ಹುಬ್ಬಳ್ಳಿಯಿಂದ ಹೈದರಾಬಾದ್​ಗೆ ಸಂಜೆ 7ಕ್ಕೆ ಹೊರಡುವ ನಾನ್ ಎಸಿ ಸ್ಲೀಪರ್ ಬಸ್ ಸೇವೆ ಸಹ ಮುಂದುವರೆಯಲಿದೆ.

ಈ ಬಸ್​ಗಳಿಗೆ www.ksrtc.in ವೆಬ್ ಸೈಟ್ ನಲ್ಲಿ ಆನ್ ಲೈನ್ ಮೂಲಕ ಅಥವಾ ಹೊಸೂರು, ಗೋಕುಲ ರಸ್ತೆ ಬಸ್ ನಿಲ್ದಾಣದಲ್ಲಿನ ಕೌಂಟರ್​ನಲ್ಲಿ ಮುಂಗಡ ಬುಕ್ಕಿಂಗ್​​ಗೆ ಅವಕಾಶ ಕಲ್ಪಿಸಲಾಗಿದೆ.

ಒಟ್ಟಿಗೆ ನಾಲ್ಕು ಅಥವಾ ಹೆಚ್ಚಿನ ಆಸನಗಳನ್ನು ಒಂದೇ ಟಿಕೆಟ್​ನಲ್ಲಿ ಕಾಯ್ದಿರಿಸಿದರೆ ಮೂಲ ಪ್ರಯಾಣ ದರದಲ್ಲಿ ಶೇಕಡಾ 5 ರಷ್ಟು ರಿಯಾಯಿತಿ ನೀಡಲಾಗುತ್ತದೆ. ಹೋಗುವ ಮತ್ತು ಬರುವ ಪ್ರಯಾಣಕ್ಕೆ ಒಮ್ಮೆಗೆ ಮುಂಗಡ ಬುಕ್ಕಿಂಗ್ ಮಾಡಿದರೆ ಬರುವಾಗಿನ ಪ್ರಯಾಣದ ಮೂಲ ಟಿಕೆಟ್ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಹುಬ್ಬಳ್ಳಿ: ಹುಬ್ಬಳ್ಳಿಯಿಂದ ಮಧ್ಯಾಹ್ನ ಬೆಂಗಳೂರಿಗೆ ತಡೆರಹಿತ ಐರಾವತ ವೋಲ್ವೊ ಮತ್ತು ಹೈದರಾಬಾದ್​ಗೆ ಸಂಜೆ ಮತ್ತೊಂದು ನಾನ್ ಎಸಿ ಸ್ಲೀಪರ್ ಬಸ್ ಸಂಚಾರವನ್ನು ಆರಂಭಿಸಲಿದೆ ಎಂದು ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್.ರಾಮನಗೌಡರ ತಿಳಿಸಿದ್ದಾರೆ.

ಗಣೇಶ ಹಬ್ಬ ಹತ್ತಿರ ಬರುತ್ತಿರುವ ಹಿನ್ನೆಲೆಯಲ್ಲಿ ನಗರದಿಂದ ದೂರದ ಸ್ಥಳಗಳಿಗೆ ಜನರ ಓಡಾಟ ಹೆಚ್ಚಾಗುವ ನಿರೀಕ್ಷೆ ಇದೆ. ಸಾರ್ವಜನಿಕರ ಬೇಡಿಕೆ ಮೇರೆಗೆ ಸೋಮವಾರದಿಂದ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಮಧ್ಯಾಹ್ನದ ಸಮಯದಲ್ಲಿ ತಡೆ ರಹಿತ ಐರಾವತ ವೋಲ್ವೊ ಹಾಗೂ ಹೈದರಾಬಾದ್​ಗೆ ಸಂಜೆ ಮತ್ತೊಂದು ನಾನ್ ಎಸಿ ಸ್ಲೀಪರ್ ಬಸ್ ಸಂಚಾರ ಆರಂಭಿಸಲಿದೆ. ಈ ಬಸ್​ಗಳು ಹುಬ್ಬಳ್ಳಿ ಗೋಕುಲ ರಸ್ತೆ ಬಸ್ ನಿಲ್ದಾಣದಿಂದ ಹೊರಡುತ್ತವೆ ಎಂದು ಮಾಹಿತಿ ನೀಡಿದ್ದಾರೆ.

ಬೆಂಗಳೂರಿಗೆ ತೆರಳುವ ತಡೆರಹಿತ ಐರಾವತ ಬಸ್ ಹುಬ್ಬಳ್ಳಿಯಿಂದ ಮಧ್ಯಾಹ್ನ 1ಕ್ಕೆ ಹೊರಡುತ್ತದೆ. ಸಂಜೆ 7-30ಕ್ಕೆ ಬೆಂಗಳೂರು ತಲುಪುತ್ತದೆ. ಬೆಂಗಳೂರಿನಿಂದ ಮಧ್ಯಾಹ್ನ 3ಕ್ಕೆ ಬಿಟ್ಟು ರಾತ್ರಿ 9-30ಕ್ಕೆ ಹುಬ್ಬಳ್ಳಿಗೆ ಆಗಮಿಸುತ್ತದೆ. ಪ್ರೋತ್ಸಾಹಕ ಪ್ರಯಾಣ ದರ ರೂ.730 ನಿಗದಿಪಡಿಸಲಾಗಿದೆ.

ಬೆಂಗಳೂರಿಗೆ ತೆರಳುವ ವೋಲ್ವೊ ಬಸ್:

ಈ ಮೊದಲು ಹುಬ್ಬಳ್ಳಿಯಿಂದ ಮಧ್ಯಾಹ್ನ 3ಕ್ಕೆ ಬಸ್​ ಹೊರಟು, ರಾತ್ರಿ 9-30ಕ್ಕೆ ಬೆಂಗಳೂರು ತಲುಪಬೇಕಿತ್ತು. ಆದರೆ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಂದಾಗಿ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಬಹಳ ತಡವಾಗಿ ಅಂದರೆ 10 ಗಂಟೆಯ ನಂತರ ತಲುಪುತ್ತಿತ್ತು.

ಇದರಿಂದ ಬಸ್ ಇಳಿದ ನಂತರ ಪ್ರಯಾಣಿಕರಿಗೆ ಅದರಲ್ಲೂ ಮುಖ್ಯವಾಗಿ ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷಿತವಾಗಿ ಮನೆ ತಲುಪಲು ಅನಾನುಕೂಲವಾಗಿತ್ತು. ಆದ್ದರಿಂದ ಹುಬ್ಬಳ್ಳಿಯಲ್ಲಿ ಬಸ್​ ಹೊರಡುವ ಸಮಯ ಬದಲಾವಣೆಗೆ ಸಾರ್ವಜನಿಕರು ಮನವಿ ಮಾಡಿದ್ದರು. ಅದರಂತೆ ಕ್ರಮ ಕೈಗೊಳ್ಳಲಾಗಿದೆ.

ಹೈದರಾಬಾದ್​ಗೆ ತೆರಳುವ ನಾನ್ ಎಸಿ ಸ್ಲೀಪರ್ ಬಸ್ ಹುಬ್ಬಳ್ಳಿಯಿಂದ ಸಂಜೆ 7-35 ಕ್ಕೆ ಹೊರಡುತ್ತದೆ. ಮರುದಿನ ಬೆಳಗ್ಗೆ 6-35 ಕ್ಕೆ ಹೈದರಾಬಾದ್ ತಲುಪುತ್ತದೆ.

ಹೈದರಾಬಾದ್​ನಿಂದ ಸಂಜೆ 7-15 ಕ್ಕೆ ಬಿಟ್ಟು ಮರುದಿನ ಬೆಳಗ್ಗೆ 6-15ಕ್ಕೆ ಹುಬ್ಬಳ್ಳಿಗೆ ಆಗಮಿಸುತ್ತದೆ. ಪ್ರೋತ್ಸಾಹಕ ಪ್ರಯಾಣ ದರ ರೂ. 910 ನಿಗದಿಪಡಿಸಲಾಗಿದೆ. ಇದರೊಂದಿಗೆ ಈಗಾಗಲೇ ಹುಬ್ಬಳ್ಳಿಯಿಂದ ಹೈದರಾಬಾದ್​ಗೆ ಸಂಜೆ 7ಕ್ಕೆ ಹೊರಡುವ ನಾನ್ ಎಸಿ ಸ್ಲೀಪರ್ ಬಸ್ ಸೇವೆ ಸಹ ಮುಂದುವರೆಯಲಿದೆ.

ಈ ಬಸ್​ಗಳಿಗೆ www.ksrtc.in ವೆಬ್ ಸೈಟ್ ನಲ್ಲಿ ಆನ್ ಲೈನ್ ಮೂಲಕ ಅಥವಾ ಹೊಸೂರು, ಗೋಕುಲ ರಸ್ತೆ ಬಸ್ ನಿಲ್ದಾಣದಲ್ಲಿನ ಕೌಂಟರ್​ನಲ್ಲಿ ಮುಂಗಡ ಬುಕ್ಕಿಂಗ್​​ಗೆ ಅವಕಾಶ ಕಲ್ಪಿಸಲಾಗಿದೆ.

ಒಟ್ಟಿಗೆ ನಾಲ್ಕು ಅಥವಾ ಹೆಚ್ಚಿನ ಆಸನಗಳನ್ನು ಒಂದೇ ಟಿಕೆಟ್​ನಲ್ಲಿ ಕಾಯ್ದಿರಿಸಿದರೆ ಮೂಲ ಪ್ರಯಾಣ ದರದಲ್ಲಿ ಶೇಕಡಾ 5 ರಷ್ಟು ರಿಯಾಯಿತಿ ನೀಡಲಾಗುತ್ತದೆ. ಹೋಗುವ ಮತ್ತು ಬರುವ ಪ್ರಯಾಣಕ್ಕೆ ಒಮ್ಮೆಗೆ ಮುಂಗಡ ಬುಕ್ಕಿಂಗ್ ಮಾಡಿದರೆ ಬರುವಾಗಿನ ಪ್ರಯಾಣದ ಮೂಲ ಟಿಕೆಟ್ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.