ETV Bharat / state

ಜೀವ ಬೆದರಿಕೆ ಆರೋಪ: ಹುಬ್ಬಳ್ಳಿಯ ಖ್ಯಾತ ವೈದ್ಯನ ವಿರುದ್ಧ ದೂರು ನೀಡಿದ ಪತ್ನಿ

author img

By

Published : Nov 2, 2021, 7:01 AM IST

ತನ್ನ ಪತಿಯ ಜೊತೆ ಮೂರ್ನಾಲ್ಕು ವರ್ಷದಿಂದ ಕೌಟುಂಬಿಕ ಭಿನ್ನಾಭಿಪ್ರಾಯಗಳಿವೆ. ಈ ಕಾರಣಕ್ಕೆ ನನ್ನ ಹೆಸರಿನಲ್ಲಿರುವ ಆಸ್ತಿಯನ್ನ ಬಿಟ್ಟು ಕೊಡುವಂತೆ ಪೀಡಿಸುತ್ತಿದ್ದು, ತನಗೆ ಜೀವ ಬೆದರಿಕೆ ಇದೆ ಎಂದು ಖ್ಯಾತ ವೈದ್ಯನ ವಿರುದ್ಧ ಅವರ ಪತ್ನಿ ಪೊಲೀಸ್​ ಠಾಣೆ ಮೆಟ್ಟಿಲೇರಿದ್ದಾರೆ.

Wife who filed a complaint against his husband
ಜೀವ ಬೆದರಿಕೆ ಆರೋಪ: ಖ್ಯಾತ ವೈದ್ಯನ ವಿರುದ್ಧ ದೂರು ದಾಖಲಿಸಿದ ಪತ್ನಿ

ಹುಬ್ಬಳ್ಳಿ: ತನ್ನ ಪತಿ ಕೊಲೆ ಮಾಡಿಸಲು ಸುಪಾರಿ ಕೊಡುವುದಾಗಿ ಜೀವ ಬೆದರಿಕೆ ಹಾಕಿದ್ದಾರೆಂದು ಪತ್ನಿಯೇ ಪತಿಯ ವಿರುದ್ಧ ದೂರು ನೀಡಿರುವ ಪ್ರಕರಣ ನಗರದಲ್ಲಿ ನಡೆದಿದೆ.

ಬಾಲಾಜಿ ಆಸ್ಪತ್ರೆಯ ಡಾ.ಕ್ರಾಂತಿಕಿರಣ ಅವರ ಪತ್ನಿ ಡಾ.ಶೋಭಾ ಸುಣಗಾರ ದೂರು ನೀಡಿದವರು. ತನ್ನ ಪತಿಯ ಜೊತೆ ಮೂರ್ನಾಲ್ಕು ವರ್ಷಗಳಿಂದ ಕೌಟುಂಬಿಕ ಭಿನ್ನಾಭಿಪ್ರಾಯಗಳಿವೆ. ಈ ಕಾರಣಕ್ಕೆ ನನ್ನ ಹೆಸರಿನಲ್ಲಿರುವ ಆಸ್ತಿಯನ್ನ ಬಿಟ್ಟು ಕೊಡುವಂತೆ ಪೀಡಿಸುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಬಾಲಾಜಿ ಆಸ್ಪತ್ರೆಯ ಅಕೌಂಟೆಂಟ್ ಮಹೇಶ್ವರಿ ಹೊಸಗೌಡರ ಕೂಡಾ ಜೀವ ಬೆದರಿಕೆ ಹಾಕಿದ್ದಾರೆಂದು ಡಾ.ಶೋಭಾ ಸುಣಗಾರ ಆರೋಪಿಸಿದ್ದಾರೆ. ಘಟನೆ ಸಂಬಂಧ ವಿದ್ಯಾನಗರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹುಬ್ಬಳ್ಳಿ: ತನ್ನ ಪತಿ ಕೊಲೆ ಮಾಡಿಸಲು ಸುಪಾರಿ ಕೊಡುವುದಾಗಿ ಜೀವ ಬೆದರಿಕೆ ಹಾಕಿದ್ದಾರೆಂದು ಪತ್ನಿಯೇ ಪತಿಯ ವಿರುದ್ಧ ದೂರು ನೀಡಿರುವ ಪ್ರಕರಣ ನಗರದಲ್ಲಿ ನಡೆದಿದೆ.

ಬಾಲಾಜಿ ಆಸ್ಪತ್ರೆಯ ಡಾ.ಕ್ರಾಂತಿಕಿರಣ ಅವರ ಪತ್ನಿ ಡಾ.ಶೋಭಾ ಸುಣಗಾರ ದೂರು ನೀಡಿದವರು. ತನ್ನ ಪತಿಯ ಜೊತೆ ಮೂರ್ನಾಲ್ಕು ವರ್ಷಗಳಿಂದ ಕೌಟುಂಬಿಕ ಭಿನ್ನಾಭಿಪ್ರಾಯಗಳಿವೆ. ಈ ಕಾರಣಕ್ಕೆ ನನ್ನ ಹೆಸರಿನಲ್ಲಿರುವ ಆಸ್ತಿಯನ್ನ ಬಿಟ್ಟು ಕೊಡುವಂತೆ ಪೀಡಿಸುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಬಾಲಾಜಿ ಆಸ್ಪತ್ರೆಯ ಅಕೌಂಟೆಂಟ್ ಮಹೇಶ್ವರಿ ಹೊಸಗೌಡರ ಕೂಡಾ ಜೀವ ಬೆದರಿಕೆ ಹಾಕಿದ್ದಾರೆಂದು ಡಾ.ಶೋಭಾ ಸುಣಗಾರ ಆರೋಪಿಸಿದ್ದಾರೆ. ಘಟನೆ ಸಂಬಂಧ ವಿದ್ಯಾನಗರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.