ಧಾರವಾಡ : ನಾಲ್ಕನೇ ಬಾರಿಗೆ ಸಂಸದರಾಗಿ ಆಯ್ಕೆಯಾದ ಪ್ರಹ್ಲಾದ ಜೋಶಿ ಅವರಿಗೆ ಕೆಲ ಮಹಿಳೆಯರು ಮೊದಲ ದಿನವೇ ಮನೆ ನಿರ್ಮಿಸಿಕೊಡುವಂತೆ ಮನವಿ ಮಾಡಿದ ಪ್ರಸಂಗ ನಡೆದಿದೆ.
ವಿಜಯಶಾಲಿಯಾದ ಬಳಿಕ ಸಂಜೆ ಮುರುಘಾಮಠಕ್ಕೆ ಆಶೀರ್ವಾದ ಪಡೆಯಲು ಬಂದಿದ್ದ ಅವರಿಗೆ ಕೆಲ ಮಹಿಳೆಯರು ನಮಗೆ ಮನೆಗಳಿಲ್ಲ. ದಯವಿಟ್ಟು ಮನೆಗಳನ್ನು ನಿರ್ಮಿಸಿಕೊಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಇವರ ಮನವಿಗೆ ಸ್ಪಂದಿಸಿದ ಜೋಶಿ, ಕೇಂದ್ರದ ನರೇಂದ್ರ ಮೋದಿ ಸರ್ಕಾರ ಮನೆಗಳನ್ನು ನಿರ್ಮಿಸಿ ಕೊಡುವುದಕ್ಕಾಗಿಯೇ ರಾಜ್ಯ ಸರ್ಕಾರಕ್ಕೆ ಹಣ ನೀಡುತ್ತದೆ. ಆ ಹಣ ಬಳಕೆ ಮಾಡಿಕೊಂಡು ರಾಜ್ಯ ಸರ್ಕಾರ ಬಡವರಿಗೆ ಮನೆಗಳನ್ನು ನಿರ್ಮಿಸಿ ಕೊಡಬೇಕು ಆದರೆ, ರಾಜ್ಯ ಸರ್ಕಾರ ಮುತುವರ್ಜಿ ವಹಿಸುತ್ತಿಲ್ಲ. ಆದರೂ ನಮ್ಮ ಬಿಜೆಪಿ ಶಾಸಕರ ಮೂಲಕ ಆದಷ್ಟ ಬೇಗ ನಿಮಗೆ ಸೂರು ಒದಗಿಸಲಾಗುವುದು ಎಂದು ಭರವಸೆ ನೀಡಿದರು.