ETV Bharat / state

ಧಾರವಾಡ : ವಿಶ್ವ ಪರಿಸರ ದಿನ ಹಿನ್ನೆಲೆ 2000 ಸಸಿಗಳ ವಿತರಣೆ

author img

By

Published : Jun 5, 2020, 5:30 PM IST

ತಾಲೂಕಿನಲ್ಲಿರುವ ಶಾಲೆಗಳಿಗೆ ಒಟ್ಟು 10 ಸಾವಿರ ಸಸಿಗಳ ವಿತರಣಾ ಕಾರ್ಯಕ್ಕೆ ಅಪರ ಆಯುಕ್ತ ಮೇಜರ್ ಸಿದ್ಧಲಿಂಗಯ್ಯ ಹಿರೇಮಠ ಚಾಲನೆ ನೀಡಿದರು.

Environmental day
Environmental day

ಧಾರವಾಡ: ತಹಶೀಲ್ದಾರ್ ಕಚೇರಿ ಆವರಣದಲ್ಲಿ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.

ಜಿಲ್ಲಾಧಿಕಾರಿ ದೀಪಾ ಚೋಳನ್ ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿದರು. ಉಪ ವಿಭಾಗಾಧಿಕಾರಿ ಮೊಹ್ಮದ್ ಜುಬೇರ, ತಹಶೀಲ್ದಾರ್ ಡಾ. ಸಂತೋಷ ಬಿರಾದರ ಹಾಗೂ ತಹಶೀಲ್ದಾರ್ ಕಚೇರಿ ಸಿಬ್ಬಂದಿ, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು ಕಾರ್ಯಕ್ರಮದಲ್ಲಿದ್ದರು.

ಅತ್ತ ವಿಶ್ವ ಪರಿಸರ ದಿನದ ಅಂಗವಾಗಿ ಧಾರವಾಡ ಗ್ರಾಮೀಣ ಬಿಇಒ ಕಚೇರಿ ಆವರಣದಲ್ಲಿ ತಾಲೂಕಿನಲ್ಲಿರುವ ಶಾಲೆಗಳಿಗೆ ಒಟ್ಟು 10 ಸಾವಿರ ಸಸಿಗಳ ವಿತರಣಾ ಕಾರ್ಯಕ್ಕೆ ಅಪರ ಆಯುಕ್ತ ಮೇಜರ್ ಸಿದ್ಧಲಿಂಗಯ್ಯ ಹಿರೇಮಠ ಚಾಲನೆ ನೀಡಿದರು.

ಇಂದು ಒಟ್ಟು 2,000 ಸಸಿಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಬಿಇಒ ಅಧಿಕಾರಿ ಉಮೇಶ್ ಬೊಮ್ಮಕ್ಕನವರ್ ಸೇರಿ ಇತರ ಸಿಬ್ಬಂದಿ ಭಾಗವಹಿಸಿದ್ದರು.

ಧಾರವಾಡ: ತಹಶೀಲ್ದಾರ್ ಕಚೇರಿ ಆವರಣದಲ್ಲಿ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.

ಜಿಲ್ಲಾಧಿಕಾರಿ ದೀಪಾ ಚೋಳನ್ ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿದರು. ಉಪ ವಿಭಾಗಾಧಿಕಾರಿ ಮೊಹ್ಮದ್ ಜುಬೇರ, ತಹಶೀಲ್ದಾರ್ ಡಾ. ಸಂತೋಷ ಬಿರಾದರ ಹಾಗೂ ತಹಶೀಲ್ದಾರ್ ಕಚೇರಿ ಸಿಬ್ಬಂದಿ, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು ಕಾರ್ಯಕ್ರಮದಲ್ಲಿದ್ದರು.

ಅತ್ತ ವಿಶ್ವ ಪರಿಸರ ದಿನದ ಅಂಗವಾಗಿ ಧಾರವಾಡ ಗ್ರಾಮೀಣ ಬಿಇಒ ಕಚೇರಿ ಆವರಣದಲ್ಲಿ ತಾಲೂಕಿನಲ್ಲಿರುವ ಶಾಲೆಗಳಿಗೆ ಒಟ್ಟು 10 ಸಾವಿರ ಸಸಿಗಳ ವಿತರಣಾ ಕಾರ್ಯಕ್ಕೆ ಅಪರ ಆಯುಕ್ತ ಮೇಜರ್ ಸಿದ್ಧಲಿಂಗಯ್ಯ ಹಿರೇಮಠ ಚಾಲನೆ ನೀಡಿದರು.

ಇಂದು ಒಟ್ಟು 2,000 ಸಸಿಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಬಿಇಒ ಅಧಿಕಾರಿ ಉಮೇಶ್ ಬೊಮ್ಮಕ್ಕನವರ್ ಸೇರಿ ಇತರ ಸಿಬ್ಬಂದಿ ಭಾಗವಹಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.