ETV Bharat / state

‘ಜನರ ಮೂಗಿಗೆ ತುಪ್ಪ ಸವರುತ್ತಿದೆ’: ಮೈತ್ರಿ ಸರ್ಕಾರದ ವಿರುದ್ಧ ಬಿಎಸ್​​ವೈ ಗರಂ... - Abb

ಮೈತ್ರಿ ಸರ್ಕಾರ ಜನರ ಮೂಗಿಗೆ ತುಪ್ಪ ಸವರುತ್ತಿದೆ. ಮೋದಿ ಮತ್ತೊಮ್ಮೆ ಪ್ರಧಾನಿ ಆಗುತ್ತಾರೆ. ಇದು ಸೂರ್ಯ, ಚಂದ್ರರಿರುವುದು ಎಷ್ಟು ಸತ್ಯವೋ, ಅಷ್ಟೇ ಸತ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​.ಯಡಿಯೂರಪ್ಪ
author img

By

Published : May 17, 2019, 1:28 PM IST

ಹುಬ್ಬಳ್ಳಿ: ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಟ್ವಿಟರ್​ ಮುಖಾಂತರ ಕಚ್ಚಾಟ ನಡೆಸಿ, ಜನರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

ನಗರದಲ್ಲಿಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬಿಜೆಪಿ ಲೋಕಸಭೆಯಲ್ಲಿ 290 ಕ್ಕೂ ಹೆಚ್ಚು ಸ್ಥಾನ ಗೆದ್ದು, ಮತ್ತೊಮ್ಮೆ ನರೇಂದ್ರ ಮೋದಿಯವರೇ ಪ್ರಧಾನಿ ಆಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​.ಯಡಿಯೂರಪ್ಪ
ಎರಡೂ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದು ಬಿಜೆಪಿ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು. ಈ ಮೈತ್ರಿ ಸರ್ಕಾರ ಬಹಳಷ್ಟು ದಿನ ಇರುವುದಿಲ್ಲ ಎಂದು ಮೈತ್ರಿ ಸರ್ಕಾರದ ವಿರುದ್ದ ಮಾತಿನ ಚಾಟಿ ಬೀಸಿದರು.

ಲೋಕಸಭೆ ಚುನಾವಣೆಯಲ್ಲಿ ಕಳೆದ ಬಾರಿಗಿಂತ ಈ ಬಾರಿ ಪಕ್ಷ ಹೆಚ್ಚಿಗೆ ಸ್ಥಾನಗಳನ್ನು ಗೆಲ್ಲಲಿದೆ. ಸೂರ್ಯ ಚಂದ್ರರಿರುವುದು ಎಷ್ಟು ಸತ್ಯವೋ ಮೋದಿ ಪ್ರಧಾನಿ ಆಗುವುದು ಅಷ್ಟೇ ಸತ್ಯ ಎಂದರು‌. ವಿರೇಂದ್ರ ಪಾಟೀಲ್​ ಅವರನ್ನು ಸಿಎಂ ಸ್ಥಾನದಿಂದ ಕಿತ್ತು ಹಾಕಿ ಕಾಂಗ್ರೆಸ್ ವಿಶ್ವಾಸ ದ್ರೋಹ ಮಾಡಿದೆ. ವೀರಶೈವರು ಕಾಂಗ್ರೆಸ್​ಗೆ ವೋಟ್ ಹಾಕುವುದಿಲ್ಲ ಎಂದೂ ಅವರು ಇದೇ ವೇಳೆ ಹೇಳಿದರು.

ಹುಬ್ಬಳ್ಳಿ: ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಟ್ವಿಟರ್​ ಮುಖಾಂತರ ಕಚ್ಚಾಟ ನಡೆಸಿ, ಜನರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

ನಗರದಲ್ಲಿಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬಿಜೆಪಿ ಲೋಕಸಭೆಯಲ್ಲಿ 290 ಕ್ಕೂ ಹೆಚ್ಚು ಸ್ಥಾನ ಗೆದ್ದು, ಮತ್ತೊಮ್ಮೆ ನರೇಂದ್ರ ಮೋದಿಯವರೇ ಪ್ರಧಾನಿ ಆಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​.ಯಡಿಯೂರಪ್ಪ
ಎರಡೂ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದು ಬಿಜೆಪಿ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು. ಈ ಮೈತ್ರಿ ಸರ್ಕಾರ ಬಹಳಷ್ಟು ದಿನ ಇರುವುದಿಲ್ಲ ಎಂದು ಮೈತ್ರಿ ಸರ್ಕಾರದ ವಿರುದ್ದ ಮಾತಿನ ಚಾಟಿ ಬೀಸಿದರು.

ಲೋಕಸಭೆ ಚುನಾವಣೆಯಲ್ಲಿ ಕಳೆದ ಬಾರಿಗಿಂತ ಈ ಬಾರಿ ಪಕ್ಷ ಹೆಚ್ಚಿಗೆ ಸ್ಥಾನಗಳನ್ನು ಗೆಲ್ಲಲಿದೆ. ಸೂರ್ಯ ಚಂದ್ರರಿರುವುದು ಎಷ್ಟು ಸತ್ಯವೋ ಮೋದಿ ಪ್ರಧಾನಿ ಆಗುವುದು ಅಷ್ಟೇ ಸತ್ಯ ಎಂದರು‌. ವಿರೇಂದ್ರ ಪಾಟೀಲ್​ ಅವರನ್ನು ಸಿಎಂ ಸ್ಥಾನದಿಂದ ಕಿತ್ತು ಹಾಕಿ ಕಾಂಗ್ರೆಸ್ ವಿಶ್ವಾಸ ದ್ರೋಹ ಮಾಡಿದೆ. ವೀರಶೈವರು ಕಾಂಗ್ರೆಸ್​ಗೆ ವೋಟ್ ಹಾಕುವುದಿಲ್ಲ ಎಂದೂ ಅವರು ಇದೇ ವೇಳೆ ಹೇಳಿದರು.

Intro:ಹುಬ್ಬಳ್ಳಿ-01
ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಟ್ವೀಟರ್ ಮುಖಾಂತರ ಕಚ್ಚಾಟ ನಡೆಸಿ, ಜನರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದ್ದಾರೆ ಎಂದು
ಮಾಜಿ ಸಿಎಂ ಯಡಿಯೂರಪ್ಪ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.
ನಗರದಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಅವರು, ನರೇಂದ್ರ ಮೋದಿ 290 ಕ್ಕೂ ಹೆಚ್ಚು ಸ್ಥಾನ ಗೆದ್ದು ಪ್ರಧಾನಿ ಆಗುತ್ತಾರೆ ಎಂದರು.
ಎರಡು ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದು ಬಿಜೆಪಿ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು. ಈ ಮೈತ್ರಿ ಸರ್ಕಾರ ಬಹಳಷ್ಟು ದಿನ ಇರೋಲ್ಲ ಎಂದು ಮೈತ್ರಿಯ ವಿರುದ್ದ ಮಾತಿನ ಚಾಟಿ ಬಿಸಿದರು. ಲೋಕಸಭೆಯಲ್ಲಿ ದೇಶದಲ್ಲಿ ಕಳೆದ ಬಾರಿಗಿಂತ ಈ ಬಾರಿಗೆ ಹೆಚ್ಚಿಗೆ ಸ್ಥಾನ ಬರುತ್ತೆ.
ಸೂರ್ಯ ಚಂದ್ರಿರುವಷ್ಟೇ ಸತ್ಯ ಮೋದಿ ಪ್ರಧಾನಿ ಆಗ್ತಾರೆ ಎಂದರು‌. ವಿರೇಂದ್ರ ಪಾಟೀಲ ಅವರನ್ನು ಸಿಎಂ ಸ್ಥಾನದಿಂದ ಕಿತ್ತು ಹಾಕಿ ಕಾಂಗ್ರೆಸ್ ವಿಶ್ವಾಸ ದ್ರೋಹ ಮಾಡಿದೆ.ವೀರಶೈವರು ಕಾಂಗ್ರೆಸಗೆ ವೋಟ್ ಹಾಕೋಲ್ಲಾ ಎಂದು ಹೇಳಿದರು. ಇಂದು ಬಹಿರಂಗ ಪ್ರಚಾರಕ್ಕೆ ಅಂತ್ಯದ ಹಿನ್ನೆಲೆಯಲ್ಲಿ ಎಲ್ಲಾ ಕಾರ್ಯಕರ್ತರಿಗೆ ಮುಖಂಡರಿಗೆ ಕ್ಷೇತ್ರದಿಂದ ಹೊರಗೆ ಹೋಗುವಂತೆ ಹೇಳಲಾಗಿದೆ ಎಂದರು.Body:H B GaddadConclusion:Etv hubli

For All Latest Updates

TAGGED:

Abb
ETV Bharat Logo

Copyright © 2025 Ushodaya Enterprises Pvt. Ltd., All Rights Reserved.