ETV Bharat / state

ಯೋಗೇಶ್ ಗೌಡ ಕೊಲೆ ಪ್ರಕರಣ: ಕುಟುಂಬಸ್ಥರಿಂದ ಮಾಹಿತಿ ಕಲೆ ಹಾಕಿದ ಸಿಬಿಐ

ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಬಿಜೆಪಿ ಕಾರ್ಯಕರ್ತ ಯೋಗೇಶ್ ಗೌಡ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐ ಆರಂಭಿಸಿದೆ. ಬೆಂಗಳೂರಿನಿಂದ ಧಾರವಾಡಕ್ಕೆ ಸಿಬಿಐ ತಂಡ ಆಗಮಿಸಿ ‌ಮಾಹಿತಿ‌ ಕಲೆ ಹಾಕಿದೆ.

author img

By

Published : Sep 28, 2019, 11:19 AM IST

Updated : Sep 28, 2019, 1:23 PM IST

ಯೋಗೇಶ್ ಗೌಡ

ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಬಿಜೆಪಿ ಕಾರ್ಯಕರ್ತ ಯೋಗೇಶ್ ಗೌಡ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐ ಆರಂಭಿಸಿದೆ. ಬೆಂಗಳೂರಿನಿಂದ ಧಾರವಾಡಕ್ಕೆ ಸಿಬಿಐ ತಂಡ ಆಗಮಿಸಿ ‌ಮಾಹಿತಿ‌ ಕಲೆ ಹಾಕಿದೆ.

ಯೋಗೇಶ್ ಗೌಡ ಕೊಲೆ ಪ್ರಕರಣದ ತನಿಖೆ, ಕುಟುಂಬಸ್ಥರಿಂದ ಮಾಹಿತಿ ಕಲೆ ಹಾಕಿದ ಸಿಬಿಐ

ಸಿಬಿಐ ಅಧಿಕಾರಿಗಳು ಯೋಗೇಶ್ ಗೌಡ ಸಹೋದರ ಗುರುನಾಥ ಗೌಡ ಹಾಗೂ ಕುಟುಂಬ ಸದಸ್ಯರಿಂದ ಮಾಹಿತಿ ಪಡೆದುಕೊಂಡರು. ಧಾರವಾಡ ತಾಲೂಕಿನ ಗೋವನಕೊಪ್ಪದಲ್ಲಿರುವ ಗುರುನಾಥಗೌಡ ತೋಟದ ಮನೆಯಲ್ಲಿ ಸಿಬಿಐ ತಂಡ ಮಾಹಿತಿ ಕಲೆ ಹಾಕಿದರು.

ಘಟನೆಯಲ್ಲಿ ಪ್ರಭಾವಿಗಳ ಕೈವಾಡವಿದೆ ಎಂದು ಕುಟುಂಬಸ್ಥರು ಶಂಕೆ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತನಿಖೆಯನ್ನು ಸಿಬಿಐಗೆ ವಹಿಸಿತ್ತು. 3 ದಿನಗಳ ಹಿಂದೆ ಆರೋಪಿಗಳ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿಕೊಂಡಿತ್ತು. ಇಂದು ಸಿಬಿಐ ತ‌ಂಡ ವಿಚಾರಣೆಗೆ ಮುಂದಾಗಿದೆ.

ಯೋಗೇಶ್​ ಗೌಡ ಕುಟುಂಬಸ್ಥರಿಂದ ಮಾಹಿತಿ ಪಡೆದ ಸಿಬಿಐ ಅಧಿಕಾರಿಗಳು, ಯೋಗೇಶ್​ ಗೌಡ ಪತ್ನಿ ಮನೆಗೆ ಭೇಟಿ ನೀಡಿದ್ದು, ಅವರು ಮನೆಯಲ್ಲಿಲ್ಲದ ಕಾರಣ ವಾಪಸ್ಸಾಗಿದ್ದಾರೆ. ಜೊತೆಗೆ ತಾಲೂಕಿನ ಗೋವನಕೊಪ್ಪದಲ್ಲಿರುವ ಯೋಗೇಶ್​ ಗೌಡ ಪತ್ನಿ ಮಲ್ಲಮ್ಮ ಅವರ ಮನೆಗೂ ಸಿಬಿಐ ತಂಡ ಭೇಟಿ ನೀಡಿತ್ತು. ಆದ್ರೆ, ಮಲ್ಲಮ್ಮ ಮನೆಯಲ್ಲಿ ಇಲ್ಲದ ಕಾರಣ ವಾಪಸ್ಸಾದರು.

ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಬಿಜೆಪಿ ಕಾರ್ಯಕರ್ತ ಯೋಗೇಶ್ ಗೌಡ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐ ಆರಂಭಿಸಿದೆ. ಬೆಂಗಳೂರಿನಿಂದ ಧಾರವಾಡಕ್ಕೆ ಸಿಬಿಐ ತಂಡ ಆಗಮಿಸಿ ‌ಮಾಹಿತಿ‌ ಕಲೆ ಹಾಕಿದೆ.

ಯೋಗೇಶ್ ಗೌಡ ಕೊಲೆ ಪ್ರಕರಣದ ತನಿಖೆ, ಕುಟುಂಬಸ್ಥರಿಂದ ಮಾಹಿತಿ ಕಲೆ ಹಾಕಿದ ಸಿಬಿಐ

ಸಿಬಿಐ ಅಧಿಕಾರಿಗಳು ಯೋಗೇಶ್ ಗೌಡ ಸಹೋದರ ಗುರುನಾಥ ಗೌಡ ಹಾಗೂ ಕುಟುಂಬ ಸದಸ್ಯರಿಂದ ಮಾಹಿತಿ ಪಡೆದುಕೊಂಡರು. ಧಾರವಾಡ ತಾಲೂಕಿನ ಗೋವನಕೊಪ್ಪದಲ್ಲಿರುವ ಗುರುನಾಥಗೌಡ ತೋಟದ ಮನೆಯಲ್ಲಿ ಸಿಬಿಐ ತಂಡ ಮಾಹಿತಿ ಕಲೆ ಹಾಕಿದರು.

ಘಟನೆಯಲ್ಲಿ ಪ್ರಭಾವಿಗಳ ಕೈವಾಡವಿದೆ ಎಂದು ಕುಟುಂಬಸ್ಥರು ಶಂಕೆ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತನಿಖೆಯನ್ನು ಸಿಬಿಐಗೆ ವಹಿಸಿತ್ತು. 3 ದಿನಗಳ ಹಿಂದೆ ಆರೋಪಿಗಳ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿಕೊಂಡಿತ್ತು. ಇಂದು ಸಿಬಿಐ ತ‌ಂಡ ವಿಚಾರಣೆಗೆ ಮುಂದಾಗಿದೆ.

ಯೋಗೇಶ್​ ಗೌಡ ಕುಟುಂಬಸ್ಥರಿಂದ ಮಾಹಿತಿ ಪಡೆದ ಸಿಬಿಐ ಅಧಿಕಾರಿಗಳು, ಯೋಗೇಶ್​ ಗೌಡ ಪತ್ನಿ ಮನೆಗೆ ಭೇಟಿ ನೀಡಿದ್ದು, ಅವರು ಮನೆಯಲ್ಲಿಲ್ಲದ ಕಾರಣ ವಾಪಸ್ಸಾಗಿದ್ದಾರೆ. ಜೊತೆಗೆ ತಾಲೂಕಿನ ಗೋವನಕೊಪ್ಪದಲ್ಲಿರುವ ಯೋಗೇಶ್​ ಗೌಡ ಪತ್ನಿ ಮಲ್ಲಮ್ಮ ಅವರ ಮನೆಗೂ ಸಿಬಿಐ ತಂಡ ಭೇಟಿ ನೀಡಿತ್ತು. ಆದ್ರೆ, ಮಲ್ಲಮ್ಮ ಮನೆಯಲ್ಲಿ ಇಲ್ಲದ ಕಾರಣ ವಾಪಸ್ಸಾದರು.

Intro:ಧಾರವಾಡ: ಜಿಪಂ ‌ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣ ಸಿಬಿಐ ತನಿಖೆ ಆರಂಭಗೊಂಡಿದೆ. ಬೆಂಗಳೂರಿನಿಂದ ಧಾರವಾಡಕ್ಕೆ ಸಿಬಿಐ ತಂಡ ಆಗಮಿಸಿ ‌ಮಾಹಿತಿ‌ ಕಲೆ ಹಾಕುತ್ತಿದೆ.‌

ಕೊಲೆ ಪ್ರಕರಣ ಕುರಿತಂತೆ ಮಾಹಿತಿ ಕಲೆ ಹಾಕುತ್ತಿರುವ ತಂಡ ಯೋಗೀಶಗೌಡ ಸೋದರ ಗುರುನಾಥಗೌಡ ಸಹಿತ ಕುಟುಂಬ ಸದಸ್ಯರಿಂದ ಮಾಹಿತಿ ಪಡೆದುಕೊಳ್ಳುತ್ತಿದೆ. ಧಾರವಾಡ ತಾಲೂಕಿನ ಗೋವನಕೊಪ್ಪದಲ್ಲಿರುವ ಗುರುನಾಥಗೌಡ ತೋಟದ ಮನೆಯಲ್ಲಿ ಸಿಬಿಐ ತಂಡ ಮಾಹಿತಿ ಪಡೆದುಕೊಳ್ಳುತ್ತಿದೆ.Body:ಘಟನೆಯಲ್ಲಿ ಪ್ರಭಾವಿಗಳ ಕೈವಾಡವಿದೆ ಎಂದು ಕುಟುಂಬಸ್ಥರು ಶಂಕೆ ವ್ಯಕ್ತಪಡಿಸಿದ್ದರು. ಹಿನ್ನೆಲೆಯಲ್ಲಿ ರಾಜ್ಯ ಸರಕಾರ ತನಿಖೆಯನ್ನು ಸಿಬಿಐಗೆ ವಹಿಸಿತ್ತು. ಮೂರು ದಿನಗಳ ಹಿಂದೆ ಆರೋಪಿಗಳ ವಿರುದ್ದ ಸಿಬಿಐ ಎಫ್.ಐ.ಆರ್. ದಾಖಲಿಸಿಕೊಂಡಿತ್ತು.
ಈ ಹಿನ್ನೆಲೆಯಲ್ಲಿ ಸಿಬಿಐ ತ‌ಂಡ ವಿಚಾರಣೆ ನಡೆಸಿದೆ.

ವಿಸ್ಯೂಲ್ಸ್ ಬರುತ್ತವೆ...Conclusion:
Last Updated : Sep 28, 2019, 1:23 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.