ETV Bharat / state

ವೀರಶೈವ ಲಿಂಗಾಯತ ಅಭಿವೃದ್ಧಿ‌ ನಿಗಮ ಸ್ಥಾಪನೆಗೆ ದಿಂಗಾಲೇಶ್ವರ ಸ್ವಾಮೀಜಿ ಹರ್ಷ - CM Latest Order

ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲು ಅಗತ್ಯ ಕ್ರಮಗಳನ್ನು ಕೈಗೊಂಡು ತಕ್ಷಣದಿಂದಲೇ ಜಾರಿಗೆ ಬರುವಂತೆ ನಿಗಮ ಆರಂಭಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪನವರು ಆದೇಶ ನೀಡಿದ್ದು, ಬಾಳೇಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ ಸ್ವಾಗತ ಮಾಡಿದ್ದಾರೆ.

Balehosur Dingaleshwara Swami Reaction About CM Order
ಬಾಲೇಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ
author img

By

Published : Nov 17, 2020, 9:35 PM IST

ಗದಗ: ಲಿಂಗಾಯತ ಸಮುದಾಯದ ಹಿಂದುಳಿದವರ ಅಭಿವೃದ್ಧಿಗಾಗಿ ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಆದೇಶ ಹೊರಡಿಸಿದ್ದು, ಲಕ್ಷ್ಮೇಶ್ವರ ತಾಲೂಕಿನ ಬಾಳೇಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ ಸ್ವಾಗತ ಮಾಡಿದ್ದಾರೆ.

Balehosur Dingaleshwara Swami Reaction About CM Order
ಆದೇಶ ಪತ್ರ

ನಿಗಮ ಸ್ಥಾಪನೆ‌ಗೆ ಇಂದು ಆದೇಶ ಹೊರಡಿಸಿದ ಹಿನ್ನೆಲೆ ಹರ್ಷ ವ್ಯಕ್ತಪಡಿಸಿ ಮಾತನಾಡಿದ ಸ್ವಾಮೀಜಿ, ಮುಖ್ಯಮಂತ್ರಿಗಳಿಗೆ ಸಮಸ್ತ ವೀರಶೈವ ಲಿಂಗಾಯತ ಧರ್ಮದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಿದರು. ‌ಮುಖ್ಯಮಂತ್ರಿ ಯಡಿಯೂರಪ್ಪನವರು ನಮ್ಮ ದಶಕಗಳ ಕನಸನ್ನು ನನಸು ಮಾಡಿದ್ದಾರೆ. ಹಾಗಾಗಿ ಎಲ್ಲಾ ವೀರಶೈವ ಮಠಾಧೀಶರ ಪರವಾಗಿ ಅವರಿಗೆ ತುಂಬು ಹೃದಯದ ಧನ್ಯವಾದಗಳನ್ನು ಅರ್ಪಿಸುವುದಾಗಿ ತಿಳಿಸಿದ್ದಾರೆ.

ಬಾಳೇಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ

ಯಡಿಯೂರಪ್ಪನವರು ಎಲ್ಲಾ ಸಮಾಜಗಳನ್ನು ಸಮಾನ ದೃಷ್ಟಿಯಲ್ಲಿ ನೋಡುತ್ತಾರೆ. ಎಲ್ಲಾ ಸಮಾಜಗಳಿಗೂ ಸಮಾನ ಗೌರವ ಕೊಡುತ್ತಾರೆ. ನಿನ್ನೆ ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದರು. ಇಂದು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದ್ದಾರೆ. ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮುದಾಯದವರು ಬಹುಸಂಖ್ಯಾತರಾಗಿದ್ದರೂ ಬಹಳಷ್ಟು ಜನ ಹಿಂದುಳಿದಿದ್ದಾರೆ. ಅವರಿಗೆ ದೇವರು ಆಯುಸ್ಸು ಆರೋಗ್ಯ ಕರುಣಿಸಲಿ ಎಂದರು.

ಗದಗ: ಲಿಂಗಾಯತ ಸಮುದಾಯದ ಹಿಂದುಳಿದವರ ಅಭಿವೃದ್ಧಿಗಾಗಿ ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಆದೇಶ ಹೊರಡಿಸಿದ್ದು, ಲಕ್ಷ್ಮೇಶ್ವರ ತಾಲೂಕಿನ ಬಾಳೇಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ ಸ್ವಾಗತ ಮಾಡಿದ್ದಾರೆ.

Balehosur Dingaleshwara Swami Reaction About CM Order
ಆದೇಶ ಪತ್ರ

ನಿಗಮ ಸ್ಥಾಪನೆ‌ಗೆ ಇಂದು ಆದೇಶ ಹೊರಡಿಸಿದ ಹಿನ್ನೆಲೆ ಹರ್ಷ ವ್ಯಕ್ತಪಡಿಸಿ ಮಾತನಾಡಿದ ಸ್ವಾಮೀಜಿ, ಮುಖ್ಯಮಂತ್ರಿಗಳಿಗೆ ಸಮಸ್ತ ವೀರಶೈವ ಲಿಂಗಾಯತ ಧರ್ಮದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಿದರು. ‌ಮುಖ್ಯಮಂತ್ರಿ ಯಡಿಯೂರಪ್ಪನವರು ನಮ್ಮ ದಶಕಗಳ ಕನಸನ್ನು ನನಸು ಮಾಡಿದ್ದಾರೆ. ಹಾಗಾಗಿ ಎಲ್ಲಾ ವೀರಶೈವ ಮಠಾಧೀಶರ ಪರವಾಗಿ ಅವರಿಗೆ ತುಂಬು ಹೃದಯದ ಧನ್ಯವಾದಗಳನ್ನು ಅರ್ಪಿಸುವುದಾಗಿ ತಿಳಿಸಿದ್ದಾರೆ.

ಬಾಳೇಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ

ಯಡಿಯೂರಪ್ಪನವರು ಎಲ್ಲಾ ಸಮಾಜಗಳನ್ನು ಸಮಾನ ದೃಷ್ಟಿಯಲ್ಲಿ ನೋಡುತ್ತಾರೆ. ಎಲ್ಲಾ ಸಮಾಜಗಳಿಗೂ ಸಮಾನ ಗೌರವ ಕೊಡುತ್ತಾರೆ. ನಿನ್ನೆ ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದರು. ಇಂದು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದ್ದಾರೆ. ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮುದಾಯದವರು ಬಹುಸಂಖ್ಯಾತರಾಗಿದ್ದರೂ ಬಹಳಷ್ಟು ಜನ ಹಿಂದುಳಿದಿದ್ದಾರೆ. ಅವರಿಗೆ ದೇವರು ಆಯುಸ್ಸು ಆರೋಗ್ಯ ಕರುಣಿಸಲಿ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.