ETV Bharat / state

2A ಮೀಸಲಾತಿಗೆ ಆಗ್ರಹಿಸಿ ವಿಧಾನಸೌಧಕ್ಕೆ ಮುತ್ತಿಗೆ: ಬಸವಜಯ ಮೃತ್ಯುಂಜಯ ಸ್ವಾಮೀಜಿ

author img

By

Published : Jan 3, 2021, 7:49 PM IST

2A ಮೀಸಲಾತಿಗೆ ಆಗ್ರಹಿಸಿ ಜನವರಿ 14ರಂದು ಬೃಹತ್ ಪಾದಯಾತ್ರೆ ಕೈಗೊಂಡು ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ
ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ

ಗದಗ: 2021 ಪಂಚಮಸಾಲಿ ಸಂಘಟನೆಯ ನಿರ್ಣಾಯಕ ವರ್ಷ. 2A ಮೀಸಲಾತಿ ಪಡೆದೇ ತೀರುತ್ತೇವೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಸಮಾಜ ಸಂಘಟನೆ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, "ಮೀಸಲಾತಿಗಾಗಿ ಪಂಚಮಸಾಲಿ ನಡಿಗೆ ವಿಧಾನಸೌಧದೆಡೆಗೆ. ಒಬ್ಬ ಪಂಚಮಸಾಲಿ, ಪಂಚಲಕ್ಷ ಪಂಚಮಸಾಲಿಗೆ ಸಮ. ನಮ್ಮ ಪಾಲಿನ ಹಕ್ಕು ನಮಗೆ ಬೇಕು ಎಂಬ ಧ್ಯೇಯವಾಕ್ಯದೊಂದಿಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಜ.14 ಸಂಕ್ರಾಂತಿ ದಿನದಂದು ಬೃಹತ್ ಪಾದಯಾತ್ರೆ ಕೈಗೊಂಡು ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ" ಎಂದು ಗುಡುಗಿದರು.

ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ

ಪಂಚಮಸಾಲಿ ಸಮುದಾಯಕ್ಕೆ ಸಚಿವ ಸ್ಥಾನ ಹಾಗೂ ನಿಗಮ ಮಂಡಳಿ ಸ್ಥಾನ ನೀಡದ್ದಕ್ಕೆ ಸರ್ಕಾರದ ಮೇಲೆ ಅಸಮಾಧಾನವಿದೆ. ಅಸಮಾಧಾನ ಸರಿಯಾಗಬೇಕಾದರೆ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿದರು.

ಗದಗ: 2021 ಪಂಚಮಸಾಲಿ ಸಂಘಟನೆಯ ನಿರ್ಣಾಯಕ ವರ್ಷ. 2A ಮೀಸಲಾತಿ ಪಡೆದೇ ತೀರುತ್ತೇವೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಸಮಾಜ ಸಂಘಟನೆ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, "ಮೀಸಲಾತಿಗಾಗಿ ಪಂಚಮಸಾಲಿ ನಡಿಗೆ ವಿಧಾನಸೌಧದೆಡೆಗೆ. ಒಬ್ಬ ಪಂಚಮಸಾಲಿ, ಪಂಚಲಕ್ಷ ಪಂಚಮಸಾಲಿಗೆ ಸಮ. ನಮ್ಮ ಪಾಲಿನ ಹಕ್ಕು ನಮಗೆ ಬೇಕು ಎಂಬ ಧ್ಯೇಯವಾಕ್ಯದೊಂದಿಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಜ.14 ಸಂಕ್ರಾಂತಿ ದಿನದಂದು ಬೃಹತ್ ಪಾದಯಾತ್ರೆ ಕೈಗೊಂಡು ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ" ಎಂದು ಗುಡುಗಿದರು.

ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ

ಪಂಚಮಸಾಲಿ ಸಮುದಾಯಕ್ಕೆ ಸಚಿವ ಸ್ಥಾನ ಹಾಗೂ ನಿಗಮ ಮಂಡಳಿ ಸ್ಥಾನ ನೀಡದ್ದಕ್ಕೆ ಸರ್ಕಾರದ ಮೇಲೆ ಅಸಮಾಧಾನವಿದೆ. ಅಸಮಾಧಾನ ಸರಿಯಾಗಬೇಕಾದರೆ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.