ಗದಗ: ಶಾಲೆಯಿಂದ ಸೈಕಲ್ನಲ್ಲಿ ಬರುತ್ತಿದ್ದ ವಿದ್ಯಾರ್ಥಿಗೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಹಮ್ಮಿಗಿ ಗ್ರಾಮದ ಬಳಿ ಸಂಭವಿಸಿದೆ.
![Bus collided to school student](https://etvbharatimages.akamaized.net/etvbharat/prod-images/4004378_jaygfd.jpg)
ದೊಡ್ಡಬೀರಪ್ಪ ಒಡ್ಡಟ್ಟಿ (14) ಮೃತ ವಿದ್ಯಾರ್ಥಿ. ಶಾಲೆಯಿಂದ ವಿದ್ಯಾರ್ಥಿ ಸೈಕಲ್ ಮೇಲೆ ಮನೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಮುಂಡರಗಿಯಿಂದ ಹಮ್ಮಿಗಿ ಗ್ರಾಮಕ್ಕೆ ಕೆಎಸ್ಆರ್ಟಿಸಿ ಬಸ್ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಅಪಘಾತದ ಬಳಿಕ ಬಸ್ ಚಾಲಕ ಸ್ಥಳದಲ್ಲೇ ಬಸ್ ಬಿಟ್ಟು ಪರಾರಿಯಾಗಿದ್ದಾನೆ.
ಸ್ಥಳಕ್ಕೆ ಮುಂಡರಗಿ ಸಿಪಿಐ ಶ್ರೀನಿವಾಸ ಮೇಟಿ ಭೇಟಿ ನೀಡಿ ಪರಿಶೀಲಿಸಿದರು. ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.