ETV Bharat / state

ಐತಿಹಾಸಿಕ ಲಕ್ಕುಂಡಿ ಉತ್ಸವ-2023: ಫೆ.10ರಂದು ಮುಖ್ಯಮಂತ್ರಿಗಳಿಂದ ಚಾಲನೆ

author img

By

Published : Feb 7, 2023, 2:30 PM IST

Updated : Feb 7, 2023, 3:29 PM IST

ಫೆ.10 ರಿಂದ 12ರ ವರೆಗೆ ಐತಿಹಾಸಿಕ ಲಕ್ಕುಂಡಿ ಉತ್ಸವ- ಉತ್ಸವದ ಯಶಸ್ವಿಗಾಗಿ ಸಕಲ ಸಿದ್ಧತೆ- ದಾನಚಿಂತಾಮಣಿ ಅತ್ತಿಮಬ್ಬೆ ಪ್ರಧಾನ ವೇದಿಕೆಯಲ್ಲಿ ಉದ್ಘಾಟನಾ ಕಾರ್ಯಕ್ರಮ- ಸಿಎಂ ಬೊಮ್ಮಾಯಿ ಅವರಿಂದ ಚಾಲನೆ

lakkundi utsava 2023
ಐತಿಹಾಸಿಕ ಲಕ್ಕುಂಡಿ ಉತ್ಸವ-2023

ಗದಗ: ಫೆ.10 ರಂದು ಆರಂಭಗೊಳ್ಳಲಿರುವ ಐತಿಹಾಸಿಕ ಲಕ್ಕುಂಡಿ ಉತ್ಸವವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಲಿದ್ದಾರೆ. ಉತ್ಸವದ ಯಶಸ್ವಿಗಾಗಿ ಎಲ್ಲ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ ಎಂದು ಲೋಕೊಪಯೋಗಿ ಸಚಿವ ಸಿ.ಸಿ ಪಾಟೀಲ್​​ ಹೇಳಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸೋಮವಾರ ನಡೆದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಮುಖ್ಯಮಂತ್ರಿಗಳಿಂದ ಚಾಲನೆ: ಫೆ.10 ರಿಂದ 12ರ ವರೆಗೆ ಮೂರು ದಿನಗಳ ಕಾಲ ಲಕ್ಕುಂಡಿ ಉತ್ಸವ ಜರುಗಲಿದೆ. ಫೆ. 10ರಂದು ಲಕ್ಕುಂಡಿ ಸರ್ಕಾರಿ ಮಾದರಿ ಪ್ರೌಢ ಶಾಲೆಯಲ್ಲಿ ಮುಂಜಾನೆ 10 ಗಂಟೆಗೆ ರಾಜ್ಯದ ವಿವಿಧ ಜಿಲ್ಲೆ ಹಾಗೂ ಸ್ಥಳೀಯ ಕಲಾತಂಡಗಳಿಂದ 25ಕ್ಕೂ ಹೆಚ್ಚು ಕಲಾ ಪ್ರಕಾರಗಳ ಜಾನಪದ ಕಲಾ ವಾಹಿನಿಗಳ ಮೆರವಣಿಗೆ ಮೂಲಕ ಲಕ್ಕುಂಡಿ ಉತ್ಸವ ಪ್ರಾರಂಭವಾಗುವುದು. ಅದೇ ದಿನ ಸಾಯಂಕಾಲ 6 ಗಂಟೆಗೆ ದಾನಚಿಂತಾಮಣಿ ಅತ್ತಿಮಬ್ಬೆ ಪ್ರಧಾನ ವೇದಿಕೆಯಲ್ಲಿ ಉದ್ಘಾಟನಾ ಕಾರ್ಯಕ್ರಮ ಜರುಗಲಿದ್ದು, ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಲಿದ್ದಾರೆ ಎಂದರು.

lakkundi
ಲಕ್ಕುಂಡಿ

ವಿವಿಧ ಕ್ರೀಡಾ ಸ್ಪರ್ಧೆ ಆಯೋಜನೆ: ಉತ್ಸವದ ಅಂಗವಾಗಿ ಲಕ್ಕುಂಡಿಯ ಬಿ.ಹೆಚ್ ಪಾಟೀಲ ಪ್ರೌಢಶಾಲೆ ಆವರಣದಲ್ಲಿ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಸ್ಪರ್ಧೆಗಳಿಗೆ ಬೆಳಗ್ಗೆ 10 ಗಂಟೆಗೆ ಚಾಲನೆ ದೊರೆಯಲಿದೆ. ಕುಸ್ತಿ ಸ್ಪರ್ಧೆಗೆ ಲಕ್ಕುಂಡಿಯ ಅಂತಾರಾಷ್ಟ್ರೀಯ ಕುಸ್ತಿ ಪಟು ಕು. ಪ್ರೇಮಾ ಹುಚ್ಚಣ್ಣವರ, ಕಬಡ್ಡಿ ಸ್ಪರ್ಧೆಗೆ ಅರ್ಜುನ ಪ್ರಶಸ್ತಿ ಪುರಸ್ಕೃತ ಅಂತಾರಾಷ್ಟ್ರೀಯ ಕಬಡ್ಡಿ ಕ್ರೀಡಾಪಟು ಡಾ. ಸಿ.ಹೊನ್ನಪ್ಪಗೌಡ ಚಾಲನೆ ನೀಡುವರು. ಕ್ರೀಡಾ ಸ್ಪರ್ಧೆಗಳಲ್ಲಿ ಕುಸ್ತಿ, ಕಬಡ್ಡಿ, ಮಲ್ಲಕಂಬ, ಯೋಗ, ಚಿತ್ರಕಲಾ ಸ್ಪರ್ಧೆ, ಬೋಟಿಂಗ್, ಮಹಿಳೆಯರಿಗಾಗಿ ರಂಗೋಲಿ ಸ್ಪರ್ಧೆ, ನೀರಗ್ನಿ ಅಡಿಗೆ ಸ್ಪರ್ಧೆ ಏರ್ಪಡಿಸಲಾಗಿದೆ. ಸಿರಿಧಾನ್ಯಗಳ ಮಹತ್ವ ಸಾರುವ ಸದುದ್ದೇಶದಿಂದ ಪಾರಂಪರಿಕ ನಡಿಗೆಯನ್ನು ಹಮ್ಮಿಕೊಳ್ಳಲಾಗಿದೆ.

lakkundi
ಲಕ್ಕುಂಡಿ

ಲೇಸರ್ ಶೋ : ಮಧ್ಯಾಹ್ನ 3 ಗಂಟೆಯಿಂದ ಪ್ರಧಾನ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಮಂಗಳವಾದ್ಯ, ತತ್ವಪದ, ನೃತ್ಯ, ದೊಡ್ಡಾಟಪದ, ಹಿಂದೂಸ್ತಾನಿ ಸಮೂಹ ನೃತ್ಯ, ಡೊಳ್ಳಿನ ಪದ, ಜನಪದ ನೃತ್ಯ, ಶಾಸ್ತ್ರೀಯ ಸಂಗೀತ, ಮಲ್ಲಕಂಬ, ದೀಪ ನೃತ್ಯ, ಯಕ್ಷಗಾನ ಸೇರಿದಂತೆ ವಿವಿಧ ಕಲಾ ಪ್ರಕಾರಗಳು ಅನಾವರಣಗೊಳ್ಳಲಿದೆ. ಗದಗ ಜಿಲ್ಲೆಯ ಪ್ರಮುಖವಾಗಿ ಲಕ್ಕುಂಡಿಯ ಐತಿಹಾಸಿಕ ಹಾಗೂ ಪಾರಂಪರಿಕ ಹಿನ್ನೆಲೆ ಗಮನದಲ್ಲಿರಿಸಿಕೊಂಡು ವಿಶೇಷ 'ಲೇಸರ್ ಶೋ' ಪ್ರದರ್ಶನ ಹಮ್ಮಿಕೊಳ್ಳಲಾಗಿದೆ.

lakkundi
ಲಕ್ಕುಂಡಿ

ಕಿತ್ತೂರು ಚೆನ್ನಮ್ಮ ನಾಟಕ: ಬಿ.ಹೆಚ್.ಪಾಟೀಲ ಪ್ರೌಢ ಶಾಲೆಯ ಆವರಣದಲ್ಲಿ ಫೆ.10 ರಂದು ರಾತ್ರಿ 9 ಗಂಟೆಯಿಂದ ವೀರ ರಾಣಿ ಕಿತ್ತೂರು ಚೆನ್ನಮ್ಮ ನಾಟಕ ಪ್ರದರ್ಶನ ನಡೆಯಲಿದೆ. ಧಾರವಾಡದ ರಂಗಾಯಣ ತಂಡದಿಂದ ರಚಿಸಲಾದ ಈ ನಾಟಕ ರಾಣಿ ಚೆನ್ನಮ್ಮಳ ಸಾಹಸ, ಯುದ್ಧ ಕಲೆ ಹಾಗೂ ಸ್ವಾತಂತ್ರ್ಯ ಹೋರಾಟದ ವಿವಿಧ ಹಂತಗಳನ್ನು ತೆರೆದಿಡಲಿದೆ. ಬ್ರಿಟಿಷರ ಸೊಕ್ಕಡಗಿಸಿ ಸ್ವಾತಂತ್ರ್ಯದ ಕಹಳೆ ಊದುವಲ್ಲಿ ಚೆನ್ನಮ್ಮನ ಸಾಹಸ ಗಾಥೆ ಬಿಂಬಿಸುವ ನಾಟಕ ಪ್ರದರ್ಶನದಲ್ಲಿ 250ಕ್ಕೂ ಹೆಚ್ಚು ಕಲಾವಿದರು ಸಜೀವ ಆನೆ, ಕುದುರೆ, ಒಂಟೆಗಳೊಂದಿಗೆ ಜನಮನ ರಂಜಿಸಲಿದೆ.

lakkundi
ಲಕ್ಕುಂಡಿ

ಗೋಷ್ಠಿಗಳು: ಐತಿಹಾಸಿಕ ಲಕ್ಕುಂಡಿ ಉತ್ಸವದಲ್ಲಿ ಪ್ರಮುಖವಾಗಿ ನಾಲ್ಕು ಗೋಷ್ಠಿಗಳನ್ನು ಹಮ್ಮಿಕೊಳ್ಳಲಾಗಿದೆ. ಫೆ.11ರಂದು ಬೆಳಗ್ಗೆ 10 ಗಂಟೆಗೆ ಲಕ್ಕುಂಡಿಯ ಇತಿಹಾಸ ಕುರಿತು ವಿಚಾರಗೋಷ್ಠಿ ಜರುಗಲಿದೆ. ಹಿರಿಯ ಪತ್ರಕರ್ತ ಮಲ್ಲಿಕಾರ್ಜುನ ಸಿದ್ಧಣ್ಣವರ ಗೋಷ್ಠಿ ಉದ್ಘಾಟಿಸಿ ಆಶಯ ನುಡಿಗಳನ್ನಾಡಲಿದ್ದಾರೆ. ಡಾ. ಎಸ್ ವೈ.ಸೋಮಶೇಖರ, ಡಾ.ಅಪ್ಪಣ್ಣ ಹಂಜೆ ವಿಷಯ ಮಂಡಿಸಲಿದ್ದಾರೆ. ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ.ವಿ ಬಡಿಗೇರ ಕವಿಗೋಷ್ಠಿಯ ಆಶಯ ನುಡಿಗಳನ್ನಾಡುವರು.

15ಕ್ಕೂ ಅಧಿಕ ಕವಿಗಳು ಭಾಗಿ: ಹಿರಿಯ ವಿಮರ್ಶಕ ಶ್ಯಾಮಸುಂದರ ಬಿದರಕುಂದಿ ಅಧ್ಯಕ್ಷತೆ ವಹಿಸುವ ಈ ಗೋಷ್ಠಿಯಲ್ಲಿ ಜಿಲ್ಲೆಯ 15ಕ್ಕೂ ಅಧಿಕ ಕವಿಗಳು ಗೋಷ್ಠಿಯಲ್ಲಿ ಪಾಲ್ಗೊಳ್ಳುವರು. ಫೆ.12ರಂದು ಬೆಳಗ್ಗೆ.10 ಗಂಟೆಗೆ ಕೃಷಿಗೋಷ್ಠಿ ಜರುಗಲಿದ್ದು, ಬೆಂಗಳೂರು ಕೃಷಿ ವಿಶ್ವ ವಿದ್ಯಾಲಯದ ಅಶೋಕ ಆಲೂರ ಆಶಯ ನುಡಿಗಳನ್ನಾಡುವರು. ಕೃಷಿ ಪಂಡಿತ ಪ್ರಶಸ್ತಿ ಪುರಸ್ಕೃತ ಈಶ್ವರಪ್ಪ ಹಂಚಿನಾಳ ಅಧ್ಯಕ್ಷತೆ ವಹಿಸುವರು. ಕೃಷಿ ಸಾಧಕಿ ಕವಿತಾ ಮಿಶ್ರಾ, ಪ್ರಗತಿ ಪರ ಕೃಷಿಕ ನಾಗರಾಜ ಕುಲಕರ್ಣಿ ವಿಷಯ ಮಂಡಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಖ್ಯಾತ ಹೃದ್ರೋಗ ತಜ್ಞೆ ವಿಜಯಲಕ್ಷ್ಮೀ ಬಾಳೇಕುಂದ್ರಿ ಆಶಯ ನುಡಿಗಳನ್ನಾಡುವರು. ಲಕ್ಕುಂಡಿ ಗ್ರಾ.ಪಂ ಅಧ್ಯಕ್ಷೆ ಲಲಿತಾ ಅಧ್ಯಕ್ಷತೆ ವಹಿಸುವರು. ಸಂಶೋಧಕಿ ಡಾ. ಸಂಧ್ಯಾ. ವಿ ಹಾಗೂ ವಾಣಿಜ್ಯೋದ್ಯಮ ಸಂಸ್ಥೆಯ ಮಹಿಳಾ ಘಟಕದ ಅಧ್ಯಕ್ಷೆ ಜಯಶ್ರೀ ಪಾಟೀಲ ಉಪನ್ಯಾಸ ನೀಡುವರು. ನಗರಸಭೆ ಅಧ್ಯಕ್ಷೆ ಉಷಾ ದಾಸರ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

lakkundi
ಲಕ್ಕುಂಡಿ

ಸಾಂಸ್ಕೃತಿಕ ಕಾರ್ಯ ಕ್ರಮಗಳು: ಫೆ.11 ರಂದು ರಾತ್ರಿ 10 ಗಂಟೆಗೆ ಸೋಜಿಗದ ಸೂಜಿ ಮಲ್ಲಿಗೆ, ಕಾಂತಾರದ ಶೃಂಗಾರ ಸಿರಿಯೇ ಹಾಡಿಗೆ ಧ್ವನಿ ನೀಡಿದ ಖ್ಯಾತ ಗಾಯಕಿ ಕು.ಅನನ್ಯ ಭಟ್ ಮತ್ತು ತಂಡದವರಿಂದ ರಸಮಂಜರಿ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ನಲ್ಲಿ ಮೆಚ್ಚುಗೆಗೆ ಪಾತ್ರವಾದ ಗದುಗಿನ ಕಾ.ವೆಂ.ಶ್ರೀ ತಂಡದಿಂದ ಯಕ್ಷಗಾನ, ಭಗವದ್ಗೀತೆ ರೂಪಕ ಮೂಡಿ ಬರಲಿದೆ. ಅತ್ತಿಮಬ್ಬೆ ನಾಟಕ, ಸರಿಗಮಪ ತಂಡದ ಜ್ಞಾನೇಶ, ಮೆಹಬೂಬ ಸಾಬ ಅವರಿಂದ ಜುಗಲ್ ಬಂದಿ, ಮಿಮಿಕ್ರಿ ಗೋಪಿ ಹಾಗೂ ಕಾರ್ತಿಕ ಪತ್ತಾರ ಅವರಿಂದ ಹಾಸ್ಯ ಕಾರ್ಯಕ್ರಮ, ಕ್ಲಾಸಿಕಲ್ ಇವೆಂಟ್, ದೀಪ ನೃತ್ಯ, ಜನಮನ ಸೆಳೆಯಲಿವೆ.

ರಸಮಂಜರಿ ಕಾರ್ಯಕ್ರಮ: ಫೆ.12 ರಂದು ಸಂಜೆ 4 ರಿಂದ ವಿವಿಧ ಕಲಾ ಪ್ರಕಾರಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಹಲವು ಕನ್ನಡ ಪ್ರಸಿದ್ಧ ಗಾಯನಗಳ ಮುಖಾಂತರ ಖ್ಯಾತಿಗೊಂಡ ಮುಂಬೈನ್ ಪ್ರಖ್ಯಾತ ಗಾಯಕ ಕುನಾಲ್ ಗಾಂಜಾವಾಲ ಅವರಿಂದ ಅದ್ಭುತ ರಸಮಂಜರಿ ಕಾರ್ಯಕ್ರಮ ಮೂಡಿಬರಲಿದೆ.

ಫಲಪುಷ್ಪ ಪ್ರದರ್ಶನ: ಉಮೇಶ ಕಿನ್ನಾಳ ಹಾಗೂ ತಂಡದಿಂದ ಹಾಸ್ಯ ಕಾರ್ಯಕ್ರಮ, ಪದ್ಮಶ್ರೀ ವೆಂಕಟೇಶ ಕುಮಾರ್ ಅವರಿಂದ ಹಿಂದೂಸ್ತಾನಿ ಸಂಗೀತ, ಕನ್ನಡದ ಪುಟಾಣಿ ಕೋಗಿಲೆ ಮಹನ್ಯಾ ಪಾಟೀಲ ಅವರಿಂದ ರಸಮಂಜರಿ ಕಾರ್ಯಕ್ರಮ, ಪ್ರಭಾತ ಕಲಾತಂಡದಿಂದ ನೃತ್ಯ ರೂಪಕ ನೆರೆದ ಜನರನ್ನು ಮನರಂಜಿಸಲಿವೆ. ತೋಟಗಾರಿಕೆ ಇಲಾಖೆಯಿಂದ ಫಲಪುಷ್ಪ ಪ್ರದರ್ಶನ ಸೇರಿದಂತೆ ವಿವಿಧ ಇಲಾಖೆಗಳ ಮಳಿಗೆಗಳನ್ನು ತೆರೆಯಲಾಗುವುದು. ಕೃಷಿ, ಮಹಿಳಾ, ಕೈಮಗ್ಗ, ನೈರ್ಮಲ್ಯ ಇಲಾಖೆಗಳ ಮಳಿಗೆಗಳು ಕಾರ್ಯ ನಿರ್ವಹಿಸಲಿವೆ.

ಸಮಾರೋಪ: ಫೆ.12 ರ ಸಂಜೆ 5.30 ಗಂಟೆಗೆ ಸಮಾರೋಪ ಸಮಾರಂಭ ಜರುಗಲಿದೆ. ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಉಪಸ್ಥಿತರಿರುವರು. ಸಚಿವರುಗಳಾದ ಬಿ.ಸಿ ಪಾಟೀಲ, ಗೋವಿಂದ ಕಾರಜೋಳ, ಬಿ.ಶ್ರೀರಾಮುಲು, ಬೈರತಿ ಬಸವರಾಜ ಗೌರವ ಉಪಸ್ಥಿತಿ ವಹಿಸುವರು. ಪತ್ರಕರ್ತ ವಿಶ್ವೇಶ್ವರ ಭಟ್ ಅವರು ಸಮಾರೋಪ ನುಡಿಗಳನ್ನಾಡುವರು. ಮುಖ್ಯ ಅತಿಥಿಗಳಾಗಿ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು ಹಾಗೂ ಪ್ರಮುಖ ಅಧಿಕಾರಿಗಳು ಹಾಜರಿರುವರು.

ಉಚಿತ ಸಾರಿಗೆ ವ್ಯವಸ್ಥೆ: ಗದಗ ನಗರದಿಂದ ಲಕ್ಕುಂಡಿ ಉತ್ಸವಕ್ಕೆ ಆಗಮಿಸುವ ಸಾರ್ವಜನಿಕರೆಲ್ಲರಿಗೂ ಉಚಿತ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಕೆಎಸ್​​ಆರ್​​ಟಿಸಿಯ 10 ಬಸ್​​ಗಳು ಗದಗ ಹೊಸ ಹಾಗೂ ಹಳೆಯ ಬಸ್​​ ನಿಲ್ದಾಣಗಳಿಂದ ನಿರಂತರವಾಗಿ ಸಂಚರಿಸಲಿವೆ. ಉತ್ಸವಕ್ಕೆ ಆಗಮಿಸುವ ಕಲಾವಿದರು, ಅತಿಥಿಗಳು ಹಾಗೂ ಸಾರ್ವಜನಿಕರೆಲ್ಲರಿಗೂ ಬೆಳಗಿನ ಉಪಹಾರ, ಮಧ್ಯಾಹ್ನ ಹಾಗೂ ರಾತ್ರಿ ಊಟದ ವ್ಯವಸ್ಥೆಯನ್ನು ಮಾಡಲಾಗಿದ್ದು, ಸಾರ್ವಜನಿಕರು ಉತ್ಸವದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಲು ಸಚಿವ ಸಿ.ಸಿ ಪಾಟೀಲ್​​ ಕೋರಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಜಿಲ್ಲಾ ಪಂಚಾಯತ ಸಿಇಓ ಡಾ.ಸುಶೀಲಾ.ಬಿ, ಜಿಲ್ಲಾ ಪೋಲಿಸ್​ ವರಿಷ್ಠಾಧಿಕಾರಿ ಬಿ.ಎಸ್ ನೇಮಗೌಡ, ಉಪ ಅರಣ್ಯ ಸಂರಕ್ಷಣಾಧಿಕಾರಿ ದೀಪಿಕಾ ಬಾಜಪೇಯಿ, ಅಪರ ಜಿಲ್ಲಾಧಿಕಾರಿ ಮಾರುತಿ ಎಂ.ಪಿ, ಉಪವಿಭಾಗಾಧಿಕಾರಿ ಅನ್ನಪೂರ್ಣ, ಸ್ಥಳೀಯ ಜನಪ್ರತಿನಿಧಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

ಇದನ್ನೂ ಓದಿ: ಐತಿಹಾಸಿಕ ಲಕ್ಕುಂಡಿ ಉತ್ಸವಕ್ಕೆ ಭರದ ಸಿದ್ಧತೆ: ಕಲಾ ಸೊಬಗು ಸವಿಯಲು ಈ ಬಾರಿ ಸುವರ್ಣಾವಕಾಶ

ಗದಗ: ಫೆ.10 ರಂದು ಆರಂಭಗೊಳ್ಳಲಿರುವ ಐತಿಹಾಸಿಕ ಲಕ್ಕುಂಡಿ ಉತ್ಸವವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಲಿದ್ದಾರೆ. ಉತ್ಸವದ ಯಶಸ್ವಿಗಾಗಿ ಎಲ್ಲ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ ಎಂದು ಲೋಕೊಪಯೋಗಿ ಸಚಿವ ಸಿ.ಸಿ ಪಾಟೀಲ್​​ ಹೇಳಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸೋಮವಾರ ನಡೆದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಮುಖ್ಯಮಂತ್ರಿಗಳಿಂದ ಚಾಲನೆ: ಫೆ.10 ರಿಂದ 12ರ ವರೆಗೆ ಮೂರು ದಿನಗಳ ಕಾಲ ಲಕ್ಕುಂಡಿ ಉತ್ಸವ ಜರುಗಲಿದೆ. ಫೆ. 10ರಂದು ಲಕ್ಕುಂಡಿ ಸರ್ಕಾರಿ ಮಾದರಿ ಪ್ರೌಢ ಶಾಲೆಯಲ್ಲಿ ಮುಂಜಾನೆ 10 ಗಂಟೆಗೆ ರಾಜ್ಯದ ವಿವಿಧ ಜಿಲ್ಲೆ ಹಾಗೂ ಸ್ಥಳೀಯ ಕಲಾತಂಡಗಳಿಂದ 25ಕ್ಕೂ ಹೆಚ್ಚು ಕಲಾ ಪ್ರಕಾರಗಳ ಜಾನಪದ ಕಲಾ ವಾಹಿನಿಗಳ ಮೆರವಣಿಗೆ ಮೂಲಕ ಲಕ್ಕುಂಡಿ ಉತ್ಸವ ಪ್ರಾರಂಭವಾಗುವುದು. ಅದೇ ದಿನ ಸಾಯಂಕಾಲ 6 ಗಂಟೆಗೆ ದಾನಚಿಂತಾಮಣಿ ಅತ್ತಿಮಬ್ಬೆ ಪ್ರಧಾನ ವೇದಿಕೆಯಲ್ಲಿ ಉದ್ಘಾಟನಾ ಕಾರ್ಯಕ್ರಮ ಜರುಗಲಿದ್ದು, ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಲಿದ್ದಾರೆ ಎಂದರು.

lakkundi
ಲಕ್ಕುಂಡಿ

ವಿವಿಧ ಕ್ರೀಡಾ ಸ್ಪರ್ಧೆ ಆಯೋಜನೆ: ಉತ್ಸವದ ಅಂಗವಾಗಿ ಲಕ್ಕುಂಡಿಯ ಬಿ.ಹೆಚ್ ಪಾಟೀಲ ಪ್ರೌಢಶಾಲೆ ಆವರಣದಲ್ಲಿ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಸ್ಪರ್ಧೆಗಳಿಗೆ ಬೆಳಗ್ಗೆ 10 ಗಂಟೆಗೆ ಚಾಲನೆ ದೊರೆಯಲಿದೆ. ಕುಸ್ತಿ ಸ್ಪರ್ಧೆಗೆ ಲಕ್ಕುಂಡಿಯ ಅಂತಾರಾಷ್ಟ್ರೀಯ ಕುಸ್ತಿ ಪಟು ಕು. ಪ್ರೇಮಾ ಹುಚ್ಚಣ್ಣವರ, ಕಬಡ್ಡಿ ಸ್ಪರ್ಧೆಗೆ ಅರ್ಜುನ ಪ್ರಶಸ್ತಿ ಪುರಸ್ಕೃತ ಅಂತಾರಾಷ್ಟ್ರೀಯ ಕಬಡ್ಡಿ ಕ್ರೀಡಾಪಟು ಡಾ. ಸಿ.ಹೊನ್ನಪ್ಪಗೌಡ ಚಾಲನೆ ನೀಡುವರು. ಕ್ರೀಡಾ ಸ್ಪರ್ಧೆಗಳಲ್ಲಿ ಕುಸ್ತಿ, ಕಬಡ್ಡಿ, ಮಲ್ಲಕಂಬ, ಯೋಗ, ಚಿತ್ರಕಲಾ ಸ್ಪರ್ಧೆ, ಬೋಟಿಂಗ್, ಮಹಿಳೆಯರಿಗಾಗಿ ರಂಗೋಲಿ ಸ್ಪರ್ಧೆ, ನೀರಗ್ನಿ ಅಡಿಗೆ ಸ್ಪರ್ಧೆ ಏರ್ಪಡಿಸಲಾಗಿದೆ. ಸಿರಿಧಾನ್ಯಗಳ ಮಹತ್ವ ಸಾರುವ ಸದುದ್ದೇಶದಿಂದ ಪಾರಂಪರಿಕ ನಡಿಗೆಯನ್ನು ಹಮ್ಮಿಕೊಳ್ಳಲಾಗಿದೆ.

lakkundi
ಲಕ್ಕುಂಡಿ

ಲೇಸರ್ ಶೋ : ಮಧ್ಯಾಹ್ನ 3 ಗಂಟೆಯಿಂದ ಪ್ರಧಾನ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಮಂಗಳವಾದ್ಯ, ತತ್ವಪದ, ನೃತ್ಯ, ದೊಡ್ಡಾಟಪದ, ಹಿಂದೂಸ್ತಾನಿ ಸಮೂಹ ನೃತ್ಯ, ಡೊಳ್ಳಿನ ಪದ, ಜನಪದ ನೃತ್ಯ, ಶಾಸ್ತ್ರೀಯ ಸಂಗೀತ, ಮಲ್ಲಕಂಬ, ದೀಪ ನೃತ್ಯ, ಯಕ್ಷಗಾನ ಸೇರಿದಂತೆ ವಿವಿಧ ಕಲಾ ಪ್ರಕಾರಗಳು ಅನಾವರಣಗೊಳ್ಳಲಿದೆ. ಗದಗ ಜಿಲ್ಲೆಯ ಪ್ರಮುಖವಾಗಿ ಲಕ್ಕುಂಡಿಯ ಐತಿಹಾಸಿಕ ಹಾಗೂ ಪಾರಂಪರಿಕ ಹಿನ್ನೆಲೆ ಗಮನದಲ್ಲಿರಿಸಿಕೊಂಡು ವಿಶೇಷ 'ಲೇಸರ್ ಶೋ' ಪ್ರದರ್ಶನ ಹಮ್ಮಿಕೊಳ್ಳಲಾಗಿದೆ.

lakkundi
ಲಕ್ಕುಂಡಿ

ಕಿತ್ತೂರು ಚೆನ್ನಮ್ಮ ನಾಟಕ: ಬಿ.ಹೆಚ್.ಪಾಟೀಲ ಪ್ರೌಢ ಶಾಲೆಯ ಆವರಣದಲ್ಲಿ ಫೆ.10 ರಂದು ರಾತ್ರಿ 9 ಗಂಟೆಯಿಂದ ವೀರ ರಾಣಿ ಕಿತ್ತೂರು ಚೆನ್ನಮ್ಮ ನಾಟಕ ಪ್ರದರ್ಶನ ನಡೆಯಲಿದೆ. ಧಾರವಾಡದ ರಂಗಾಯಣ ತಂಡದಿಂದ ರಚಿಸಲಾದ ಈ ನಾಟಕ ರಾಣಿ ಚೆನ್ನಮ್ಮಳ ಸಾಹಸ, ಯುದ್ಧ ಕಲೆ ಹಾಗೂ ಸ್ವಾತಂತ್ರ್ಯ ಹೋರಾಟದ ವಿವಿಧ ಹಂತಗಳನ್ನು ತೆರೆದಿಡಲಿದೆ. ಬ್ರಿಟಿಷರ ಸೊಕ್ಕಡಗಿಸಿ ಸ್ವಾತಂತ್ರ್ಯದ ಕಹಳೆ ಊದುವಲ್ಲಿ ಚೆನ್ನಮ್ಮನ ಸಾಹಸ ಗಾಥೆ ಬಿಂಬಿಸುವ ನಾಟಕ ಪ್ರದರ್ಶನದಲ್ಲಿ 250ಕ್ಕೂ ಹೆಚ್ಚು ಕಲಾವಿದರು ಸಜೀವ ಆನೆ, ಕುದುರೆ, ಒಂಟೆಗಳೊಂದಿಗೆ ಜನಮನ ರಂಜಿಸಲಿದೆ.

lakkundi
ಲಕ್ಕುಂಡಿ

ಗೋಷ್ಠಿಗಳು: ಐತಿಹಾಸಿಕ ಲಕ್ಕುಂಡಿ ಉತ್ಸವದಲ್ಲಿ ಪ್ರಮುಖವಾಗಿ ನಾಲ್ಕು ಗೋಷ್ಠಿಗಳನ್ನು ಹಮ್ಮಿಕೊಳ್ಳಲಾಗಿದೆ. ಫೆ.11ರಂದು ಬೆಳಗ್ಗೆ 10 ಗಂಟೆಗೆ ಲಕ್ಕುಂಡಿಯ ಇತಿಹಾಸ ಕುರಿತು ವಿಚಾರಗೋಷ್ಠಿ ಜರುಗಲಿದೆ. ಹಿರಿಯ ಪತ್ರಕರ್ತ ಮಲ್ಲಿಕಾರ್ಜುನ ಸಿದ್ಧಣ್ಣವರ ಗೋಷ್ಠಿ ಉದ್ಘಾಟಿಸಿ ಆಶಯ ನುಡಿಗಳನ್ನಾಡಲಿದ್ದಾರೆ. ಡಾ. ಎಸ್ ವೈ.ಸೋಮಶೇಖರ, ಡಾ.ಅಪ್ಪಣ್ಣ ಹಂಜೆ ವಿಷಯ ಮಂಡಿಸಲಿದ್ದಾರೆ. ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ.ವಿ ಬಡಿಗೇರ ಕವಿಗೋಷ್ಠಿಯ ಆಶಯ ನುಡಿಗಳನ್ನಾಡುವರು.

15ಕ್ಕೂ ಅಧಿಕ ಕವಿಗಳು ಭಾಗಿ: ಹಿರಿಯ ವಿಮರ್ಶಕ ಶ್ಯಾಮಸುಂದರ ಬಿದರಕುಂದಿ ಅಧ್ಯಕ್ಷತೆ ವಹಿಸುವ ಈ ಗೋಷ್ಠಿಯಲ್ಲಿ ಜಿಲ್ಲೆಯ 15ಕ್ಕೂ ಅಧಿಕ ಕವಿಗಳು ಗೋಷ್ಠಿಯಲ್ಲಿ ಪಾಲ್ಗೊಳ್ಳುವರು. ಫೆ.12ರಂದು ಬೆಳಗ್ಗೆ.10 ಗಂಟೆಗೆ ಕೃಷಿಗೋಷ್ಠಿ ಜರುಗಲಿದ್ದು, ಬೆಂಗಳೂರು ಕೃಷಿ ವಿಶ್ವ ವಿದ್ಯಾಲಯದ ಅಶೋಕ ಆಲೂರ ಆಶಯ ನುಡಿಗಳನ್ನಾಡುವರು. ಕೃಷಿ ಪಂಡಿತ ಪ್ರಶಸ್ತಿ ಪುರಸ್ಕೃತ ಈಶ್ವರಪ್ಪ ಹಂಚಿನಾಳ ಅಧ್ಯಕ್ಷತೆ ವಹಿಸುವರು. ಕೃಷಿ ಸಾಧಕಿ ಕವಿತಾ ಮಿಶ್ರಾ, ಪ್ರಗತಿ ಪರ ಕೃಷಿಕ ನಾಗರಾಜ ಕುಲಕರ್ಣಿ ವಿಷಯ ಮಂಡಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಖ್ಯಾತ ಹೃದ್ರೋಗ ತಜ್ಞೆ ವಿಜಯಲಕ್ಷ್ಮೀ ಬಾಳೇಕುಂದ್ರಿ ಆಶಯ ನುಡಿಗಳನ್ನಾಡುವರು. ಲಕ್ಕುಂಡಿ ಗ್ರಾ.ಪಂ ಅಧ್ಯಕ್ಷೆ ಲಲಿತಾ ಅಧ್ಯಕ್ಷತೆ ವಹಿಸುವರು. ಸಂಶೋಧಕಿ ಡಾ. ಸಂಧ್ಯಾ. ವಿ ಹಾಗೂ ವಾಣಿಜ್ಯೋದ್ಯಮ ಸಂಸ್ಥೆಯ ಮಹಿಳಾ ಘಟಕದ ಅಧ್ಯಕ್ಷೆ ಜಯಶ್ರೀ ಪಾಟೀಲ ಉಪನ್ಯಾಸ ನೀಡುವರು. ನಗರಸಭೆ ಅಧ್ಯಕ್ಷೆ ಉಷಾ ದಾಸರ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

lakkundi
ಲಕ್ಕುಂಡಿ

ಸಾಂಸ್ಕೃತಿಕ ಕಾರ್ಯ ಕ್ರಮಗಳು: ಫೆ.11 ರಂದು ರಾತ್ರಿ 10 ಗಂಟೆಗೆ ಸೋಜಿಗದ ಸೂಜಿ ಮಲ್ಲಿಗೆ, ಕಾಂತಾರದ ಶೃಂಗಾರ ಸಿರಿಯೇ ಹಾಡಿಗೆ ಧ್ವನಿ ನೀಡಿದ ಖ್ಯಾತ ಗಾಯಕಿ ಕು.ಅನನ್ಯ ಭಟ್ ಮತ್ತು ತಂಡದವರಿಂದ ರಸಮಂಜರಿ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ನಲ್ಲಿ ಮೆಚ್ಚುಗೆಗೆ ಪಾತ್ರವಾದ ಗದುಗಿನ ಕಾ.ವೆಂ.ಶ್ರೀ ತಂಡದಿಂದ ಯಕ್ಷಗಾನ, ಭಗವದ್ಗೀತೆ ರೂಪಕ ಮೂಡಿ ಬರಲಿದೆ. ಅತ್ತಿಮಬ್ಬೆ ನಾಟಕ, ಸರಿಗಮಪ ತಂಡದ ಜ್ಞಾನೇಶ, ಮೆಹಬೂಬ ಸಾಬ ಅವರಿಂದ ಜುಗಲ್ ಬಂದಿ, ಮಿಮಿಕ್ರಿ ಗೋಪಿ ಹಾಗೂ ಕಾರ್ತಿಕ ಪತ್ತಾರ ಅವರಿಂದ ಹಾಸ್ಯ ಕಾರ್ಯಕ್ರಮ, ಕ್ಲಾಸಿಕಲ್ ಇವೆಂಟ್, ದೀಪ ನೃತ್ಯ, ಜನಮನ ಸೆಳೆಯಲಿವೆ.

ರಸಮಂಜರಿ ಕಾರ್ಯಕ್ರಮ: ಫೆ.12 ರಂದು ಸಂಜೆ 4 ರಿಂದ ವಿವಿಧ ಕಲಾ ಪ್ರಕಾರಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಹಲವು ಕನ್ನಡ ಪ್ರಸಿದ್ಧ ಗಾಯನಗಳ ಮುಖಾಂತರ ಖ್ಯಾತಿಗೊಂಡ ಮುಂಬೈನ್ ಪ್ರಖ್ಯಾತ ಗಾಯಕ ಕುನಾಲ್ ಗಾಂಜಾವಾಲ ಅವರಿಂದ ಅದ್ಭುತ ರಸಮಂಜರಿ ಕಾರ್ಯಕ್ರಮ ಮೂಡಿಬರಲಿದೆ.

ಫಲಪುಷ್ಪ ಪ್ರದರ್ಶನ: ಉಮೇಶ ಕಿನ್ನಾಳ ಹಾಗೂ ತಂಡದಿಂದ ಹಾಸ್ಯ ಕಾರ್ಯಕ್ರಮ, ಪದ್ಮಶ್ರೀ ವೆಂಕಟೇಶ ಕುಮಾರ್ ಅವರಿಂದ ಹಿಂದೂಸ್ತಾನಿ ಸಂಗೀತ, ಕನ್ನಡದ ಪುಟಾಣಿ ಕೋಗಿಲೆ ಮಹನ್ಯಾ ಪಾಟೀಲ ಅವರಿಂದ ರಸಮಂಜರಿ ಕಾರ್ಯಕ್ರಮ, ಪ್ರಭಾತ ಕಲಾತಂಡದಿಂದ ನೃತ್ಯ ರೂಪಕ ನೆರೆದ ಜನರನ್ನು ಮನರಂಜಿಸಲಿವೆ. ತೋಟಗಾರಿಕೆ ಇಲಾಖೆಯಿಂದ ಫಲಪುಷ್ಪ ಪ್ರದರ್ಶನ ಸೇರಿದಂತೆ ವಿವಿಧ ಇಲಾಖೆಗಳ ಮಳಿಗೆಗಳನ್ನು ತೆರೆಯಲಾಗುವುದು. ಕೃಷಿ, ಮಹಿಳಾ, ಕೈಮಗ್ಗ, ನೈರ್ಮಲ್ಯ ಇಲಾಖೆಗಳ ಮಳಿಗೆಗಳು ಕಾರ್ಯ ನಿರ್ವಹಿಸಲಿವೆ.

ಸಮಾರೋಪ: ಫೆ.12 ರ ಸಂಜೆ 5.30 ಗಂಟೆಗೆ ಸಮಾರೋಪ ಸಮಾರಂಭ ಜರುಗಲಿದೆ. ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಉಪಸ್ಥಿತರಿರುವರು. ಸಚಿವರುಗಳಾದ ಬಿ.ಸಿ ಪಾಟೀಲ, ಗೋವಿಂದ ಕಾರಜೋಳ, ಬಿ.ಶ್ರೀರಾಮುಲು, ಬೈರತಿ ಬಸವರಾಜ ಗೌರವ ಉಪಸ್ಥಿತಿ ವಹಿಸುವರು. ಪತ್ರಕರ್ತ ವಿಶ್ವೇಶ್ವರ ಭಟ್ ಅವರು ಸಮಾರೋಪ ನುಡಿಗಳನ್ನಾಡುವರು. ಮುಖ್ಯ ಅತಿಥಿಗಳಾಗಿ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು ಹಾಗೂ ಪ್ರಮುಖ ಅಧಿಕಾರಿಗಳು ಹಾಜರಿರುವರು.

ಉಚಿತ ಸಾರಿಗೆ ವ್ಯವಸ್ಥೆ: ಗದಗ ನಗರದಿಂದ ಲಕ್ಕುಂಡಿ ಉತ್ಸವಕ್ಕೆ ಆಗಮಿಸುವ ಸಾರ್ವಜನಿಕರೆಲ್ಲರಿಗೂ ಉಚಿತ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಕೆಎಸ್​​ಆರ್​​ಟಿಸಿಯ 10 ಬಸ್​​ಗಳು ಗದಗ ಹೊಸ ಹಾಗೂ ಹಳೆಯ ಬಸ್​​ ನಿಲ್ದಾಣಗಳಿಂದ ನಿರಂತರವಾಗಿ ಸಂಚರಿಸಲಿವೆ. ಉತ್ಸವಕ್ಕೆ ಆಗಮಿಸುವ ಕಲಾವಿದರು, ಅತಿಥಿಗಳು ಹಾಗೂ ಸಾರ್ವಜನಿಕರೆಲ್ಲರಿಗೂ ಬೆಳಗಿನ ಉಪಹಾರ, ಮಧ್ಯಾಹ್ನ ಹಾಗೂ ರಾತ್ರಿ ಊಟದ ವ್ಯವಸ್ಥೆಯನ್ನು ಮಾಡಲಾಗಿದ್ದು, ಸಾರ್ವಜನಿಕರು ಉತ್ಸವದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಲು ಸಚಿವ ಸಿ.ಸಿ ಪಾಟೀಲ್​​ ಕೋರಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಜಿಲ್ಲಾ ಪಂಚಾಯತ ಸಿಇಓ ಡಾ.ಸುಶೀಲಾ.ಬಿ, ಜಿಲ್ಲಾ ಪೋಲಿಸ್​ ವರಿಷ್ಠಾಧಿಕಾರಿ ಬಿ.ಎಸ್ ನೇಮಗೌಡ, ಉಪ ಅರಣ್ಯ ಸಂರಕ್ಷಣಾಧಿಕಾರಿ ದೀಪಿಕಾ ಬಾಜಪೇಯಿ, ಅಪರ ಜಿಲ್ಲಾಧಿಕಾರಿ ಮಾರುತಿ ಎಂ.ಪಿ, ಉಪವಿಭಾಗಾಧಿಕಾರಿ ಅನ್ನಪೂರ್ಣ, ಸ್ಥಳೀಯ ಜನಪ್ರತಿನಿಧಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

ಇದನ್ನೂ ಓದಿ: ಐತಿಹಾಸಿಕ ಲಕ್ಕುಂಡಿ ಉತ್ಸವಕ್ಕೆ ಭರದ ಸಿದ್ಧತೆ: ಕಲಾ ಸೊಬಗು ಸವಿಯಲು ಈ ಬಾರಿ ಸುವರ್ಣಾವಕಾಶ

Last Updated : Feb 7, 2023, 3:29 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.