ETV Bharat / state

ಮಕ್ಕಳಲ್ಲಿ ಹೆಚ್ಚಾಗುತ್ತಿರುವ ಕೊರೊನಾ ಬಗ್ಗೆ ನಿಗಾ ಇಡಲಾಗಿದೆ : ಸಿಎಂ ಬೊಮ್ಮಾಯಿ

author img

By

Published : Dec 6, 2021, 7:45 PM IST

ಎಲ್ಲೆಲ್ಲಿ ಹಾಸ್ಟೆಲ್​​ಗಳಿವೆ‌, ದೊಡ್ಡ ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿದ್ದಾರೋ, ಅಲ್ಲಿ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ ನಿಗಾ ಇರಿಸಲಿದೆ. ತಜ್ಞರ ಸಲಹೆ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು‌..

cm-basavaraja-bommai
ಸಿಎಂ ಬಸವರಾಜ ಬೊಮ್ಮಾಯಿ

ಗದಗ : ಮಕ್ಕಳಲ್ಲಿ ಹೆಚ್ಚಾಗುತ್ತಿರುವ ಕೊರೊನಾ ಸಂಖ್ಯೆ ಬಗ್ಗೆ ನಿಗಾವಹಿಸಲಾಗುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗದಗ್​ನ ಅಂಬೇಡ್ಕರ್ ಭವನದಲ್ಲಿ ವಿಧಾನ ಪರಿಷತ್ ಅಭ್ಯರ್ಥಿ ಪ್ರದೀಪ ಶೆಟ್ಟರ್‌ ಪರ ಮತಯಾಚನೆ ಕಾರ್ಯಕ್ರಮಕ್ಕೆ ಮುನ್ನ ಮಾತನಾಡಿದ ಅವರು, ಚಿಕ್ಕಮಗಳೂರಿನ ಶಿಕ್ಷಕರೊಬ್ಬರಲ್ಲಿ ಕೊರೊನಾ ಕಂಡು ಬಂದಿತ್ತು‌. ಈಗಾಗಲೇ 400 ವಿದ್ಯಾರ್ಥಿಗಳನ್ನು ಪರೀಕ್ಷೆ ಮಾಡಲಾಗಿದೆ‌. ಅದರಲ್ಲಿ 68 ಮಕ್ಕಳಿಗೆ ಪಾಸಿಟಿವ್ ಬಂದಿದೆ.

ಶಾಲಾ ಮಕ್ಕಳಲ್ಲಿ ಕೊರೊನಾ ದೃಢ ಸಂಬಂಧ ಬೊಮ್ಮಾಯಿ ಪ್ರತಿಕ್ರಿಯೆ

ಶಾಲಾ-ಕಾಲೇಜಿನಲ್ಲಿ ಯಾರಿಗಾದರೂ ಲಕ್ಷಣಗಳಿದ್ದರೆ ಕೂಡಲೇ ಚೆಕ್ ಮಾಡೋದಕ್ಕೆ ಹೇಳಿದ್ದೇವೆ‌ ಎಂದರು. ಎಲ್ಲೆಲ್ಲಿ ಹಾಸ್ಟೆಲ್​​ಗಳಿವೆ‌, ದೊಡ್ಡ ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿದ್ದಾರೋ, ಅಲ್ಲಿ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ ನಿಗಾ ಇರಿಸಲಿದೆ. ತಜ್ಞರ ಸಲಹೆ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು‌ ಎಂದರು.

ಇದೇ ವೇಳೆ ಮಹದಾಯಿ ಹೋರಾಟಗಾರರಿಗೆ ಸಮನ್ಸ್ ಜಾರಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನನಗೆ ಮಾಹಿತಿ ಇಲ್ಲ, ಕೋರ್ಟ್‌ನ ವಿಚಾರ ಇರೋದ್ರಿಂದ ಮಾಹಿತಿ ಪಡೆದು ಮಾತನಾಡುತ್ತೇನೆ. ಹೋರಾಟಗಾರರಿಗೆ ತೊಂದರೆಯಾಗದಂತೆ ನಮ್ಮ ಸರ್ಕಾರ ನೋಡಿಕೊಳ್ಳಲಿದೆ ಎಂದು ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ʼಯಂಗ್‌ ಅಂಡ್‌ ಎನರ್ಜಿಟಿಕ್‌ʼ ಸಿಎಂ ಬಸವರಾಜ ಬೊಮ್ಮಾಯಿ ಕಾಂಗ್ರೆಸ್‌ ಬಗ್ಗೆ ತುತ್ತೂರಿ ಊದುತ್ತಿದ್ದಾರೆ : ಡಿ ಕೆ ಶಿವಕುಮಾರ್​​

ಗದಗ : ಮಕ್ಕಳಲ್ಲಿ ಹೆಚ್ಚಾಗುತ್ತಿರುವ ಕೊರೊನಾ ಸಂಖ್ಯೆ ಬಗ್ಗೆ ನಿಗಾವಹಿಸಲಾಗುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗದಗ್​ನ ಅಂಬೇಡ್ಕರ್ ಭವನದಲ್ಲಿ ವಿಧಾನ ಪರಿಷತ್ ಅಭ್ಯರ್ಥಿ ಪ್ರದೀಪ ಶೆಟ್ಟರ್‌ ಪರ ಮತಯಾಚನೆ ಕಾರ್ಯಕ್ರಮಕ್ಕೆ ಮುನ್ನ ಮಾತನಾಡಿದ ಅವರು, ಚಿಕ್ಕಮಗಳೂರಿನ ಶಿಕ್ಷಕರೊಬ್ಬರಲ್ಲಿ ಕೊರೊನಾ ಕಂಡು ಬಂದಿತ್ತು‌. ಈಗಾಗಲೇ 400 ವಿದ್ಯಾರ್ಥಿಗಳನ್ನು ಪರೀಕ್ಷೆ ಮಾಡಲಾಗಿದೆ‌. ಅದರಲ್ಲಿ 68 ಮಕ್ಕಳಿಗೆ ಪಾಸಿಟಿವ್ ಬಂದಿದೆ.

ಶಾಲಾ ಮಕ್ಕಳಲ್ಲಿ ಕೊರೊನಾ ದೃಢ ಸಂಬಂಧ ಬೊಮ್ಮಾಯಿ ಪ್ರತಿಕ್ರಿಯೆ

ಶಾಲಾ-ಕಾಲೇಜಿನಲ್ಲಿ ಯಾರಿಗಾದರೂ ಲಕ್ಷಣಗಳಿದ್ದರೆ ಕೂಡಲೇ ಚೆಕ್ ಮಾಡೋದಕ್ಕೆ ಹೇಳಿದ್ದೇವೆ‌ ಎಂದರು. ಎಲ್ಲೆಲ್ಲಿ ಹಾಸ್ಟೆಲ್​​ಗಳಿವೆ‌, ದೊಡ್ಡ ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿದ್ದಾರೋ, ಅಲ್ಲಿ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ ನಿಗಾ ಇರಿಸಲಿದೆ. ತಜ್ಞರ ಸಲಹೆ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು‌ ಎಂದರು.

ಇದೇ ವೇಳೆ ಮಹದಾಯಿ ಹೋರಾಟಗಾರರಿಗೆ ಸಮನ್ಸ್ ಜಾರಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನನಗೆ ಮಾಹಿತಿ ಇಲ್ಲ, ಕೋರ್ಟ್‌ನ ವಿಚಾರ ಇರೋದ್ರಿಂದ ಮಾಹಿತಿ ಪಡೆದು ಮಾತನಾಡುತ್ತೇನೆ. ಹೋರಾಟಗಾರರಿಗೆ ತೊಂದರೆಯಾಗದಂತೆ ನಮ್ಮ ಸರ್ಕಾರ ನೋಡಿಕೊಳ್ಳಲಿದೆ ಎಂದು ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ʼಯಂಗ್‌ ಅಂಡ್‌ ಎನರ್ಜಿಟಿಕ್‌ʼ ಸಿಎಂ ಬಸವರಾಜ ಬೊಮ್ಮಾಯಿ ಕಾಂಗ್ರೆಸ್‌ ಬಗ್ಗೆ ತುತ್ತೂರಿ ಊದುತ್ತಿದ್ದಾರೆ : ಡಿ ಕೆ ಶಿವಕುಮಾರ್​​

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.