ಗದಗ: ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕಲಕೇರಿ, ವಿರೂಪಾಪುರ ತಾಂಡಾ ಸುತ್ತ ಮುತ್ತ ರಾತ್ರಿ ಲಘು ಭೂಕಂಪ ಸಂಭವಿಸಿದೆ. ಇದರಿಂದ ಜನ ಕೆಲಕಾಲ ಭಯದಿಂದಾಗಿ ಮನೆ ಬಿಟ್ಟು ಹೊರಗೆ ಬಂದಿದ್ದಾರೆ.
ರಾತ್ರಿ 8-24ರ ಸುಮಾರಿಗೆ 2-3 ಸೆಕೆಂಡ್ಗಳಷ್ಟು ಕಾಲ ಭೂಮಿ ಕಂಪಿಸಿದ ಅನುಭವ ತಾಂಡಾದ ಜನರಿಗೆ ಉಂಟಾಗಿದ್ದು, ಮನೆಯ ಗೃಹಪಯೋಗಿ ವಸ್ತುಗಳು ಅಲುಗಾಡಿವೆ. ಘಟನೆಯಿಂದ ಗಾಬರಿಗೊಂಡ ಜನ ಮನೆಯಿಂದ ಹೊರ ಓಡಿ ಬಂದಿದ್ದಾರೆ.
ಈ ಲಘು ಭೂಕಂಪದಿಂದ ಯಾವುದೇ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ. ಆದರೆೆ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದರೂ ಸಹ ಘಟನಾ ಸ್ಥಳಕ್ಕೆ ಬಂದಿಲ್ಲಾ ಎಂದು ಗ್ರಾಮಸ್ಥರ ಆರೋಪಿಸಿದ್ದಾರೆ.
ಇದನ್ನು ಓದಿ:'ನಾವು ಹಳ್ಳ-ಕೊಳ್ಳ ದಾಟಿ ಶಾಲೆಗೆ ಹೋಗ್ಬೇಕು..': ಬಸ್ ವ್ಯವಸ್ಥೆ ಕಲ್ಪಿಸುವಂತೆ ವಿದ್ಯಾರ್ಥಿಗಳ ಮನವಿ