ETV Bharat / state

ಮೂರು ವರ್ಷದ ಕಂದಮ್ಮನನ್ನ ಕೊಂದ ಪಾಪಿ ತಂದೆ.. ಇಷ್ಟೇ ಕಾರಣರೀ, ಬೇರೇನೂ ಇಲ್ಲ..

ತಾಯಿ ಬಂದು ಮಗಳ ಶವ ನೋಡಿ ಸಾವಿನಲ್ಲಿ ಸಂಶಯವಿರುವುದಾಗಿ ದೂರಿದಾಗ ಎಫ್‌ಐಆರ್‌ನಲ್ಲಿ ಈ ಮೇಲಿನ ಸಂಗತಿಗಳು ತಿಳಿದು ಬಂದಿವೆ. ಈ ಕುರಿತು ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

author img

By

Published : Feb 26, 2021, 1:06 PM IST

father kills his daughter news
ಮಗಳನ್ನು ಕೊಂದ ತಲೆ

ಗದಗ : ತನ್ನ ಮೂರು ವರ್ಷದ ಮಗಳನ್ನು ಪಾಪಿ ತಂದೆಯೊಬ್ಬ ಕೊಲೆ ಮಾಡಿರುವ ಘಟನೆ ಗದಗನಲ್ಲಿ ನಡೆದಿದೆ.

ಗದಗ ತಾಲೂಕಿನ ಹೊಸಹಳ್ಳಿ ಗ್ರಾಮದ ಗಣೇಶ ಬೂದಪ್ಪ ಮಡಿವಾಳರ(33) ಎಂಬಾತ ಮೂರ್ಛೆ ಕಾಯಿಲೆಯಿಂದ ಬಳಲುತ್ತಿದ್ದ ಭುವನೇಶ್ವರಿ ಎಂಬ ತನ್ನ ಮೂರು ವರ್ಷದ ಕಂದಮ್ಮನನ್ನು ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದಾನೆ.

ಕಳೆದ ಜನವರಿ 11ರಂದು ಜಿಲ್ಲಾಸ್ಪತ್ರೆಯಿಂದ ಆಟೋದಲ್ಲಿ ನಗರದ ಹೆರಿಗೆ ಆಸ್ಪತ್ರೆಗೆ ಕರೆದುಕೊಂಡು ಬರುವ ಮಾರ್ಗ ಮಧ್ಯೆ ಇರುವ ಮಲ್ಲಸಮುದ್ರ ಕ್ರಾಸ್ ಬಳಿ ಭುವನೇಶ್ವರಿ ಕುತ್ತಿಗೆಯಲ್ಲಿ ಕಟ್ಟಿದ್ದ ದಾರದಿಂದ ಕೊಲೆ ಮಾಡಿದ್ದಾನೆ.

father kills his daughter news
ಮಗಳನ್ನು ಕೊಂದ ತಂದೆ

ಆರೋಪಿ ಗಣೇಶ, ಹುಲಕೋಟಿಯ ಆರ್‌ಎಂಎಸ್ ಆಸ್ಪತ್ರೆಯಲ್ಲಿ ಮಗಳ ಪಿಟ್ಸ್ ಕಾಯಿಲೆಗೆ ಸಾಕಷ್ಟು ಹಣ ಖರ್ಚು ಮಾಡಿದ್ದ. ಇವಳಿಗೆ ಹೀಗೆ ಖರ್ಚು ಮಾಡಿ ಚಿಕಿತ್ಸೆ ಕೊಡಿಸುತ್ತಾ ಹೋದರೆ, ಹೊಲ, ಮನೆ ಮಾರಬೇಕಾಗುತ್ತದೆ ಎಂದು ತಿಳಿದು ಉಸಿರುಗಟ್ಟಿಸಿದ್ದಾನೆ. ಜನವರಿ 11ರಂದು ಭುವನೇಶ್ವರಿ ಧಾರವಾಡ ಜಿಲ್ಲೆಯ ಅಣ್ಣಿಗೇರಿಯಲ್ಲಿ ಇದ್ದಾಗ ಇವಳಿಗೆ ಪಿಟ್ಸ್ ಬಂದಿದೆ. ಆಗ ಅಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಅವಳಿಗೆ ಚಿಕಿತ್ಸೆ ಕೊಡಿಸಿ ವೈದ್ಯರ ಸಲಹೆಯಂತೆ ಮಗಳನ್ನು ಗದಗ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಬಂದಿದ್ದಾನೆ.

ಅಲ್ಲಿನ ವೈದ್ಯರು ನಗರದ ತಾಲೂಕು ಹೆರಿಗೆ ಆಸ್ಪತ್ರೆಯಲ್ಲಿ ಚಿಕ್ಕ ಮಕ್ಕಳ ತಜ್ಞರಿದ್ದು, ಅವರ ಬಳಿ ಕರೆದುಕೊಂಡು ಹೋಗುವಂತೆ ಸೂಚಿಸಿದ್ದಾರೆ. ಆಗ ಆರೋಪಿ ಗಣೇಶ ಚಿಕಿತ್ಸೆಗಾಗಿ ಮಗಳು ಭುವನೇಶ್ವರಿಯನ್ನು ಹೆರಿಗೆ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾನೆ. ಆಕೆಯನ್ನು ಪರೀಕ್ಷೆ ಮಾಡಿದ ವೈದ್ಯರು ಭುವನೇಶ್ವರಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಅಲ್ಲದೇ, ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಮೃತದೇಹ ತೆಗೆದುಕೊಂಡು ಹೋಗುವಂತೆ ಹೇಳಿದ್ದಾರೆ. ವೈದ್ಯರು ಹೇಳಿದಂತೆ ಶವಾಗಾರದಲ್ಲಿ ಮಗಳ ಮೃತದೇಹವನ್ನು ಇಟ್ಟು ಬಳಿಕ ತನ್ನ ಹೆಂಡತಿ ಹಾಗೂ ಮನೆಯವರಿಗೆ ಸುದ್ದಿ ತಿಳಿಸಿದ್ದಾನೆ.

ತಾಯಿ ಬಂದು ಮಗಳ ಶವ ನೋಡಿ ಸಾವಿನಲ್ಲಿ ಸಂಶಯವಿರುವುದಾಗಿ ದೂರಿದಾಗ ಎಫ್‌ಐಆರ್‌ನಲ್ಲಿ ಈ ಮೇಲಿನ ಸಂಗತಿಗಳು ತಿಳಿದು ಬಂದಿವೆ. ಈ ಕುರಿತು ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:1,600 ಅಂಕ ಹೆಚ್ಚು ಕುಸಿತ ಕಂಡ ಸೆನ್ಸೆಕ್ಸ್... ಲಕ್ಷಾಂತರ ಕೋಟಿ ನಷ್ಟ

ಗದಗ : ತನ್ನ ಮೂರು ವರ್ಷದ ಮಗಳನ್ನು ಪಾಪಿ ತಂದೆಯೊಬ್ಬ ಕೊಲೆ ಮಾಡಿರುವ ಘಟನೆ ಗದಗನಲ್ಲಿ ನಡೆದಿದೆ.

ಗದಗ ತಾಲೂಕಿನ ಹೊಸಹಳ್ಳಿ ಗ್ರಾಮದ ಗಣೇಶ ಬೂದಪ್ಪ ಮಡಿವಾಳರ(33) ಎಂಬಾತ ಮೂರ್ಛೆ ಕಾಯಿಲೆಯಿಂದ ಬಳಲುತ್ತಿದ್ದ ಭುವನೇಶ್ವರಿ ಎಂಬ ತನ್ನ ಮೂರು ವರ್ಷದ ಕಂದಮ್ಮನನ್ನು ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದಾನೆ.

ಕಳೆದ ಜನವರಿ 11ರಂದು ಜಿಲ್ಲಾಸ್ಪತ್ರೆಯಿಂದ ಆಟೋದಲ್ಲಿ ನಗರದ ಹೆರಿಗೆ ಆಸ್ಪತ್ರೆಗೆ ಕರೆದುಕೊಂಡು ಬರುವ ಮಾರ್ಗ ಮಧ್ಯೆ ಇರುವ ಮಲ್ಲಸಮುದ್ರ ಕ್ರಾಸ್ ಬಳಿ ಭುವನೇಶ್ವರಿ ಕುತ್ತಿಗೆಯಲ್ಲಿ ಕಟ್ಟಿದ್ದ ದಾರದಿಂದ ಕೊಲೆ ಮಾಡಿದ್ದಾನೆ.

father kills his daughter news
ಮಗಳನ್ನು ಕೊಂದ ತಂದೆ

ಆರೋಪಿ ಗಣೇಶ, ಹುಲಕೋಟಿಯ ಆರ್‌ಎಂಎಸ್ ಆಸ್ಪತ್ರೆಯಲ್ಲಿ ಮಗಳ ಪಿಟ್ಸ್ ಕಾಯಿಲೆಗೆ ಸಾಕಷ್ಟು ಹಣ ಖರ್ಚು ಮಾಡಿದ್ದ. ಇವಳಿಗೆ ಹೀಗೆ ಖರ್ಚು ಮಾಡಿ ಚಿಕಿತ್ಸೆ ಕೊಡಿಸುತ್ತಾ ಹೋದರೆ, ಹೊಲ, ಮನೆ ಮಾರಬೇಕಾಗುತ್ತದೆ ಎಂದು ತಿಳಿದು ಉಸಿರುಗಟ್ಟಿಸಿದ್ದಾನೆ. ಜನವರಿ 11ರಂದು ಭುವನೇಶ್ವರಿ ಧಾರವಾಡ ಜಿಲ್ಲೆಯ ಅಣ್ಣಿಗೇರಿಯಲ್ಲಿ ಇದ್ದಾಗ ಇವಳಿಗೆ ಪಿಟ್ಸ್ ಬಂದಿದೆ. ಆಗ ಅಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಅವಳಿಗೆ ಚಿಕಿತ್ಸೆ ಕೊಡಿಸಿ ವೈದ್ಯರ ಸಲಹೆಯಂತೆ ಮಗಳನ್ನು ಗದಗ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಬಂದಿದ್ದಾನೆ.

ಅಲ್ಲಿನ ವೈದ್ಯರು ನಗರದ ತಾಲೂಕು ಹೆರಿಗೆ ಆಸ್ಪತ್ರೆಯಲ್ಲಿ ಚಿಕ್ಕ ಮಕ್ಕಳ ತಜ್ಞರಿದ್ದು, ಅವರ ಬಳಿ ಕರೆದುಕೊಂಡು ಹೋಗುವಂತೆ ಸೂಚಿಸಿದ್ದಾರೆ. ಆಗ ಆರೋಪಿ ಗಣೇಶ ಚಿಕಿತ್ಸೆಗಾಗಿ ಮಗಳು ಭುವನೇಶ್ವರಿಯನ್ನು ಹೆರಿಗೆ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾನೆ. ಆಕೆಯನ್ನು ಪರೀಕ್ಷೆ ಮಾಡಿದ ವೈದ್ಯರು ಭುವನೇಶ್ವರಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಅಲ್ಲದೇ, ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಮೃತದೇಹ ತೆಗೆದುಕೊಂಡು ಹೋಗುವಂತೆ ಹೇಳಿದ್ದಾರೆ. ವೈದ್ಯರು ಹೇಳಿದಂತೆ ಶವಾಗಾರದಲ್ಲಿ ಮಗಳ ಮೃತದೇಹವನ್ನು ಇಟ್ಟು ಬಳಿಕ ತನ್ನ ಹೆಂಡತಿ ಹಾಗೂ ಮನೆಯವರಿಗೆ ಸುದ್ದಿ ತಿಳಿಸಿದ್ದಾನೆ.

ತಾಯಿ ಬಂದು ಮಗಳ ಶವ ನೋಡಿ ಸಾವಿನಲ್ಲಿ ಸಂಶಯವಿರುವುದಾಗಿ ದೂರಿದಾಗ ಎಫ್‌ಐಆರ್‌ನಲ್ಲಿ ಈ ಮೇಲಿನ ಸಂಗತಿಗಳು ತಿಳಿದು ಬಂದಿವೆ. ಈ ಕುರಿತು ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:1,600 ಅಂಕ ಹೆಚ್ಚು ಕುಸಿತ ಕಂಡ ಸೆನ್ಸೆಕ್ಸ್... ಲಕ್ಷಾಂತರ ಕೋಟಿ ನಷ್ಟ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.