ETV Bharat / state

ಅವ್ಯವಸ್ಥೆಯ ಆಗರವಾದ ಲಕ್ಷ್ಮೇಶ್ವರ ಪಟ್ಟಣದ ಸರ್ಕಾರಿ ಆಸ್ಪತ್ರೆ

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆಗೆ ಆಗರವಾಗಿದೆ. ಆಸ್ಪತ್ರೆಯ ಅವ್ಯವಸ್ಥೆಯಿಂದ ಬೇಸತ್ತ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

author img

By

Published : Jun 14, 2019, 9:29 PM IST

ಅವ್ಯವಸ್ಥೆಯ ಆಗರವಾದ ಗದಗ ಸರ್ಕಾರಿ ಆಸ್ಪತ್ರೆ


ಗದಗ: ಸರ್ಕಾರಿ ಆಸ್ಪತ್ರೆಗಳು ಅಂದ್ರೆ ಬಡವರ ಪಾಲಿನ ಸಂಜೀವಿನಿ ಅಂತಾರೆ. ಆದ್ರೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆಯ ಆಗರವಾಗಿದೆ. ಆಸ್ಪತ್ರೆಯ ಅವ್ಯವಸ್ಥೆಯಿಂದ ಬೇಸತ್ತು ರೋಗಿಗಳು ಕಣ್ಣೀರು ಹಾಕುತ್ತಿದ್ದಾರೆ.

ಅವ್ಯವಸ್ಥೆಯ ಆಗರವಾದ ಸರ್ಕಾರಿ ಆಸ್ಪತ್ರೆ

ಆಸ್ಪತ್ರೆಯ ಕಾರಿಡಾರ್​​ನಲ್ಲೇ ರೋಗಿಗಳಿಗೆ ಡ್ರಿಪ್, ರಕ್ತ ಕೊಡುತ್ತಿರುವ ದೃಶ್ಯ ನೋಡಿದ್ರೆ ಇದು ಆಸ್ಪತ್ರೆಯೋ ನರಕವೋ ಎನ್ನುವಂತಿದೆ. ಸೂಕ್ತ ಚಿಕಿತ್ಸೆ ಸಿಗದೆ ರೋಗಿಗಳು ಪರದಾಡುತ್ತಿದ್ರು ಕ್ಯಾರೆ ಅನ್ನದ ವೈದ್ಯಾಧಿಕಾರಿಗಳ ನಡೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ದಿನನಿತ್ಯ ಹತ್ತಾರು ಹಳ್ಳಿಯ ನೂರಾರು ರೋಗಿಗಳು ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ಬರ್ತಾರೆ. ಆದ್ರೆ ಇಲ್ಲಿ ಬರುವ ರೋಗಿಗಳಿಗೆ ಸರಿಯಾದ ಚಿಕಿತ್ಸೆ ಮಾತ್ರ ಮರೀಚಿಕೆಯಾಗಿದೆ. 100 ಬೆಡ್ ಆಸ್ಪತ್ರೆ ಇದಾಗಿದೆ. ಇಲ್ಲಿ ಬರೋ ಬಡ ರೋಗಿಗಳ ಪಾಡು ದೇವರೇ ಬಲ್ಲ ಎಂಬಂತಾಗಿದೆ. ಲಕ್ಷಾಂತರ ಹಣ ಖರ್ಚು ಮಾಡಿ ನಿರ್ಮಿಸಲಾದ ಶುದ್ಧ ಕುಡಿಯುವ ನೀರಿನ ಘಟಕ ಪಾಳು ಬಿದ್ದಿದೆ. ಶುದ್ಧ ನೀರಿನ ಘಟಕ ಉದ್ಘಾಟನೆ ಆದ ಒಂದೇ ತಿಂಗಳಲ್ಲಿ ಬಂದ್ ಆಗಿದ್ದು, ರೋಗಗಿಗಳು ಹಣ ಕೊಟ್ಟು ನೀರು ಕುಡಿಯುವಂತಾಗಿದೆ. ಸರ್ಕಾರ ಬಡ ರೋಗಿಗಳ ಚಿಕಿತ್ಸೆಗಾಗಿ ಕೋಟಿ, ಕೋಟಿ ಅನುದಾನ ಬಿಡುಗಡೆ ಮಾಡುತ್ತೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಇದು ಬಡವರಿಗೆ ತಲುಪುತ್ತಿಲ್ಲ ಎಂದು ಆಸ್ಪತ್ರೆಗೆ ಬರುವ ಜನ ದೂರುತ್ತಾರೆ.

ಆಸ್ಪತ್ರೆಯಲ್ಲಿ ರೋಗಿಯ ಸಂಬಂಧಿಕರು ತಮ್ಮ ರೋಗಿಗಳಿಗೆ ಹಾಕಿರುವ ಡ್ರಿಪ್​​ ತಗೆಯುವ ಕೆಲಸ ಮಾಡುತ್ತಾರೆ. 10 ಜನ ವೈದ್ಯರು ಕಾರ್ಯನಿರ್ಹಿಸುವಂತಹ ಆಸ್ಪತ್ರೆ ಇದು. ಆದ್ರೆ, ಇಲ್ಲಿ ಒಬ್ಬರು ಎಂಬಿಬಿಎಸ್, ಇಬ್ಬರು ಆರ್ಯುವೇದಿಕ್ ವೈದ್ಯರು ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ ಎನ್ನಲಾಗಿದೆ.


ಗದಗ: ಸರ್ಕಾರಿ ಆಸ್ಪತ್ರೆಗಳು ಅಂದ್ರೆ ಬಡವರ ಪಾಲಿನ ಸಂಜೀವಿನಿ ಅಂತಾರೆ. ಆದ್ರೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆಯ ಆಗರವಾಗಿದೆ. ಆಸ್ಪತ್ರೆಯ ಅವ್ಯವಸ್ಥೆಯಿಂದ ಬೇಸತ್ತು ರೋಗಿಗಳು ಕಣ್ಣೀರು ಹಾಕುತ್ತಿದ್ದಾರೆ.

ಅವ್ಯವಸ್ಥೆಯ ಆಗರವಾದ ಸರ್ಕಾರಿ ಆಸ್ಪತ್ರೆ

ಆಸ್ಪತ್ರೆಯ ಕಾರಿಡಾರ್​​ನಲ್ಲೇ ರೋಗಿಗಳಿಗೆ ಡ್ರಿಪ್, ರಕ್ತ ಕೊಡುತ್ತಿರುವ ದೃಶ್ಯ ನೋಡಿದ್ರೆ ಇದು ಆಸ್ಪತ್ರೆಯೋ ನರಕವೋ ಎನ್ನುವಂತಿದೆ. ಸೂಕ್ತ ಚಿಕಿತ್ಸೆ ಸಿಗದೆ ರೋಗಿಗಳು ಪರದಾಡುತ್ತಿದ್ರು ಕ್ಯಾರೆ ಅನ್ನದ ವೈದ್ಯಾಧಿಕಾರಿಗಳ ನಡೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ದಿನನಿತ್ಯ ಹತ್ತಾರು ಹಳ್ಳಿಯ ನೂರಾರು ರೋಗಿಗಳು ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ಬರ್ತಾರೆ. ಆದ್ರೆ ಇಲ್ಲಿ ಬರುವ ರೋಗಿಗಳಿಗೆ ಸರಿಯಾದ ಚಿಕಿತ್ಸೆ ಮಾತ್ರ ಮರೀಚಿಕೆಯಾಗಿದೆ. 100 ಬೆಡ್ ಆಸ್ಪತ್ರೆ ಇದಾಗಿದೆ. ಇಲ್ಲಿ ಬರೋ ಬಡ ರೋಗಿಗಳ ಪಾಡು ದೇವರೇ ಬಲ್ಲ ಎಂಬಂತಾಗಿದೆ. ಲಕ್ಷಾಂತರ ಹಣ ಖರ್ಚು ಮಾಡಿ ನಿರ್ಮಿಸಲಾದ ಶುದ್ಧ ಕುಡಿಯುವ ನೀರಿನ ಘಟಕ ಪಾಳು ಬಿದ್ದಿದೆ. ಶುದ್ಧ ನೀರಿನ ಘಟಕ ಉದ್ಘಾಟನೆ ಆದ ಒಂದೇ ತಿಂಗಳಲ್ಲಿ ಬಂದ್ ಆಗಿದ್ದು, ರೋಗಗಿಗಳು ಹಣ ಕೊಟ್ಟು ನೀರು ಕುಡಿಯುವಂತಾಗಿದೆ. ಸರ್ಕಾರ ಬಡ ರೋಗಿಗಳ ಚಿಕಿತ್ಸೆಗಾಗಿ ಕೋಟಿ, ಕೋಟಿ ಅನುದಾನ ಬಿಡುಗಡೆ ಮಾಡುತ್ತೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಇದು ಬಡವರಿಗೆ ತಲುಪುತ್ತಿಲ್ಲ ಎಂದು ಆಸ್ಪತ್ರೆಗೆ ಬರುವ ಜನ ದೂರುತ್ತಾರೆ.

ಆಸ್ಪತ್ರೆಯಲ್ಲಿ ರೋಗಿಯ ಸಂಬಂಧಿಕರು ತಮ್ಮ ರೋಗಿಗಳಿಗೆ ಹಾಕಿರುವ ಡ್ರಿಪ್​​ ತಗೆಯುವ ಕೆಲಸ ಮಾಡುತ್ತಾರೆ. 10 ಜನ ವೈದ್ಯರು ಕಾರ್ಯನಿರ್ಹಿಸುವಂತಹ ಆಸ್ಪತ್ರೆ ಇದು. ಆದ್ರೆ, ಇಲ್ಲಿ ಒಬ್ಬರು ಎಂಬಿಬಿಎಸ್, ಇಬ್ಬರು ಆರ್ಯುವೇದಿಕ್ ವೈದ್ಯರು ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ ಎನ್ನಲಾಗಿದೆ.

Intro:ಆಂಕರ್: ಸರ್ಕಾರಿ ಆಸ್ಪತ್ರೆಗಳು ಅಂದ್ರೆ ಬಡವರ ಪಾಲಿನ ಸಂಜೀವಿನಿ ಅಂತಾರೆ. ಆದ್ರೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆಗೆ ಆಗರವಾಗಿದೆ. ಆಸ್ಪತ್ರೆಯ ಅವ್ಯವಸ್ಥೆಯಿಂದ ಬೇಸತ್ತು ರೋಗಿಗಳು ಕಣ್ಣೀರು ಹಾಕುತ್ತಿದ್ದಾರೆ. ರೋಗಿಗಳಿಗೆ ಆಸ್ಪತ್ರೆಯ ಕಾರಿಡಾರದಲ್ಲೇ ರೋಗಿಗಳಿಗೆ ಡ್ರಿಪ್, ರಕ್ತ ಹಾಕ್ತಾಯಿರೋ ದೃಶ್ಯ ನೋಡಿದ್ರೆ ಇದು ಆಸ್ಪತ್ರೆಯೋ ನರಕವೋ ಎನ್ನುವಂತಿದೆ. ಸೂಕ್ತ ಚಿಕಿತ್ಸೆ ಸಿಗದೆ ರೋಗಿಗಳ ಪರದಾಟ ನಡೆಸುತ್ತಿದ್ರು ಕ್ಯಾರೆ ಅನ್ನದ ವೈದ್ಯ ಅಧಿಕಾರಿಗಳು. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ..

Body:ಸೂಕ್ತ ಚಿಕಿತ್ಸೆ ಸಿಗದೆ ವೃದ್ಧ ರೋಗಿಯ ಕಣ್ಣೀರು...! ವಾರ್ಡ್ ಗಳು ಇದ್ರೂ ಆಸ್ಪತ್ರೆ ಕಾರಿಡಾರದಲ್ಲೇ ರೋಗಿಗಳ ನರಳಾಟ...!ಆಸ್ಪತ್ರೆಯಲ್ಲಿ ಹನಿ ನೀರಿಗೂ ರೋಗಿಗಳ ನರಳಾಟ...! ರೋಗಿಗಳ ಜೀವದ ಜೊತೆ ಆಸ್ಪತ್ರೆ ವೈದ್ಯರು, ಸಿಬ್ಬಂದಿ ಚೆಲ್ಲಾಟ...! ವೈದ್ಯರ ಬೇಜವಾಬ್ದಾರಿ ಹೇಳಿಕೆ ವಿರುದ್ಧ ರೋಗಿಗಳ ಸಂಬಂಧಿಕರು ಆಕ್ರೋಶ...! ಎಸ್... ಈ ಎಲ್ಲಾ ಅಮಾನವೀಯ ದೃಶ್ಯಗಳು ಕಂಡು ಬರೋದು ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕ ಆಸ್ಪತ್ರೆಯಲ್ಲಿ.. ಹೌದು ದಿನ ನಿತ್ಯ ಹತ್ತಾರು ಹಳ್ಳಿಯ ನೂರಾರು ರೋಗಿಗಳು ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ಬರ್ತಾರೆ. ಆದ್ರೆ ಇಲ್ಲಿ ಬರುವ ರೋಗಿಗಳಿಗೆ ಸರಿಯಾದ ಚಿಕಿತ್ಸೆ ಮಾತ್ರ ಮರಿಚಿಕೆಯಾಗಿದೆ. 100 ಬೆಡ್ ಆಸ್ಪತ್ರೆ ಇದಾಗಿದೆ. ಇಲ್ಲಿ ಬರೋ ಬಡ ರೋಗಿಗಳ ಪಾಡು ದೇವರೇ ಬಲ್ಲ ಎಂಬಂತಾಗಿದೆ. ಹೌದು ಇಲ್ಲಿ ಬರೋ ರೋಗಿಗಳ ಜೀವದ ಜೊತೆ ಚೆಲ್ಲಾಟ ಆಡ್ತಾಯಿದ್ದಾರೆ. ಇಂದು ವೃದ್ಧೆಯೊಬ್ಬಳು ಬೆಧಿಯಿಂದ ಬಳಲಿ ಆಸ್ಪತ್ರೆಗೆ ಬಂದ ವೃದ್ಧಗೆ ಕಾರಿಡಾರದಲ್ಲೇ ಡ್ರಿಪ್ ಹಚ್ಚಿ ಅಲ್ಲಿಯೇ ಬಿಟ್ಟಿದ್ದಾರೆ. ವಾರ್ಡ್ ಗಳಿಗೆ ಶಿಫ್ಟ್ ಮಾಡೋ ಗೋಜಿಗೆ ಹೋಗಿಲ್ಲ. ಹೀಗಾಗಿ ಚಳಿಯಲ್ಲಿಯೇ ಗಢ ಗಢ ನಡಗುತ್ತ ಕಣ್ಣೀರು ಹಾಕ್ತಾಯಿದ್ಲು. ಆದ್ರೆ ಯಾರೊಬ್ರು ಮಾನವೀಯತೆ ತೋರಲಿಲ್ಲ. ಇದು ಸಂಬಂಧಿಕರಿಗೆ ಆಕ್ರೋಶಕ್ಕೆ ಕಾರಣವಾಗಿದೆ. ವೃದ್ಧೆ ಮಾತ್ರ ಯಾಕಪ್ಪ ಈ ಆಸ್ಪತ್ರೆಗೆ ಚಿಕಿತ್ಸೆಗೆ ಬಂದೆ ಅಂತಾ ಕಣ್ಣೀರು ಸುರಿಸಿದ್ದಳು. ಇಲ್ಲಿರುವ ಬೆಡ್ ಗಳಿಗೆ ಬೆಡಸಿಟ್ಟ ಸಹ ಹಾಕಿಲ್ಲ. ಮಾತ್ರವಲ್ಲ ಇನ್ನೊಬ್ಬ ಮಹಿಳೆಗೆ ಹೊರಗಡೆಯೇ ರಕ್ತದ ಹಾಕುತ್ತಿರೋ ದೃಶ್ಯ ಅಬ್ಬಾ ಇದು ಆಸ್ಪತ್ರೆನಾ ಅನ್ನೋ ಹಾಗಿತ್ತು. ಇನ್ನೂ ರೋಗಿಗಳು ಹನಿ ನೀರಿಗೂ ಪರದಾಡುವಂತಾಗಿದೆ. ಲಕ್ಷಾಂತರ ಹಣ ಖರ್ಚು ಮಾಡಿ ಶುದ್ಧ ನೀರಿನ ಘಟಕ ಪಾಳು ಬಿದ್ದಿದೆ. ಶುದ್ಧ ನೀರಿನ ಘಟಕ ಉದ್ಘಾಟನೆ ಆದ ಒಂದೇ ತಿಂಗಳಲ್ಲಿ ಬಂದ್ ಆಗಿದೆ. ಹೀಗಾಗಿ ರೋಗಿಗಳು ಮಾತ್ರ ಹಣ್ಣ ಕೊಟ್ಟು ಕುಡಿಯುವ ನೀರು ತರುತ್ತಿದ್ದಾರೆ. ಆಸ್ಪತ್ರೆಯಲ್ಲಿ ಇಂತಹ ದುಸಸ್ಥಿ ಇದ್ರು ಕ್ಯಾರೆ ಅನ್ನದ ವೈದ್ಯಾಧಿಕಾರಿಗಳು. ವೈದ್ಯಾಧಿಕಾರಿಗಳ ಬೇಜವ್ದಾಬಾರಿಗೆ ರೋಗಿಗಳ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ...
ಬೈಟ್-01: ಪ್ರಕಾಶ, ರೋಗಿ ಸಂಬಂಧಿ..
ಸರ್ಕಾರ ಬಡ ರೋಗಿಗಳ ಚಿಕಿತ್ಸೆಗಾಗಿ ಕೋಟಿ.. ಕೋಟಿ ಅನುದಾನ ಬಿಡುಗಡೆ ಮಾಡುತ್ತೇ. ಆದ್ರೆ ಅಧಿಕಾರಿಗಳು ಮಾತ್ರ ನಿರ್ಲಕ್ಷ್ಯ ದಿಂದ ಬಡವರಿಗೆ ತಲುಪುತ್ತಿಲ್ಲ. ಆದ್ರೆ ಲಕ್ಷ್ಮೇಶ್ವರ ಸರ್ಕಾರಿ ಆಸ್ಪತ್ರೆಯಲ್ಲಿ ಎಲ್ಲಿ ಅಂದ್ರಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ. ಇದು ಆಸ್ಪತ್ರೆ ನಾ.. ಅಥವಾ ದನದ ಕೊಂಗವಾಡ ವಾ... ಅನ್ನೋದೆ ಅನುಮಾನಕ್ಕೆ ಕಾರಣವಾಗಿದೆ. ಈ ಹಂತದಲ್ಲಿ ಸರ್ಕಾರಿ ಆಸ್ಪತ್ರೆ ಇರೋದನ್ನು ಕಂಡು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ಆಸ್ಪತ್ರೆನಲ್ಲಿ ರೋಗಿಯ ಸಂಬಂಧಿಕರು ತಮ್ಮ ರೋಗಿಗಳಿಗೆ ಹಾಕಿರುವ ಡ್ರಿಫ್ ತಗೆಯುವ ಕೆಲಸ ಮಾಡುತ್ತಾರೆ. ಈ ಆಸ್ಪತ್ರೆ ಅವ್ಯವಸ್ಥೆ ಆಗರವಾಗಿದೆ. 10 ಜನ ವೈದ್ಯರು ಕಾರ್ಯ ನಿರ್ಹಿಸುವಂತಹ ಆಸ್ಪತ್ರೆಯ ಇದು. ಆದ್ರೆ ಇಲ್ಲಿ ಒಬ್ಬರು ಎಂಬಿಬಿಎಸ್, ಇಬ್ಬರು ಆರ್ಯುವೇದಿಕ್ ವೈದ್ಯರು ಮಾತ್ರ ಕಾರ್ಯ ನಿರ್ವಹಿಸುತ್ತಿದ್ದಾರೆ. ಲಕ್ಷ್ಮೇಶ್ವರ ಆಸ್ಪತ್ರೆ ಆಡಳಿತಾಧಿಕಾರಿ ಡಾ ಗಿರೀಶ್ ಮರಡ್ಡಿ ರೋಗಿಗಳ ಪರಿಶೀಲನೆ ಮಾತ್ರ ವಿಚಿತ್ರವಾಗಿದೆ. ರೋಗಿಗಳಿಗೆ ಮುಟ್ಟದೆ ಔಷಧಿ ಬರೆಯುವುದು ನೋಡಿದ್ರೆ ಕಾಟಾಚಾರಕ್ಕೆ ಚಿಕಿತ್ಸೆ ನೀಡುತ್ತಿದ್ದಾರೆ ಅಂತ ಕಿಡಿಕಾರಿದ್ದಾರೆ.
ಬೈಟ್-02 : ಡಾ ಗಿರೀಶ್ ಮರಡ್ಡಿ ,ಲಕ್ಷ್ಮೇಶ್ವರ ಆಸ್ಪತ್ರೆ ಆಡಳಿತಾಧಿಕಾರಿ
Conclusion:ಇನ್ನೂ ಆಸ್ಪತ್ರೆಗೆ ಬರೋ ರೋಗಿಗಳ ಪಾಲಿಗೆ ಸೌಲಭ್ಯ ಇದ್ದು ಇಲ್ಲದಂತಾಗಿದೆ. ಇನ್ನೂ ಸರ್ಕಾರ ಕಳುಹಿಸಿಕೊಟ್ಟ ಕೋಟ್ಯಾಂತರ ಹಣ ನೀರಿನಲ್ಲಿ ಹೋಮ್ ಮಾಡಿದಂತಾಗಿದೆ. ವೈದ್ಯೋ ನಾರಾಯಣೋ ಹರಿ ಅಂತಾರೆ. ಆದ್ರೆ ಆ ಪದ ಇಲ್ಲಿನ ವೈದ್ಯರ ಪಾಲಿಗೆ ಅಪವಾದವಾಗಿದೆ. ಒಟ್ಟಾರೆ ಈ ಆಸ್ಪತ್ರೆ ವೈದ್ಯರ ಕೊರತೆಯಿಂದ ಅವ್ಯವಸ್ಥೆ ಆಗರವಾಗಿದೆ. ಇನ್ನು ಮುಂದಾರರು ಆರೋಗ್ಯ ಇಲಾಖೆಯ ಅಧಿಕಾರಿಗಳು ಎಚ್ಚೆತ್ತಗೊಂಡು ಆಸ್ಪತ್ರೆಯ ಸಮಸ್ಯೆ ಬಗೆಹರಿಸಬೇಕು.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.