ಗದಗ: ಗದಗ ಹಳೆ ಬಸ್ ನಿಲ್ದಾಣಕ್ಕೆ ಪಂಡಿತ ಪುಟ್ಟರಾಜ ಗವಾಯಿಗಳ ಹೆಸರಿಡಬೇಕೆಂದು ಒತ್ತಾಯಿಸಿ ಜಿಲ್ಲಾ ಕ್ರಾಂತಿ ಸೇನಾ ಸಂಘಟನೆ ಹಾಗೂ ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದಾರೆ.
ನಗರದ ಬಸ್ ನಿಲ್ದಾಣದ ಬಳಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ ಕ್ರಾಂತಿ ಸೇನಾ ಸಂಘಟನೆ ಹಾಗೂ ಸಾರ್ವಜನಿಕರು, ಹಳೆ ಬಸ್ ನಿಲ್ದಾಣ ಕಾಮಗಾರಿ ನಿಧಾನಗತಿಯಲ್ಲಿ ಸಾಗಿದೆ. ಇದರಿಂದ ಪ್ರಯಾಣಿಕರಿಗೆ ಸಾಕಷ್ಟು ಸಮಸ್ಯೆ ಎದುರಿಸುವಂತಾಗಿದೆ ಹೀಗಾಗಿ ಶೀಘ್ರವೇ ಸಂಬಂಧ ಪಟ್ಟ ಅಧಿಕಾರಿಗಳು ಇದರ ಬಗ್ಗೆ ಗಮನಹರಿಸಿ ಬೇಗ ಕಾಮಗಾರಿ ಮುಗಿಸುವಂತೆ ಒತ್ತಾಯಿಸಿದರು.