ಗದಗ: ಪತಿಯೊಬ್ಬ ತನ್ನ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಗದಗ ಜಿಲ್ಲೆಯ ಮದಗಾನೂರು ಗ್ರಾಮದಲ್ಲಿ ನಡೆದಿದೆ.
ಶಂಕ್ರವ್ವ ಪೂಜಾರ (23) ಕೊಲೆಯಾದ ಮಹಿಳೆ. ಆಕೆಯ ಪತಿ ಈಶ್ವರಪ್ಪ ಪೂಜಾರ (40) ಕೊಲೆ ಮಾಡಿ ಪರಾರಿಯಾಗಿದ್ದಾನೆ. ಈಶ್ವರಪ್ಪ , ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಬಸಾಪೂರ ಗ್ರಾಮದವನು. ಕಳೆದ ಒಂದು ವಾರದ ಹಿಂದಷ್ಟೇ ಶಂಕ್ರವ್ವ ಜಗಳ ಮಾಡಿಕೊಂಡು ತವರು ಮನೆಗೆ ಬಂದಿದ್ದಳೆಂದು ತಿಳಿದು ಬಂದಿದೆ.
ಕೆಲವು ದಿನಗಳ ಹಿಂದೆ ಹಿರಿಯರ ಸಮ್ಮುಖದಲ್ಲಿ ವ್ಯಾಜ್ಯ ಬಗೆಹರಿದಿದ್ದರೂ ಈಶ್ವರಪ್ಪ ಮಾತ್ರ ದ್ವೇಷ ಬಿಡದೆ ಈ ಕೊಲೆ ಮಾಡಿದ್ದಾನೆಂದು ತಿಳಿದು ಬಂದಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿಕೊಂಡು ಸಂಚು ರೂಪಿಸಿರುವ ಈಶ್ವರಪ್ಪ ಈ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಶಂಕ್ರವ್ವಳ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಗದಗ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.