ETV Bharat / state

ಕಪ್ಪತ್ತಗುಡ್ಡ ವನ್ಯಜೀವಿ ಧಾಮ ಸಮೀಕ್ಷೆಯಲ್ಲಿ ಅಪರೂಪದ ಪ್ರಾಣಿ, ಪಕ್ಷಿಗಳು ಪತ್ತೆ!

author img

By

Published : Jul 21, 2023, 2:25 PM IST

Updated : Jul 21, 2023, 8:48 PM IST

ಗದಗದ ಕಪ್ಪತ್ತಗುಡ್ಡ ವನ್ಯಜೀವಿ ಧಾಮದಲ್ಲಿ ಅರಣ್ಯ ಇಲಾಖೆ ಸಮೀಕ್ಷೆ ನಡೆಸಿದ್ದು, ಅಪರೂಪದ ಪ್ರಾಣಿ, ಪಕ್ಷಿಗಳ ಸಂತತಿ ಕಂಡುಬಂದಿದೆ.

ಕಪ್ಪತ್ತಗುಡ್ಡ ವನ್ಯಜೀವಿ ಧಾಮ ಸಮೀಕ್ಷೆ
ಕಪ್ಪತ್ತಗುಡ್ಡ ವನ್ಯಜೀವಿ ಧಾಮ ಸಮೀಕ್ಷೆ

ಗದಗ: ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೇ ಕರೆಸಿಕೊಳ್ಳುವ ಕಪ್ಪತ್ತಗುಡ್ಡ ವನ್ಯಜೀವಿ ಧಾಮದಲ್ಲಿ ಇತ್ತೀಚೆಗೆ ಅರಣ್ಯ ಇಲಾಖೆ ನಡೆಸಿದ ಸಮೀಕ್ಷೆಯಲ್ಲಿ ಅಪರೂಪದ ಪ್ರಾಣಿಗಳು-ಪಕ್ಷಿಗಳು ಕಂಡುಬಂದಿವೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ದೀಪಿಕಾ ಬಾಜ್‌ಪೈ ಮಾಹಿತಿ ನೀಡಿದ್ದಾರೆ.

ಗದಗ ಜಿಲ್ಲೆಯ ಬಿಂಕದಕಟ್ಟಿಯಿಂದ ಮುಂಡರಗಿ ತಾಲೂಕಿನ ಶಿಂಗಟಾಲೂರುವರೆಗೆ ಚಾಚಿಕೊಂಡಿರುವ ಕಪ್ಪತ್ತಗುಡ್ಡವು ಜಿಲ್ಲೆಯ ಉತ್ತರದಿಂದ ದಕ್ಷಿಣಕ್ಕೆ ಸುಮಾರು 65 ಕಿ.ಮೀ.ಗಳಷ್ಟು ಉದ್ದಕ್ಕೆ ಕವಲು-ಕವಲಾಗಿ ಹರಡಿಕೊಂಡಿದೆ. ಇದು ಸಣ್ಣಪುಟ್ಟ ಗುಡ್ಡಗಳ ಸಾಲುಗಳಿಂದ ಕೂಡಿದ್ದು, ಈ ಗುಡ್ಡಗಳು ಸುಮಾರು 2 ಕಿ.ಮೀ.ಯಿಂದ 10 ಕಿ.ಮೀ.ಗಳಷ್ಟು ಅಗಲವಾಗಿದೆ.

ನಾಲ್ಕು ಕೊಂಬಿನ ಹುಲ್ಲೆ
ನಾಲ್ಕು ಕೊಂಬಿನ ಹುಲ್ಲೆ

ಸಮುದ್ರ ಮಟ್ಟದಿಂದ ಸುಮಾರು 1005 ಮೀ. ಎತ್ತರದಲ್ಲಿದೆ. ಅಲ್ಲದೇ ಈ ಪ್ರದೇಶವು 244.5 ಚ.ಕಿ.ಮೀ. ವ್ಯಾಪಿಸಿದೆ. ಪ್ರಮುಖವಾಗಿ ಸೂಜಿ ಮಡ್ಡಿ, ಕೆಂಪ ಗುಡ್ಡ, ಗಾಳಿ ಗುಂಡಿ, ಎತ್ತಿನ ಗುಡ್ಡ, ಆನೆ ಸೊಂಡಿಲು, ಉಪ್ಪಿನ ಪಡಿ, ಮಂಜಿನ ಗುಡ್ಡ, ಮಜ್ಜಿಗೆ ಬಸವಣ್ಣ ಗುಡ್ಡ ಸೇರಿದಂತೆ ಹಲವು ಹೆಸರಿನ ಗುಡ್ಡಗಳನ್ನು ಹೊಂದಿದೆ. ವಿಶಾಲವಾಗಿ ಹರಡಿಕೊಂಡಿರುವ ಈ ಗುಡ್ಡಗಳಲ್ಲಿ ಹತ್ತಾರು ವನ್ಯ ಪ್ರಾಣಿ-ಪಕ್ಷಿಗಳು, ಔಷಧಿ ಸಸ್ಯಗಳು ಮತ್ತು ಬಗೆ ಬಗೆಯ ಪ್ರಭೇದಗಳ ಮರಗಳು ಕಂಡು ಬಂದ ಹಿನ್ನೆಲೆಯಲ್ಲಿ ಕಪ್ಪತ್ತಗುಡ್ಡವನ್ನು ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೇ ಕರೆಯಲಾಗುತ್ತದೆ.

ಕೆಮರಾದಲ್ಲಿ ಸೆರೆಯಾದ ಚಿರತೆ
ಕ್ಯಾಮರಾದಲ್ಲಿ ಚಿರತೆ ಸೆರೆ

ಈ ಸಂಪತ್ತನ್ನು ಪರಿಗಣಿಸಿ ಸರ್ಕಾರವು ಮೇ 16, 2019ರಂದು ಕಪ್ಪತ್ತಗುಡ್ಡ ವನ್ಯಜೀವಿ ಧಾಮವೆಂದು ಘೋಷಿಸಿತು. ಘೋಷಣೆ ಬಳಿಕ ಸಸ್ಯ ಹಾಗೂ ವನ್ಯಜೀವಿಗಳ ಸಂತತಿ ಹೆಚ್ಚಾಗಿದೆ. ಆದರೆ, ಈ ವನ್ಯಜೀವಿ ಧಾಮವು ಇಷ್ಟೆಲ್ಲ ವಿಶೇಷತೆಗಳಿಂದ ಕೂಡಿದ್ದರೂ ಸಹ ಇಲ್ಲಿ ಸಸ್ಯಾಹಾರಿ ಮತ್ತು ಮಾಂಸಾಹಾರಿ ಪ್ರಾಣಿಗಳ ನೆಲೆಯನ್ನು ಕಂಡುಹಿಡಿಯಲು ಯಾವುದೇ ವೈಜ್ಞಾನಿಕ ಅಧ್ಯಯನಗಳು ಇಲ್ಲಿಯವರೆಗೂ ನಡೆದಿರಲ್ಲಿಲ್ಲ. ಈ ನಿಟ್ಟಿನಲ್ಲಿ ಕಪ್ಪತ್ತಗುಡ್ಡವನ್ನು ಮೇ 07ರಿಂದ ಜುಲೈ 15ರವರೆಗೆ ಸೈನ್‌ ಸರ್ವೆ ವಿಧಾನದಲ್ಲಿ 128 ಕಿ.ಮೀ. ಸಂಚರಿಸಿ ವನ್ಯಜೀವಿಧಾಮದಲ್ಲಿ ಸರ್ವೆ ನಡೆಸಲಾಗಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ತಿಳಿಸಿದ್ದಾರೆ.

ಮುಳ್ಳುಹಂದಿ
ಮುಳ್ಳುಹಂದಿ

ಪ್ರಾಣಿಗಳ ಮಲದ ನಮೂನೆ, ಪರಚಿದ ಗುರುತುಗಳ ಸೇರಿದಂತೆ ಲೈನ್ಸ್‌ ಟ್ರಾನ್ಸಕ್ಟ್‌ ವಿಧಾನದಲ್ಲಿ ಪ್ರಾಣಿಗಳ ಸಂಚಾರ ಮಾರ್ಗ ಪತ್ತೆ ಮಾಡಲಾಗಿದೆ. ಕ್ಯಾಮೆರಾ ಟ್ರ್ಯಾಪ್‌ ಮೂಲಕ ಗುಡ್ಡದಲ್ಲಿ 98 ಕ್ಯಾಮೆರಾ ಅಳವಡಿಸಿ 30 ದಿನಗಳ ಕಾಲ ನಿರಂತರ ವೀಕ್ಷಿಸಲಾಗಿದೆ. ಮೂರು ವಿಧಾನಗಳಿಂದ ಪ್ರಾಣಿಗಳ ಸಂತತಿ ಸಂಖ್ಯೆ, ಅವುಗಳ ನೆಲೆ ಹಾಗೂ ಆಹಾರ ಪದ್ಧತಿಯನ್ನು ಕೂಡ ಅಧ್ಯಯನ ಮಾಡಲಾಗಿದೆ. ಈ ವೇಳೆ ಕತ್ತೆಕಿರುಬ, ಚಿರತೆ, ನರಿ, ತೋಳ, ಕಾಡುಬೆಕ್ಕು, ಚುಕ್ಕೆ ಜಿಂಕೆ, ಕೃಷ್ಣಮೃಗ, ಮೂರು ಜಾತಿಯ ಹುಲ್ಲೆಗಳು ಸೇರಿದಂತೆ ಅಪರೂಪದ ಪ್ರಾಣಿಗಳಾದ ಚಿಂಕಾರ ಹಾಗೂ ರೆಸ್ಟಿ ಸ್ಪಾಟೆಡ್‌ ಬೆಕ್ಕುಗಳು ಜೊತೆ ನೂರಾರು ಜಾತಿಯ ಪ್ರಾಣಿ-ಪಕ್ಷಿಗಳು, ಸರಿಸೃಪಗಳು ಕಂಡುಬಂದಿವೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ದೀಪಿಕಾ ಬಾಜ್‌ಪೈ ಅವರು ಮಾಹಿತಿ ನೀಡಿದ್ದಾರೆ.

ಸರ್ವೇ ವೇಳೆ ಕಂಡುಬಂದ ಹುಬ್ಬಾವು
ಸರ್ವೇ ವೇಳೆ ಕಂಡುಬಂದ ಹೆಬ್ಬಾವು

ಹೆಚ್ಚಿನ ಅಧ್ಯಯನ ಮತ್ತು ಸಂಶೋಧನೆಗಳು ಮಾಡಬೇಕಿರುವ ಹಿನ್ನೆಲೆಯಲ್ಲಿ ವಲಯ ಅರಣ್ಯ ಅಧಿಕಾರಿಗಳಾದ ಮಹೇಶ ಮರೇಣ್ಣವರ, ಸುಮಾ ಹಳೆಹೊಳಿ ಹಾಗೂ ಉಪ ವಲಯ ಅರಣ್ಯ ಅಧಿಕಾರಿಗಳಾದ ಸೋಮನಗೌಡ ಪಾಟೀಲ ಇವರು ಡೆಹರಾಡೂನ್​ನಲ್ಲಿರುವ ಪ್ರತಿಷ್ಠಿತ ಭಾರತೀಯ ವನ್ಯಜೀವಿ ಸಂಸ್ಥೆಯಲ್ಲಿ ವನ್ಯಜೀವಿ ನಿರ್ವಹಣೆ ಮತ್ತು ವೈಜ್ಞಾನಿಕ ತಂತ್ರಾಂಶಗಳ ಕುರಿತು ಮೂರು ತಿಂಗಳ ವಿಶೇಷ ತರಬೇತಿಯನ್ನು ಪಡೆದಿದ್ದಾರೆ.

ಸಮೀಕ್ಷೆ ನಡೆಸಿದ ತಂಡ
ಸಮೀಕ್ಷೆ ನಡೆಸಿದ ತಂಡ

ಡೆಹರಾಡೂನ್​ ಭಾರತೀಯ ವನ್ಯಜೀವಿ ಸಂಸ್ಥೆಯು ದಾಂಡೇಲಿಯ ಕಾಳಿ ಹುಲಿ ಸಂರಕ್ಷಿತ ಪ್ರದೇಶ ವನ್ಯಜೀವಿ ಘಟಕದವರ ಸಿಬ್ಬಂದಿ ಸಹಾಯದಿಂದ ಕಪ್ಪತ್ತಗುಡ್ಡ ವನ್ಯಜೀವಿ ಧಾಮದಲ್ಲಿರುವ ಸಸ್ಯ ಹಾಗೂ ಪ್ರಾಣಿ ಭಕ್ಷಕ ಪ್ರಾಣಿಗಳ ಸಂಖ್ಯೆಯ ಬಗ್ಗೆ ಪ್ರಾಥಮಿಕ ಅಧ್ಯಯನವನ್ನು ಮೇ-7ರಿಂದ ಜುಲೈ-15 2023ರವರೆಗೆ ಕೈಗೊಳ್ಳಲಾಗಿತ್ತು. ಈ ಅಧ್ಯಯನಕ್ಕಾಗಿ ಸೈನ್ ಸಮೀಕ್ಷೆ, ಲೈನ್‌ಟ್ರಾನ್ಸೆಕ್ಟ್ ಮತ್ತು ಕ್ಯಾಮರಾ ಟ್ರ್ಯಾಪ್ ಮತ್ತು ಇತರೆ ವಿದ್ಯುನ್ಮಾನಗಳನ್ನು ಬಳಸಿಕೊಂಡು ಪ್ರಾಣಿಗಳ ಸಂತತಿ ಸಂಖ್ಯೆ, ಸಮೃದ್ಧಿತ ಪ್ರದೇಶ ಹಾಗೂ ಆಹಾರ ಪದ್ಧತಿ ಬಗ್ಗೆ ಅಧ್ಯಯನ ಮಾಡಲಾಗಿದೆ.

ಇದನ್ನೂ ಓದಿ: ಜೀವಿಗಳ ಅಸ್ತಿತ್ವಕ್ಕೇ ಕುತ್ತು ತರಲಿದೆ ಹವಾಮಾನ ಬದಲಾವಣೆ: ಅಧ್ಯಯನ ವರದಿ

ಗದಗ: ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೇ ಕರೆಸಿಕೊಳ್ಳುವ ಕಪ್ಪತ್ತಗುಡ್ಡ ವನ್ಯಜೀವಿ ಧಾಮದಲ್ಲಿ ಇತ್ತೀಚೆಗೆ ಅರಣ್ಯ ಇಲಾಖೆ ನಡೆಸಿದ ಸಮೀಕ್ಷೆಯಲ್ಲಿ ಅಪರೂಪದ ಪ್ರಾಣಿಗಳು-ಪಕ್ಷಿಗಳು ಕಂಡುಬಂದಿವೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ದೀಪಿಕಾ ಬಾಜ್‌ಪೈ ಮಾಹಿತಿ ನೀಡಿದ್ದಾರೆ.

ಗದಗ ಜಿಲ್ಲೆಯ ಬಿಂಕದಕಟ್ಟಿಯಿಂದ ಮುಂಡರಗಿ ತಾಲೂಕಿನ ಶಿಂಗಟಾಲೂರುವರೆಗೆ ಚಾಚಿಕೊಂಡಿರುವ ಕಪ್ಪತ್ತಗುಡ್ಡವು ಜಿಲ್ಲೆಯ ಉತ್ತರದಿಂದ ದಕ್ಷಿಣಕ್ಕೆ ಸುಮಾರು 65 ಕಿ.ಮೀ.ಗಳಷ್ಟು ಉದ್ದಕ್ಕೆ ಕವಲು-ಕವಲಾಗಿ ಹರಡಿಕೊಂಡಿದೆ. ಇದು ಸಣ್ಣಪುಟ್ಟ ಗುಡ್ಡಗಳ ಸಾಲುಗಳಿಂದ ಕೂಡಿದ್ದು, ಈ ಗುಡ್ಡಗಳು ಸುಮಾರು 2 ಕಿ.ಮೀ.ಯಿಂದ 10 ಕಿ.ಮೀ.ಗಳಷ್ಟು ಅಗಲವಾಗಿದೆ.

ನಾಲ್ಕು ಕೊಂಬಿನ ಹುಲ್ಲೆ
ನಾಲ್ಕು ಕೊಂಬಿನ ಹುಲ್ಲೆ

ಸಮುದ್ರ ಮಟ್ಟದಿಂದ ಸುಮಾರು 1005 ಮೀ. ಎತ್ತರದಲ್ಲಿದೆ. ಅಲ್ಲದೇ ಈ ಪ್ರದೇಶವು 244.5 ಚ.ಕಿ.ಮೀ. ವ್ಯಾಪಿಸಿದೆ. ಪ್ರಮುಖವಾಗಿ ಸೂಜಿ ಮಡ್ಡಿ, ಕೆಂಪ ಗುಡ್ಡ, ಗಾಳಿ ಗುಂಡಿ, ಎತ್ತಿನ ಗುಡ್ಡ, ಆನೆ ಸೊಂಡಿಲು, ಉಪ್ಪಿನ ಪಡಿ, ಮಂಜಿನ ಗುಡ್ಡ, ಮಜ್ಜಿಗೆ ಬಸವಣ್ಣ ಗುಡ್ಡ ಸೇರಿದಂತೆ ಹಲವು ಹೆಸರಿನ ಗುಡ್ಡಗಳನ್ನು ಹೊಂದಿದೆ. ವಿಶಾಲವಾಗಿ ಹರಡಿಕೊಂಡಿರುವ ಈ ಗುಡ್ಡಗಳಲ್ಲಿ ಹತ್ತಾರು ವನ್ಯ ಪ್ರಾಣಿ-ಪಕ್ಷಿಗಳು, ಔಷಧಿ ಸಸ್ಯಗಳು ಮತ್ತು ಬಗೆ ಬಗೆಯ ಪ್ರಭೇದಗಳ ಮರಗಳು ಕಂಡು ಬಂದ ಹಿನ್ನೆಲೆಯಲ್ಲಿ ಕಪ್ಪತ್ತಗುಡ್ಡವನ್ನು ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೇ ಕರೆಯಲಾಗುತ್ತದೆ.

ಕೆಮರಾದಲ್ಲಿ ಸೆರೆಯಾದ ಚಿರತೆ
ಕ್ಯಾಮರಾದಲ್ಲಿ ಚಿರತೆ ಸೆರೆ

ಈ ಸಂಪತ್ತನ್ನು ಪರಿಗಣಿಸಿ ಸರ್ಕಾರವು ಮೇ 16, 2019ರಂದು ಕಪ್ಪತ್ತಗುಡ್ಡ ವನ್ಯಜೀವಿ ಧಾಮವೆಂದು ಘೋಷಿಸಿತು. ಘೋಷಣೆ ಬಳಿಕ ಸಸ್ಯ ಹಾಗೂ ವನ್ಯಜೀವಿಗಳ ಸಂತತಿ ಹೆಚ್ಚಾಗಿದೆ. ಆದರೆ, ಈ ವನ್ಯಜೀವಿ ಧಾಮವು ಇಷ್ಟೆಲ್ಲ ವಿಶೇಷತೆಗಳಿಂದ ಕೂಡಿದ್ದರೂ ಸಹ ಇಲ್ಲಿ ಸಸ್ಯಾಹಾರಿ ಮತ್ತು ಮಾಂಸಾಹಾರಿ ಪ್ರಾಣಿಗಳ ನೆಲೆಯನ್ನು ಕಂಡುಹಿಡಿಯಲು ಯಾವುದೇ ವೈಜ್ಞಾನಿಕ ಅಧ್ಯಯನಗಳು ಇಲ್ಲಿಯವರೆಗೂ ನಡೆದಿರಲ್ಲಿಲ್ಲ. ಈ ನಿಟ್ಟಿನಲ್ಲಿ ಕಪ್ಪತ್ತಗುಡ್ಡವನ್ನು ಮೇ 07ರಿಂದ ಜುಲೈ 15ರವರೆಗೆ ಸೈನ್‌ ಸರ್ವೆ ವಿಧಾನದಲ್ಲಿ 128 ಕಿ.ಮೀ. ಸಂಚರಿಸಿ ವನ್ಯಜೀವಿಧಾಮದಲ್ಲಿ ಸರ್ವೆ ನಡೆಸಲಾಗಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ತಿಳಿಸಿದ್ದಾರೆ.

ಮುಳ್ಳುಹಂದಿ
ಮುಳ್ಳುಹಂದಿ

ಪ್ರಾಣಿಗಳ ಮಲದ ನಮೂನೆ, ಪರಚಿದ ಗುರುತುಗಳ ಸೇರಿದಂತೆ ಲೈನ್ಸ್‌ ಟ್ರಾನ್ಸಕ್ಟ್‌ ವಿಧಾನದಲ್ಲಿ ಪ್ರಾಣಿಗಳ ಸಂಚಾರ ಮಾರ್ಗ ಪತ್ತೆ ಮಾಡಲಾಗಿದೆ. ಕ್ಯಾಮೆರಾ ಟ್ರ್ಯಾಪ್‌ ಮೂಲಕ ಗುಡ್ಡದಲ್ಲಿ 98 ಕ್ಯಾಮೆರಾ ಅಳವಡಿಸಿ 30 ದಿನಗಳ ಕಾಲ ನಿರಂತರ ವೀಕ್ಷಿಸಲಾಗಿದೆ. ಮೂರು ವಿಧಾನಗಳಿಂದ ಪ್ರಾಣಿಗಳ ಸಂತತಿ ಸಂಖ್ಯೆ, ಅವುಗಳ ನೆಲೆ ಹಾಗೂ ಆಹಾರ ಪದ್ಧತಿಯನ್ನು ಕೂಡ ಅಧ್ಯಯನ ಮಾಡಲಾಗಿದೆ. ಈ ವೇಳೆ ಕತ್ತೆಕಿರುಬ, ಚಿರತೆ, ನರಿ, ತೋಳ, ಕಾಡುಬೆಕ್ಕು, ಚುಕ್ಕೆ ಜಿಂಕೆ, ಕೃಷ್ಣಮೃಗ, ಮೂರು ಜಾತಿಯ ಹುಲ್ಲೆಗಳು ಸೇರಿದಂತೆ ಅಪರೂಪದ ಪ್ರಾಣಿಗಳಾದ ಚಿಂಕಾರ ಹಾಗೂ ರೆಸ್ಟಿ ಸ್ಪಾಟೆಡ್‌ ಬೆಕ್ಕುಗಳು ಜೊತೆ ನೂರಾರು ಜಾತಿಯ ಪ್ರಾಣಿ-ಪಕ್ಷಿಗಳು, ಸರಿಸೃಪಗಳು ಕಂಡುಬಂದಿವೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ದೀಪಿಕಾ ಬಾಜ್‌ಪೈ ಅವರು ಮಾಹಿತಿ ನೀಡಿದ್ದಾರೆ.

ಸರ್ವೇ ವೇಳೆ ಕಂಡುಬಂದ ಹುಬ್ಬಾವು
ಸರ್ವೇ ವೇಳೆ ಕಂಡುಬಂದ ಹೆಬ್ಬಾವು

ಹೆಚ್ಚಿನ ಅಧ್ಯಯನ ಮತ್ತು ಸಂಶೋಧನೆಗಳು ಮಾಡಬೇಕಿರುವ ಹಿನ್ನೆಲೆಯಲ್ಲಿ ವಲಯ ಅರಣ್ಯ ಅಧಿಕಾರಿಗಳಾದ ಮಹೇಶ ಮರೇಣ್ಣವರ, ಸುಮಾ ಹಳೆಹೊಳಿ ಹಾಗೂ ಉಪ ವಲಯ ಅರಣ್ಯ ಅಧಿಕಾರಿಗಳಾದ ಸೋಮನಗೌಡ ಪಾಟೀಲ ಇವರು ಡೆಹರಾಡೂನ್​ನಲ್ಲಿರುವ ಪ್ರತಿಷ್ಠಿತ ಭಾರತೀಯ ವನ್ಯಜೀವಿ ಸಂಸ್ಥೆಯಲ್ಲಿ ವನ್ಯಜೀವಿ ನಿರ್ವಹಣೆ ಮತ್ತು ವೈಜ್ಞಾನಿಕ ತಂತ್ರಾಂಶಗಳ ಕುರಿತು ಮೂರು ತಿಂಗಳ ವಿಶೇಷ ತರಬೇತಿಯನ್ನು ಪಡೆದಿದ್ದಾರೆ.

ಸಮೀಕ್ಷೆ ನಡೆಸಿದ ತಂಡ
ಸಮೀಕ್ಷೆ ನಡೆಸಿದ ತಂಡ

ಡೆಹರಾಡೂನ್​ ಭಾರತೀಯ ವನ್ಯಜೀವಿ ಸಂಸ್ಥೆಯು ದಾಂಡೇಲಿಯ ಕಾಳಿ ಹುಲಿ ಸಂರಕ್ಷಿತ ಪ್ರದೇಶ ವನ್ಯಜೀವಿ ಘಟಕದವರ ಸಿಬ್ಬಂದಿ ಸಹಾಯದಿಂದ ಕಪ್ಪತ್ತಗುಡ್ಡ ವನ್ಯಜೀವಿ ಧಾಮದಲ್ಲಿರುವ ಸಸ್ಯ ಹಾಗೂ ಪ್ರಾಣಿ ಭಕ್ಷಕ ಪ್ರಾಣಿಗಳ ಸಂಖ್ಯೆಯ ಬಗ್ಗೆ ಪ್ರಾಥಮಿಕ ಅಧ್ಯಯನವನ್ನು ಮೇ-7ರಿಂದ ಜುಲೈ-15 2023ರವರೆಗೆ ಕೈಗೊಳ್ಳಲಾಗಿತ್ತು. ಈ ಅಧ್ಯಯನಕ್ಕಾಗಿ ಸೈನ್ ಸಮೀಕ್ಷೆ, ಲೈನ್‌ಟ್ರಾನ್ಸೆಕ್ಟ್ ಮತ್ತು ಕ್ಯಾಮರಾ ಟ್ರ್ಯಾಪ್ ಮತ್ತು ಇತರೆ ವಿದ್ಯುನ್ಮಾನಗಳನ್ನು ಬಳಸಿಕೊಂಡು ಪ್ರಾಣಿಗಳ ಸಂತತಿ ಸಂಖ್ಯೆ, ಸಮೃದ್ಧಿತ ಪ್ರದೇಶ ಹಾಗೂ ಆಹಾರ ಪದ್ಧತಿ ಬಗ್ಗೆ ಅಧ್ಯಯನ ಮಾಡಲಾಗಿದೆ.

ಇದನ್ನೂ ಓದಿ: ಜೀವಿಗಳ ಅಸ್ತಿತ್ವಕ್ಕೇ ಕುತ್ತು ತರಲಿದೆ ಹವಾಮಾನ ಬದಲಾವಣೆ: ಅಧ್ಯಯನ ವರದಿ

Last Updated : Jul 21, 2023, 8:48 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.