ETV Bharat / state

ಮಹದಾಯಿ ಗೆಜೆಟ್‌ ಅಧಿಸೂಚನೆ​​​ 6 ಕೋಟಿ ಕನ್ನಡಿಗರ ಗೆಲುವು: ವಿರೇಶ ಸೊಬರದಮಠ

author img

By

Published : Feb 28, 2020, 10:28 AM IST

ಉತ್ತರ‌ ಕರ್ನಾಟಕದ ಬಹುದಿನಗಳ ಬೇಡಿಕೆಯಾಗಿದ್ದ ಮಹದಾಯಿ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದ್ದು ಉತ್ತರ ಕರ್ನಾಟಕ ಭಾಗದ ಹೋರಾಟಗಾರರು ಮತ್ತು ರೈತರಲ್ಲಿ ಖುಷಿ ಇಮ್ಮಡಿಯಾಗಿದೆ.

viresh-sobarathmath
ರೈತ ಹೋರಾಟಗಾರ ವಿರೇಶ ಸೊಬರದಮಠ

ಗದಗ: ಮಹದಾಯಿ ವಿಚಾರವಾಗಿ ಸರ್ವೋಚ್ಛ‌ ನ್ಯಾಯಾಲಯ ಈಗಾಗಲೇ 13.45 ಟಿಎಂಸಿಯಷ್ಟು ನೀರಿನ ಬಳಕೆಗೆ ಗೆಜೆಟ್‌ ಅಧಿಸೂಚನೆ ಹೊರಡಿಸುವಂತೆ‌ ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿದೆ. ಇದೀಗ ಕೇಂದ್ರ‌‌ ಸರ್ಕಾರ ನ್ಯಾಯಾಲಯದ‌ ನಿರ್ದೇಶನದಂತೆ ಅಧಿಸೂಚನೆ ಹೊರಡಿಸಿದ್ದು, ಇದು 6 ಕೋಟಿ ಕನ್ನಡಿಗರ ಗೆಲುವಾಗಿದೆ ಅಂತ ರೈತ ಸೇನಾ ಕರ್ನಾಟಕದ ಅಧ್ಯಕ್ಷ ವಿರೇಶ ಸೊಬರದಮಠ ಹರ್ಷ ವ್ಯಕ್ತಪಡಿಸಿದರು.

ಮಹದಾಯಿ ಹೋರಾಟಕ್ಕೆ ಬೆಂಬಲ ಕೊಟ್ಟ ರಾಜ್ಯದ ಜನತೆ ಹಾಗೂ ಮಾಧ್ಯಮದವರಿಗೆ ಅಭಿನಂದನೆ ತಿಳಿಸಿರೋ ಸೊಬರದಮಠ ಆದಷ್ಟು ಬೇಗ ಕಾಮಗಾರಿ ಆರಂಭಿಸುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಅಲ್ಲದೇ ಮುಂಬರುವ ಬಜೆಟ್‌ನಲ್ಲಿ ಮಹದಾಯಿ ಯೋಜನೆಗೆ ಹೆಚ್ಚು ಹಣ ಮೀಸಲಿಟ್ಟು ಕಾಮಗಾರಿ ಆರಂಭಿಸುವಂತೆ ಆಗ್ರಹಿಸಿದ್ದಾರೆ.

ರೈತ ಹೋರಾಟಗಾರ ವಿರೇಶ ಸೊಬರದಮಠ

ನಿನ್ನೆ ರಾಜ್ಯದ‌ ಸಚಿವರ‌ತಂಡ ಕೇಂದ್ರದ ಜಲಶಕ್ತಿ‌ ಸಚಿವ ಗಜೇಂದ್ರ‌ ಶೇಖಾವತ್ ಅವರನ್ನ ಭೇಟಿ ಮಾಡಿ ಈ ಕುರಿತು ಚರ್ಚೆ ಮಾಡಿತ್ತು. ಇನ್ನು ಅಧಿಸೂಚನೆಗೆ ಗೋವಾ ಮತ್ತು‌‌ ಮಹರಾಷ್ಟ್ರ‌ ಸರ್ಕಾರಗಳು ಯಾವುದೇ ತಡೆ‌ಯೊಡ್ಡದೆ ಇರೋದು ಮಹಾದಾಯಿ ಯೋಜನೆ ಜಾರಿಗೆ ಮನ್ನಣೆ ದೊರತಂತಾಗಿದೆ. ಈಗಾಗಲೇ ಕೇಂದ್ರದ ಹಾಗೂ ರಾಜ್ಯದ ಸಚಿವರು ಅಧಿಸೂಚನೆ ಕುರಿತಂತೆ ಕೇಂದ್ರ‌ ಸರ್ಕಾರಕ್ಕೆ ಟ್ವಿಟ್ ಮೂಲಕ ಅಭಿನಂದನೆ ತಿಳಿಸಿದ್ದಾರೆ.

ಗದಗ: ಮಹದಾಯಿ ವಿಚಾರವಾಗಿ ಸರ್ವೋಚ್ಛ‌ ನ್ಯಾಯಾಲಯ ಈಗಾಗಲೇ 13.45 ಟಿಎಂಸಿಯಷ್ಟು ನೀರಿನ ಬಳಕೆಗೆ ಗೆಜೆಟ್‌ ಅಧಿಸೂಚನೆ ಹೊರಡಿಸುವಂತೆ‌ ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿದೆ. ಇದೀಗ ಕೇಂದ್ರ‌‌ ಸರ್ಕಾರ ನ್ಯಾಯಾಲಯದ‌ ನಿರ್ದೇಶನದಂತೆ ಅಧಿಸೂಚನೆ ಹೊರಡಿಸಿದ್ದು, ಇದು 6 ಕೋಟಿ ಕನ್ನಡಿಗರ ಗೆಲುವಾಗಿದೆ ಅಂತ ರೈತ ಸೇನಾ ಕರ್ನಾಟಕದ ಅಧ್ಯಕ್ಷ ವಿರೇಶ ಸೊಬರದಮಠ ಹರ್ಷ ವ್ಯಕ್ತಪಡಿಸಿದರು.

ಮಹದಾಯಿ ಹೋರಾಟಕ್ಕೆ ಬೆಂಬಲ ಕೊಟ್ಟ ರಾಜ್ಯದ ಜನತೆ ಹಾಗೂ ಮಾಧ್ಯಮದವರಿಗೆ ಅಭಿನಂದನೆ ತಿಳಿಸಿರೋ ಸೊಬರದಮಠ ಆದಷ್ಟು ಬೇಗ ಕಾಮಗಾರಿ ಆರಂಭಿಸುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಅಲ್ಲದೇ ಮುಂಬರುವ ಬಜೆಟ್‌ನಲ್ಲಿ ಮಹದಾಯಿ ಯೋಜನೆಗೆ ಹೆಚ್ಚು ಹಣ ಮೀಸಲಿಟ್ಟು ಕಾಮಗಾರಿ ಆರಂಭಿಸುವಂತೆ ಆಗ್ರಹಿಸಿದ್ದಾರೆ.

ರೈತ ಹೋರಾಟಗಾರ ವಿರೇಶ ಸೊಬರದಮಠ

ನಿನ್ನೆ ರಾಜ್ಯದ‌ ಸಚಿವರ‌ತಂಡ ಕೇಂದ್ರದ ಜಲಶಕ್ತಿ‌ ಸಚಿವ ಗಜೇಂದ್ರ‌ ಶೇಖಾವತ್ ಅವರನ್ನ ಭೇಟಿ ಮಾಡಿ ಈ ಕುರಿತು ಚರ್ಚೆ ಮಾಡಿತ್ತು. ಇನ್ನು ಅಧಿಸೂಚನೆಗೆ ಗೋವಾ ಮತ್ತು‌‌ ಮಹರಾಷ್ಟ್ರ‌ ಸರ್ಕಾರಗಳು ಯಾವುದೇ ತಡೆ‌ಯೊಡ್ಡದೆ ಇರೋದು ಮಹಾದಾಯಿ ಯೋಜನೆ ಜಾರಿಗೆ ಮನ್ನಣೆ ದೊರತಂತಾಗಿದೆ. ಈಗಾಗಲೇ ಕೇಂದ್ರದ ಹಾಗೂ ರಾಜ್ಯದ ಸಚಿವರು ಅಧಿಸೂಚನೆ ಕುರಿತಂತೆ ಕೇಂದ್ರ‌ ಸರ್ಕಾರಕ್ಕೆ ಟ್ವಿಟ್ ಮೂಲಕ ಅಭಿನಂದನೆ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.