ETV Bharat / state

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಮಲಪ್ರಭಾ ನದಿ.. ಸುರಕ್ಷಿತ ಸ್ಥಳಗಳಿಗೆ ಜನರ ಸ್ಥಳಾಂತರ

ನವಿಲುತೀರ್ಥ ಡ್ಯಾಂನಿಂದ ಮತ್ತೆ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಮಲಪ್ರಭಾ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ಹೀಗಾಗಿ ಗದಗ ಜಿಲ್ಲೆಯ ಹಲವಾರು ಗ್ರಾಮಗಳು ಇದೀಗ ಮರಳಿ ಪ್ರವಾಹಕ್ಕೆ ಸಿಕ್ಕು ಮುಳುಗಡೆಯಾಗುತ್ತಿವೆ.

author img

By

Published : Sep 8, 2019, 11:58 AM IST

ಅಪಾಯ ಮಟ್ಟ ಮೀರಿ ಹರಿಯುತ್ತಿರುವ ಮಲಪ್ರಭಾ ನದಿ

ಗದಗ:ನವಿಲುತೀರ್ಥ ಡ್ಯಾಂನಿಂದ ಮತ್ತೆ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಮಲಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಹೀಗಾಗಿ ಗದಗ ಜಿಲ್ಲೆಯ ಹಲವಾರು ಗ್ರಾಮಗಳು ಇದೀಗ ಮರಳಿ ಪ್ರವಾಹಕ್ಕೆ ಸಿಕ್ಕು ಮುಳುಗಡೆಯಾಗುತ್ತಿವೆ. ಜಿಲ್ಲೆಯ ನರಗುಂದ ಹಾಗೂ ರೋಣ ತಾಲೂಕಿನ ಕೊಣ್ಣೂರ, ಬೂದಿಹಾಳ, ಕಪ್ಪಲಿ, ಗಾಡಗೋಳಿ, ಹೊಳೆಮಣ್ಣೂರು, ವಾಸನ ಹಾಗೂ ಮೆಣಸಗಿ ಸೇರಿದಂತೆ ಹಲವು ಗ್ರಾಮಗಳಿಗೆ ಪ್ರವಾಹದ ನೀರು ನುಗ್ಗಿರುವುದರಿಂದ ಜನಜೀವನ ಅಸ್ತವ್ಯಸ್ತವಾಗಿದೆ.

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಮಲಪ್ರಭಾ ನದಿ..

ನರಗುಂದ ತಾಲೂಕಿನ ವಾಸನ ಗ್ರಾಮಸ್ಥರು ಜಾನುವಾರಗಳ ಸಮೇತ ಸುರಕ್ಷಿತ ಸ್ಥಳಕ್ಕೆ ತೆರಳುತ್ತಿದ್ದಾರೆ. ದನಕರುಗಳನ್ನು ಟ್ರ್ಯಾಕ್ಟರ್​ನಲ್ಲಿ ಸುರಕ್ಷತ ಸ್ಥಳಗಳಿಗೆ ಸಾಗಿಸುತ್ತಿದ್ದಾರೆ. ಹುಬ್ಬಳ್ಳಿ-ವಿಜಯಪುರ ಸಂಪರ್ಕ ಕಲ್ಪಿಸೋ ರಾಷ್ಟ್ರೀಯ ಹೆದ್ದಾರಿ ಸಹ ಕೊಚ್ಚಿಕೊಂಡು ಹೋಗಿದೆ. ಅಲ್ಲದೇ ಜಮೀನುಗಳಿಗೆ ಭಾರೀ ನೀರು ನುಗ್ಗಿದ ಪರಿಣಾಮ ರೈತರು ಅಲ್ಪಸ್ವಲ್ಪ ಬೆಳೆದ ಬೆಳೆಗಳೆಲ್ಲ ನೀರುಪಾಲಾಗಿದೆ.

ಈ ಮುಂಚೆಯೂ ಪ್ರವಾಹದಲ್ಲಿ ಜನ ಮನೆಗಳನ್ನು ಕಳೆದುಕೊಂಡು ಆಶ್ರಯವಿಲ್ಲದೇ ಪರಿತಪಿಸಿದ್ದರು. ಈಗ ಮತ್ತೆ ಅದೇ ಪರಿಸ್ಥಿತಿ ಎದುರಾಗಿದೆ. ಸರ್ಕಾರ ಪ್ರವಾಹ ಪೀಡಿತ ಪ್ರದೇಶದಲ್ಲಿ ಶೀಘ್ರವೇ ಪರಿಹಾರ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ಸಂತ್ರಸ್ತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗದಗ:ನವಿಲುತೀರ್ಥ ಡ್ಯಾಂನಿಂದ ಮತ್ತೆ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಮಲಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಹೀಗಾಗಿ ಗದಗ ಜಿಲ್ಲೆಯ ಹಲವಾರು ಗ್ರಾಮಗಳು ಇದೀಗ ಮರಳಿ ಪ್ರವಾಹಕ್ಕೆ ಸಿಕ್ಕು ಮುಳುಗಡೆಯಾಗುತ್ತಿವೆ. ಜಿಲ್ಲೆಯ ನರಗುಂದ ಹಾಗೂ ರೋಣ ತಾಲೂಕಿನ ಕೊಣ್ಣೂರ, ಬೂದಿಹಾಳ, ಕಪ್ಪಲಿ, ಗಾಡಗೋಳಿ, ಹೊಳೆಮಣ್ಣೂರು, ವಾಸನ ಹಾಗೂ ಮೆಣಸಗಿ ಸೇರಿದಂತೆ ಹಲವು ಗ್ರಾಮಗಳಿಗೆ ಪ್ರವಾಹದ ನೀರು ನುಗ್ಗಿರುವುದರಿಂದ ಜನಜೀವನ ಅಸ್ತವ್ಯಸ್ತವಾಗಿದೆ.

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಮಲಪ್ರಭಾ ನದಿ..

ನರಗುಂದ ತಾಲೂಕಿನ ವಾಸನ ಗ್ರಾಮಸ್ಥರು ಜಾನುವಾರಗಳ ಸಮೇತ ಸುರಕ್ಷಿತ ಸ್ಥಳಕ್ಕೆ ತೆರಳುತ್ತಿದ್ದಾರೆ. ದನಕರುಗಳನ್ನು ಟ್ರ್ಯಾಕ್ಟರ್​ನಲ್ಲಿ ಸುರಕ್ಷತ ಸ್ಥಳಗಳಿಗೆ ಸಾಗಿಸುತ್ತಿದ್ದಾರೆ. ಹುಬ್ಬಳ್ಳಿ-ವಿಜಯಪುರ ಸಂಪರ್ಕ ಕಲ್ಪಿಸೋ ರಾಷ್ಟ್ರೀಯ ಹೆದ್ದಾರಿ ಸಹ ಕೊಚ್ಚಿಕೊಂಡು ಹೋಗಿದೆ. ಅಲ್ಲದೇ ಜಮೀನುಗಳಿಗೆ ಭಾರೀ ನೀರು ನುಗ್ಗಿದ ಪರಿಣಾಮ ರೈತರು ಅಲ್ಪಸ್ವಲ್ಪ ಬೆಳೆದ ಬೆಳೆಗಳೆಲ್ಲ ನೀರುಪಾಲಾಗಿದೆ.

ಈ ಮುಂಚೆಯೂ ಪ್ರವಾಹದಲ್ಲಿ ಜನ ಮನೆಗಳನ್ನು ಕಳೆದುಕೊಂಡು ಆಶ್ರಯವಿಲ್ಲದೇ ಪರಿತಪಿಸಿದ್ದರು. ಈಗ ಮತ್ತೆ ಅದೇ ಪರಿಸ್ಥಿತಿ ಎದುರಾಗಿದೆ. ಸರ್ಕಾರ ಪ್ರವಾಹ ಪೀಡಿತ ಪ್ರದೇಶದಲ್ಲಿ ಶೀಘ್ರವೇ ಪರಿಹಾರ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ಸಂತ್ರಸ್ತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Intro:ಗದಗ

ಆ್ಯಂಕರ್- ನವಿಲು ತೀರ್ಥ ಡ್ಯಾಂನಿಂದ ಮತ್ತೆ ಅಪಾರ ಪ್ರಮಾಣದ ನೀರು ಬಿಡುಗಡೆ ಹಿನ್ನೆಲೆ ಮಲಪ್ರಭಾ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದೆ.ಪರಿಣಾಮ ಗದಗ ಜಿಲ್ಲೆಯ ಹಲವಾರು ಗ್ರಾಮಗಳು ಇದೀಗ ಪುನಃ ಪ್ರವಾಹಕ್ಕೆ ಸಿಕ್ಕು ಮುಳಗಡೆಯಾಗ್ತಿವೆ.ಜಿಲ್ಲೆಯ ನರಗುಂದ ಹಾಗೂ ರೋಣ ತಾಲೂಕಿನ ಕೊಣ್ಣೂರ, ಬೂದಿಹಾಳ,ಕಪ್ಪಲಿ, ಗಾಡಗೋಳಿ, ಹೊಳೆಮಣ್ಣೂರು,ವಾಸನ ಹಾಗೂ ಮೆಣಸಗಿ ಸೇರಿದಂತೆ ಹಲವು ಗ್ರಾಮಗಳಿಗೆ ಪ್ರವಾಹದ ನೀರು ನುಗ್ಗಿರೋದ್ರಿಂದ ಅವಾಂತರಗಳು ಸೃಷ್ಟಿಯಾಗ್ತಿವೆ.
ಇತ್ತ ನರಗುಂದ ತಾಲೂಕಿನ ವಾಸನ ಗ್ರಾಮಸ್ಥರೆಲ್ರೂ ಜಾನುವಾರಗಳ ಸಮೇತ ಸುರಕ್ಷಿತ ಸ್ಥಳಕ್ಕೆ ತೆರಳ್ತಿದಾರೆ. ದನಕರುಗಳನ್ನು ಟ್ರ್ಯಾಕ್ಟರ್ ನಲ್ಲಿ ಹೇರಿಕೊಂಡು ಕುಟುಂಬ ಸಮೇತ ಜನ್ರು ಬೇರೆಡೆ ದೌಡಾಯಿಸ್ತಿದಾರೆ.ಹುಬ್ಬಳ್ಳಿ ವಿಜಯಪುರ ಸಂಪರ್ಕ ಕಲ್ಪಿಸೋ ರಾಷ್ಟ್ರೀಯ ಹೆದ್ದಾರಿ ಸಹ ಕೊಚ್ಚಿಕೊಂಡು ಹೋಗಿದೆ. ಅಲ್ಲದೇ ಜಮೀನುಗಳಿಗೆ ಭಾರಿ ನೀರು ನುಗ್ಗಿದ ಪರಿಣಾಮ ರೈತರು ಅಲ್ಪಸ್ವಲ್ಪ ಬೆಳೆದ ಬೆಳೆಗಳೆಲ್ಲ ನೀರುಪಾಲಾಗಿದೆ. ಇದ್ರಿಂದ ರೈತರ ಶ್ರಮವೆಲ್ಲವೂ ವ್ಯರ್ಥವಾಗಿ ಹೋಗಿದೆ. ಹೀಗಾಗಿ ಪರಿಹಾರ ನೀಡದ ಸರ್ಕಾರದ ವಿರುದ್ಧ ಸಂತ್ರಸ್ತರು ಆಕ್ರೋಶ ವ್ಯಕ್ತಪಡಿಸ್ತಾ‌ ಇದಾರೆ.
ಕಳೆದ ತಿಂಗಳಷ್ಟೇ ಇದೇ ರೀತಿ ಪ್ರವಾಹ ಬಂದು ಮನೆಗಳೆಲ್ಲ ಬಿದ್ದು ಸೂರು ಕಳೆದುಕೊಂಡಿದ್ದೇವೆ.ಇದ್ರಿಂದ ನಮಗೆಲ್ಲ ದಿಕ್ಕು ತೋಚದಂತಾಗಿದೆ.ಆದ್ರಿಂದ ಅಧಿಕಾರಿಗಳು ಕೂಡಲೇ ಪರಿಹಾರ ನೀಡಿ ನಮ್ಮನ್ನು ಕಾಪಾಡಿ ಅಂತ ಸಂತ್ರಸ್ತರು ಗೋಗರಿತಿದಾರೆ.ಇತ್ತ ರೋಣ ತಾಲೂಕಿನ ಹೊಳೆಆಲೂರ ಬಾದಾಮಿ ಸಂಪರ್ಕ ಕಲ್ಪಿಸೋ ಸೇತುವೆ ಸಹ ಮುಳಗಿ ಹೋಗಿದೆ. ಸ್ವಲ್ಪ ದಿನಗಳ ಮುಂಚೆ ಪ್ರವಾಹಕ್ಕೆ ಸಿಕ್ಕು ನಲುಗಿ ನಿಟ್ಟುಸಿರು ಬಿಟ್ಟಿದ್ದ ನರಗುಂದ ಹಾಗೂ ರೋಣ ತಾಲೂಕಿನ ಸಂತ್ರಸ್ತರು ಇದೀಗ ಮತ್ತೆ ಕಂಗಾಲಾಗಿದ್ದಾರೆ.Body:ಗದಗConclusion:ಗದಗ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.