ETV Bharat / state

ಕಪ್ಪತ್ತಗುಡ್ಡದಲ್ಲಿ ಗಣಿಗಾರಿಕೆ ನಿಲ್ಲಿಸುವಂತೆ ನೋಟಿಸ್: ಕ್ವಾರಿ ಉಳಿಸಿಕೊಳ್ಳಲು ಭಾರಿ ಲಾಬಿ? - Notice to stop mining in Kappadgudda

ಗದಗ ಜಿಲ್ಲೆಯ ಕಪ್ಪತ್ತಗುಡ್ಡದಲ್ಲಿ ನಡೆಸುತ್ತಿರುವುದನ್ನು ನಿಲ್ಲಿಸುವಂತೆ ಜಿಲ್ಲಾಡಳಿತ ನೋಟಿಸ್ ನೀಡಿದ ಹಿನ್ನೆಲೆ ಕಲ್ಲಿನ ಕ್ವಾರಿಗಳು ಉಳಿಸಿಕೊಳ್ಳಲು ಸರ್ಕಾರದ ಮಟ್ಟದಲ್ಲಿ ಲಾಬಿ ನಡೆಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

dsd
ಕಪ್ಪತ್ತಗುಡ್ಡದಲ್ಲಿ ಗಣಿಗಾರಿಕೆ ನಿಲ್ಲಿಸುವಂತೆ ನೋಟಿಸ್
author img

By

Published : Sep 30, 2020, 11:31 AM IST

ಗದಗ: ಜಿಲ್ಲೆಯ ಕಪ್ಪತ್ತಗುಡ್ಡ ವನ್ಯಜೀವಿ ಧಾಮದ ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಬರುವ 14 ಕಲ್ಲು ಕ್ವಾರಿಗಳಿಗೆ ತಕ್ಷಣ ಗಣಿಗಾರಿಕೆ ಸ್ಥಗಿತಗೊಳಿಸುವಂತೆ ಜಿಲ್ಲಾಡಳಿತ ನೋಟಿಸ್ ನೀಡಿದೆ.

ಕಪ್ಪತ್ತಗುಡ್ಡದಲ್ಲಿ ಗಣಿಗಾರಿಕೆ ನಿಲ್ಲಿಸುವಂತೆ ನೋಟಿಸ್

ಜಿಲ್ಲೆಯಲ್ಲಿ ಕಲ್ಲು ಗಣಿಗಾರಿಕೆ ಕ್ವಾರಿಗಳು ನಾಯಿ ಕೊಡೆಯಂತೆ ತಲೆ ಎತ್ತಿವೆ. ಸಕ್ರಮದ ಹೆಸರಲ್ಲಿ ಕೆಲ ಕ್ವಾರಿಗಳು ಸರ್ಕಾರಕ್ಕೆ ತೆರಿಗೆ ವಂಚನೆ ಮಾಡಿ ಲೂಟಿ ನಡೆಸಿರುವ ಆರೋಪ ಕೇಳಿ ಬಂದಿತ್ತು. ಉತ್ತರ ಕರ್ನಾಟಕದ ಸಹ್ಯಾದ್ರಿ ಸೆರಗಿನಲ್ಲಿ ಸಾಕಷ್ಟು ಕಲ್ಲು ಗಣಿಗಾರಿಕೆ ಕ್ವಾರಿಗಳು ಇವೆ. ಸಕ್ರಮ, ಅಕ್ರಮ ಕ್ವಾರಿಗಳೂ ಇವೆ. ಆದರೆ ಈಗ ಗಣಿ ಇಲಾಖೆಯಿಂದ ಅನುಮತಿ ಪಡೆದ ಕಲ್ಲು ಗಣಿಗಾರಿಕೆ ಕ್ವಾರಿಗಳಿಗೆ ಕಂಟಕ ಎದುರಾಗಿದೆ. ಯಾಕಂದ್ರೆ ಈ ಕಲ್ಲಿನ ಕ್ವಾರಿಗಳು ನಂಬಿಯೇ ಕೋಟಿ ಕೋಟಿ ಹಣ ಹೂಡಿಕೆ ಮಾಡಿ ಕ್ರಷರ್ ಘಟಕಗಳನ್ನು ಹಾಕಿದ್ದಾರೆ.

ಈ 14 ಘಟಕಗಳು ಪ್ರಭಾವಿ ಶಾಸಕರ ಸಂಬಂಧಿಕರು, ಪ್ರಭಾವಿ ವ್ಯಕ್ತಿಗಳಿಗೆ ಸೇರಿವೆ ಎನ್ನಲಾಗಿದೆ. ಉತ್ತರ ಕರ್ನಾಟಕದ ಸಹ್ಯಾದ್ರಿ ಕಪ್ಪತ್ತಗುಡ್ಡ ಪ್ರದೇಶದಲ್ಲಿ ಅಮೂಲ್ಯವಾದ ಪಂಚ ಖನಿಜಗಳು ಪ್ರಭಾವಿ ಗಣಿ ಕುಳಗಳ ಪಾಲಾಗುತ್ತಿರುವ ಅಂಶವು ಬೆಳಕಿಗೆ ಬಂದಿವೆ. ಒಂದು ವರ್ಷದ ಹಿಂದೆ ಕೇಂದ್ರ ಪರಿಸರ ಹಾಗೂ ಅರಣ್ಯ ಸಚಿವಾಲಯ ಈ ಕ್ರಮ ಕೈಗೊಳ್ಳಲು ಆದೇಶಿಸಿತ್ತು. ಈಗ ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗಣಿಗಾರಿಕೆ ಸ್ಥಗಿತಗೊಳಿಸುವಂತೆ ನೋಟಿಸ್​ ನೀಡಲಾಗಿದೆ.

ಗದಗ: ಜಿಲ್ಲೆಯ ಕಪ್ಪತ್ತಗುಡ್ಡ ವನ್ಯಜೀವಿ ಧಾಮದ ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಬರುವ 14 ಕಲ್ಲು ಕ್ವಾರಿಗಳಿಗೆ ತಕ್ಷಣ ಗಣಿಗಾರಿಕೆ ಸ್ಥಗಿತಗೊಳಿಸುವಂತೆ ಜಿಲ್ಲಾಡಳಿತ ನೋಟಿಸ್ ನೀಡಿದೆ.

ಕಪ್ಪತ್ತಗುಡ್ಡದಲ್ಲಿ ಗಣಿಗಾರಿಕೆ ನಿಲ್ಲಿಸುವಂತೆ ನೋಟಿಸ್

ಜಿಲ್ಲೆಯಲ್ಲಿ ಕಲ್ಲು ಗಣಿಗಾರಿಕೆ ಕ್ವಾರಿಗಳು ನಾಯಿ ಕೊಡೆಯಂತೆ ತಲೆ ಎತ್ತಿವೆ. ಸಕ್ರಮದ ಹೆಸರಲ್ಲಿ ಕೆಲ ಕ್ವಾರಿಗಳು ಸರ್ಕಾರಕ್ಕೆ ತೆರಿಗೆ ವಂಚನೆ ಮಾಡಿ ಲೂಟಿ ನಡೆಸಿರುವ ಆರೋಪ ಕೇಳಿ ಬಂದಿತ್ತು. ಉತ್ತರ ಕರ್ನಾಟಕದ ಸಹ್ಯಾದ್ರಿ ಸೆರಗಿನಲ್ಲಿ ಸಾಕಷ್ಟು ಕಲ್ಲು ಗಣಿಗಾರಿಕೆ ಕ್ವಾರಿಗಳು ಇವೆ. ಸಕ್ರಮ, ಅಕ್ರಮ ಕ್ವಾರಿಗಳೂ ಇವೆ. ಆದರೆ ಈಗ ಗಣಿ ಇಲಾಖೆಯಿಂದ ಅನುಮತಿ ಪಡೆದ ಕಲ್ಲು ಗಣಿಗಾರಿಕೆ ಕ್ವಾರಿಗಳಿಗೆ ಕಂಟಕ ಎದುರಾಗಿದೆ. ಯಾಕಂದ್ರೆ ಈ ಕಲ್ಲಿನ ಕ್ವಾರಿಗಳು ನಂಬಿಯೇ ಕೋಟಿ ಕೋಟಿ ಹಣ ಹೂಡಿಕೆ ಮಾಡಿ ಕ್ರಷರ್ ಘಟಕಗಳನ್ನು ಹಾಕಿದ್ದಾರೆ.

ಈ 14 ಘಟಕಗಳು ಪ್ರಭಾವಿ ಶಾಸಕರ ಸಂಬಂಧಿಕರು, ಪ್ರಭಾವಿ ವ್ಯಕ್ತಿಗಳಿಗೆ ಸೇರಿವೆ ಎನ್ನಲಾಗಿದೆ. ಉತ್ತರ ಕರ್ನಾಟಕದ ಸಹ್ಯಾದ್ರಿ ಕಪ್ಪತ್ತಗುಡ್ಡ ಪ್ರದೇಶದಲ್ಲಿ ಅಮೂಲ್ಯವಾದ ಪಂಚ ಖನಿಜಗಳು ಪ್ರಭಾವಿ ಗಣಿ ಕುಳಗಳ ಪಾಲಾಗುತ್ತಿರುವ ಅಂಶವು ಬೆಳಕಿಗೆ ಬಂದಿವೆ. ಒಂದು ವರ್ಷದ ಹಿಂದೆ ಕೇಂದ್ರ ಪರಿಸರ ಹಾಗೂ ಅರಣ್ಯ ಸಚಿವಾಲಯ ಈ ಕ್ರಮ ಕೈಗೊಳ್ಳಲು ಆದೇಶಿಸಿತ್ತು. ಈಗ ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗಣಿಗಾರಿಕೆ ಸ್ಥಗಿತಗೊಳಿಸುವಂತೆ ನೋಟಿಸ್​ ನೀಡಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.